AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Palm Itching Causes: ಅಂಗೈನಲ್ಲಿ ಕಂಡುಬರುವ ತುರಿಕೆಯನ್ನು ನಿರ್ಲಕ್ಷಿಸಬೇಡಿ

ಅಂಗೈನಲ್ಲಿ ತುರಿಕೆ: ಕೆಲವೊಮ್ಮೆ ನಮ್ಮ ಅಂಗೈಗಳಲ್ಲಿ ಕಾರಣವಿಲ್ಲದೆ ತುರಿಕೆ ಕಂಡು ಬರುತ್ತದೆ. ಈ ರೀತಿಯಾದರೆ ಹಣ ಬರುತ್ತದೆ ಎಂಬ ನಂಬಿಕೆ ಇದೆ. ಆದರೆ ಇದು ಎಷ್ಟರ ಮಟ್ಟಿಗೆ ನಿಜ ಎಂಬುದು ಯಾರಿಗೂ ತಿಳಿದಿಲ್ಲ. ಹಾಗಾಗಿ ಅಂಗೈನಲ್ಲಿ ತುರಿಕೆ ಕಂಡು ಬಂದಾಗ ದುಡ್ಡು ಬರುತ್ತದೆ ಎಂದು ಸುಮ್ಮನಾಗಬೇಡಿ. ಇದು ನಿಮ್ಮ ದೇಹ ಕೆಲವು ಆರೋಗ್ಯ ಸಮಸ್ಯೆಗಳ ಬರುವ ಬಗ್ಗೆ ನಿಮಗೆ ನೀಡುವ ಮುನ್ಸೂಚನೆ ಆಗಿರಬಹುದು.

Palm Itching Causes: ಅಂಗೈನಲ್ಲಿ ಕಂಡುಬರುವ ತುರಿಕೆಯನ್ನು ನಿರ್ಲಕ್ಷಿಸಬೇಡಿ
ಸಾಂದರ್ಭಿಕ ಚಿತ್ರ Image Credit source: Getty Images
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 23, 2025 | 9:52 AM

ಪ್ರಾಚೀನ ನಂಬಿಕೆಗಳ ಪ್ರಕಾರ, ನಮ್ಮ ಅಂಗೈಗಳಲ್ಲಿ ತುರಿಕೆ (Itching in the palms) ಕಂಡು ಬಂದರೆ ಹಣ ಬರುತ್ತದೆ ಎಂಬ ನಂಬಿಕೆ ಇದೆ. ಈ ಮಾತನ್ನು ನೀವು ಅನೇಕ ಬಾರಿ ಕೇಳಿರಬಹುದು. ಅದರಲ್ಲಿಯೂ ನಮ್ಮ ಅಂಗೈನ ಕೆಲವು ಭಾಗಗಳಲ್ಲಿ ತುರಿಕೆಯಾಗುತ್ತಿದ್ದರೆ, ಅದು ಸಂಪತ್ತು (Wealth) ಬರುವುದರ ಸಂಕೇತವೆಂದು ಹೇಳಲಾಗುತ್ತದೆ. ಆದರೆ ಇದು ಎಷ್ಟು ನಿಜ ಎಂಬುದು ಯಾರಿಗೂ ತಿಳಿದಿಲ್ಲ. ಅದರಲ್ಲಿಯೂ ವೈಜ್ಞಾನಿಕವಾಗಿ ಇದಕ್ಕೆ ಯಾವುದೇ ರೀತಿಯ ಪುರಾವೆಗಳೂ ಕೂಡ ಇಲ್ಲ. ಇದೊಂದು ನಂಬಿಕೆ (Faith) ಅಷ್ಟೇ. ಆದರೆ ವಾಸ್ತವದಲ್ಲಿ ಈ ತುರಿಕೆ ಕಂಡು ಬರುವುದರ ಹಿಂದೆ ಹಲವಾರು ರೀತಿಯ ಆರೋಗ್ಯ (Health) ಸಮಸ್ಯೆಗಳು ಇರಬಹುದು ಎಂದು ತಜ್ಞರು ಹೇಳುತ್ತಾರೆ. ಹಾಗಾದರೆ ಅಂಗೈನಲ್ಲಿ ತುರಿಕೆ ಕಂಡು ಬರುವುದಕ್ಕೆ ಕಾರಣವೇನು ತಿಳಿದುಕೊಳ್ಳಿ.

