Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖರ್ಜೂರ ಬೆರೆಸಿದ ಹಾಲನ್ನು ಕುಡಿದರೆ ಈ ಆರೋಗ್ಯ ಸಮಸ್ಯೆಗಳೆಲ್ಲ ದೂರವಾಗುತ್ತದೆ, ದಿನವೂ ಸೇವಿಸಿದರೆ ಆರೋಗ್ಯ ನಳನಳಿಸುತ್ತದೆ

ಖರ್ಜೂರದಲ್ಲಿರುವ ನಾರಿನಂಶವು ಜೀರ್ಣಕಾರಿ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಉತ್ತಮ ಪರಿಹಾರವಾಗಿದೆ. ಖರ್ಜೂರ ಬೆರೆಸಿದ ಹಾಲನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಅಲ್ಲದೆ ಮಲಬದ್ಧತೆ, ಅಜೀರ್ಣ ಮತ್ತು ಹೊಟ್ಟೆಯ ಉರಿಯೂತದಂತಹ ಸಮಸ್ಯೆಗಳು ದೂರವಾಗುತ್ತವೆ.

ಖರ್ಜೂರ ಬೆರೆಸಿದ ಹಾಲನ್ನು ಕುಡಿದರೆ ಈ ಆರೋಗ್ಯ ಸಮಸ್ಯೆಗಳೆಲ್ಲ ದೂರವಾಗುತ್ತದೆ, ದಿನವೂ ಸೇವಿಸಿದರೆ ಆರೋಗ್ಯ ನಳನಳಿಸುತ್ತದೆ
ಖರ್ಜೂರ ಬೆರೆಸಿದ ಹಾಲನ್ನು ಕುಡಿದರೆ ಈ ಆರೋಗ್ಯ ಸಮಸ್ಯೆಗಳೆಲ್ಲ ದೂರವಾಗುತ್ತದೆ
Follow us
ಸಾಧು ಶ್ರೀನಾಥ್​
|

Updated on: Sep 23, 2023 | 6:06 AM

Health Benefits Of Dates Milk: ಹಾಲು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ನೇರವಾಗಿ ಹಾಲನ್ನು ಸೇವಿಸುವ ಬದಲು ಅದಕ್ಕೆ ಖರ್ಜೂರವನ್ನು ಬೆರೆಸಿದರೆ ಹೆಚ್ಚಿನ ಆರೋಗ್ಯ ಲಾಭವನ್ನು ಪಡೆಯಬಹುದು. ಅದರಿಂದ ಅನೇಕ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ ಪಡೆಯಬಹುದು ಎನ್ನುತ್ತಾರೆ ತಜ್ಞರು. ಇದರಲ್ಲಿರುವ ಪೋಷಕಾಂಶಗಳು ದೇಹಕ್ಕೆ ತುಂಬಾ ಅವಶ್ಯಕ ಎಂದು ಹೇಳಲಾಗುತ್ತದೆ. ಹಾಲಿಗೆ ಖರ್ಜೂರವನ್ನು ಸೇರಿಸುವುದರಿಂದ ಆಗುವ ಲಾಭಗಳೇನು ಎಂಬುದನ್ನು ಈಗ ನೋಡೋಣ.

ಕೀಲು ನೋವುಗಳನ್ನು ನಿವಾರಿಸುತ್ತದೆ: ಹಾಲಿನಲ್ಲಿ ಕ್ಯಾಲ್ಸಿಯಂ ಮತ್ತು ರಂಜಕದಂತಹ ಮೂಳೆಗಳನ್ನು ಬಲಪಡಿಸುವ ಪೋಷಕಾಂಶಗಳಿವೆ. ಖರ್ಜೂರದಲ್ಲಿ ಹಲವು ಬಗೆಯ ಆ್ಯಂಟಿಆಕ್ಸಿಡೆಂಟ್‌ಗಳೂ ಇವೆ. ಇವು ಮೂಳೆಗಳನ್ನು ಬಲಗೊಳಿಸುವುದಲ್ಲದೆ, ಕೀಲು ನೋವನ್ನು ನಿವಾರಿಸುತ್ತದೆ.

