AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಳೆ ಎಲೆಯಲ್ಲಿ ಏಕೆ ಊಟ ಮಾಡಬೇಕು? ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ

ಮನೆಯ ಮುಂದೆ ಮತ್ತು ಹಿತ್ತಲಿನ ತೋಟದಲ್ಲಿ ಬಾಳೆಗಿಡಗಳನ್ನು ಬೆಳೆಸುವುದು ಶುಭಕರ. ಜೊತೆಗೆ ಬಾಳೆ ಎಲೆಯಲ್ಲಿ ಊಟ ಮಾಡಿದರೆ ಕೆಲ ಆರೋಗ್ಯ ಪ್ರಯೋಜನಗಳನ್ನ ಪಡೆದುಕೊಳ್ಳಬಹುದು.

ಬಾಳೆ ಎಲೆಯಲ್ಲಿ ಏಕೆ ಊಟ ಮಾಡಬೇಕು? ಏನೆಲ್ಲಾ ಆರೋಗ್ಯ ಪ್ರಯೋಜನಗಳಿವೆ
ಸಾಂದರ್ಭಿಕ ಚಿತ್ರ
TV9 Web
| Updated By: sandhya thejappa|

Updated on: Jul 03, 2022 | 8:30 AM

Share

ಆಧುನಿಕ ಪದ್ಧತಿಗೆ ಒಗ್ಗಿಕೊಂಡಿರುವ ನಾವು ಕೆಲವು ಅತ್ಯುತ್ತಮ ಹಳೆಯ (Old) ಆಚಾರ ವಿಚಾರಗಳನ್ನು ಮೂಲೆ ಗುಂಪಾಗಿಸಿದ್ದೇವೆ. ಅವುಗಳಲ್ಲಿ ಬಾಳೆ ಎಲೆಯಲ್ಲಿ (Banana Leaf) ಊಟ ಮಾಡುವ ಪದ್ಧತಿಯೂ ಒಂದು. ಹಿಂದೂ ಧರ್ಮದ ಶಾಸ್ತ್ರಗಳಲ್ಲಿ ಮತ್ತು ಸಮಾರಂಭಗಳಲ್ಲಿ ಬಾಳೆಗೆ ಮತ್ತು ಬಾಳೆ ಎಲೆಗೆ ತನ್ನದೆ ಆದ ಮಹತ್ವ ಇದೆ. ಬಾಳೆ ಎಲೆಯ ಮೇಲೆ ಮಾಡುವ ಊಟದ ರುಚಿಯೇ ಬೇರೆ. ಅದು ಸಂಪ್ರದಾಯ ಕೂಡಾ ಹೌದು. ಹಾಗಾಗಿಯೇ, ಮದುವೆ, ದೇವಾಲಯಗಳ ಪ್ರಸಾದ ಭೋಜನ, ಅನ್ನಸಂತರ್ಪಣೆಗಳಲ್ಲಿ ಬಾಳೆ ಎಲೆಯ ಮೇಲೆ ಊಟವನ್ನು ಬಡಿಸಲಾಗುತ್ತದೆ.

ಮನೆಯ ಮುಂದೆ ಮತ್ತು ಹಿತ್ತಲಿನ ತೋಟದಲ್ಲಿ ಬಾಳೆಗಿಡಗಳನ್ನು ಬೆಳೆಸುವುದು ಶುಭಕರ. ಜೊತೆಗೆ ಬಾಳೆ ಎಲೆಯಲ್ಲಿ ಊಟ ಮಾಡಿದರೆ ಕೆಲ ಆರೋಗ್ಯ ಪ್ರಯೋಜನಗಳನ್ನ ಪಡೆದುಕೊಳ್ಳಬಹುದು.

ಜೀರ್ಣಕ್ರಿಯೆ: ಬಾಳೆ ಎಲೆಯ ಮೇಲ್ಪದರದ ರಚನೆಯಲ್ಲಿ ಎಪಿಗಾಲ್ಸೋಕ್ಯಾಟಿಚಿನ್ ಗ್ಯಾಲೆಟ್ ಎಂಬ ಪಾಲಿಫಿನಾಲ್ ಅಂಶವಿರುತ್ತದೆ. ಬಿಸಿ ಆಹಾರ ಎಲೆಗೆ ಬಿದ್ದ ತಕ್ಷಣ ಇವು ಆಹಾರದೊಂದಿಗೆ ಬೆರೆತು ನಮ್ಮ ಹೊಟ್ಟೆ ಸೇರುತ್ತವೆ. ಇದರಿಂದ ಜೀರ್ಣಕ್ರಿಯೆ ಚೆನ್ನಾಗಿ ಆಗುತ್ತದೆ.

