AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ರೀತಿ ಮಾಡಿದರೆ ಡೊಳ್ಳು ಹೊಟ್ಟೆ ಒಂದೇ ವಾರದಲ್ಲಿ ಕರಗುತ್ತೆ! ನೀವೂ ಟ್ರೈ ಮಾಡಿ ನೋಡಿ

ತೂಕ ಕಡಿಮೆ ಮಾಡಿಕೊಳ್ಳಲು ನಾನಾ ರೀತಿಯ ಕಸರತ್ತು ಪಡುತ್ತೇವೆ. ಆದರೆ ಸರಳವಾಗಿ ಮನೆಯಲ್ಲಿಯೇ ಇರುವ ಪದಾರ್ಥಗಳನ್ನು ಬಳಸಿಕೊಂಡು ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು. ಕಂಪೆನಿಗಳಲ್ಲಿ ಎಂಟು ಗಂಟೆ ಒಂದೇ ಕಡೆ ಕುಳಿತುಕೆಲಸ ಮಾಡಿ, ಆಹಾರ ಸರಿಯಾಗಿ ಜೀರ್ಣವಾಗದಿದ್ದಾಗ ಅಥವಾ ಇನ್ನಿತರ ಸಮಸ್ಯೆಗಳಿಂದ ಹೊಟ್ಟೆಯ ಸುತ್ತ ಬೊಜ್ಜು ಬರುತ್ತದೆ. ಅವುಗಳನ್ನು ಕಡಿಮೆ ಮಾಡುವುದು ಸುಲಭವಲ್ಲ. ಆದರೆ ಅಡುಗೆ ಮನೆಯಲ್ಲಿರುವ ಈ ಪದಾರ್ಥವನ್ನು ಒಮ್ಮೆ ಟ್ರೈ ಮಾಡಿ ನೋಡಿ. ನಿಮ್ಮ ಸಮಸ್ಯೆಗೆ ಬಹು ಬೇಗ ಫಲಿತಾಂಶ ಸಿಗುತ್ತದೆ.

ಈ ರೀತಿ ಮಾಡಿದರೆ ಡೊಳ್ಳು ಹೊಟ್ಟೆ ಒಂದೇ ವಾರದಲ್ಲಿ ಕರಗುತ್ತೆ! ನೀವೂ ಟ್ರೈ ಮಾಡಿ ನೋಡಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Oct 10, 2024 | 10:32 AM

Share

ತೂಕ ಕಡಿಮೆ ಮಾಡಿಕೊಳ್ಳಲು ನಾನಾ ರೀತಿಯ ಕಸರತ್ತು ಪಡುತ್ತೇವೆ. ಆದರೆ ಸರಳವಾಗಿ ಮನೆಯಲ್ಲಿಯೇ ಇರುವ ಪದಾರ್ಥಗಳನ್ನು ಬಳಸಿಕೊಂಡು ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಬಹುದು. ಕಂಪೆನಿಗಳಲ್ಲಿ ಎಂಟು ಗಂಟೆ ಒಂದೇ ಕಡೆ ಕುಳಿತುಕೆಲಸ ಮಾಡಿ, ಆಹಾರ ಸರಿಯಾಗಿ ಜೀರ್ಣವಾಗದಿದ್ದಾಗ ಅಥವಾ ಇನ್ನಿತರ ಸಮಸ್ಯೆಗಳಿಂದ ಹೊಟ್ಟೆಯ ಸುತ್ತ ಬೊಜ್ಜು ಬರುತ್ತದೆ. ಅವುಗಳನ್ನು ಕಡಿಮೆ ಮಾಡುವುದು ಸುಲಭವಲ್ಲ. ಆದರೆ ಅಡುಗೆ ಮನೆಯಲ್ಲಿರುವ ಈ ಪದಾರ್ಥವನ್ನು ಒಮ್ಮೆ ಟ್ರೈ ಮಾಡಿ ನೋಡಿ. ನಿಮ್ಮ ಸಮಸ್ಯೆಗೆ ಬಹು ಬೇಗ ಫಲಿತಾಂಶ ಸಿಗುತ್ತದೆ.

