AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರೀಶ್ ರಾಣಾ ಪ್ರಕರಣದ ಬೆನ್ನಲ್ಲೇ ಹೊಸ ಚರ್ಚೆ: ಕೋಮಾ ಮತ್ತು ಬ್ರೈನ್ ಡೆಡ್ಗೂ ಏನೆಲ್ಲಾ ವ್ಯತ್ಯಾಸ?

ಹರೀಶ್ ರಾಣಾ ಸುಮಾರು 13 ವರ್ಷಗಳಿಂದ ಹಾಸಿಗೆಯ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದ್ದರು. ಈಗ ಸುಪ್ರೀಂ ಕೋರ್ಟ್ ಅವರಿಗೆ ದಯಾಮರಣಕ್ಕೆ ಅನುಮತಿ ನೀಡಿದೆ. ಆದರೆ ಈ ಪ್ರಕರಣವು ಕೆಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕೋಮಾ ಮತ್ತು ಬ್ರೈನ್ ಡೆಡ್ ನಡುವಿನ ವ್ಯತ್ಯಾಸವೇನು, ಕೋಮಾದಲ್ಲಿ ಏನಾಗುತ್ತದೆ ಮತ್ತು ಅದು ಮೆದುಳು ನಿಷ್ಕ್ರಿಯವಾಗುವುದಕ್ಕಿಂತ ಹೇಗೆ ಭಿನ್ನವಾಗಿದೆ? ಈ ಎರಡು ಪರಿಸ್ಥಿತಿಗಳಲ್ಲಿ ವೈದ್ಯಕೀಯ ಹಾಗೂ ಕಾನೂನು ನಿರ್ಧಾರಗಳು ಏಕೆ ಬೇರೆಬೇರೆ ಆಗಿರುತ್ತವೆ ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಈ ಬಗ್ಗೆ ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.

ಹರೀಶ್ ರಾಣಾ ಪ್ರಕರಣದ ಬೆನ್ನಲ್ಲೇ ಹೊಸ ಚರ್ಚೆ: ಕೋಮಾ ಮತ್ತು ಬ್ರೈನ್ ಡೆಡ್ಗೂ ಏನೆಲ್ಲಾ ವ್ಯತ್ಯಾಸ?
What Is Coma and Brain Death? Harish Rana Case Brings Medical Differences Into Focus
ಪ್ರೀತಿ ಭಟ್​, ಗುಣವಂತೆ
|

Updated on: Mar 14, 2026 | 5:02 PM

Share

ಬಹು ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಹಾಸಿಗೆಯಲ್ಲೇ ಅಚೇತನವಾಗಿ ಮಲಗಿದ್ದ ಹರೀಶ್ ರಾಣಾಗೆ (Harish Rana) ಸುಪ್ರೀಂ ಕೋರ್ಟ್ ದಯಾಮರಣಕ್ಕೆ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಕೋಮಾ ಮತ್ತು ಬ್ರೈನ್ ಡೆಡ್ ಎಂಬ ಎರಡು ವೈದ್ಯಕೀಯ ಸ್ಥಿತಿಗಳ ಬಗ್ಗೆ ಚರ್ಚೆ ಹೆಚ್ಚಾಗಿದೆ. ಇವು ಎರಡೂ ಗಂಭೀರ ಸ್ಥಿತಿಗಳಾಗಿದ್ದರೂ, ವೈದ್ಯಕೀಯ ಹಾಗೂ ಕಾನೂನು ದೃಷ್ಟಿಯಿಂದ ದೊಡ್ಡ ವ್ಯತ್ಯಾಸಗಳಿವೆ. ಈ ಪ್ರಕರಣದಿಂದ ಒಂದು ಪ್ರಮುಖ ಪ್ರಶ್ನೆ ಎದುರಾಗಿದೆ. ಹರೀಶ್ ರಾಣಾ ಸುಮಾರು 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಹಾಸಿಗೆಯಲ್ಲೇ ಇದ್ದು, ಎಐಐಎಂಎಸ್ ವೈದ್ಯರ ಮೆಡಿಕಲ್ ಬೋರ್ಡ್ ಅವರು ಪರಿಶೀಲಿಸಿ, ಅವರ ಚೇತರಿಕೆಯ ಸಾಧ್ಯತೆ ಇಲ್ಲ ಎಂದು ತಿಳಿಸಿತ್ತು. ಹಾಗಾಗಿ ದಯಾಮರಣಕ್ಕೆ ನ್ಯಾಯಾಲಯದ ಅನುಮತಿ ಅಗತ್ಯವಾಯಿತು. ಆದರೆ ಯಾರಾದರೂ “ಬ್ರೈನ್ ಡೆಡ್” ಆಗಿದ್ದರೆ ಸಾಮಾನ್ಯವಾಗಿ ನ್ಯಾಯಾಲಯದ ಅನುಮತಿ ಬೇಕಾಗುವುದಿಲ್ಲ. ಅಂತಹ ಸಂದರ್ಭಗಳಲ್ಲಿ ಬೇರೆ ವಿಧಾನ ಅನುಸರಿಸಲಾಗುತ್ತದೆ ಮತ್ತು ಅಂಗದಾನಕ್ಕೂ ಅನುಮತಿ ನೀಡಬಹುದು. ಆದರೆ ಕೋಮಾ ಮತ್ತು ಬ್ರೈನ್ ಡೆಡ್ ನಡುವಿನ ವ್ಯತ್ಯಾಸವೇನು, ಈ ಎರಡು ಪರಿಸ್ಥಿತಿಗಳಲ್ಲಿ ವೈದ್ಯಕೀಯ ಹಾಗೂ ಕಾನೂನು ನಿರ್ಧಾರಗಳು ಏಕೆ ಬೇರೆಬೇರೆ ಆಗಿರುತ್ತವೆ ಎಂಬುದನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ. ಈ ಬಗ್ಗೆ ಮತ್ತಷ್ಟು ಮಾಹಿತಿ ಸ್ಟೋರಿಯಲ್ಲಿದೆ.

