AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bilva Patra: ಬಿಲ್ವ ಪತ್ರೆ -ಈ ಪವಿತ್ರ ಮರದಲ್ಲಿದೆ 12 ಔಷಧೀಯ ಗುಣಲಕ್ಷಣಗಳು, ವಿವರ ಇಲ್ಲಿದೆ

ಒಂದು ಚಮಚ ತಾಜಾ ಎಲೆಯ ರಸ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತೆಗೆದು ಕೊಂಡರೆ ಶುಗರ್ ನಾರ್ಮಲ್ ಬರುತ್ತದೆ. ಬಿಲ್ವ ಪತ್ರೆಯ ರಸವನ್ನು ಅಕ್ಕಿ ತೊಳೆದ ನೀರಿನಲ್ಲಿ ಕಲ್ಲು ಸಕ್ಕರೆ ಸೇರಿಸಿ ದಿನಕ್ಕೆ ಎರಡು ಮೂರು ಬಾರಿ ಗರ್ಭಿಣಿಯರು ಸೇವಿಸಿದರೆ ವಾಂತಿ ಭೇದಿ ನಿಲ್ಲುತ್ತದೆ.

Bilva Patra: ಬಿಲ್ವ ಪತ್ರೆ -ಈ ಪವಿತ್ರ ಮರದಲ್ಲಿದೆ 12  ಔಷಧೀಯ ಗುಣಲಕ್ಷಣಗಳು, ವಿವರ ಇಲ್ಲಿದೆ
ಬಿಲ್ವ ಪತ್ರೆ -ಈ ಪವಿತ್ರ ಮರದಲ್ಲಿದೆ 12 ಔಷಧೀಯ ಗುಣಲಕ್ಷಣಗಳು, ವಿವರ ಇಲ್ಲಿದೆ
TV9 Web
| Updated By: ಸಾಧು ಶ್ರೀನಾಥ್​|

Updated on: Oct 09, 2022 | 6:06 AM

Share

ಇದು ಹಿಂದೂ ಧರ್ಮದಲ್ಲಿ ಪವಿತ್ರ ಮರ. ಶಿವನಿಗೆ ಪ್ರತಿದಿನ ಮತ್ತು ವಿಶೇಷವಾಗಿ ಮಹಾಶಿವರಾತ್ರಿಯ ಮಹಾ ದಿನ ಬಿಲ್ವಪತ್ರೆಯಿಂದ ಶಿವನನ್ನು ಪೂಜಿಸಿದರೆ, ಶಿವನ ವಿಶೇಷ ಅನುಗ್ರಹ ಸಿಗುತ್ತದೆ ಎಂಬುದು ನಂಬಿಕೆ. ಆಯುರ್ವೇದದ ಪ್ರಕಾರ ಬಿಲ್ವ ಪತ್ರೆಯಲ್ಲಿನ ಔಷಧೀಯ ಗುಣ ಉಪಯೋಗಗಳನ್ನು ಮನಗಂಡ ಹಿರಿಯರು ದೇವರ ಪೂಜೆಯ ನೆಪದಲ್ಲಿ ಬಿಲ್ವ ಪತ್ರೆಯನ್ನು ನಮ್ಮೊಂದಿಗೆ ಬೆರೆಸಿ ಬೆಳೆಸಿ ವನದ ರೂಪ ಕೊಟ್ಟಿದ್ದಾರಾ ಎಂಬುದು ಸೋಜಿಗ.

