ಖರ್ಜೂರ ಬೆರೆಸಿದ ಹಾಲನ್ನು ಕುಡಿದರೆ ಈ ಆರೋಗ್ಯ ಸಮಸ್ಯೆಗಳೆಲ್ಲ ದೂರವಾಗುತ್ತದೆ, ದಿನವೂ ಸೇವಿಸಿದರೆ ಆರೋಗ್ಯ ನಳನಳಿಸುತ್ತದೆ

ಖರ್ಜೂರದಲ್ಲಿರುವ ನಾರಿನಂಶವು ಜೀರ್ಣಕಾರಿ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಉತ್ತಮ ಪರಿಹಾರವಾಗಿದೆ. ಖರ್ಜೂರ ಬೆರೆಸಿದ ಹಾಲನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಅಲ್ಲದೆ ಮಲಬದ್ಧತೆ, ಅಜೀರ್ಣ ಮತ್ತು ಹೊಟ್ಟೆಯ ಉರಿಯೂತದಂತಹ ಸಮಸ್ಯೆಗಳು ದೂರವಾಗುತ್ತವೆ.

ಖರ್ಜೂರ ಬೆರೆಸಿದ ಹಾಲನ್ನು ಕುಡಿದರೆ ಈ ಆರೋಗ್ಯ ಸಮಸ್ಯೆಗಳೆಲ್ಲ ದೂರವಾಗುತ್ತದೆ, ದಿನವೂ ಸೇವಿಸಿದರೆ ಆರೋಗ್ಯ ನಳನಳಿಸುತ್ತದೆ
ಖರ್ಜೂರ ಬೆರೆಸಿದ ಹಾಲನ್ನು ಕುಡಿದರೆ ಈ ಆರೋಗ್ಯ ಸಮಸ್ಯೆಗಳೆಲ್ಲ ದೂರವಾಗುತ್ತದೆ
Follow us
|

Updated on: Sep 23, 2023 | 6:06 AM

Health Benefits Of Dates Milk: ಹಾಲು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ನೇರವಾಗಿ ಹಾಲನ್ನು ಸೇವಿಸುವ ಬದಲು ಅದಕ್ಕೆ ಖರ್ಜೂರವನ್ನು ಬೆರೆಸಿದರೆ ಹೆಚ್ಚಿನ ಆರೋಗ್ಯ ಲಾಭವನ್ನು ಪಡೆಯಬಹುದು. ಅದರಿಂದ ಅನೇಕ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು ಎನ್ನುತ್ತಾರೆ ತಜ್ಞರು. ಇದರಲ್ಲಿರುವ ಪೋಷಕಾಂಶಗಳು ದೇಹಕ್ಕೆ ತುಂಬಾ ಅವಶ್ಯಕ ಎಂದು ಹೇಳಲಾಗುತ್ತದೆ. ಹಾಲಿಗೆ ಖರ್ಜೂರವನ್ನು ಸೇರಿಸುವುದರಿಂದ ಆಗುವ ಲಾಭಗಳೇನು ಎಂಬುದನ್ನು ಈಗ ನೋಡೋಣ.

ಕೀಲು ನೋವುಗಳನ್ನು ನಿವಾರಿಸುತ್ತದೆ: ಹಾಲಿನಲ್ಲಿ ಕ್ಯಾಲ್ಸಿಯಂ ಮತ್ತು ರಂಜಕದಂತಹ ಮೂಳೆಗಳನ್ನು ಬಲಪಡಿಸುವ ಪೋಷಕಾಂಶಗಳಿವೆ. ಖರ್ಜೂರದಲ್ಲಿ ಹಲವು ಬಗೆಯ ಆ್ಯಂಟಿಆಕ್ಸಿಡೆಂಟ್‌ಗಳೂ ಇವೆ. ಇವು ಮೂಳೆಗಳನ್ನು ಬಲಗೊಳಿಸುವುದಲ್ಲದೆ, ಕೀಲು ನೋವನ್ನು ನಿವಾರಿಸುತ್ತದೆ.