ಕೋಮಾ ಎಂದರೇನು?

ಸಾಮಾನ್ಯವಾಗಿ ಕೋಮಾ ಎನ್ನುವುದು ಗಂಭೀರವಾದ ಮೆದುಳಿನ ಸ್ಥಿತಿ. ಈ ಸಂದರ್ಭದಲ್ಲಿ ವ್ಯಕ್ತಿ ಗಾಢ ಅಚೇತನ ಸ್ಥಿತಿಗೆ ಹೋಗುತ್ತಾನೆ. ಅವನು ಕಣ್ಣು ತೆರೆಯಲು ಸಾಧ್ಯವಿಲ್ಲ, ಮಾತನಾಡಲು ಸಾಧ್ಯವಿಲ್ಲ ಮತ್ತು ದೇಹದ ಚಲನೆಯೂ ಇರುವುದಿಲ್ಲ. ಆದರೆ ಈ ಸ್ಥಿತಿಯಲ್ಲಿ ಮೆದುಳಿನ ಕೆಲವು ಭಾಗಗಳು ಇನ್ನೂ ಕಾರ್ಯನಿರ್ವಹಿಸುತ್ತಿರುತ್ತವೆ. ರೋಗಿ ಉಸಿರಾಡುತ್ತಿರುತ್ತಾನೆ ಅವನ ಹೃದಯದ ಬಡಿತ ನಿಂತಿರುವುದಿಲ್ಲ. ಕೆಲವರು ಕೆಲವು ದಿನಗಳು, ವಾರಗಳು ಅಥವಾ ತಿಂಗಳುಗಳ ನಂತರ ಕೋಮಾದಿಂದ ಹೊರಬರುವ ಸಾಧ್ಯತೆ ಇರುತ್ತದೆ. ಕೆಲ ಸಂದರ್ಭಗಳಲ್ಲಿ ವರ್ಷಗಳ ಕಾಲವೂ ಇದೆ ಸ್ಥಿತಿ ಮುಂದುವರಿಯಬಹುದು. ವೈದ್ಯರು ಸಾಮಾನ್ಯವಾಗಿ ರೋಗಿಯ ಸ್ಥಿತಿಯನ್ನು ನೋಡಿ, ಕೋಮಾ ಎಷ್ಟು ಕಾಲ ಇರಬಹುದು ಮತ್ತು ಚೇತರಿಕೆಯ ಸಾಧ್ಯತೆ ಏನು ಎಂದು ಅಂದಾಜು ಮಾಡುತ್ತಾರೆ. ಆದರೆ ಕೆಲವೊಮ್ಮೆ ನಿಖರವಾಗಿ ಹೇಳುವುದು ಕೂಡ ಕಷ್ಟವಾಗಬಹುದು.

ಬ್ರೈನ್ ಡೆಡ್ ಎಂದರೇನು?

ಸಾಮಾನ್ಯವಾಗಿ ಬ್ರೈನ್ ಡೆತ್ ಎನ್ನುವುದು ಮೆದುಳು ಸಂಪೂರ್ಣವಾಗಿ ಕೆಲಸ ಮಾಡುವುದನ್ನು ನಿಲ್ಲಿಸಿದ ಸ್ಥಿತಿ. ಈ ಸಂದರ್ಭದಲ್ಲಿ ಮೆದುಳಿನ ಎಲ್ಲಾ ಕಾರ್ಯಗಳು ಸಂಪೂರ್ಣವಾಗಿ ಸ್ಥಗಿತವಾಗಿರುತ್ತವೆ. ವೈದ್ಯರ ವಿಶೇಷ ತಂಡ ಪರೀಕ್ಷೆ ನಡೆಸಿ, ವ್ಯಕ್ತಿಯನ್ನು “ಬ್ರೈನ್ ಡೆಡ್” ಎಂದು ಘೋಷಿಸುತ್ತದೆ. ವೈದ್ಯಕೀಯ ಮತ್ತು ಕಾನೂನು ದೃಷ್ಟಿಯಿಂದ ಇದನ್ನು ಮರಣವೆಂದು ಪರಿಗಣಿಸಲಾಗುತ್ತದೆ. ಇಂತಹ ಸಂದರ್ಭಗಳಲ್ಲಿ ಅಂಗದಾನ ಮಾಡಲು ಸಹ ಕಾನೂನು ಅನುಮತಿ ದೊರೆಯುತ್ತದೆ.