  1.  ಊಟದ ನಂತರ ಬಿಲ್ವದ ಹಣ್ಣಿಗೆ ಸ್ವಲ್ಪ ಸಕ್ಕರೆ ಮತ್ತು ಜೀನುತುಪ್ಪ ಸೇರಿಸಿ ತಿಂದರೆ ಕಫ ನಿವಾರಣೆಯಾಗುತ್ತದೆ
  2. ನೆಗಡಿಯಾದಾಗ ಬಿಲ್ವಪತ್ರೆಯ ರಸವನ್ನು ಸ್ವಲ್ಪ ಸ್ವಲ್ಪವೇ ಕುಡಿಯುತ್ತಿದ್ದರೆ ಪ್ರಯೋಜನವಾಗುತ್ತದೆ
  3. ಅಸ್ತಮಾ ಸಮಸ್ಯೆಯಿಂದ ಬಳಲುತ್ತಿರುವವರು ಪ್ರತಿದಿನ ಮುಂಜಾನೆ ಎದ್ದಕೂಡಲೇ ಒಂದು ಬಿಲ್ವದ ಎಲೆಯನ್ನು 2-3 ಕಾಳುಮೆಣಸಿನೊಂದಿಗೆ ಬಾಯಿಗೆ ಹಾಕಿಕೊಂಡು ಚೆನ್ನಾಗಿ ಅಗಿದು ತಿನ್ನಬೇಕು
  4. ಬಿಲ್ವಪತ್ರೆಯನ್ನು ಅರೆದು ಅರ್ಧಗಂಟೆಯ ಕಾಲ ತಲೆಗೆ ಲೇಪಿಸಿಕೊಳ್ಳಬೇಕು. ಇದರಿಂದ ತಲೆ ಹೊಟ್ಟು ಮತ್ತು ಹೇನು ಬೀಳುವುದು ನಿವಾರಣೆಯಾಗುತ್ತದೆ.. ಅಕಾಲ ನರೆಕೂದಲು ಸಮಸ್ಯೆಯೂ ನಿವಾರಣೆಯಾಗುತ್ತದೆ
  5. ವಾತದ ದೋಷಗಳನ್ನು ನಿವಾರಿಸುವ ಗುಣ ಬೇರಿನಲ್ಲಿದೆ. ಬಿಲ್ವದ ಹಸಿಕಾಯಿ ಕಫ ಮತ್ತು ವಾತ ನಿವಾರಕವಾಗಿದೆ
  6. ಬಿಲ್ವದ ಹಣ್ಣು ಹಸಿವು ಮತ್ತು ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ಹೊಟ್ಟೆ ನೋವು ಮತ್ತು ಭೇದಿಗೆ ಚಿಕಿತ್ಸೆ ಮಾಡಲು ನೆರವಾಗುತ್ತದೆ. ಪಕ್ವವಾದ ಬಿಲ್ವದ ಹಣ್ಣು ವಾತ ಪಿತ್ತವನ್ನು ಹೆಚ್ಚಿಸುತ್ತದೆ. ಕಫವನ್ನು ಕಡಿಮೆ ಮಾಡುತ್ತದೆ
  7. ಬಿಲ್ವ ಪತ್ರೆ ಹಣ್ಣಿನ ಸೇವನೆ ಮಾಡಿದರೆ ಅಜೀರ್ಣ, ಅತಿಸಾರ, ರಕ್ತದಿಂದಾಗುವ ತೊಂದರೆಗಳು ಪಿತ್ತ, ವಾತ, ಕಫ, ಕಡಿಮೆಯಾಗುತ್ತದೆ
  8. ಪಕ್ವಗೊಂಡ ಹಣ್ಣುಗಳನ್ನು ತಿರುಳು ತೆಗೆದು ಒಣಗಿಸಿ ಕಾಲು ಚಮಚ ಪುಡಿಯನ್ನು ಹಾಲು ಅಥವಾ ನೀರು ಸೇರಿಸಿ ಕುಡಿಯುವುದರಿಂದ ದೇಹಪುಷ್ಟಿ ಆಗುತ್ತದೆ. ತಿರುಳನ್ನು ನುಣ್ಣಗೆ ರುಬ್ಬಿ ಎಳ್ಳೆಣ್ಣೆ ಸೇರಿಸಿ ಬೆರಣಿಯಲಿ ತೆಳುವಾದ ಬಟ್ಟೆಯನ್ನು ಸುತ್ತಿ 10 ದಿನ ಬಿಸಿಲಿನಲ್ಲಿ ಇಟ್ಟು ನಂತರ ಸೋಸಿ ಗಾಳಿಯಾಡದಂತೆ ಇಡಬೇಕು. ಇದು ಸುಟ್ಟ ಗಾಯಕ್ಕೆ ಒಳ್ಳೆಯ ಮೆಡಿಸಿನ್
  9. ಬಿಲ್ವ ಪತ್ರೆ ಮರದ ಅಂಟನ್ನು ಪಾನಕ ಮಾಡಿ ಕುಡಿಯುವುದರಿಂದ ಅತಿಸಾರ ಗುಣವಾಗುತ್ತದೆ. ಅಂಟಿನೊಂದಿಗೆ ದನಿಯಾ ಮತ್ತು ಕಲ್ಲು ಸಕ್ಕರೆ ಸೇರಿಸಿ ಕಷಾಯ ಮಾಡಿ ಕುಡಿದರೆ ಕಾಲರಾ ಗುಣವಾಗುತ್ತದೆ
  10. ಬಿಲ್ವ ಪತ್ರೆಯ ರಸವನ್ನು ಅಕ್ಕಿ ತೊಳೆದ ನೀರಿನಲ್ಲಿ ಕಲ್ಲು ಸಕ್ಕರೆ ಸೇರಿಸಿ ದಿನಕ್ಕೆ ಎರಡು ಮೂರು ಬಾರಿ ಗರ್ಭಿಣಿಯರು ಸೇವಿಸಿದರೆ ವಾಂತಿ ಭೇದಿ ನಿಲ್ಲುತ್ತದೆ
  11. ಒಂದು ಚಮಚ ತಾಜಾ ಎಲೆಯ ರಸ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತೆಗೆದು ಕೊಂಡರೆ ಶುಗರ್ ನಾರ್ಮಲ್ ಬರುತ್ತದೆ. ಬಿಲ್ವ ಪತ್ರೆಯ ತಾಜಾ ಎಲೆಯ ರಸ ಅರೆದು ಪೇಸ್ಟ್ ಮಾಡಿ ಗಾಯಕ್ಕೆ ಹಚ್ಚಿದರೆ ಗುಣವಾಗುತ್ತದೆ. ತಾಜಾ ಎಲೆಯನ್ನು ಅರೆದು ಪೇಸ್ಟ್ ಮಾಡಿ ಕಣ್ಣಿಗೆ ಪಟ್ಟಿ ಕಟ್ಟಿದರೆ ಕಣ್ಣು ಉರಿ ನೋವು ಗುಣವಾಗುತ್ತದೆ.
  12. ಎಲೆಯ ರಸದಲ್ಲಿ ಶುದ್ಧ ಆಕಳು ತುಪ್ಪವನ್ನು ಸೇರಿಸಿ ಸೇವಿಸಿದರೆ ಹೃದಯ ಬಲವಾಗುತ್ತದೆ. (ಲೇಖನ: ಸುಮನಾ ಮಳಲಗದ್ದೆ)

ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್