AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೌವನದಲ್ಲಿರುವಾಗಲೇ ತಲೆ ಬೋಳಾಗಬಹುದು ಎಂಬ ಚಿಂತೆಯೇ? ಇಲ್ಲಿದೆ ಪರಿಹಾರ

ಕೂದಲು ಉದುರುವ ಸಮಸ್ಯೆ ಕಾಡುತ್ತಿದ್ದರೆ, ತಲೆಬುರುಡೆ ಸಂಪೂರ್ಣವಾಗಿ ಬೋಳಾಗಬಹುದು ಎಂಬ ಚಿಂತೆ ಕಾಡುತ್ತಿದ್ದರೆ ಭಯ ಪಡಬೇಡಿ. ಈ ರೀತಿಯ ಸಮಸ್ಯೆಗೆ ನಾನಾ ರೀತಿಯ ಔಷಧಿಗಳಿಂದ ಸಿಗದಿರುವ ಪರಿಹಾರ ಇಲ್ಲಿ ತಿಳಿಸಿರುವ ಮನೆಮದ್ದಿನಲ್ಲಿ ಸಿಗುತ್ತದೆ. ಈ ಮದ್ದನ್ನು ಮಾಡಲು ಹೆಚ್ಚು ಹೆಚ್ಚು ಹಣ ವ್ಯಯ ಮಾಡುವ ಅಗತ್ಯವಿಲ್ಲ. ಜೊತೆಗೆ ಇದನ್ನು ಬಳಸುವುದಕ್ಕೆ ಕಷ್ಟವೂ ಇಲ್ಲ ಕೇವಲ ಇಲ್ಲಿ ತಿಳಿಸಿರುವ ಎಣ್ಣೆ ತಂದು ಅದನ್ನು ಸರಿಯಾದ ಸಮಯದಲ್ಲಿ ಹೇಳಿದಂತೆ ಹಚ್ಚಿದರೆ ಕೂದಲು ಉದುರುವ ಸಮಸ್ಯೆಗೆ ಪರಿಹಾರ ಸಿಗುತ್ತದೆ.

ಯೌವನದಲ್ಲಿರುವಾಗಲೇ ತಲೆ ಬೋಳಾಗಬಹುದು ಎಂಬ ಚಿಂತೆಯೇ? ಇಲ್ಲಿದೆ ಪರಿಹಾರ
ಕೂದಲು ಉದುರುವ ಸಮಸ್ಯೆImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 31, 2025 | 4:25 PM

Share

ಇತ್ತೀಚಿನ ದಿನಗಳಲ್ಲಿ ಎಲ್ಲರನ್ನೂ ಕಾಡುತ್ತಿರುವ ಸಮಸ್ಯೆಗಳಲ್ಲಿ ಕೂದಲು ಉದುರುವುದು (Hair Fall) ಕೂಡ ಒಂದು. ಇದನ್ನು ತಡೆಯಲು ನಾನಾ ರೀತಿಯಲ್ಲಿ ಪ್ರಯತ್ನಿಸಿರುತ್ತೇವೆ ಆದರೂ ಕೂಡ ಈ ಸಮಸ್ಯೆಗೆ ಪರಿಹಾರ ಸಿಕ್ಕಿರುವುದಿಲ್ಲ. ಇರುವ ಕೂದಲು ದಿನದಿಂದ ದಿನಕ್ಕೆ ಉದುರಿ ತಲೆ ಬೋಳಾಗುತ್ತದೆಯೋ ಏನೋ ಎಂಬ ಭಯ ಕಾಡುತ್ತದೆ. ವಿವಿಧ ರೀತಿಯ ಔಷಧಿ ಮತ್ತು ಎಣ್ಣೆಗಳನ್ನು ಪ್ರಯತ್ನಿಸಿದರೂ ಕೂಡ ಸರಿಯಾದ ಫಲಿತಾಂಶ ಸಿಗುವುದಿಲ್ಲ. ಈ ರೀತಿ ನಿಮಗೂ ಆಗುತ್ತಿದ್ದರೆ ಸರಳ ಮನೆಮದ್ದು (Home Remedies) ಇಲ್ಲಿದೆ. ತಲೆಯ ಮೇಲಿನ ಎಲ್ಲಾ ಕೂದಲು ಉದುರಿ ಹೋಗುವ ಮೊದಲು ಈ ಅದ್ಭುತ ಸಲಹೆಗಳನ್ನು ಪಾಲಿಸಿ (Hair Fall Solution), ಕೂದಲನ್ನು ಚೆನ್ನಾಗಿ ಬೆಳೆಸಿಕೊಳ್ಳಿ.