ಇದನ್ನೂ ಓದಿ
Image
Nail Care: ನಿಮಗೆ ಉಗುರು ಕಚ್ಚುವ ಅಬ್ಯಾಸವಿದೆಯೇ? ಕೂಡಲೇ ಬಿಟ್ಟುಬಿಡಿ
Image
Plastic Ban: ಇಂದಿನಿಂದ ಜೀವನಶೈಲಿ ಬದಲಾಯಿಸಿ; ಪ್ಲಾಸ್ಟಿಕ್ ಬದಲು ಈ ಪರಿಸರಸ್ನೇಹಿ ವಸ್ತುಗಳನ್ನು ಬಳಸಿ
Image
Skin Care: ಕಾಂತಿಯುತ ತ್ವಚೆ ಪಡೆಯಬೇಕೇ? ಮನೆಯಲ್ಲೇ ತಯಾರಿಸಿದ ಕ್ರೀಂ ಬಳಸಿ
Image
Relationship: ಮನಸ್ಸಿನಲ್ಲೇ ಬಚ್ಚಿಟ್ಟಿರುವ ನಿರೀಕ್ಷೆಗಳು ಸಂಗಾತಿ ಜತೆ ಭಿನ್ನಾಭಿಪ್ರಾಯ ಸೃಷ್ಟಿಸಬಹುದು

ಇದನ್ನೂ ಓದಿ: Pushpa 2: ಈ ಕ್ವಾಲಿಟಿ ಇದ್ರೆ ‘ಪುಷ್ಪ 2’ ಚಿತ್ರದಲ್ಲಿ ನೀವೂ ನಟಿಸಬಹುದು

ಕ್ಯಾನ್ಸರ್ ರೋಗ ತಡೆಯುತ್ತದೆ: ಬಾಳೆ ಎಲೆಯ ಮೇಲೆ ಬ್ಯಾಕ್ಟೀರಿಯಾಗಳು ಬಾಳುವುದಿಲ್ಲ. ಇದರಲ್ಲಿ ಏನೇ ಆಹಾರ ಬಡಿಸಿದರೂ ಹೊಟ್ಟೆಗೆ ಹೋಗುವ ಮುನ್ನವೇ ಕೊಲ್ಲಲ್ಪಡುತ್ತವೆ. ಅದರಲ್ಲೂ ಕ್ಯಾನ್ಸರ್ ರೋಗಕ್ಕೆ ಕಾರಣವಾಗುವ ಪ್ರೀ ರ್ಯಾಡಿಕಲ್ ಎಂಬ ಜೈವಿಕ ರಾಸಾಯನಿಕಗಳನ್ನು ದೇಹ ಸೇರಲು ಬಿಡಲ್ಲ.

ದೇಹಕ್ಕೆ ತಂಪು: ಬಾಳೆ ಎಲೆ ಊಟ ದೇಹಕ್ಕೆ ತಂಪು. ಗ್ಯಾಸ್ ಅಡುಗೆಯಿಂದ ಆಹಾರ ಸೇರಿಕೊಳ್ಳುವ ಕೃತಕ ಉಷ್ಣವೂ ಇಲ್ಲಿ ತಣ್ಣಗಾಗುತ್ತದೆ.

