AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

’Jamun Health Benefits: ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ನೇರಳೆ ಹಣ್ಣನ್ನು ಸೇವಿಸಿ

ನೈಸರ್ಗಿಕವಾಗಿ ದೊರೆಯುವ ಮತ್ತು ಆರೋಗ್ಯಕ್ಕೂ ಕೂಡ ಹೆಚ್ಚು ಉಪಯುಕ್ತವಾದವುಗಳಲ್ಲಿ ನೇರಳೆ ಹಣ್ಣು ಪ್ರಮುಖ ಪಾತ್ರವಹಿಸುತ್ತದೆ. ಈ ಹಣ್ಣು ಪೋಷಕಾಂಶ ಭರಿತವಾಗಿದ್ದು, ಹಲವು ಕಾಯಿಲೆಗಳಿಗೆ ಪರಿಹಾರವಾಗಿದೆ.

’Jamun Health Benefits: ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ನೇರಳೆ ಹಣ್ಣನ್ನು ಸೇವಿಸಿ
ನೇರಳೆ ಹಣ್ಣು
TV9 Web
| Edited By: |

Updated on:Jun 13, 2021 | 7:33 AM

Share

ನಾವು ಸಂಪೂರ್ಣವಾಗಿ ಆರೋಗ್ಯವಾಗಿರಲು ಬಯಸಿದರೆ ಪ್ರಕೃತಿಯಲ್ಲಿ ಸುಲಭವಾಗಿ ಲಭ್ಯವಿರುವ ಆಹಾರವನ್ನು ಮೊದಲು ನಾವು ಆಯ್ಕೆ ಮಾಡಿಕೊಳ್ಳಬೇಕು. ನೈಸರ್ಗಿಕವಾಗಿ ದೊರೆಯುವ ಮತ್ತು ಆರೋಗ್ಯಕ್ಕೂ ಕೂಡ ಹೆಚ್ಚು ಉಪಯುಕ್ತವಾದವುಗಳಲ್ಲಿ ನೇರಳೆ ಹಣ್ಣು ಪ್ರಮುಖ ಪಾತ್ರವಹಿಸುತ್ತದೆ. ಈ ಹಣ್ಣು ಪೋಷಕಾಂಶ ಭರಿತವಾಗಿದ್ದು, ಹಲವು ಕಾಯಿಲೆಗಳಿಗೆ ಪರಿಹಾರವಾಗಿದೆ. ನೇರಳೆ ಹಣ್ಣು ಮಾತ್ರವಲ್ಲ ಇದರ ಎಲೆ ಮತ್ತು ತೊಗಟೆ ಕೂಡ ದೇಹಕ್ಕೆ ತುಂಬಾ ಒಳ್ಳೆಯದು. ನೇರಳೆ ಹಣ್ಣು ತಿನ್ನುವುದರಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳುವುದು ಸೂಕ್ತ. *ದೀರ್ಘಕಾಲದವರೆಗೆ ಹೊಟ್ಟೆಯಲ್ಲಿ ಸಂಗ್ರಹವಾಗಿರುವ ಕಲ್ಮಶಗಳನ್ನು ತೊಡೆದುಹಾಕಲು ನೇರಳೆ ಹಣ್ಣು ತಿನ್ನುವುದು ಒಳ್ಳೆಯದು. *  ಮಧುಮೇಹದಂತಹ ಕಾಯಿಲೆಯಿಂದ ಬಳಲುತ್ತಿರುವವರು ನೇರಳೆ ಹಣ್ಣನ್ನು ಸೇವಿಸುವುದು ಉತ್ತಮ. * ಕೆಲವೊಮ್ಮೆ ಕರಳಿನಲ್ಲಿ ಕೂದಲು ಸೇರುವ ಸಾಧ್ಯತೆ ಇರುತ್ತದೆ. ಇದನ್ನು ಹೊರಹಾಕುವ ಶಕ್ತಿ ನೇರಳೆ ಹಣ್ಣಿಗೆ ಇದೆ. * ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ನೇರಳೆ ಹಣ್ಣು ಪ್ರಮುಖ ಪಾತ್ರವಹಿಸಿತ್ತದೆ ಮತ್ತು ರೋಗದ ತೀವ್ರತೆಯನ್ನು ಕಡಿಮೆ ಮಾಡುತ್ತದೆ. * ಮೂತ್ರದ ಸಮಸ್ಯೆಗಳನ್ನು