AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Benefits Of Calotropis: ಎಕ್ಕದ ಗಿಡದ ಎಲೆಗಳನ್ನು ಈ ರೀತಿ ಬಳಸಿದರೆ ಮಂಡಿ ನೋವು ಮಾಯ

ಎಕ್ಕದ ಅಥವಾ ಎಕ್ಕೆ ಗಿಡದ ಎಲೆ ಮತ್ತು ಹೂವುಗಳು ಹಲವು ರೀತಿಯ ಕಾಯಿಲೆಗಳಿಗೆ ರಾಮಬಾಣವಾಗಿದೆ. ಇದು ಸುಲಭವಾಗಿ ಮೂಳೆಗಳು ಮತ್ತು ಸಂಧಿವಾತದಿಂದ ಉಂಟಾಗುವ ಕೀಲು ನೋವು, ರಕ್ತದೊತ್ತಡ ಅಥವಾ ಸಕ್ಕರೆ ಸಂಬಂಧಿತ ಸಮಸ್ಯೆಗಳನ್ನು ಬಗೆಹರಿಸುತ್ತದೆ. ಮಾತ್ರವಲ್ಲ ಮೊಣಕಾಲು ನೋವನ್ನು ತಕ್ಷಣ ಶಮನಗೊಳಿಸುವ ಶಕ್ತಿಯನ್ನು ಹೊಂದಿದೆ.

Health Benefits Of Calotropis: ಎಕ್ಕದ ಗಿಡದ ಎಲೆಗಳನ್ನು ಈ ರೀತಿ ಬಳಸಿದರೆ ಮಂಡಿ ನೋವು ಮಾಯ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: May 29, 2024 | 2:59 PM

ಎಕ್ಕದ ಅಥವಾ ಎಕ್ಕೆ ಗಿಡ ಸಾಮಾನ್ಯವಾಗಿ ಎಲ್ಲರಿಗೂ ಚಿರಪರಿಚಿತ. ಈ ಎಕ್ಕದ ಗಿಡ, ಅರ್ಕ ಅಥವಾ ದೇವ ರೇಖಾ ಎಂಬ ಹೆಸರಿನಿಂದ ಕರೆಯಲ್ಪಡುವ ಒಂದು ಜಾತಿಯ ಸಸ್ಯ. ಇದರ ಎಲೆ ಹಾಗೂ ಹೂವುಗಳಿಗೆ ಪೂಜೆಯಲ್ಲಿ, ಕೆಲವು ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಬಳಸಿಕೊಳ್ಳಲಾಗುತ್ತದೆ. ಇದಕ್ಕೆ ಆಯುರ್ವೇದದಲ್ಲಿಯೂ ಅಗ್ರ ಹಾಗೂ ಶ್ರೇಷ್ಠ ಸ್ಥಾನವಿದೆ. ಗಿಡದ ಎಲೆ ಮತ್ತು ಹೂವುಗಳು ಹಲವು ರೀತಿಯ ಕಾಯಿಲೆಗಳಿಗೆ ರಾಮಬಾಣವಾಗಿದೆ. ಇದು ಸುಲಭವಾಗಿ ಮೂಳೆಗಳು ಮತ್ತು ಸಂಧಿವಾತದಿಂದ ಉಂಟಾಗುವ ಕೀಲು ನೋವು, ರಕ್ತದೊತ್ತಡ ಅಥವಾ ಸಕ್ಕರೆ ಸಂಬಂಧಿತ ಸಮಸ್ಯೆಗಳನ್ನು ಬಗೆಹರಿಸುತ್ತದೆ. ಮಾತ್ರವಲ್ಲ ಮೊಣಕಾಲು ನೋವನ್ನು ತಕ್ಷಣ ಶಮನಗೊಳಿಸುವ ಶಕ್ತಿಯನ್ನು ಹೊಂದಿದೆ.