ನಿಮ್ಮ ಆಹಾರ ಕ್ರಮ ಹೀಗಿರಲಿ

ವಾಸ್ತವದಲ್ಲಿ, ನಾವು ಸೇವನೆ ಮಾಡುವ ಆಹಾರ ನಮ್ಮ ಕೂದಲು ಮತ್ತು ಚರ್ಮದ ಮೇಲೆ ಪರಿಣಾಮ ಬೀರುತ್ತದೆ. ಆದ್ದರಿಂದ, ನಮ್ಮ ಚರ್ಮ ಆರೋಗ್ಯವಾಗಿ, ತಾಜಾತನದಿಂದ ಕಾಂತಿಯುತವಾಗಿ ಕಾಣಬೇಕೆಂದು ಬಯಸುವವರು ಅಥವಾ ನಿಮ್ಮ ಕೂದಲು ಬಲವಾಗಿ, ಉದ್ದವಾಗಿ ಚೆನ್ನಾಗಿರಬೇಕು ಎಂಬ ಆಸೆ ಇದ್ದರೆ ನಿಮ್ಮ ಆಹಾರದಲ್ಲಿ ಪೋಷಕಾಂಶಗಳಿಂದ ಕೂಡಿದ ಪದಾರ್ಥಗಳನ್ನು ಸೇವನೆ ಮಾಡಿ. ಇದು ಅತ್ಯಗತ್ಯ. ಇದಕ್ಕಾಗಿ, ನೀವು ಸೇವನೆ ಮಾಡುವ ಆಹಾರದಲ್ಲಿ ವಿಟಮಿನ್ ಬಿ 5 ಸಮೃದ್ಧವಾಗಿರುವ ಆಹಾರಗಳು ಅಂದರೆ, ಮೊಟ್ಟೆ ಮತ್ತು ಮೊಸರಿನಂತಹ ಆಹಾರಗಳನ್ನು ಹೆಚ್ಚಾಗಿ ಸೇವನೆ ಮಾಡಿ. ಆಹಾರದ ಹೊರತಾಗಿ ಕೂದಲಿನ ಬೆಳವಣಿಗೆಗೆ ಬೇರೆ ಯಾವ ರೀತಿಯಲ್ಲಿ ಪೋಷಣೆ ನೀಡಬಹುದು? ಇದಕ್ಕೆ ಉತ್ತರ ಇಲ್ಲಿದೆ.

ಇದನ್ನೂ ಓದಿ
Image
ಕುತ್ತಿಗೆ ತೂಗು ಹಾಕಿ ವ್ಯಾಯಾಮ ಮಾಡಿದ್ರೆ ನಿದ್ರಾಹೀನತೆ ಸಮಸ್ಯೆಗೆ ಪರಿಹಾರ
Image
ಡೆಂಘಿ, ಚಿಕುನ್ ಗುನ್ಯಾ ತಡೆಯಲು ಈ ಆಹಾರಗಳ ಸೇವನೆ ಮಾಡಿ
Image
ಇಂದಿನಿಂದಲೇ ಮೀನಿನ ಎಣ್ಣೆ ಸೇವನೆ ಮಾಡಲು ಪ್ರಾರಂಭಿಸಿ! ಏಕೆ ಗೊತ್ತಾ?
Image
ಸ್ನಾನ ಮಾಡಿ ಬಂದ ನಂತರ ಸುಸ್ತಾಗುತ್ತಿದೆಯೇ? ಇದು ದೇಹ ನೀಡುವ ಮುನ್ನೆಚ್ಚರಿಕೆ