ಇದನ್ನೂ ಓದಿ: 13 ವರ್ಷಗಳಿಂದ ಕೋಮಾದಲ್ಲಿರುವ ಹರೀಶ್ ರಾಣಾ ದಯಾಮರಣಕ್ಕೆ ಸುಪ್ರೀಂಕೋರ್ಟ್​ ಅನುಮತಿ

ವೈದ್ಯರು ಹೇಗೆ ನಿರ್ಧರಿಸುತ್ತಾರೆ?

ದೆಹಲಿ ಜಿಬಿ ಪಂತ್ ಆಸ್ಪತ್ರೆಯ ನ್ಯೂರೋಸರ್ಜರಿ ವಿಭಾಗದ ಮಾಜಿ ಮುಖ್ಯಸ್ಥರಾದ ಡಾ. ದಲ್ಜೀತ್ ಸಿಂಗ್ ಅವರ ಪ್ರಕಾರ, ವೈದ್ಯರು ಹಲವು ನ್ಯೂರಾಲಜಿಕಲ್ ಪರೀಕ್ಷೆಗಳ ಮೂಲಕ ರೋಗಿ ಕೋಮಾ ಸ್ಥಿತಿಯಲ್ಲಿದ್ದಾನೆಯೋ ಅಥವಾ ಬ್ರೈನ್ ಡೆಡ್ ಆಗಿದೆಯೋ ಎಂದು ನಿರ್ಧರಿಸುತ್ತಾರೆ. ಬ್ರೈನ್ ಡೆಡ್ ಆಗಿದ್ದರೆ ಕಾನೂನು ಪ್ರಕಾರ ವ್ಯಕ್ತಿಯನ್ನು ಮೃತ ಎಂದು ಪರಿಗಣಿಸಲಾಗುತ್ತದೆ. ಆದರೆ ಕೋಮಾ ಸ್ಥಿತಿಯಲ್ಲಿ ಚೇತರಿಕೆಯ ಸಾಧ್ಯತೆ ಇರುವುದರಿಂದ ವ್ಯಕ್ತಿಯನ್ನು ಮೃತ ಎಂದು ಪರಿಗಣಿಸಲಾಗುವುದಿಲ್ಲ.

ಕೋಮಾ ಪ್ರಕರಣಗಳಲ್ಲಿ ನ್ಯಾಯಾಲಯದ ಅನುಮತಿ ಏಕೆ ಅಗತ್ಯ?

ಸಾಮಾನ್ಯವಾಗಿ ಕೋಮಾ ಸ್ಥಿತಿಯಲ್ಲಿ ರೋಗಿಯಲ್ಲಿ ಚೇತರಿಕೆಯ ಸಾಧ್ಯತೆ ಇರುವುದರಿಂದ ಲೈಫ್ ಸಪೋರ್ಟ್ ವ್ಯವಸ್ಥೆಯನ್ನು ತೆಗೆದುಹಾಕುವುದು ಸೂಕ್ಷ್ಮ ಹಾಗೂ ಕಾನೂನು ಸಂಬಂಧಿತ ವಿಷಯವಾಗುತ್ತದೆ. ವೈದ್ಯರು ಅಥವಾ ಕುಟುಂಬ ಸದಸ್ಯರು ಸ್ವತಃ ಈ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಈ ಕಾರಣದಿಂದ ಇಂತಹ ಸಂದರ್ಭಗಳಲ್ಲಿ ನ್ಯಾಯಾಲಯದ ಅನುಮತಿ ಪಡೆಯಬೇಕು. ನ್ಯಾಯಾಲಯವು ವೈದ್ಯಕೀಯ ಮಂಡಳಿಯ ವರದಿ, ರೋಗಿಯ ಸ್ಥಿತಿ ಮತ್ತು ಚೇತರಿಕೆಯ ಸಾಧ್ಯತೆಗಳನ್ನು ಪರಿಶೀಲಿಸಿ ತೀರ್ಮಾನ ಕೈಗೊಳ್ಳುತ್ತದೆ. ಹೀಗಾಗಿ ಕೋಮಾ ಮತ್ತು ಬ್ರೈನ್ ಡೆಡ್ ಎರಡೂ ಗಂಭೀರ ವೈದ್ಯಕೀಯ ಸ್ಥಿತಿಗಳಾಗಿದ್ದರೂ, ಮೆದುಳಿನ ಕಾರ್ಯ ಮತ್ತು ಕಾನೂನು ಮಾನ್ಯತೆಯ ದೃಷ್ಟಿಯಿಂದ ಅವುಗಳಲ್ಲಿ ಪ್ರಮುಖ ವ್ಯತ್ಯಾಸಗಳಿವೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!