ಈ ಸಸ್ಯದ ಬಗ್ಗೆ ಹಿರಿಯ ತಲೆಮಾರಿಗೆ ಪರಿಚಯವಿದ್ದರೂ ಯುವ ಜನಾಂಗಕ್ಕೆ ಅಷ್ಟಾಗಿ ಈ ಬಗ್ಗೆ ತಿಳಿದಿಲ್ಲ. ಚರ್ಮ ಸುಕ್ಕುಗಟ್ಟಿದರೆ, ವಿಷದ ಮುಳ್ಳು ತಾಗಿದರೆ, ಜಾನುವಾರುಗಳಿಗೆ ಕಾಲುಬಾಯಿ ಜ್ವರ ಬಂದರೆ ಅದನ್ನು ಪರಿಹಾರ ಮಾಡಲು ಈ ಗಿಡದ ಔಷಧಿ ಅತ್ಯುತ್ತಮವಾಗಿದೆ. ಇದು ಪ್ರಕೃತಿದತ್ತವಾಗಿ ಬೆಳೆಯುವ ರಸ್ತೆ ಬದಿಯ ಸಂಜೀವಿನಿ ಎಂದರೂ ತಪ್ಪಾಗಲಾರದು. ಇನ್ನು ವಯಸ್ಸಾದಂತೆ ಕಾಲಿನ ಸ್ನಾಯುಗಳಲ್ಲಿ ಶಕ್ತಿ ಕೊರತೆಯಾಗುತ್ತದೆ. ಇದರಿಂದ ಕುಳಿತರೂ, ನಿಂತರೂ ನೋವು ಕಾಡಲಾರಂಭಿಸುತ್ತದೆ. ಇದಕ್ಕೆ ಎಕ್ಕದ ಎಲೆ ಪರಿಹಾರ ನೀಡುತ್ತದೆ. ಹಾಗಾದರೆ ಇದನ್ನು ಯಾವ ರೀತಿ ಬಳಸಬೇಕು? ಇಲ್ಲಿದೆ ಮಾಹಿತಿ.

ಇದನ್ನೂ ಓದಿ: ಮಳೆಗಾಲದಲ್ಲಿ ಕಾಲಿನ ಬೆರಳುಗಳ ಸಂದಿಯಲ್ಲಿ ಬರುವ ಹುಳಗಳ ಬಗ್ಗೆ ಎಚ್ಚರವಿರಲಿ

ಎಕ್ಕದ ಎಲೆಗಳಿಂದ ಮಂಡಿ ನೋವು ಕಡಿಮೆ ಮಾಡುವುದು ಹೇಗೆ?

ಎಕ್ಕದ ಗಿಡದ ಎಲೆಗಳನ್ನು ನೀರಿನಲ್ಲಿ ಕುದಿಸಿ, ಬಳಿಕ ಆ ಎಲೆಗಳನ್ನು ತೆಗೆದು ಅದಕ್ಕೆ ಹರಳೆಣ್ಣೆ ಹಚ್ಚಿ ಬಳಿಕ ಅದನ್ನು ನೋವಿರುವ ಜಾಗದಲ್ಲಿ ಎಣ್ಣೆ ಸಹಾಯದಿಂದ ಅಂಟಿಸಿಕೊಳ್ಳಿ. ಬಳಿಕ ಒಂದು ಹಳೆ ಬಟ್ಟೆ ತೆಗೆದುಕೊಂಡು ಅದನ್ನು ಕುದಿಸಿದ ನೀರಿನಲ್ಲಿ ಅದ್ದಿ ಎಲೆ ಅಂಟಿಸಿಟ್ಟ ಜಾಗಕ್ಕೆ ಬಿಸಿ ಶಾಖ ಕೊಡಿ. ಈ ರೀತಿ ಮಾಡುವುದರಿಂದ ಕಾಲು, ಕೀಲು ನೋವುಗಳು ಮಾಯವಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಸ್ಫೋಟಕ ಬ್ಯಾಟಿಂಗ್​... ಮತ್ತೊಂದು ಟಿ20 ಟ್ರೋಫಿ ಗೆದ್ದ ಜಿತೇಶ್ ಶರ್ಮಾ
ಸ್ಫೋಟಕ ಬ್ಯಾಟಿಂಗ್​... ಮತ್ತೊಂದು ಟಿ20 ಟ್ರೋಫಿ ಗೆದ್ದ ಜಿತೇಶ್ ಶರ್ಮಾ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ, ಭೋರ್ಗರೆಯುತ್ತಿರುವ ಭದ್ರೆ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ, ಭೋರ್ಗರೆಯುತ್ತಿರುವ ಭದ್ರೆ
ಮಳೆ ಅಬ್ಬರ, ಈ ನಾಲ್ಕು ಜಿಲ್ಲೆಗಳಲ್ಲಿಂದು ಶಾಲೆ-ಕಾಲೇಜುಗಳಿಗೆ ರಜೆ
ಮಳೆ ಅಬ್ಬರ, ಈ ನಾಲ್ಕು ಜಿಲ್ಲೆಗಳಲ್ಲಿಂದು ಶಾಲೆ-ಕಾಲೇಜುಗಳಿಗೆ ರಜೆ