AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Head massage horror: ಬಳ್ಳಾರಿಯ ಸಲೂನ್​​​ನಲ್ಲಿ ತಲೆಗೆ ಮಸಾಜ್ ಮಾಡಿಕೊಂಡ ವ್ಯಕ್ತಿಗೆ ಪಾರ್ಶ್ವವಾಯು; ಇದಕ್ಕೆ ಕಾರಣವೇನು? ತಜ್ಞರು ಹೇಳುವುದೇನು?

ಬಳ್ಳಾರಿಯ ಸಲೂನ್ ಒಂದರಲ್ಲಿ 30 ವರ್ಷದ ವ್ಯಕ್ತಿಯೊಬ್ಬರು ತಲೆಗೆ ಮಸಾಜ್ ಮಾಡಿಕೊಂಡ ಬಳಿಕ ಪಾರ್ಶ್ವವಾಯುವಿಗೆ ಒಳಗಾಗಿರುವ ಆಘಾತಕಾರಿ ಘಟನೆ ನಡೆದಿದೆ. ವರದಿಗಳ ಪ್ರಕಾರ, ಕ್ಷೌರಿಕನು ತಲೆಗೆ ಮಸಾಜ್ ಮಾಡುವಾಗ ಕುತ್ತಿಗೆ ತಿರುಗಿಸಿದ್ದು, ವ್ಯಕ್ತಿ ಮಾತನಾಡಲು ಸಾಧ್ಯವಾಗದೆಯೇ ತನ್ನ ದೇಹದ ಎಡಭಾಗದ ಸಾಮರ್ಥ್ಯವನ್ನು ಪೂರ್ತಿಯಾಗಿ ಕಳೆದುಕೊಂಡಿದ್ದಾನೆ. ಈ ಘಟನೆ ನಡೆದು ಅವರು ಚೇತರಿಸಿಕೊಳ್ಳಲು ಎರಡು ತಿಂಗಳು ತೆಗೆದುಕೊಂಡಿದ್ದು. ಮಸಾಜ್, ಮೆದುಳಿಗೆ ರಕ್ತದ ಹರಿವನ್ನು ನಿಲ್ಲಿಸಿದ್ದು ಪಾರ್ಶ್ವವಾಯುವಿಗೆ ಕಾರಣವಾಯಿತು ಎಂದು ವರದಿಗಳು ಹೇಳುತ್ತವೆ. ಹಾಗಾದರೆ ಪಾರ್ಶ್ವವಾಯು ಉಂಟಾಗಲು ಕಾರಣವೇನು? ಇಲ್ಲಿದೆ ಮಾಹಿತಿ.

Head massage horror: ಬಳ್ಳಾರಿಯ ಸಲೂನ್​​​ನಲ್ಲಿ ತಲೆಗೆ ಮಸಾಜ್ ಮಾಡಿಕೊಂಡ ವ್ಯಕ್ತಿಗೆ ಪಾರ್ಶ್ವವಾಯು; ಇದಕ್ಕೆ ಕಾರಣವೇನು? ತಜ್ಞರು ಹೇಳುವುದೇನು?
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Sep 30, 2024 | 12:23 PM

