Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪು ಅಕ್ಕಿ ಅಥವಾ ಬಿಳಿ ಅಕ್ಕಿ ಆರೋಗ್ಯಕ್ಕೆ ಯಾವುದು ಒಳ್ಳೆಯದು?

ಭಾರತೀಯರು ಅನ್ನವನ್ನು ದೇವರಂತೆ ನೋಡುತ್ತಾರೆ. ನಮ್ಮ ಪ್ರಮುಖ ಆಹಾರಗಳಲ್ಲಿ ಇದು ಒಂದಾಗಿದೆ. ಅನ್ನ ದೇಹಕ್ಕೆ ಶಕ್ತಿಯನ್ನು ಒದಗಿಸುತ್ತದೆ ಮತ್ತು ತೂಕ ನಿಯಂತ್ರಣ, ಹೃದಯದ ಆರೋಗ್ಯ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಆದರೆ ಇದು ಎಲ್ಲರಿಗೂ ಒಳ್ಳೆಯದೇ? ಕೆಂಪು ಅಕ್ಕಿ ಅಥವಾ ಬಿಳಿ ಅಕ್ಕಿ ಆರೋಗ್ಯಕ್ಕೆ ಯಾವುದು ಒಳ್ಳೆಯದು? ನಿಯಮಿತವಾಗಿ ಅನ್ನ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಯಾವ ರೀತಿಯ ಉಪಯೋಗವಿದೆ ಎಂಬುದನ್ನು ತಿಳಿದುಕೊಳ್ಳಿ.

ಕೆಂಪು ಅಕ್ಕಿ ಅಥವಾ ಬಿಳಿ ಅಕ್ಕಿ ಆರೋಗ್ಯಕ್ಕೆ ಯಾವುದು ಒಳ್ಳೆಯದು?
ಸಾಂದರ್ಭಿಕ ಚಿತ್ರ
Follow us
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 10, 2025 | 12:22 PM

ಭಾರತೀಯರು ಅನ್ನವನ್ನು ದೇವರಂತೆ ನೋಡುತ್ತಾರೆ. ನಮ್ಮ ಪ್ರಮುಖ ಆಹಾರಗಳಲ್ಲಿ ಇದು ಒಂದಾಗಿದೆ. ಅಲ್ಲದೆ, ಅನ್ನ(Cooked rice) ದೇಹಕ್ಕೆ ಅನೇಕ ರೀತಿಯ ಅಗತ್ಯ ಪೋಷಕಾಂಶಗಳನ್ನು ಒದಗಿಸುವುದು ಮಾತ್ರವಲ್ಲದೆ ಶಕ್ತಿ, ತೂಕ ನಿಯಂತ್ರಣ(Weight Control) ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಕೂಡ ಸಹಾಯ ಮಾಡುತ್ತದೆ. ಇದು ಕಾರ್ಬೋಹೈಡ್ರೇಟ್(Carbohydrate) ಗಳ ಉತ್ತಮ ಮೂಲವಾಗಿರುವುದರಿಂದ ದೇಹಕ್ಕೆ ತಕ್ಷಣದ ಶಕ್ತಿಯನ್ನು ನೀಡುತ್ತದೆ. ಅದರಲ್ಲಿಯೂ ವಿಶೇಷವಾಗಿ ಬಿಳಿ ಅಕ್ಕಿಯ ಸೇವನೆ ಗ್ಲೈಕೋಜೆನ್ ಸಂಗ್ರಹವನ್ನು ಹೆಚ್ಚಿಸಿ ಶಕ್ತಿ ನೀಡುತ್ತದೆ. ಆದ್ದರಿಂದ ದೈಹಿಕ ಚಟುವಟಿಕೆ ಮಾಡುವವರಿಗೆ, ಅನ್ನ ಸೇವನೆ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ. ಆದರೆ ಇದು ಎಲ್ಲರಿಗೂ ಒಳ್ಳೆಯದೇ? ಕೆಂಪು ಅಕ್ಕಿ(red rice) ಅಥವಾ ಬಿಳಿ ಅಕ್ಕಿ(White rice) ಆರೋಗ್ಯಕ್ಕೆ ಯಾವುದು ಒಳ್ಳೆಯದು? ನಿಯಮಿತವಾಗಿ ಅನ್ನ ಸೇವನೆ ಮಾಡುವುದರಿಂದ ಆರೋಗ್ಯಕ್ಕೆ ಯಾವ ರೀತಿಯ ಉಪಯೋಗವಿದೆ ಎಂಬುದನ್ನು ತಿಳಿದುಕೊಳ್ಳಿ.

