AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ ಹಾಲಿಗೆ ಒಂದು ಚಮಚ ಈ ಎಲೆಗಳ ಪುಡಿಯನ್ನು ಬೆರೆಸಿ ಕುಡಿದರೆ ಕೀಲು ನೋವು ಎಂದಿಗೂ ಬರುವುದಿಲ್ಲ

ನುಗ್ಗೆ ಸೊಪ್ಪಿನ ಪುಡಿಯು ಅನೇಕ ರೀತಿಯ ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ ಎಂದು ಹೇಳಲಾಗುತ್ತದೆ. ಅದರಲ್ಲಿಯೂ ಇದನ್ನು ವಿವಿಧ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ನೀಡಲು ಬಳಸಲಾಗುತ್ತದೆ. ನುಗ್ಗೆಸೊಪ್ಪಿನ ಪುಡಿಯನ್ನು ಹಾಲಿನೊಂದಿಗೆ ಸೇರಿಸಿ ಕುಡಿಯುವುದರಿಂದ ಹಲವು ರೀತಿಯ ಪ್ರಯೋಜನಗಳನ್ನು ನೀಡುತ್ತದೆ. ಇದು ಮೂಳೆಗಳನ್ನು ಬಲಪಡಿಸುತ್ತದೆ, ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಇದು ಮಧುಮೇಹ ರೋಗಿಗಳಿಗೂ ಪ್ರಯೋಜನಕಾರಿಯಾಗಿದೆ.

ಪ್ರತಿದಿನ ಹಾಲಿಗೆ ಒಂದು ಚಮಚ ಈ ಎಲೆಗಳ ಪುಡಿಯನ್ನು ಬೆರೆಸಿ ಕುಡಿದರೆ ಕೀಲು ನೋವು ಎಂದಿಗೂ ಬರುವುದಿಲ್ಲ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Feb 13, 2025 | 11:00 AM

Share

ನುಗ್ಗೆಕಾಯಿ ಸೇರಿಸಿ ಮಾಡಿದ ಪದಾರ್ಥಗಳು ಬಹಳ ರುಚಿಯಾಗಿರುತ್ತವೆ. ಅದೇ ರೀತಿ ಅವುಗಳ ಎಲೆಗಳಿಂದಲೂ ಕೂಡ ನಾನಾ ರೀತಿಯ ಅಡುಗೆಗಳನ್ನು ಮಾಡುತ್ತಾರೆ ಇದು ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಆದರೆ ಆ ಎಲೆಗಳ ಪುಡಿಗಳಿಂದ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳಿವೆ ಎಂಬುದು ತಿಳಿದಿದೆಯೇ? ಆಯುರ್ವೇದದಲ್ಲಿ, ನುಗ್ಗೆ ಸೊಪ್ಪಿನ ಪುಡಿಯು ಅನೇಕ ರೀತಿಯ ಔಷಧೀಯ ಗುಣಗಳಿಂದ ಸಮೃದ್ಧವಾಗಿದೆ ಎಂದು ಹೇಳಲಾಗುತ್ತದೆ. ಇದನ್ನು ವಿವಿಧ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಬಳಸಲಾಗುತ್ತದೆ. ಇದರಲ್ಲಿ ಪ್ರೋಟೀನ್, ಕಬ್ಬಿಣ, ಕ್ಯಾಲ್ಸಿಯಂ, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ನ ಉತ್ತಮ ಮೂಲವಾಗಿದೆ. ಇದಲ್ಲದೆ, ಫೈಬರ್ ಮತ್ತು ಜೀವಸತ್ವಗಳು ಸಹ ಸಮೃದ್ಧವಾಗಿವೆ. ಅದರಲ್ಲಿಯೂ ಹಾಲಿನೊಂದಿಗೆ ನುಗ್ಗೆ ಸೊಪ್ಪಿನ ಪುಡಿಯನ್ನು ಸೇರಿಸಿ ಕುಡಿಯುವುದರಿಂದ ಊಹೆಗೂ ನಿಲುಕದಷ್ಟು ಪ್ರಯೋಜನಗಳನ್ನು ಪಡೆಯಬಹುದಾಗಿದೆ.

