AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾವು ಕಚ್ಚುವುದರಿಂದ ಹಿಡಿದು, ಜ್ವರ ನಿವಾರಣೆ ಮಾಡುವವರೆಗೆ ಎಲ್ಲಾ ರೋಗಕ್ಕೂ ಈ ಸೊಪ್ಪು ರಾಮಬಾಣ!

ತುಂಬೆ ಗಿಡ ದಾರಿ ಬದಿಗಳಲ್ಲಿ ಇದ್ದರೂ ಕೂಡ ಇದರ ಔಷಧೀಯ ಗುಣಗಳ ಬಗ್ಗೆ ತಿಳಿದರೆ ಆಚ್ಚರಿಯಾಗುವುದರಲ್ಲಿ ಸಂಶಯವಿಲ್ಲ. ಈ ಗಿಡದಲ್ಲಿ ಹಲವು ವಿಧಗಳಿದ್ದು ಇದರಲ್ಲಿ ಬಿಳಿ ತುಂಬೆ ಹೂವುಗಳನ್ನು ಬಿಡುವ ಗಿಡ ಹೆಚ್ಚು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಆಯುರ್ವೇದದಲ್ಲಿಯೂ ತುಂಬೆ ಗಿಡದ ಔಷಧೀಯ ಗುಣಗಳ ಬಗ್ಗೆ ಹೇಳಲಾಗಿದ್ದು, ಸಂಸ್ಕೃತದಲ್ಲಿ ಇದನ್ನು ಚಿತ್ರಕ್ಷುಪ ಅಥವಾ ದ್ರೋಣ ಪುಷ್ಟ ಎಂದು ಕರೆಯುತ್ತಾರೆ. ಹಾಗಾದರೆ ಇದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

ಹಾವು ಕಚ್ಚುವುದರಿಂದ ಹಿಡಿದು, ಜ್ವರ ನಿವಾರಣೆ ಮಾಡುವವರೆಗೆ ಎಲ್ಲಾ ರೋಗಕ್ಕೂ ಈ ಸೊಪ್ಪು ರಾಮಬಾಣ!
ತುಂಬೆ ಗಿಡ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Aug 20, 2024 | 10:43 AM

Share

ನಮ್ಮ ಸುತ್ತಮುತ್ತ ಇರುವ ಅನೇಕ ಗಿಡಗಳು ಸಾವಿರಾರು ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಇವುಗಳ ಬಗ್ಗೆ ನಾವು ಸರಿಯಾಗಿ ತಿಳಿದುಕೊಂಡು ಅದನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಬೇಕಾಗುತ್ತದೆ. ಇಂತಹ ಗಿಡಗಳಲ್ಲಿ ತುಂಬೆ ಗಿಡವೂ ಒಂದು. ಇದು ದಾರಿ ಬದಿಗಳಲ್ಲಿ ಇದ್ದರೂ ಕೂಡ ಇದರ ಔಷಧೀಯ ಗುಣಗಳ ಬಗ್ಗೆ ತಿಳಿದರೆ ಆಚ್ಚರಿಯಾಗುವುದರಲ್ಲಿ ಸಂಶಯವಿಲ್ಲ. ತುಂಬೆ ಗಿಡದಲ್ಲಿ ಹಲವು ವಿಧಗಳಿದ್ದು ಇದರಲ್ಲಿ ಬಿಳಿ ತುಂಬೆ ಹೂವುಗಳನ್ನು ಬಿಡುವ ಗಿಡ ಹೆಚ್ಚು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಆಯುರ್ವೇದದಲ್ಲಿಯೂ ತುಂಬೆ ಗಿಡದ ಔಷಧೀಯ ಗುಣಗಳ ಬಗ್ಗೆ ಹೇಳಲಾಗಿದ್ದು, ಸಂಸ್ಕೃತದಲ್ಲಿ ಇದನ್ನು ಚಿತ್ರಕ್ಷುಪ ಅಥವಾ ದ್ರೋಣ ಪುಷ್ಟ ಎಂದು ಕರೆಯುತ್ತಾರೆ. ಹಾಗಾದರೆ ಇದರಿಂದ ಸಿಗುವ ಆರೋಗ್ಯ ಪ್ರಯೋಜನಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ.