ಭೋಜನದಲ್ಲಿ ಬಡಿಸುವ ಪದಾರ್ಥಗಳು ಮತ್ತು ಅವುಗಳ ಭಗವದ್ರೂಪಗಳ ಪರಿಚಯ: 1. ಉಪ್ಪು (ಸೌಗಂಧಿ ಸಹಿತ ಜನಾರ್ಧನ). 2. ಚಟ್ನಿ, ಕೋಸಂಬರಿ, ಮುಂತಾದುವು (ಸತ್ಯ ಸಹಿತ ಪ್ರದ್ಯುಮ್ನ). 3. ಕೊಬ್ಬರಿ ಬಳಸಿರುವ ಪಲ್ಯ (ಬುದ್ಧಿಸಹಿತ ಪದ್ಮನಾಭ). 4. ಸೊಪ್ಪು ಬಳಸಿರುವ ಪಲ್ಯಗಳು (ಮಂಗಳಾದೇವಿ ಸಹಿತ ಹೃಷಿಕೇಶ). 5. ಹುಳಿ ರಹಿತ ಪದಾರ್ಥಗಳು (ಹರಿಣಿ ಸಹಿತ ಸಂಕರ್ಷಣ). 6. ಕಟು ಅಥವಾ ಕಹಿ ಪದಾರ್ಥಗಳು (ನಿತ್ಯ ಸಹಿತ ಅನಿರುದ್ಧ). 7. ಹುಳಿ ಪದಾರ್ಥಗಳು (ಇಂದಿರಾ ಸಹಿತ ದಾಮೋದರ). 8. ಭಕ್ಷ್ಯ ಅಥವಾ ಸಿಹಿ ಪದಾರ್ಥಗಳು (ಕಮಲಾ ಸಹಿತ ಮಾಧವ). 9. ಹೋಳಿಗೆ (ಕಮಲಾಲಯ ಮಧುಸೂದನ). 10. ಗೊಜ್ಜು ಮತ್ತು ಕರಿದ ಪದಾರ್ಥಗಳು (ಸದಾಶ್ರಯ ಅಧೋಕ್ಷಜ). 11. ಜಹಾಂಗೀರು, ವಡೆ ಮುಂತಾದ ಉದ್ದು ಬಳಸಿರುವ ಪದಾರ್ಥಗಳು (ಸಖಾದೇವಿ ಸಹಿತ ಅಚ್ಯುತ). 12. ಕುಂಬಳಕಾಯಿ, ಎಳ್ಳು, ಉದ್ದಿನ ಪದಾರ್ಥಗಳು-ಹಪ್ಪಳ ಸಂಡಿಗೆ ಮುಂತಾದುವು (ಲಕ್ಷ್ಮೀ ಸಹಿತ ನರಸಿಂಹ). 13. ಹಣ್ಣು ಮತ್ತು ಪಾನಕಗಳು (ಸುಂದರಿ ಸಹಿತ ಉಪೇಂದ್ರ). 14. ತೊವ್ವೆ (ಧಾನ್ಯ ಸಹಿತ ಶ್ರೀಧರ). 15. ಪರಮಾನ್ನ – ಪಾಯಸ (ಲಕ್ಷ್ಮೀ ಸಹಿತ ನಾರಾಯಣ). 16. ಅನ್ನ (ಶ್ರೀ ಕೇಶವ). 17. ತುಪ್ಪ (ಪದ್ಮಾ ಸಹಿತ ಗೋವಿಂದ). 18. ಬೆಣ್ಣೆ (ರಮಾ ಸಹಿತ ತ್ರಿವಿಕ್ರಮ). 19. ಹಾಲು / ಕ್ಷೀರ (ಪದ್ಮಿನೀ ಸಹಿತ ಗೋವಿಂದ). 20. ಮೊಸರು (ವೃಕ್ಷಾಕಪಿ ಸಹಿತ ವಾಮನ). 21. ಕುಡಿಯುವ ನೀರು (ಶ್ರೀ ಕೃಷ್ಣ). 22. ಸಕ್ಕರೆ, ಬೇಳೆ (ದಕ್ಷಿಣಾ ಸಹಿತ ವಾಸುದೇವ). 23. ಶ್ಯಾವಿಗೆ, ಇಂಗು, ಏಲಕ್ಕಿ, ಕೇಸರಿ, ಕರ್ಪೂರ, ಜೀರಿಗೆ, ಮುಂತಾದುವು (ಆನಂದ ಸಹಿತ ಪುರುಷೋತ್ತಮ). 24. ವೀಳ್ಯದೆಲೆ (ಶ್ರೀ ಹರಿ). 25. ಪಾನಕ – ನಿಂಬೆ (ವಿಶ್ವ).

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್