Share

ಇತ್ತೀಚಿಗೆ ಬಳ್ಳಾರಿಯ ಸಲೂನ್ ಒಂದರಲ್ಲಿ 30 ವರ್ಷದ ವ್ಯಕ್ತಿಯೊಬ್ಬರು ತಲೆಗೆ ಮಸಾಜ್ ಮಾಡಿಕೊಂಡ ಬಳಿಕ ಪಾರ್ಶ್ವವಾಯುವಿಗೆ ಒಳಗಾಗಿರುವ ಆಘಾತಕಾರಿ ಘಟನೆ ನಡೆದಿದೆ. ವರದಿಗಳ ಪ್ರಕಾರ, ಕ್ಷೌರಿಕನು ತಲೆಗೆ ಮಸಾಜ್ ಮಾಡುವಾಗ ಕುತ್ತಿಗೆ ತಿರುಗಿಸಿದ್ದು, ವ್ಯಕ್ತಿ ಮಾತನಾಡಲು ಸಾಧ್ಯವಾಗದೆಯೇ ತನ್ನ ದೇಹದ ಎಡಭಾಗದ ಸಾಮರ್ಥ್ಯವನ್ನು ಪೂರ್ತಿಯಾಗಿ ಕಳೆದುಕೊಂಡಿದ್ದಾನೆ. ಈ ಘಟನೆ ನಡೆದು ಅವರು ಚೇತರಿಸಿಕೊಳ್ಳಲು ಎರಡು ತಿಂಗಳು ತೆಗೆದುಕೊಂಡಿದ್ದು. ಮಸಾಜ್, ಮೆದುಳಿಗೆ ರಕ್ತದ ಹರಿವನ್ನು ನಿಲ್ಲಿಸಿದ್ದು ಪಾರ್ಶ್ವವಾಯುವಿಗೆ ಕಾರಣವಾಯಿತು ಎಂದು ವರದಿಗಳು ಹೇಳುತ್ತವೆ. ಪ್ರತಿದಿನ ಒತ್ತಡದ ಜೀವಶೈಲಿಯನ್ನು ಸಾಗಿಸುತ್ತಿರುವ ಪ್ರತಿಯೊಬ್ಬರಿಗೂ ವಿಶ್ರಾಂತಿಯ ಅವಶ್ಯಕತೆ ಇರುತ್ತದೆ. ಹಾಗಾಗಿ ತಲೆಗೆ ಮಸಾಜ್ ಮಾಡಿಕೊಳ್ಳುವುದಕ್ಕೆ ಇಷ್ಟಪಡುತ್ತಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಹಾಗಾದರೆ ತಲೆ ಮಸಾಜ್ ಪಾರ್ಶ್ವವಾಯುವಿಗೆ ಕಾರಣವಾಗಬಹುದೇ ಎಂಬ ಪ್ರಶ್ನೆ ನಿಮ್ಮನ್ನು ಕಾಡಬಹುದು. ಹಾಗಾಗಿ ಈ ಬಗ್ಗೆ ವಿವರವಾಗಿ ತಿಳಿದುಕೊಳ್ಳಲು ನ್ಯೂಸ್9, ಪಾರ್ಶ್ವವಾಯುವಿಗೆ ಕಾರಣವೇನು? ಎಂಬುದರ ಕುರಿತಾಗಿ ಕೆಲವು ಮಾಹಿತಿಗಳನ್ನು ಕಲೆಹಾಕಿದೆ.

ತಜ್ಞರ ಅಭಿಪ್ರಾಯವೇನು?

ಮುಂಬೈನ ಗ್ಲೆನೆಗಲ್ಸ್ ಆಸ್ಪತ್ರೆಯ ನರವಿಜ್ಞಾನ ವಿಭಾಗದ ಮುಖ್ಯಸ್ಥ ಡಾ. ಪಂಕಜ್ ಅಗರ್ವಾಲ್ ಅವರು ಈ ಬಗ್ಗೆ ವಿವರವಾದ ಮಾಹಿತಿಯನ್ನು ಹಂಚಿಕೊಂಡಿದ್ದು “ಪ್ರತಿಯೊಬ್ಬರೂ ತಲೆಗೆ ಮಸಾಜ್ ಮಾಡಿಕೊಳ್ಳುವುದನ್ನು ಇಷ್ಟಪಡುತ್ತಾರೆ, ಆದರೆ ಇದನ್ನು ಮಾಡಿಸಿಕೊಳ್ಳುವಾಗ ಅತ್ಯಂತ ಜಾಗರೂಕರಾಗಿರಬೇಕು. ಇಲ್ಲವಾದಲ್ಲಿ ಇದು ವಿಶ್ರಾಂತಿ ನೀಡುವ ಬದಲು, ಆರೋಗ್ಯ ಹದಗೆಡಿಸಬಹುದು. ತಲೆಗೆ ಮಸಾಜ್ ಮಾಡಿಕೊಳ್ಳುವುದರಿಂದ ರಕ್ತ ಪರಿಚಲನೆ ಸುಧಾರಿಸುತ್ತದೆ, ಉದ್ವೇಗ ಕಡಿಮೆಯಾಗುತ್ತದೆ ಮತ್ತು ಪದೇ ಪದೇ ಬರುವ ತಲೆನೋವು ನಿವಾರಣೆಯಾಗಲು ಇದು ನಿಮಗೆ ಸಹಾಯ ಮಾಡುತ್ತದೆ. ಆದರೆ ಈ ಮೊದಲೇ ತೀವ್ರವಾದ ಅಧಿಕ ರಕ್ತದೊತ್ತಡ ಅಥವಾ ನಾಳೀಯ ಅಸ್ವಸ್ಥತೆಗಳನ್ನು ಹೊಂದಿರುವವರು ಬಹಳ ಜಾಗರೂಕರಾಗಿರಬೇಕು, ಏಕೆಂದರೆ ತಲೆಗೆ ಮಸಾಜ್ ಮಾಡಿಕೊಳ್ಳುವುದು ಪಾರ್ಶ್ವವಾಯುವಿಗೆ ಕಾರಣವಾಗಬಹುದು, ಜೊತೆಗೆ ಅದು ಮಾರಣಾಂತಿಕವಾಗಬಹುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ದೇಹದಲ್ಲಿ ಕಂಡುಬರುವ ಈ ಲಕ್ಷಣಗಳು ಕ್ಯಾನ್ಸರ್ ಕೋಶಗಳ ಬೆಳವಣಿಗೆಯಾಗಿರಬಹುದು!