ಚರ್ಮದ ಶುಷ್ಕತೆ

ಅಂಗೈ ತುಂಬಾ ಸೂಕ್ಷ್ಮವಾದ ಭಾಗ. ಹಾಗಾಗಿ ಆಗಾಗ ಕೈ ತೊಳೆಯವ ಅಭ್ಯಾಸವೂ ಕೂಡ ಚರ್ಮದ ಶುಷ್ಕತೆಗೆ ಕಾರಣವಾಗಬಹುದು. ಇದರಿಂದಲೂ ಕೂಡ ತುರಿಕೆ ಕಂಡು ಬರುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಆದರೆ ಇದು ಸ್ವಾಭಾವಿಕ. ಯಾವುದೇ ರೀತಿಯ ಕ್ರೀಮ್ ಅಥವಾ ಮಾಯಿಶ್ಚರೈಸರ್ ಬಳಸಿ ಇದನ್ನು ಸುಲಭವಾಗಿ ಕಡಿಮೆ ಮಾಡಿಕೊಳ್ಳಬಹುದು. ಆದರೆ ನಿರ್ಲಕ್ಷಿಸಬಾರದು.

ಮಧುಮೇಹ

ಮತ್ತೊಂದೆಡೆ, ಅಂಗೈಗಳಲ್ಲಿ ತುರಿಕೆಗೆ ಮಧುಮೇಹವೂ ಕಾರಣವಾಗಿರಬಹುದು. ಏಕೆಂದರೆ ಮಧುಮೇಹಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವು ಹೆಚ್ಚಾಗಿರುವುದರಿಂದ ನರಗಳು ಸರಿಯಾಗಿ ಕಾರ್ಯನಿರ್ವಹಿಸದಿದ್ದಾಗ ಕೈಗಳಲ್ಲಿ ಅಸ್ವಾಭಾವಿಕ ಸಂವೇದನೆಗಳನ್ನು ಉಂಟು ಮಾಡುತ್ತದೆ. ಉದಾಹರಣೆಗೆ, ಸೆಳೆತ, ಕಿರಿಕಿರಿ ಅಥವಾ ತುರಿಕೆಯಂತಹ ರೋಗಲಕ್ಷಣಗಳು ಕಾಣಿಸಿಕೊಳ್ಳಬಹುದು. ಇವುಗಳನ್ನು ಕೆಲವರು ಸಾಮಾನ್ಯ ಎಂದು ಹೇಳುತ್ತಾರೆ. ಆದರೆ ಇವು ಮಧುಮೇಹಕ್ಕೆ ಸಂಬಂಧಿಸಿದ ದೈಹಿಕ ಎಚ್ಚರಿಕೆಯೂ ಆಗಿರಬಹುದು.

ಇದನ್ನೂ ಓದಿ
Image
ಭಾರತೀಯರು ಡೋಲೋ 650ಯನ್ನು ಕ್ಯಾಡ್ಬರಿ ಜೆಮ್ಸ್ ನಂತೆ ಸೇವಿಸುತ್ತಿದ್ದಾರಾ?
Image
ನಿಮ್ಮ ಮೆದುಳು ವೇಗವಾಗಿ ಕೆಲಸ ಮಾಡಬೇಕೆಂದರೆ ಈ ಆಹಾರಗಳ ಸೇವನೆ ಮಾಡಿ
Image
ಅವಲಕ್ಕಿ ಈ ರೀತಿ ಬಳಸಿದರೆ ಆರೋಗ್ಯ ಸಮಸ್ಯೆಯೇ ಬರಲ್ಲ
Image
ಶುಂಠಿ ಚಹಾ ಇಷ್ಟನಾ? ಮೇ ಮುಗಿಯುವ ತನಕ ಕುಡಿಯಲೇಬೇಡಿ!