  1. ಹೊಟ್ಟೆಯಲ್ಲಿ ಹುಳ ಆಗಿದ್ದರೆ ಇದರ ಎಲೆಯನ್ನು ಚೆನ್ನಾಗಿ ಜಜ್ಜಿ ಅದರಿಂದ ರಸವನ್ನು ತೆಗೆದು ಇದನ್ನು ಜೇನುತುಪ್ಪದೊಂದಿಗೆ ಸೇರಿಸಿ ಸೇವನೆ ಮಾಡಬೇಕು.
  2. ಪದೇ ಪದೇ ಜ್ವರ ಬರುತ್ತಿದ್ದರೆ ಇದರ ಎಲೆಯನ್ನು ಚೆನ್ನಾಗಿ ತೊಳೆದು ಅದರಿಂದ ರಸ ತೆಗೆದು ಕಾಳು ಮೆಣಸನ್ನು ಕುಟ್ಟಿ ಪುಡಿ ಮಾಡಿ ಅದರ ಜೊತೆಯಲ್ಲಿ ಸೇವನೆ ಮಾಡಿ.
  3. ಮನೆಯ ಸುತ್ತ ಮುತ್ತ ಸೊಳ್ಳೆ ಮತ್ತು ಬೇಡದ ಕೀಟಗಳು ಜಾಸ್ತಿಯಾಗಿದ್ದರೆ ಇದರ ಎಲೆಗಳನ್ನು ಒಣಗಿಸಿ ಬಳಿಕ ಆ ಎಲೆಗಳಿಂದ ಬೆಂಕಿ ಹಾಕಿ. ಇದರಿಂದ ನಿಮ್ಮ ಮನೆಯ ಪರಿಸರ ಚೆನ್ನಾಗಿರುತ್ತದೆ.
  4. ಚರ್ಮದ ಮೇಲೆ ತುರಿಕೆ ಅಥವಾ ಅಲರ್ಜಿ ಸಮಸ್ಯೆಗಳಿದ್ದರೆ ಇದರ ಎಲೆಗಳನ್ನು ಜಜ್ಜಿ ಆ ಪೇಸ್ಟ್ ಅನ್ನು ಚರ್ಮದ ಮೇಲೆ ಲೇಪಿಸಿ. ಈ ರೀತಿ ಮಾಡುವುದರಿಂದ ಯಾವುದೇ ರೀತಿಯ ಚರ್ಮಕ್ಕೆ ಸಂಬಂಧ ಪಟ್ಟ ಸಮಸ್ಯೆಗಳಿದ್ದರೂ ಅದು ಗುಣವಾಗುತ್ತದೆ.
  5. ಒತ್ತಡದ ಜೀವನಶೈಲಿಯಿಂದ ಉಂಟಾದ ಡಾರ್ಕ್‌ಸರ್ಕಲ್ಸ್‌ ಗಳನ್ನು ಕಡಿಮೆ ಮಾಡಲು ತುಂಬೆ ಗಿಡದ ರಸಕ್ಕೆ ಸ್ವಲ್ಪ ನೀರು ಅಥವಾ ಹಾಲನ್ನು ಹಾಕಿ ಅದನ್ನು ಮುಖಕ್ಕೆ ಹಚ್ಚಿಕೊಂಡು ಒಣಗಿದ ನಂತರ ತೊಳೆಯಿರಿ. ಅಲ್ಲದೆ ಇದನ್ನು ಫೇಸ್‌ಪ್ಯಾಕ್‌ ರೀತಿಯಲ್ಲಿಯೂ ಬಳಸಿಕೊಳ್ಳಬಹುದು.
  6. ಅಜೀರ್ಣತೆಯ ಸಮಸ್ಯೆ ಇರುವವರು ತುಂಬೆ ಗಿಡದ ಎಲೆಗಳನ್ನು ಚೆನ್ನಾಗಿ ತೊಳೆದು ಬಳಿಕ ಅದನ್ನು ಬಿಸಿ ನೀರಿನಲ್ಲಿ ಹಾಕಿ ಕುದಿಸಿ ನಂತರ ಚಿಟಿಕೆ ಉಪ್ಪು ಸೇರಿಸಿ ಕುಡಿದರೆ ಜೀರ್ಣಶಕ್ತಿ ಉತ್ತಮವಾಗುತ್ತದೆ. ಪಚನಕ್ರಿಯೆಯನ್ನು ಸುಧಾರಿಸಲು ಇದು ಸುಲಭದ ಮಾರ್ಗವಾಗಿದೆ.
  7. ತುಂಬೆ ಗಿಡದ ಬೇರು, ಕಾಂಡ ಮತ್ತು ಎಲೆಯನ್ನು ಚೆನ್ನಾಗಿ ತೊಳೆದು ಅದನ್ನು ನೀರಿನಲ್ಲಿ ಚೆನ್ನಾಗಿ ಕುದಿಸಿ. ಬಳಿಕ ಅದರ ಹಬೆಯನ್ನು ತೆಗೆದುಕೊಳ್ಳಿ. ಇದರಿಂದ ತಲೆನೋವು ಬೇಗ ವಾಸಿಯಾಗುತ್ತದೆ. ಜೊತೆಗೆ ಇದರಲ್ಲಿ ಯಾವುದೇ ರೀತಿಯ ಅಡ್ಡ ಪರಿಣಾಮಗಳು ಇರುವುದಿಲ್ಲ.
  8. ಹಿಂದಿನಿಂದಲೂ ಹಾವು ಕಚ್ಚಿದಾಗ ತುಂಬೆ ಗಿಡದ ಎಲೆಯ ರಸವನ್ನು ಆ ಜಾಗಕ್ಕೆ ಹಚ್ಚುವ ಪದ್ದತಿ ಇದೆ. ಹೀಗೆ ಮಾಡುವುದರಿಂದ ಹಾವಿನ ವಿಷ ರಕ್ತದಲ್ಲಿ ಸೇರಿಕೊಳ್ಳದೆ ಸಾವು ಸಂಭವಿಸುವ ಸಾಧ್ಯತೆ ಕಡಿಮೆಯಾಗುತ್ತೆ ಎಂದು ಹೇಳಲಾಗುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