AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಳನೀರಿಗೆ ಕಾಮಕಸ್ತೂರಿ ಬೀಜ ಹಾಕಿಕೊಂಡು ಕುಡಿದಿದ್ದೀರಾ?

ಎಳನೀರು ನೈಸರ್ಗಿಕ ಪಾನೀಯವಾಗಿದ್ದು, ಇದು ದೇಹಕ್ಕೆ ಬೇಕಾದ ಗ್ಲುಕೋಸ್ ಅನ್ನು ನೀಡುತ್ತದೆ. ಹಾಗೇ, ಎಳನೀರು ಅನೇಕ ಪೌಷ್ಟಿಕಾಂಶಗಳ ಆಗರವಾಗಿದೆ. ಇದು ದೇಹವನ್ನು ಹೈಡ್ರೇಟ್ ಆಗಿಡುತ್ತದೆ. ಆದರೆ, ಈ ಎಳನೀರಿಗೆ ಎಂದಾದರೂ ನೀವು ಕಾಮಕಸ್ತೂರಿ ಬೀಜ ಹಾಕಿಕೊಂಡು ಕುಡಿದಿದ್ದೀರಾ? ಇದರಿಂದ ಆರೋಗ್ಯಕ್ಕೆ ಆಗುವ ಪ್ರಯೋಜನಗಳೇನು?

ಎಳನೀರಿಗೆ ಕಾಮಕಸ್ತೂರಿ ಬೀಜ ಹಾಕಿಕೊಂಡು ಕುಡಿದಿದ್ದೀರಾ?
ಕಾಮಕಸ್ತೂರಿ ಬೀಜ
ಸುಷ್ಮಾ ಚಕ್ರೆ
|

Updated on: Feb 03, 2024 | 5:10 PM

Share

ಎಳನೀರು ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಎಲೆಕ್ಟ್ರೋಲೈಟ್‌ಗಳಂತಹ ಪೋಷಕಾಂಶಗಳಿಂದ ತುಂಬಿರುತ್ತದೆ. ಅದಕ್ಕೆ ಕಾಮಕಸ್ತೂರಿ ಬೀಜಗಳನ್ನು ಸೇರಿಸಿದಾಗ ಅದು ದೇಹಕ್ಕೆ ನೈಸರ್ಗಿಕ ಶೀತಕವಾಗುತ್ತದೆ. ಇದು ನಿಮ್ಮ ದೇಹವು ಆಮ್ಲೀಯತೆಯಂತಹ ಸಮಸ್ಯೆಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಎಳನೀರಿನಲ್ಲಿ ಕರಗುವ ಫೈಬರ್ ಮತ್ತು ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಹೀಗಾಗಿ, ನಿರ್ಜಲೀಕರಣದಿಂದ ಬಳಲುತ್ತಿರುವ ಜನರಿಗೆ ಇದು ಉತ್ತಮ ಪಾನೀಯವಾಗಿದೆ. ಕಡಿಮೆ ಕ್ಯಾಲೋರಿಗಳಿರುವುದರಿಂದ ಎಳನೀರನ್ನು ಮಧುಮೇಹಿಗಳು ಕೂಡ ಸೇವಿಸಬಹುದು.

ಕಾಮಕಸ್ತೂರಿ ಬೀಜಗಳು ನೈಸರ್ಗಿಕ ಶೀತಕವಾಗಿ ಕಾರ್ಯನಿರ್ವಹಿಸುತ್ತವೆ. ಇದರಲ್ಲಿ ಫೈಬರ್ ಸಮೃದ್ಧವಾಗಿದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸುಧಾರಿಸುತ್ತದೆ ಮತ್ತು ಮಲಬದ್ಧತೆಯನ್ನು ನಿವಾರಿಸಲು ಸಹಾಯ ಮಾಡುತ್ತದೆ. ಕಾಮಕಸ್ತೂರಿ ಬೀಜಗಳು ದೇಹದಲ್ಲಿನ ಅಧಿಕ ಶಾಖವನ್ನು ನಿಭಾಯಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಉಪವಾಸದ ಸಮಯದಲ್ಲಿ ಎಳನೀರು ಕುಡಿಯಬಹುದೇ?

ಎಳನೀರಿನೊಂದಿಗೆ ಕಾಮಕಸ್ತೂರಿ ಬೀಜವನ್ನು ಹಾಕಿಕೊಂಡು ಕುಡಿಯುವುದರಿಂದ ಆಮ್ಲೀಯತೆಯನ್ನು ನಿವಾರಿಸಬಹುದು. ಇದು ದೇಹದಲ್ಲಿ HCLನ ಆಮ್ಲೀಯ ಪರಿಣಾಮವನ್ನು ತಟಸ್ಥಗೊಳಿಸುತ್ತದೆ. ಇದು ದೇಹವನ್ನು ನಿರ್ವಿಷೀಕರಣಗೊಳಿಸುತ್ತದೆ. ತೂಕ ಇಳಿಸಲು ಇದು ಅತ್ಯುತ್ತಮವಾದ ಆಯ್ಕೆಯಾಗಿದೆ.

ಕಾಮಕಸ್ತೂರಿ ಬೀಜ ನೈಸರ್ಗಿಕವಾಗಿ ದೇಹವನ್ನು ಕೂಲ್ ಆಗಿಡುತ್ತದೆ. ರಕ್ತದ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡುತ್ತದೆ. ಮಲಬದ್ಧತೆ ಮತ್ತು ಆಮ್ಲೀಯತೆಯನ್ನು ನಿವಾರಿಸುತ್ತದೆ. ಕರುಳಿನ ಚಲನೆಯನ್ನು ಕ್ರಮಬದ್ಧಗೊಳಿಸುತ್ತದೆ. ಇದು ಖನಿಜಗಳ ಶಕ್ತಿ ಕೇಂದ್ರವಾಗಿದೆ. ಹೃದಯ ರೋಗಗಳ ಅಪಾಯವನ್ನು ತಡೆಯುತ್ತದೆ. ಉರಿಯೂತದ ಮತ್ತು ಆಂಟಿ-ಕಾರ್ಸಿನೋಜೆನಿಕ್ ಗುಣಲಕ್ಷಣಗಳನ್ನು ಹೊಂದಿದೆ. ಹೀಗಾಗಿ, ಎಳನೀರನ್ನು ಹಾಗೇ ಕುಡಿಯುವ ಬದಲು ಕಾಮಕಸ್ತೂರಿ ಬೀಜ, ನಿಮಗೆ ಇಷ್ಟವಿದ್ದರೆ ಸ್ವಲ್ಪ ಲಿಂಬೆ ರಸವನ್ನು ಹಾಕಿಕೊಂಡು ಜ್ಯೂಸ್​ನಂತೆ ಮಾಡಿಕೊಂಡು ಸೇವಿಸಬಹುದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