ಇದನ್ನೂ ಓದಿ: ಜೈನರು ಅನುಸರಿಸುವ ಈ ಆಹಾರಕ್ರಮ ಪಾಲನೆ ಮಾಡಿದರೆ ರೋಗ ಹತ್ತಿರವೂ ಬರುವುದಿಲ್ಲ

ಚರ್ಮದ ಅಲರ್ಜಿ

ಅಂಗೈಗಳಲ್ಲಿ ತುರಿಕೆ ಕಂಡು ಬರಲು ಮತ್ತೊಂದು ಕಾರಣವೆಂದರೆ ಚರ್ಮದ ಅಲರ್ಜಿ. ನಾವು ಪ್ರತಿನಿತ್ಯ ಬಳಕೆ ಮಾಡುವ ಬಾಡಿ ವಾಶ್, ಡಿಟರ್ಜೆಂಟ್, ಹ್ಯಾಂಡ್ ಸೋಪ್, ಸ್ಯಾನಿಟೈಸರ್ ಇತ್ಯಾದಿಗಳಲ್ಲಿರುವ ರಾಸಾಯನಿಕಗಳು ಚರ್ಮದ ಅಲರ್ಜಿಯನ್ನುಂಟು ಮಾಡುತ್ತವೆ. ಹೊಸ ಉತ್ಪನ್ನವನ್ನು ಬಳಸಿದ ತಕ್ಷಣ ತುರಿಕೆ ಕಂಡು ಬಂದರೆ, ಅದು ಅಲರ್ಜಿಯ ಲಕ್ಷಣವಾಗಿರಬಹುದು. ಅದಲ್ಲದೆ ಕೆಲವು ಔಷಧಿಗಳು ಕೂಡ ಚರ್ಮದ ಮೇಲೆ ಪರಿಣಾಮ ಬೀರಬಹುದು. ಈ ಸಂದರ್ಭಗಳಲ್ಲಿ ವೈದ್ಯರ ಸಲಹೆ ಪಡೆಯುವುದು ಬಹಳ ಅವಶ್ಯಕ.

ಯಕೃತ್ತಿನ ಸಮಸ್ಯೆ

ಕೆಲವು ಸಂದರ್ಭಗಳಲ್ಲಿ, ಯಕೃತ್ತಿನ ಕಾರ್ಯ ಕಡಿಮೆಯಾದರೆ, ಅದು ತುರಿಕೆಗೆ ಕಾರಣವಾಗಬಹುದು. ಸಾಮಾನ್ಯವಾಗಿ ಯಕೃತ್ತು ದೇಹದಲ್ಲಿನ ಪಿತ್ತರಸ ಅಂಶವನ್ನು ನಿಯಂತ್ರಿಸುವ ಅಂಗವಾಗಿದೆ. ಇದು ಸರಿಯಾಗಿ ಕೆಲಸ ಮಾಡದಿದ್ದರೆ, ಅದು ಚರ್ಮದ ಮೇಲೂ ಪರಿಣಾಮ ಬೀರಬಹುದು. ಆಗ ಅಂಗೈಗಳಲ್ಲಿ ಮತ್ತು ದೇಹದ ಇತರ ಭಾಗಗಳಲ್ಲಿ ತುರಿಕೆಗೆ ಕಾರಣವಾಗಬಹುದು. ಅಲ್ಲದೆ, ಮೂತ್ರಪಿಂಡಗಳು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ, ದೇಹದಲ್ಲಿನ ಜೀವಾಣುಗಳು ಪರಿಣಾಮಕಾರಿಯಾಗಿ ಹೊರಹೋಗುವುದಿಲ್ಲ. ಇದರ ಪರಿಣಾಮವಾಗಿ, ಅವು ದೇಹದಲ್ಲಿ ಸಂಗ್ರಹವಾಗಬಹುದು ಮತ್ತು ಚರ್ಮದ ಮೇಲೆ ಪರಿಣಾಮ ಬೀರಬಹುದು ಇದರಿಂದ ತುರಿಕೆಯೂ ಹೆಚ್ಚಾಗಬಹುದು.