ಕ್ಯಾಸ್ಟರ್ ಆಯಿಲ್ ಈ ರೀತಿ ಬಳಸಿ

ಆರೋಗ್ಯಕರ ಆಹಾರ ಸೇವನೆ ಮಾಡುವುದರ ಜೊತೆಗೆ ಕೂದಲಿನ ಬೆಳವಣಿಗೆಗೆ ಹೊರಗಿನಿಂದ ಯಾವ ರೀತಿಯಲ್ಲಿ ಪೋಷಣೆ ನೀಡಬಹುದು ಎಂಬ ಗೊಂದಲವಿದ್ದರೆ ಅದಕ್ಕೆ ಸರಳವಾಗಿರುವ ಸಲಹೆ ಇಲ್ಲಿದೆ. ಒಂದು ಸಣ್ಣ ಬಟ್ಟಲಿನಲ್ಲಿ ನಾಲ್ಕು ಚಮಚ ಕ್ಯಾಸ್ಟರ್ ಆಯಿಲ್ ತೆಗೆದುಕೊಳ್ಳಿ. ಅದಕ್ಕೆ ಸ್ವಲ್ಪ ಮೆಂತ್ಯ ಬೀಜಗಳನ್ನು ಸೇರಿಸಿ ಚೆನ್ನಾಗಿ ಕುದಿಸಿ. ಈ ಎಣ್ಣೆಯನ್ನು ರಾತ್ರಿ ಮಲಗುವ ಮುನ್ನ, ನೆತ್ತಿ ಭಾಗಕ್ಕೆ ಚೆನ್ನಾಗಿ ಹಚ್ಚಿ. ಮರುದಿನ ಬೆಳಿಗ್ಗೆ, ಶಾಂಪೂ ಬಳಸಿ ನಿಮ್ಮ ಕೂದಲನ್ನು ತೊಳೆಯಿರಿ. ರಾತ್ರಿ ಸಮಯದಲ್ಲಿ ಈ ರೀತಿ ಮಾಡುವುದರಿಂದ, ಕೂದಲು ಉದುರುವುದು ಕಡಿಮೆಯಾಗುತ್ತದೆ. ಇದರ ಫಲಿತಾಂಶ ಕೂಡ ಸ್ವಲ್ಪ ದಿನದಲ್ಲಿಯೇ ನಿಮಗೆ ತಿಳಿಯುತ್ತದೆ.

ಇದನ್ನೂ ಓದಿ: Health Tips: ಕೂದಲಿನ ಬೆಳವಣಿಗೆ ಈ ಆಹಾರಗಳಿಂದ ಸಾಧ್ಯ

ಎಳ್ಳೆಣ್ಣೆಗೆ ಇದನ್ನು ಮಿಕ್ಸ್ ಮಾಡಿ ಹಚ್ಚಿ

ನಿಮಗೆ ಕ್ಯಾಸ್ಟರ್ ಆಯಿಲ್ ಹಚ್ಚುವುದಕ್ಕೆ ಇಷ್ಟವಾಗದಿದ್ದರೆ ನಾಲ್ಕು ಚಮಚ ಎಳ್ಳೆಣ್ಣೆಯನ್ನು ತೆಗೆದುಕೊಂಡು ಸ್ವಲ್ಪ ಕರಿಬೇವಿನ ಎಲೆಗಳನ್ನು ಹಾಕಿ ಬಿಸಿ ಮಾಡಿ. ಅದು ತಣ್ಣಗಾದ ನಂತರ, ಈ ಎಣ್ಣೆಯನ್ನು ನೆತ್ತಿಗೆ ಹಚ್ಚಿ. ಅರ್ಧ ಗಂಟೆ ನಂತರ ಶಾಂಪೂ ಬಳಸಿ ಕೂದಲನ್ನು ತೊಳೆಯಿರಿ. ಇದು ನೆತ್ತಿಯ ಮೇಲೆ ಹೊಸ ಕೂದಲುಗಳು ಬೆಳೆಯಲು ಸಹಾಯ ಮಾಡುತ್ತದೆ. ಇದರ ಬದಲು ಎಳ್ಳೆಣ್ಣೆಯಲ್ಲಿ ಸ್ವಲ್ಪ ಬೆಲ್ಲವನ್ನು ಬಿಸಿ ಮಾಡಿ, ಎಣ್ಣೆ ತಣ್ಣಗಾದ ನಂತರ ತಲೆಗೆ ಹಚ್ಚಬೇಕು. ಅರ್ಧ ಗಂಟೆ ಹಾಗೆಯೇ ಇರಿಸಿ ನಂತರ ಕೂದಲಿಗೆ ಶಾಂಪೂ ಹಚ್ಚಿ ತೊಳೆದುಕೊಳ್ಳಬೇಕು. ಇದು ನಿಮ್ಮ ಕೂದಲು ಉದುರುವುದನ್ನು ತಡೆಯುತ್ತದೆ ಜೊತೆಗೆ ಕೂದಲಿಗೆ ಉತ್ತಮ ಹೊಳಪನ್ನು ನೀಡುತ್ತದೆ. ಅಲ್ಲದೆ ನಿಮ್ಮ ಕೂದಲಿನ ಬೇರುಗಳು ಸಹ ಬಲಗೊಳ್ಳುತ್ತವೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