ಅನೇಕರು ನುಗ್ಗೆಯನ್ನು ಇಷ್ಟ ಪಟ್ಟು ತಿನ್ನುತ್ತಾರೆ, ಇನ್ನು ಕೆಲವರು ಅದರ ಎಲೆಗಳನ್ನು ನಾನಾ ರೀತಿಯ ಆಹಾರ ಪದಾರ್ಥಗಳ ತಯಾರಿಕೆಗೆ ಬಳಸುತ್ತಾರೆ. ಇನ್ನು ಕೆಲವರು ಆ ಸೊಪ್ಪಿನಿಂದ ತಯಾರಾಗುವ ಪುಡಿಯನ್ನು ಸೇವನೆ ಮಾಡಲು ಇಷ್ಟಪಡುತ್ತಾರೆ. ಏಕೆಂದರೆ ಇವುಗಳಲ್ಲಿ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳಿದ್ದು ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಿ ಜೀರ್ಣಾಂಗ ವ್ಯವಸ್ಥೆಗೆ ಪ್ರಯೋಜನಕಾರಿಯಾಗಿದೆ. ಅದಲ್ಲದೆ ಇವುಗಳಿಂದ ನಾನಾ ರೀತಿಯ ಅನುಕೂಲಗಳಿದ್ದು, ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಮೂಳೆಗಳನ್ನು ಬಲಪಡಿಸುತ್ತದೆ: ಹಾಲು ಯಾವಾಗಲೂ ಮೂಳೆಗಳಿಗೆ ಪ್ರಯೋಜನಕಾರಿ ಎಂಬುದು ನಿಮಗೆ ತಿಳಿದಿರಬಹುದು. ಅಲ್ಲದೆ ಇದರಲ್ಲಿ ಕ್ಯಾಲ್ಸಿಯಂ ಮತ್ತು ಮೆಗ್ನೀಸಿಯಮ್ ಕೂಡ ಹೆಚ್ಚಿನ ಪ್ರಮಾಣದಲ್ಲಿ ಕಂಡುಬರುತ್ತವೆ. ಹಾಲು ಮತ್ತು ನುಗ್ಗೆಸೊಪ್ಪಿನ ಪುಡಿಯನ್ನು ಒಟ್ಟು ಸೇರಿಸಿ ಕುಡಿದರೆ, ಇದು ಮೂಳೆಗಳನ್ನು ಬಲಪಡಿಸುತ್ತದೆ. ಪ್ರತಿದಿನ ಸಂಜೆ ಚಹಾದ ಬದಲು ನುಗ್ಗೆಸೊಪ್ಪಿನ ಪುಡಿಯನ್ನು ಹಾಲಿನಲ್ಲಿ ಬೆರೆಸಿ ಕುಡಿಯುವುದರಿಂದ ಮೂಳೆ ಮತ್ತು ಕೀಲು ನೋವಿಗೆ ಪರಿಹಾರ ಸಿಗುತ್ತದೆ.

ತೂಕ ಇಳಿಸಿಕೊಳ್ಳಲು ಪ್ರಯೋಜನಕಾರಿ: ನೀವು ತೂಕ ಕಡಿಮೆ ಮಾಡಿಕೊಳ್ಳಲು ಬಯಸುತ್ತಿದ್ದರೆ, ನುಗ್ಗೆಸೊಪ್ಪಿನ ಪುಡಿಯನ್ನು ಸೇವನೆ ಮಾಡಬಹುದು. ಈ ಪುಡಿಯಲ್ಲಿ ಫೈಬರ್ ಅಧಿಕವಾಗಿದ್ದು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ತೂಕ ಇಳಿಸಿಕೊಳ್ಳಲು ನೀವು ಈ ಪುಡಿಯನ್ನು ಪ್ರತಿದಿನ ಹಾಲಿನೊಂದಿಗೆ ಸೇರಿಸಿ ಕುಡಿಯಬಹುದು.

ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿ: ನೀವು ಕೂಡ ಮಧುಮೇಹದಿಂದ ಬಳಲುತ್ತಿದ್ದರೆ, ನುಗ್ಗೆಸೊಪ್ಪಿನ ಪುಡಿಯನ್ನು ಸೇವನೆ ಮಾಡುವುದು ಬಹಳ ಪ್ರಯೋಜನಕಾರಿಯಾಗಿದೆ. ಈ ಪುಡಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಈ ಪುಡಿಯನ್ನು ನೀವು ಪ್ರತಿದಿನ ಬೆಳಿಗ್ಗೆ ಅಥವಾ ಸಂಜೆ ಹಾಲಿನೊಂದಿಗೆ ಸೇವನೆ ಮಾಡಬೇಕು. ಆಗದಿದ್ದರೆ ಬೆಚ್ಚಗಿನ ನೀರಿನೊಂದಿಗೆ ಸಹ ಸೇವಿಸಬಹುದು.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ರೋಗನಿರೋಧಕ ಶಕ್ತಿಯನ್ನು ಆರೋಗ್ಯಕರವಾಗಿ ಹೆಚ್ಚಿಸಿಕೊಳ್ಳಲು ಆಹಾರದಲ್ಲಿ ನುಗ್ಗೆಸೊಪ್ಪಿನ ಪುಡಿಯನ್ನು ಸೇರಿಸಬಹುದು. ಏಕೆಂದರೆ ಇದರಲ್ಲಿ ಜೀವಸತ್ವಗಳು ಮತ್ತು ಖನಿಜಗಳು ಸಮೃದ್ಧವಾಗಿವೆ. ಈ ಪುಡಿಯನ್ನು ಸೇವಿಸುವುದರಿಂದ ದೇಹದ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಹಾಗಾಗಿ ಪ್ರತಿದಿನ ಅಥವಾ ದಿನಬಿಟ್ಟು ದಿನ, ಹಾಲಿನೊಂದಿಗೆ ನುಗ್ಗೆಸೊಪ್ಪಿನ ಪುಡಿಯನ್ನು ಸೇವಿಸಬಹುದು.

ಇದನ್ನೂ ಓದಿ: ಹೊಟ್ಟೆ ಕೆಟ್ಟಿದ್ದರೆ ರಾತ್ರಿ ಮಲಗುವ ಮುನ್ನ ಈ ಸೊಪ್ಪಿನ ನೀರು ಕುಡಿಯಿರಿ

ನುಗ್ಗೆಸೊಪ್ಪಿನ ಪುಡಿಯನ್ನು ಹಾಲಿನೊಂದಿಗೆ ಬೆರೆಸಿ ಕುಡಿಯುವುದು ಹೇಗೆ?

ಸಾಮಾನ್ಯವಾಗಿ ನುಗ್ಗೆಸೊಪ್ಪಿನ ಪುಡಿಯನ್ನು ಹಾಲಿನೊಂದಿಗೆ ಸೇವಿಸಬಹುದು. ಇಲ್ಲವಾದಲ್ಲಿ ನೀರಿನೊಂದಿಗೆ ಸೇವನೆ ಮಾಡಬಹುದು. ಇದಕ್ಕಾಗಿ ಒಂದು ಲೋಟ ಹಾಲಿಗೆ ಒಂದು ಟೀ ಸ್ಪೂನ್ ನುಗ್ಗೆ ಸೊಪ್ಪಿನ ಪುಡಿಯನ್ನು ಸೇರಿಸಿ ಸರಿಯಾಗಿ ಮಿಶ್ರಣ ಮಾಡಿಕೊಂಡು ಕುಡಿಯಿರಿ. ನೀವು ನುಗ್ಗೆಸೊಪ್ಪಿನ ಪುಡಿ ಸೇರಿಸಿದ ಹಾಲನ್ನು ಸಂಜೆ ಅಥವಾ ರಾತ್ರಿ ಸೇವಿಸಬಹುದು. ನಿರಂತರವಾಗಿ ಹಲವು ದಿನಗಳ ವರೆಗೆ ಪ್ರತಿದಿನ ಈ ಹಾಲನ್ನು ಕುಡಿಯುವುದರಿಂದ ಅನೇಕ ಸಮಸ್ಯೆಗಳು ನಿವಾರಣೆಯಾಗುತ್ತವೆ.

ಸೂಚನೆ: ಇಲ್ಲಿರುವ ವಿಷಯಗಳು ಮಾಹಿತಿಗಾಗಿ ಮಾತ್ರ, ಯಾವುದೇ ರೀತಿಯ ಸಂದೇಹಗಳಿದ್ದಲ್ಲಿ ವೈದ್ಯಕೀಯ ವೃತ್ತಿಪರರನ್ನು ಸಂಪರ್ಕಿಸುವುದು ಸೂಕ್ತ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!