ತೂಕ ಕಡಿಮೆ ಮಾಡಿಕೊಳ್ಳಲು ಸಹಕಾರಿ;

ಕೆಂಪು ಅಕ್ಕಿ ದೇಹಕ್ಕೆ ಒಳ್ಳೆಯದು ಇದರಿಂದ ಮಾಡುವ ಗಂಜಿಯಿಂದ ಆರೋಗ್ಯ ಸಮಸ್ಯೆಗಳು ದೂರವಾಗಿ ದೇಹ ರೋಗಗಳಿಂದ ದೂರವಿರುತ್ತದೆ. ಇದರ ನಿಯಮಿತ ಸೇವನೆಯಿಂದ ತೂಕ ಇಳಿಸಿಕೊಳ್ಳಲು ಅಥವಾ ಆರೋಗ್ಯಕರ ತೂಕವನ್ನು ಕಾಪಾಡಿಕೊಳ್ಳಲು ಸಹಾಯವಾಗುತ್ತದೆ. ಇದರಲ್ಲಿರುವ ಫೈಬರ್ ಅಂಶವೂ ಕೂಡ ದೇಹದ ತೂಕವನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ. ಅನ್ನದಲ್ಲಿರುವ ಪೋಷಕಾಂಶಗಳು ದೇಹಕ್ಕೆ ಅಗತ್ಯವಾದ ಪ್ರೋಟೀನ್ ಮತ್ತು ಫೈಬರ್ ಅನ್ನು ಒದಗಿಸುತ್ತವೆ ಜೊತೆಗೆ ಹೊಟ್ಟೆ ತುಂಬಿದ ಅನುಭವವನ್ನು ನೀಡುತ್ತದೆ. ಆದರೆ ಇದರ ಅತಿಯಾದ ಸೇವನೆ ಒಳ್ಳೆಯದಲ್ಲ.

ಮಧುಮೇಹಿಗಳಿಗೆ ಒಳ್ಳೆಯದು;

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮತೋಲನಗೊಳಿಸಲು ಅನ್ನ ಸಹಾಯ ಮಾಡುತ್ತದೆ. ಆದರೆ ಇದಕ್ಕೆ ಬಿಳಿ ಅಕ್ಕಿಗಿಂತ ಕೆಂಪು ಅಕ್ಕಿ ಉತ್ತಮ ಆಯ್ಕೆಯಾಗಿದೆ. ಏಕೆಂದರೆ ಇದರಲ್ಲಿ ಗ್ಲೈಸೆಮಿಕ್ ಸೂಚ್ಯಂಕ ಕಡಿಮೆ ಇದ್ದು, ಮಧುಮೇಹ ಇರುವವರು ಅಕ್ಕಿಯನ್ನು ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು.

ಇದನ್ನೂ ಓದಿ
Image
ಗರ್ಭಾವಸ್ಥೆಯಲ್ಲಿ ವಾಂತಿಯಾಗುವುದಕ್ಕೆ ಕಾರಣವೇನು?
Image
ಈ ರೀತಿಯ ಲಕ್ಷಣಗಳು ಕಂಡು ಬರುತ್ತಿದ್ದರೆ ನಿಮ್ಮ ಕಿಡ್ನಿ ಅಪಾಯದಲ್ಲಿದೆ
Image
ಮಾವಿನ ಹಣ್ಣು ಇಷ್ಟಪಡುವವರು ಈ ಸಮಯದಲ್ಲಿ ತಿನ್ನಿ, ಆರೋಗ್ಯಕ್ಕೆ ಒಳ್ಳೆಯದು
Image
ಹಣ್ಣುಗಳನ್ನು ಈ ಸಮಯದಲ್ಲಿ ಸೇವನೆ ಮಾಡುವುದು ವಿಷ ಸೇವಿಸಿದಂತೆ

ಹೃದಯದ ಆರೋಗ್ಯ ಕಾಪಾಡುತ್ತದೆ;

ಅನ್ನದಲ್ಲಿ ಫೋಲಿಕ್ ಆಮ್ಲ, ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ನಂತಹ ಖನಿಜಗಳಿವೆ. ಇವು ಹೃದಯದ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಹೃದ್ರೋಗಗಳನ್ನು ತಪ್ಪಿಸಲು ಬ್ರೌನ್ ರೈಸ್ ಉತ್ತಮ ಆಯ್ಕೆಯಾಗಿದೆ. ಬಿಳಿ ಅಕ್ಕಿ, ಕೆಂಪು ಅಕ್ಕಿಯಂತಹ ಅಕ್ಕಿ ಪ್ರಭೇದಗಳು ಗ್ಲುಟೆನ್ ಮುಕ್ತವಾಗಿರುವುದರಿಂದ ಇದರ ಸೇವನೆ ಮೂಲಕ ಆರೋಗ್ಯವಾಗಿರಬಹುದು.

ಇದನ್ನೂ ಓದಿ: ಮಡಕೆಯಲ್ಲಿ ಇಟ್ಟ ಮೊಸರು ಹುಳಿ ಬರದಿರಲು ಕಾರಣವೇನು?

ಪ್ರತಿದಿನ ಅನ್ನ ಸೇವನೆ ಮಾಡುವುದರಿಂದ ದೇಹಕ್ಕೆ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಆದರೆ ಅಕ್ಕಿಯನ್ನು ಸಮತೋಲಿತ ಮತ್ತು ಸೀಮಿತ ರೀತಿಯಲ್ಲಿ ತೆಗೆದುಕೊಳ್ಳುವುದು ಮುಖ್ಯವಾಗುತ್ತದೆ. ಕೆಂಪು ಅಕ್ಕಿಯಂತಹ ಆರೋಗ್ಯಕರ ಆಯ್ಕೆಗಳನ್ನು ಆಹಾರದಲ್ಲಿ ಸೇರಿಸುವ ಮೂಲಕ, ಶಕ್ತಿ, ತೂಕ ನಿಯಂತ್ರಣ, ಹೃದಯದ ಆರೋಗ್ಯವನ್ನು ಕಾಪಾಡಬಹುದು.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