ನಿವಾರಿಸುವಲ್ಲಿಯೂ ನೇರಳೆ ಹಣ್ಣು ಪ್ರಮುಖ ಪಾತ್ರವಹಿಸುತ್ತದೆ. * ಬಂಜೆತನ ಇರುವವರು ನೇರಳೆ ಹಣ್ಣು ತಿನ್ನುವುದರಿಂದ ತ್ವರಿತ ಶಕ್ತಿಯನ್ನು ಪಡೆಯುತ್ತಾರೆ. * ಬೆನ್ನು ನೋವು, ಮೊಣಕಾಲು ನೋನಿನಂತಹ ಸಮಸ್ಯೆಯನ್ನು ದೂರ ಮಾಡುತ್ತದೆ. * ಅತಿಸಾರದಿಂದ ಬಳಲುತ್ತಿರುವವರಿಗೆ ನೇರಳೆ ಹಣ್ಣಿನ ರಸವನ್ನು ಎರಡು ಮೂರು ಚಮಚ ನೀಡಬೇಕು. * ಕೆಲವು ಅಧ್ಯಯನಗಳು ನೇರಳೆ ಹಣ್ಣು ಯಕೃತ್ತಿನ ಕಾರ್ಯವನ್ನು ನಿಯಂತ್ರಿಸಲು ಅಥವಾ ಶುದ್ಧೀಕರಿಸಲು ರಾಮಬಾಣವಾಗಿ ಕಾರ್ಯನಿರ್ವಹಿಸುತ್ತದೆ ಎಂದು ತಿಳಿಸಿದೆ. * ಈ ಹಣ್ಣಿನಲ್ಲಿರುವ ಉತ್ಕರ್ಷಣ ನಿರೋಧಕಗಳು ಮೆದುಳಿಗೆ ಮತ್ತು ಹೃದಯಕ್ಕೆ ಹೆಚ್ಚು ಉಪಯುಕ್ತಕಾರಿಯಾಗಿದೆ. * ಜ್ವರ ಬಂದಾಗ ಕೊತ್ತಂಬರಿ ರಸದೊಂದಿಗೆ ನೇರಳೆ ಹಣ್ಣಿನ ಜ್ಯೂಸ್ ಸೇವಿಸಿದರೆ, ದೇಹದ ಉಷ್ಣತೆ ಕಡಿಮೆಯಾಗುತ್ತದೆ. * ಮೂತ್ರದ ಉರಿಯೂತವನ್ನು ಕಡಿಮೆ ಮಾಡಲು ನಿಂಬೆ ರಸ ಮತ್ತು ನೇರಳೆ ಹಣ್ಣಿನ ರಸವನ್ನು ಎರಡು ಚಮಚ ನೀರಿನಲ್ಲಿ ಬೇರೆಸಿ ಸೇವಿಸಬೇಕು. * ಅಧಿಕ ತೂಕ ಹೊಂದಿರುವ ಜನರು ದಿನಕ್ಕೆ ಆರರಿಂದ ಎಂಟು ಬಾರಿ ನೇರಳೆ ಹಣ್ಣನ್ನು ತಿನ್ನಬಹುದು ಏಕೆಂದರೆ ಇದು ಕೊಬ್ಬಿನಾಂಶವನ್ನು ದೂರ ಮಾಡುತ್ತದೆ. * ದಿನಕ್ಕೆ ಒಂದು ಬಾರಿ ನೇರಳೆ ಹಣ್ಣು ಸೇವಿಸುವುದರಿಂದ ಆಗಾಗ ವೈದ್ಯರನ್ನು ಭೇಟಿಯಾಗಬೇಕಾದ ಅನಿವಾರ್ಯತೆ ಇರುವುದಿಲ್ಲ. ಗರ್ಭಿಣಿಯರು ನೇರಳೆ ಹಣ್ಣು ತಿನ್ನಬಾರದು. ಏಕೆಂದರೆ ಇದು ಕರಗಲು ಬಹಳ ಸಮಯ ತೆಗೆದುಕೊಳ್ಳುತ್ತದೆ. ಈ ಹಣ್ಣುಗಳನ್ನು ಊಟ ಮಾಡಿದ ಒಂದು ಗಂಟೆಯ ನಂತರ ತೆಗೆದುಕೊಂಡರೆ ಆಹಾರ ಜೀರ್ಣವಾಗುತ್ತದೆ.

ಇದನ್ನೂ ಓದಿ:

ಬಿಳಿ ಜಂಬೂ ಅಥವಾ ಪನ್ನೇರಳೆ ಹಣ್ಣು ರುಚಿಯಷ್ಟೇ ಆರೋಗ್ಯಕರ; ರೋಗನಿರೋಧಕ ಶಕ್ತಿ ಹೆಚ್ಚಿಸುವ ಈ ಹಣ್ಣನ್ನು ಒಮ್ಮೆ ತಿಂದು ನೋಡಿ

Health Tips: ಮೊಸರಿನೊಂದಿಗೆ ಇತರ ಪದಾರ್ಥಗಳನ್ನು ಸೇವಿಸುವ ಅಭ್ಯಾಸ ಇದೆಯೇ? ನಿಮ್ಮ ಆಹಾರ ಸೇವನೆ ಬಗ್ಗೆ ಎಚ್ಚರ ಇರಲಿ

Published On - 7:32 am, Sun, 13 June 21

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