ಜ್ಞಾಪಕ ಶಕ್ತಿ: ಖರ್ಜೂರದೊಂದಿಗೆ ಬೆರೆಸಿದ ಹಾಲು ಮೆದುಳಿನ ಕಾರ್ಯಶಕ್ತಿ ಮತ್ತು ಜ್ಞಾಪಕಶಕ್ತಿಯನ್ನು ವೃದ್ಧಿಸುವಲ್ಲಿ ಪ್ರಧಾನ ಪಾತ್ರ ವಹಿಸುತ್ತದೆ. ಇದರ ಪೋಷಕಾಂಶಗಳು ನರಮಂಡಲವನ್ನು ಉತ್ತೇಜಿಸುತ್ತದೆ ಮತ್ತು ಮೆದುಳಿಗೆ ಉತ್ತೇಜನವನ್ನು ನೀಡುತ್ತದೆ.

ಜೀರ್ಣಕಾರಿ ಸಮಸ್ಯೆಗಳು: ಖರ್ಜೂರದಲ್ಲಿರುವ ನಾರಿನಂಶವು ಜೀರ್ಣಕಾರಿ ಸಮಸ್ಯೆಗಳಿಂದ ಬಳಲುತ್ತಿರುವವರಿಗೆ ಉತ್ತಮ ಪರಿಹಾರವಾಗಿದೆ. ಖರ್ಜೂರ ಬೆರೆಸಿದ ಹಾಲನ್ನು ಕುಡಿಯುವುದರಿಂದ ಜೀರ್ಣಕ್ರಿಯೆ ಸುಧಾರಿಸುತ್ತದೆ. ಅಲ್ಲದೆ ಮಲಬದ್ಧತೆ, ಅಜೀರ್ಣ ಮತ್ತು ಹೊಟ್ಟೆಯ ಉರಿಯೂತದಂತಹ ಸಮಸ್ಯೆಗಳು ದೂರವಾಗುತ್ತವೆ.

ಇದನ್ನು ಓದಿ: ನೀವು ಗೋಡಂಬಿ ತಿನ್ನುತ್ತಿಲ್ಲವೇ? ಹಾಗಾದರೆ ಈ ಆರೋಗ್ಯ ಪ್ರಯೋಜನಗಳನ್ನು ಮಿಸ್​ ಮಾಡಿಕೊಳ್ತಿದ್ದೀರಿ ನೋಡಿ

ರಕ್ತಹೀನತೆ ನಿವಾರಣೆ: ಖರ್ಜೂರ ಮತ್ತು ಹಾಲಿನಲ್ಲಿ ಕಬ್ಬಿಣದ ಅಂಶ ಹೇರಳವಾಗಿದೆ. ಈ ಕಾರಣಕ್ಕೆ ಖರ್ಜೂರ ಬೆರೆಸಿದ ಹಾಲನ್ನು ಕುಡಿದರೆ ರಕ್ತಹೀನತೆ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಕಬ್ಬಿಣವು ದೇಹದಲ್ಲಿ ರಕ್ತ ಕಣಗಳ ಉತ್ಪಾದನೆಯನ್ನು ಸುಧಾರಿಸುತ್ತದೆ ಮತ್ತು ರಕ್ತಹೀನತೆಯನ್ನು ತಡೆಯುತ್ತದೆ.

ತ್ವಚೆಯ ಆರೈಕೆ: ತ್ವಚೆಯನ್ನು ಹೊಳೆಯುವಂತೆ ಮಾಡುವಲ್ಲಿ ಹಾಲು ಪ್ರಮುಖ ಪಾತ್ರ ವಹಿಸುತ್ತದೆ. ಖರ್ಜೂರ ಬೆರೆಸಿದ ಹಾಲನ್ನು ಕುಡಿದರೆ ಚರ್ಮದಲ್ಲಿ ಉರಿ, ಕಿರಿಕಿರಿಯಂತಹ ಸಮಸ್ಯೆಗಳು ದೂರವಾಗುತ್ತವೆ. ಅಲ್ಲದೇ ಇದನ್ನು ಕುಡಿದರೆ ರಕ್ತ ಸಂಚಾರ ಹೆಚ್ಚಿ, ಮುಖ ಆಕರ್ಷಕವಾಗುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಧ್ರುವ ಸರ್ಜಾ ಜೊತೆ ಡ್ಯಾನ್ಸ್ ಮಾಡೋದು ಕಷ್ಟ, ಹೀಗೆಂದರ್ಯಾಕೆ ರೀಶ್ಮಾ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ
ಆಟವಾಡುತ್ತಿದ್ದಾಗ ಹೈವೋಲ್ಟೇಜ್ ತಂತಿ ತಗುಲಿ ಸುಟ್ಟು ಕರಕಲಾದ ಬಾಲಕ