ಜ್ಞಾಪಕ ಶಕ್ತಿ: ಖರ್ಜೂರದೊಂದಿಗೆ ಬೆರೆಸಿದ ಹಾಲು ಮೆದುಳಿನ ಕಾರ್ಯಶಕ್ತಿ ಮತ್ತು ಜ್ಞಾಪಕಶಕ್ತಿಯನ್ನು ವೃದ್ಧಿಸುವಲ್ಲಿ ಪ್ರಧಾನ ಪಾತ್ರ ವಹಿಸುತ್ತದೆ. ಇದರ ಪೋಷಕಾಂಶಗಳು ನರಮಂಡಲವನ್ನು ಉತ್ತೇಜಿಸುತ್ತದೆ ಮತ್ತು ಮೆದುಳಿಗೆ ಉತ್ತೇಜನವನ್ನು ನೀಡುತ್ತದೆ.

ಜೀರ್ಣಕಾರಿ ಸಮಸ್ಯೆಗಳು: ಖರ್ಜೂರದಲ್ಲಿರುವ ನಾರಿನಂಶವು ಜೀರ್ಣಕಾರಿ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಉತ್ತಮ ಪರಿಹಾರವಾಗಿದೆ. ಖರ್ಜೂರ ಬೆರೆಸಿದ ಹಾಲನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಅಲ್ಲದೆ ಮಲಬದ್ಧತೆ, ಅಜೀರ್ಣ ಮತ್ತು ಹೊಟ್ಟೆಯ ಉರಿಯೂತದಂತಹ ಸಮಸ್ಯೆಗಳು ದೂರವಾಗುತ್ತವೆ.

ಇದನ್ನು ಓದಿ: ನೀವು ಗೋಡಂಬಿ ತಿನ್ನುತ್ತಿಲ್ಲವೇ? ಹಾಗಾದರೆ ಈ ಆರೋಗ್ಯ ಪ್ರಯೋಜನಗಳನ್ನು ಮಿಸ್​ ಮಾಡಿಕೊಳ್ತಿದ್ದೀರಿ ನೋಡಿ

ರಕ್ತಹೀನತೆ ನಿವಾರಣೆ: ಖರ್ಜೂರ ಮತ್ತು ಹಾಲಿನಲ್ಲಿ ಕಬ್ಬಿಣದ ಅಂಶ ಹೇರಳವಾಗಿದೆ. ಈ ಕಾರಣಕ್ಕೆ ಖರ್ಜೂರ ಬೆರೆಸಿದ ಹಾಲನ್ನು ಕುಡಿದರೆ ರಕ್ತಹೀನತೆ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಕಬ್ಬಿಣವು ದೇಹದಲ್ಲಿ ರಕ್ತ ಕಣಗಳ ಉತ್ಪಾದನೆಯನ್ನು ಸುಧಾರಿಸುತ್ತದೆ ಮತ್ತು ರಕ್ತಹೀನತೆಯನ್ನು ತಡೆಯುತ್ತದೆ.

ತ್ವಚೆಯ ಆರೈಕೆ: ತ್ವಚೆಯನ್ನು ಹೊಳೆಯುವಂತೆ ಮಾಡುವಲ್ಲಿ ಹಾಲು ಪ್ರಮುಖ ಪಾತ್ರ ವಹಿಸುತ್ತದೆ. ಖರ್ಜೂರ ಬೆರೆಸಿದ ಹಾಲನ್ನು ಕುಡಿದರೆ ಚರ್ಮದಲ್ಲಿ ಉರಿ, ಕಿರಿಕಿರಿಯಂತಹ ಸಮಸ್ಯೆಗಳು ದೂರವಾಗುತ್ತವೆ. ಅಲ್ಲದೇ ಇದನ್ನು ಕುಡಿದರೆ ರಕ್ತ ಸಂಚಾರ ಹೆಚ್ಚಿ, ಮುಖ ಆಕರ್ಷಕವಾಗುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಕಿರಿದಾದ ಸೇತುವೆ ಮೇಲೆ ಹೆಣ ಹೊತ್ತು ಸಾಗಿದ ಗ್ರಾಮಸ್ಥರು, ವಿಡಿಯೋ ವೈರಲ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಧೋನಿ ಹುಟ್ದಬ್ಬ... ಬರೋಬ್ಬರಿ 100 ಅಡಿ ಕಟೌಟ್ ನಿಲ್ಲಿಸಿದ ಫ್ಯಾನ್ಸ್
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ
ಅಕ್ಕಿ ಮೂಟೆ ಹೊತ್ತು ಗಂಗಾವತಿಯಿಂದ ಮಂತ್ರಾಲಯದವರೆಗೆ ಭಕ್ತನ ಪಾದಯಾತ್ರೆ