ಸೋಂಪು ಕಾಳುಗಳನ್ನು ಪ್ರತಿನಿತ್ಯ ಒಂದಲ್ಲಾ ಒಂದು ರೀತಿಯಲ್ಲಿ ಬಳಸಲಾಗುತ್ತದೆ. ಈ ಕಾಳುಗಳ ಸಹಾಯದಿಂದ ನಿಮ್ಮ ತೂಕ ನಷ್ಟದ ಪ್ರಯಾಣವನ್ನು ಸುಲಭ ಮಾಡಬಹುದು. ನಿಮ್ಮ ಒಟ್ಟಾರೆ ಆರೋಗ್ಯವನ್ನು ಕಾಪಾಡಿಕೊಳ್ಳಲು ಬಹಳ ಪರಿಣಾಮಕಾರಿ ಎಂದು ಸಾಬೀತಾಗಿದೆ. ಸೋಂಪು ಕಾಳನ್ನು ಅಗಿದು ತಿನ್ನುವ ಮೂಲಕ ಅಥವಾ ಚಹಾದಲ್ಲಿ ಅಥವಾ ನೀರಿನಲ್ಲಿ ಬೆರೆಸಿ ಸೇವಿಸಬಹುದು.

ಚಯಾಪಚಯಕ್ಕೆ ಸಹಕಾರಿ: ಪ್ರತಿದಿನ ಕೇವಲ ಒಂದು ಚಮಚ ಸೋಂಪು ಕಾಳನ್ನು ಸೇವಿಸುವುದರಿಂದ ಚಯಾಪಚಯ ಕ್ರಿಯೆ ಹೆಚ್ಚಾಗುತ್ತದೆ. ವ್ಯಾಯಾಮದ ಜೊತೆಗೆ ಸೋಂಪು ಕಾಳನ್ನು ತಿನ್ನುವುದರಿಂದ ನಿಮ್ಮ ದೇಹದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಕೊಬ್ಬನ್ನು ವೇಗವಾಗಿ ಕರಗಿಸಲು ಸಹಾಯ ಮಾಡುತ್ತದೆ.

ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯನ್ನು ನಿವಾರಿಸುತ್ತದೆ: ವಿವಿಧ ರೀತಿಯ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಲು ಸೋಂಪು ಕಾಳನ್ನು ಸೇವಿಸಲು ತಜ್ಞರು ಸಲಹೆ ನೀಡುತ್ತಾರೆ. ಆಯುರ್ವೇದದ ಪ್ರಕಾರ ಈ ಕಾಳಿನಲ್ಲಿರುವ ಎಲ್ಲಾ ಅಂಶಗಳು ನಿಮ್ಮ ಆರೋಗ್ಯಕ್ಕೆ ಒಳ್ಳೆಯದು.