ಥೈರಾಯ್ಡ್ ಸಂಬಂಧಿತ ಸಮಸ್ಯೆ

ಇತ್ತೀಚಿನ ದಿನಗಳಲ್ಲಿ ಥೈರಾಯ್ಡ್ ಸಂಬಂಧಿತ ಸಮಸ್ಯೆಗಳು ಹೆಚ್ಚಾಗುತ್ತಿದ್ದು, ಈ ರೀತಿ ಆರೋಗ್ಯ ಸಮಸ್ಯೆಗಳು ಇರುವವರಿಗೆ ಅಂಗೈಗಳಲ್ಲಿ ತುರಿಕೆ ಕಂಡು ಬರುತ್ತದೆ. ಅದರಲ್ಲಿಯೂ ಹೈಪೋಥೈರಾಯ್ಡಿಸಮ್ ಇರುವವರಲ್ಲಿ ಒಣ ಚರ್ಮದ ಸಮಸ್ಯೆ ಹೆಚ್ಚಾಗಿರುತ್ತದೆ ಜೊತೆಗೆ ದೇಹದಲ್ಲಿ ತೇವಾಂಶ ಕಡಿಮೆಯಾಗುತ್ತದೆ. ಇದರ ಪರಿಣಾಮವು ಕೈಗಳ ಮೇಲೆ ಹೆಚ್ಚು ಗೋಚರಿಸುತ್ತದೆ. ಹಾಗಾಗಿ ಈ ರೀತಿಯ ಸಮಸ್ಯೆಗಳನ್ನು ನಿರ್ಲಕ್ಷ್ಯ ಮಾಡದೆಯೇ ಚರ್ಮರೋಗ ತಜ್ಞರನ್ನು ಸಂಪರ್ಕಿಸುವುದು ಬಹಳ ಉತ್ತಮ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ದೇವಸ್ಥಾನದಲ್ಲಿ ಮಚ್ಚಿಗೆ ಪೂಜೆ ಮಾಡಿಸಿದ ವ್ಯಕ್ತಿ, ವಿಡಿಯೋ ವೈರಲ್​
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಪ್ರಧಾನಿ ಮೋದಿ ಸಮೀಕ್ಷೆ ಮಾಡಿಸುತ್ತೇನೆಂದಾಗ ಕಾಂಗ್ರೆಸ್ ಷರತ್ತುಗಳು: ಅಶೋಕ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಚಾಮರಾಜನಗರ: ಪಾಲಾರ್ ಗ್ರಾಮದಲ್ಲಿ ಕಾಡಾನೆಗಳ ಜಲಕ್ರೀಡೆ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
ಖರ್ಗೆ ಗದರಿದ ಬಳಿಕ ಕಾಂಗ್ರೆಸ್ಸಿಗರಿಗೆ ಬುದ್ಧಿ ಬಂದಂತಿದೆ: ವಿಜಯೇಂದ್ರ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
17 ವರ್ಷಗಳ ಬಳಿಕ ಕನ್ನಡಕ್ಕೆ ಬಂದ ಪಟ್ನಾಯಕ್, ರಮ್ಯಾಗೆ ಆಹ್ವಾನ
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ಜಾತಿಗಣತಿಗಾಗಿ ಕಾಂಗ್ರೆಸ್ ಪಕ್ಷ ಕೇಂದ್ರವನ್ನು ಆಗ್ರಹಿಸುತಿತ್ತು: ಶಿವಕುಮಾರ್
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ
ರೈಲುಗಳಲ್ಲಿ ವೇಟಿಂಗ್ ಲಿಸ್ಟ್ ಟಿಕೆಟ್ ಹಿಡಿದು ಸ್ಲೀಪರ್ ಕೋಚ್ ಹತ್ತುವಂತಿಲ್ಲ
ನಟಿ ಲಾಸ್ಯ ನಾಗರಾಜ್ ತಾಯಿ ಮೇಲೆ ಹಲ್ಲೆ, ಘಟನೆ ವಿವರಿಸಿದ ಸುಧಾ ನಾಗರಾಜ್
ನಟಿ ಲಾಸ್ಯ ನಾಗರಾಜ್ ತಾಯಿ ಮೇಲೆ ಹಲ್ಲೆ, ಘಟನೆ ವಿವರಿಸಿದ ಸುಧಾ ನಾಗರಾಜ್