AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಖಾಲಿ ಹೊಟ್ಟೆಯಲ್ಲಿ ಕೊತ್ತಂಬರಿ ಸೊಪ್ಪಿನ ಜ್ಯೂಸ್ ಕುಡಿಯಿರಿ; ಪ್ರಯೋಜನ ಸಾಕಷ್ಟಿವೆ

ಕೊತ್ತಂಬರಿ ಸೊಪ್ಪನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಹೊಟ್ಟೆಯು ಸ್ವಚ್ಛವಾಗಿರುವುದರ ಜೊತೆಗೆ ಗ್ಯಾಸ್ ಸಮಸ್ಯೆ ಕಡಿಮೆಯಾಗುತ್ತದೆ.ಕೊತ್ತಂಬರಿ ಸೊಪ್ಪಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ.

Health Tips: ಖಾಲಿ ಹೊಟ್ಟೆಯಲ್ಲಿ ಕೊತ್ತಂಬರಿ ಸೊಪ್ಪಿನ ಜ್ಯೂಸ್ ಕುಡಿಯಿರಿ; ಪ್ರಯೋಜನ ಸಾಕಷ್ಟಿವೆ
Coriander Leaves Juice
ಅಕ್ಷತಾ ವರ್ಕಾಡಿ
|

Updated on: Jul 14, 2024 | 4:20 PM

Share

ಕೊತ್ತಂಬರಿ ಸೊಪ್ಪಿನಲ್ಲಿ ವಿಟಮಿನ್ ಸಿ ಮತ್ತು ವಿಟಮಿನ್ ಇ ಸಮೃದ್ಧವಾಗಿದ್ದು, ಹಲವಾರು ಔಷಧೀಯ ಗುಣಗಳು ಅಡಗಿವೆ. ಕೊತ್ತಂಬರಿ ಸೊಪ್ಪಿನ ರಸವನ್ನು ದಿನನಿತ್ಯ ಸೇವಿಸುವುದರಿಂದ ದೇಹಕ್ಕೆ ಹಲವಾರು ಆರೋಗ್ಯ ಲಾಭಗಳು ದೊರೆಯುತ್ತದೆ. ಕೊತ್ತಂಬರಿ ಸೊಪ್ಪಿನ ರಸವನ್ನು ಕುಡಿಯುವುದರಿಂದ ಅನೇಕ ರೋಗಗಳನ್ನು ಗುಣಪಡಿಸುತ್ತದೆ. ಕೊತ್ತಂಬರಿಯು ನಿಮ್ಮ ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು, ಸೋಂಕುಗಳ ವಿರುದ್ಧ ಹೋರಾಡಲು, ಹೃದಯ, ಮೆದುಳು, ಚರ್ಮ, ಯಕೃತ್ತು, ಮೂಳೆಗಳು, ರಕ್ತ ಹೆಪ್ಪುಗಟ್ಟುವಿಕೆ ಮತ್ತು ಜೀರ್ಣಕಾರಿ ಆರೋಗ್ಯವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ ಎಂದು ವೈದ್ಯಕೀಯ ತಜ್ಞರು ಹೇಳುತ್ತಾರೆ.

ಕೊತ್ತಂಬರಿ ಸೊಪ್ಪಿನ ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ. ಇದು ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಿಸುತ್ತದೆ. ಉರಿಯೂತ ನಿವಾರಕ ಗುಣಗಳಿಂದ ಸಮೃದ್ಧವಾಗಿರುವ ಕೊತ್ತಂಬರಿ ಸೊಪ್ಪನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವುದರಿಂದ ಕೀಲು ಊತ ಮತ್ತು ಕೀಲು ನೋವು ಕಡಿಮೆಯಾಗುತ್ತದೆ. ಕೊತ್ತಂಬರಿ ಸೊಪ್ಪಿನ ಜ್ಯೂಸ್ ಅನ್ನು ನಿಯಮಿತವಾಗಿ ಸೇವಿಸುವುದರಿಂದ ಕಿಡ್ನಿ ಸಮಸ್ಯೆ ಸೇರಿದಂತೆ ಎಲ್ಲಾ ರೀತಿಯ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು.

ಇದನ್ನೂ ಓದಿ: ತೂಕ ನಿರ್ವಹಣೆಯಿಂದ ಜೀರ್ಣಕಾರಿ ಸಮಸ್ಯೆಗಳವರೆಗೆ, ಎಲ್ಲದಕ್ಕೂ ಒಂದೇ ಪರಿಹಾರ..!

ಕೊತ್ತಂಬರಿ ಜ್ಯೂಸ್​ ತಯಾರಿಸುವುದು ಹೇಗೆ?

ಕೊತ್ತಂಬರಿ ಜ್ಯೂಸ್​ ತಯಾರಿಸುವ ಮೊದಲು, ಕೊತ್ತಂಬರಿ ಸೊಪ್ಪನ್ನು ಚೆನ್ನಾಗಿ ತೊಳೆಯಬೇಕು. ನಂತರ, ಚಾಕುವಿನಿಂದ ಕತ್ತರಿಸಿ. ಅಗತ್ಯಕ್ಕೆ ತಕ್ಕಂತೆ ನೀರು ಸೇರಿಸಿ ಮತ್ತೆ ರುಬ್ಬಿಕೊಳ್ಳಿ. ಅದರ ರಸವನ್ನು ಒಂದು ಪಾತ್ರೆಯಲ್ಲಿ ತೆಗೆದುಕೊಂಡು ಅದಕ್ಕೆ ಸೋಸಿಕೊಳ್ಳಿ. ಅದಕ್ಕೆ ಸ್ವಲ್ಪ ನಿಂಬೆ ರಸ ಮತ್ತು ಸಿಹಿಗೆ ಬೇಕಾದರೆ ಜೇನುತುಪ್ಪ ಸೇರಿಸಿ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್