ಮೂಳೆಯ ಆರೋಗ್ಯಕ್ಕೆ ಒಳ್ಳೆಯದು: ಈ ಕಾಳಿನಲ್ಲಿ ಉತ್ತಮ ಪ್ರಮಾಣದ ಕ್ಯಾಲ್ಸಿಯಂ, ಪೊಟ್ಯಾಶಿಯಮ್, ಮೆಗ್ನೀಷಿಯಂ ಕಂಡು ಬರುತ್ತದೆ. ಸೋಂಪು ಕಾಳು ನಿಮ್ಮ ಮೂಳೆಯ ಆರೋಗ್ಯವನ್ನು ಹೆಚ್ಚಿಸುತ್ತದೆ ಜೊತೆಗೆ ಚರ್ಮಕ್ಕೆ ಪ್ರಯೋಜನಕಾರಿಯಾಗಿದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಒಂದು ಚಮಚ ಸೋಂಪು ಕಾಳನ್ನು ಸೇವಿಸಿ. ಇದನ್ನು ನಿಯಮಿತವಾಗಿ ಸೇವನೆ ಮಾಡುವುದರಿಂದ ಕಣ್ಣಿನ ದೃಷ್ಟಿ ಉತ್ತಮವಾಗುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಮಕ್ಕಳನ್ನು ಮಲಗಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದ ಕೆಲಸದಾಕೆ
ಮಕ್ಕಳನ್ನು ಮಲಗಿಸಿ 1.5 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕದ್ದ ಕೆಲಸದಾಕೆ
ಡಿಕೆಶಿ​​ ಕೈ ಬಿಡದ ಆಂದ್ಲೆ ಶ್ರೀ ಜಗದೀಶ್ವರಿ: ಸತ್ಯವಾಯ್ತು ದೇವಿಯ ಶುಭಸೂಚನೆ
ಡಿಕೆಶಿ​​ ಕೈ ಬಿಡದ ಆಂದ್ಲೆ ಶ್ರೀ ಜಗದೀಶ್ವರಿ: ಸತ್ಯವಾಯ್ತು ದೇವಿಯ ಶುಭಸೂಚನೆ
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಮುಹೂರ್ತ ಫಿಕ್ಸ್
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಮುಹೂರ್ತ ಫಿಕ್ಸ್
ತುತ್ತ ತುದಿಯಲ್ಲಿ ನಿಂತೇ ಬಿಡ್ತು ರೋಲರ್ ಕೋಸ್ಟರ್
ತುತ್ತ ತುದಿಯಲ್ಲಿ ನಿಂತೇ ಬಿಡ್ತು ರೋಲರ್ ಕೋಸ್ಟರ್
ಸತೀಶ್ ಜಾರಕಿಹೊಳಿಗೆ ಕೊನೆಗೂ ಬಂತು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಫರ್!
ಸತೀಶ್ ಜಾರಕಿಹೊಳಿಗೆ ಕೊನೆಗೂ ಬಂತು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಫರ್!
ಕಳ್ಳ ಅನ್ಕೊಂಡ್ರಾ, ಮೆಡಿಕಲ್ ಶಾಪ್ ಕ್ಲೋಸ್ ಆಗುವ ವೇಳೆ ನುಗ್ಗಿದ ವ್ಯಕ್ತಿ
ಕಳ್ಳ ಅನ್ಕೊಂಡ್ರಾ, ಮೆಡಿಕಲ್ ಶಾಪ್ ಕ್ಲೋಸ್ ಆಗುವ ವೇಳೆ ನುಗ್ಗಿದ ವ್ಯಕ್ತಿ
ಸಾಯುತ್ತಿದ್ದ ಲೈನ್‌ಮನ್‌ಗೆ ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್​​ ಸಿಬ್ಬಂದಿ
ಸಾಯುತ್ತಿದ್ದ ಲೈನ್‌ಮನ್‌ಗೆ ಸಿಪಿಆರ್ ನೀಡಿ ಜೀವ ಉಳಿಸಿದ ಪೊಲೀಸ್​​ ಸಿಬ್ಬಂದಿ
ಮೆಟ್ರೋ ನಿಲ್ದಾಣದ ರಸ್ತೇಲಿ 3 ಅಡಿಯಷ್ಟು ನಿಂತ ಮಳೆ‌ನೀರು!
ಮೆಟ್ರೋ ನಿಲ್ದಾಣದ ರಸ್ತೇಲಿ 3 ಅಡಿಯಷ್ಟು ನಿಂತ ಮಳೆ‌ನೀರು!
ಗುರು ಸಂಚಾರ ಮೀನ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
ಗುರು ಸಂಚಾರ ಮೀನ ರಾಶಿಯ ಮೇಲೆ ಯಾವ ರೀತಿ ಪರಿಣಾಮ ಬೀರಲಿದೆ?
Video: ಉತ್ತರ ಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ, ಐವರು ಸಾವು
Video: ಉತ್ತರ ಪ್ರದೇಶದಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿತ, ಐವರು ಸಾವು