ತಲೆಗೆ ಮಸಾಜ್ ಮಾಡುವುದರಿಂದ ಪಾರ್ಶ್ವವಾಯು ಹೇಗೆ ಉಂಟಾಗುತ್ತದೆ?

ಡಾ. ಪಂಕಜ್ ಅಗರ್ವಾಲ್ ಹೇಳುವ ಪ್ರಕಾರ, “ಮಸಾಜ್ ಮಾಡುವ ಸಮಯದಲ್ಲಿ ಹೆಚ್ಚು ಒತ್ತಡ ಹಾಕುವುದರಿಂದ ಅಥವಾ ಕುತ್ತಿಗೆ ತಿರುಚುವುದರಿಂದ ರಕ್ತನಾಳಗಳ ಮೇಲೆ ಅತಿಯಾದ ಒತ್ತಡ ಉಂಟಾಗಿ, ಮೆದುಳಿಗೆ ರಕ್ತದ ಹರಿವು ಅಡ್ಡಿಯಾದಾಗ ಅಥವಾ ಕಡಿಮೆಯಾದಾಗ ಪಾರ್ಶ್ವವಾಯುವಿಗೆ ಕಾರಣವಾಗಬಹುದು. ಜೊತೆಗೆ ಮೆದುಳಿಗೆ ಹಾನಿಯನ್ನುಂಟು ಮಾಡುತ್ತದೆ. ಈ ಪಾರ್ಶ್ವವಾಯುವನ್ನು “ಸಲೂನ್ ಸ್ಟ್ರೋಕ್” ಅಥವಾ “ಬ್ಯೂಟಿ ಪಾರ್ಲರ್ ಸ್ಟ್ರೋಕ್” ಎಂದು ಕರೆಯಬಹುದು” ಎಂದಿದ್ದಾರೆ.

“ಹಾಗಾಗಿ ಯಾರೇ ಆಗಲಿ ತಲೆಗೆ ಮಸಾಜ್ ಮಾಡುವಾಗ ಬಹಳ ಜಾಗರೂಕರಾಗಿರುವುದು ಕಡ್ಡಾಯವಾಗಿದೆ. ಮಸಾಜ್ ಮಾಡುವವರು ಚೆನ್ನಾಗಿ ತರಬೇತಿ ಪಡೆದಿದ್ದು ಯಾವುದೇ ರೀತಿಯಲ್ಲಿಯೂ ಅಗತ್ಯಕ್ಕಿಂತ ಹೆಚ್ಚಾಗಿ ಒತ್ತಡ ಹಾಕುವುದಿಲ್ಲ ಎಂಬುದನ್ನು ಮೊದಲೇ ಖಚಿತಪಡಿಸಿಕೊಳ್ಳಿ. ಮಸಾಜ್ ಮಾಡುವಾಗ ತಲೆನೋವು, ವಾಕರಿಕೆ, ವಾಂತಿ ಅಥವಾ ಕುತ್ತಿಗೆ ನೋವು ಕಾಣಿಸಿಕೊಂಡರೆ ಮಸಾಜ್ ಮಾಡುವುದನ್ನು ನಿಲ್ಲಿಸಲು ಹೇಳಿ. ಬಳಿಕ ತಕ್ಷಣ ವೈದ್ಯರನ್ನು ಸಂಪರ್ಕಿಸಿ. ಚಿಕಿತ್ಸೆ ವಿಳಂಬವಾದರೆ ಪಾರ್ಶ್ವವಾಯು ಅಥವಾ ಪ್ರಾಣಹಾನಿಯಾಗಬಹುದು ಅಥವಾ ಶಾಶ್ವತ ಅಂಗವೈಕಲ್ಯಕ್ಕೆ ಕಾರಣವಾಗಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