AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ginger Powder: ಶುಂಠಿ ಸೇವನೆಯಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ತಿಳಿಯಿರಿ

ಜೀರ್ಣಕ್ರಿಯೆಗೆ ಸಹಾಯಕವಾಗಿರುವ ಶುಂಠಿ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಹಾಗಿರುವಾಗ ಒಣಗಿಸಿದ ಶುಂಠಿ ಪುಡಿಯನ್ನು ಬಳಸುವುದು ಹೇಗೆ? ಎಂಬುದನ್ನು ತಿಳಿಯಿರಿ.

Ginger Powder: ಶುಂಠಿ ಸೇವನೆಯಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ತಿಳಿಯಿರಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 23, 2021 | 7:59 AM

Share

ಶುಂಠಿ ಎಲ್ಲರ ಅಡುಗೆ ಮನೆಯಲ್ಲಿಯೂ ಸಾಮಾನ್ಯವಾಗಿ ಇರುವ ಪದಾರ್ಥ. ನಮ್ಮ ಸುತ್ತಮುತ್ತಲು ಬೆಳೆಯುವ ಅದೆಷ್ಟೋ ಆಹಾರ ಪದಾರ್ಥಗಳಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳಿವೆ. ಶುಂಠಿಯನ್ನು ಆಹಾರ ಪದಾರ್ಥಗಳಲ್ಲಿ ಮಾತ್ರವಲ್ಲದೇ ಬೆಳಿಗ್ಗೆಯ ಚಹ ಮಾಡಿಯೂ ಕೆಲವರು ಸವಿಯುತ್ತಾರೆ. ಸಾಮಾನ್ಯವಾದ ತಲೆನೋವು, ನೆಗಡಿ ಮತ್ತು ಜ್ವರಕ್ಕೆ ಶುಂಠಿ ಚಹ ಅಥವಾ ಕಷಾಯ ಉತ್ತಮ ಮಾರ್ಗ.

ಶುಂಠಿಯಲ್ಲಿ ಆ್ಯಂಟಿ ಆಕ್ಸಿಡೆಂಟ್, ಆ್ಯಂಟಿ ಬ್ಯಾಕ್ಟೀರಿಯಲ್, ಆ್ಯಂಟಿ ಇನ್ಫ್ಲೋಮೋಟರಿ ಗುಣಗಳಿರುತ್ತದೆ. ಜತೆಗೆ ಸತವು ಅಂಶ ಕೂಡ ಕಂಡು ಬರುತ್ತದೆ. ಸಾಮಾನ್ಯವಾಗಿ ಶುಂಠಿಯನ್ನು ಒಣಗಿಸಿ ಪುಡಿ ಮಾಡಿಯೂ ಸಹ ಶೇಖರಿಸಿಡಬಹುದು.

ಆರೋಗ್ಯ ಸುಧಾರಣೆಗೆ ಸಂಬಂಧಿಸಿದಂತೆ ಆಯುರ್ವೇದದಲ್ಲಿಯೂ ಶುಂಠಿಗೆ ಪ್ರಮುಖ ಸ್ಥಾನವಿದೆ. ಜೀರ್ಣಕ್ರಿಯೆಗೆ ಸಹಾಯಕವಾಗಿರುವ ಶುಂಠಿ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಹಾಗಿರುವಾಗ ಒಣಗಿಸಿದ ಶುಂಠಿ ಪುಡಿಯನ್ನು ಬಳಸುವುದು ಹೇಗೆ? ಎಂಬುದನ್ನು ತಿಳಿಯಿರಿ.

ಶುಂಠಿ ಪುಡಿಯನ್ನು ನೀರಿಗೆ ಸೇರಿಸಿ ಕುಡಿಯುವುದರ ಜತೆಗೆ ಲವಂಗ ಹಾಗೂ ಉಪ್ಪನ್ನು ಮಿಶ್ರಣ ಮಾಡುವುದರಿಂದ ಒಳ್ಳೆಯ ರುಚಿ ಸಿಗುತ್ತದೆ. ದಿನಕ್ಕೆ ಒಂದು ಬಾರಿಯಾದರೂ ಈ ಮಿಶ್ರಣವನ್ನು ಸೇವಿಸುವ ಮೂಲಕ ಹೊಟ್ಟೆಯನ್ನು ಶುದ್ಧವಾಗಿಟ್ಟುಕೊಳ್ಳಬಹುದಾಗಿದೆ.

ಮನೆಯಲ್ಲಿ ಶುಂಠಿ ಪುಡಿಯನ್ನು ತಯಾರಿಸುವುದು ಹೇಗೆ? ಔಷಧೀಯ ಗುಣಗಳಿಂದಾಗಿ ಹೆಚ್ಚಿನ ಮನೆಯಲ್ಲಿ ಶುಂಠಿಯನ್ನು ಬೆಳೆಯುತ್ತಾರೆ. ಹೀಗಿರುವಾಗ ಶುಂಠಿ ಪುಡಿ ಮಾಡಿಯೂ ಶೇಖರಿಸಿ ಇಟ್ಟುಕೊಳ್ಳಬಹುದಾಗಿದೆ. ಹೇಗೆ ಎಂಬುದು ಈ ಕೆಳಗಿನಂತಿದೆ:

ತಾಜಾ ಶುಂಠಿಯನ್ನು ಸ್ವಚ್ಛವಾಗಿ ತೊಳೆದು ಇಟ್ಟುಕೊಳ್ಳಿ

ತೆಳುವಾದ ಹೋಳುಗಳನ್ನಾಗಿ ಕತ್ತರಿಸಿ 2 ರಿಂದ 4 ದಿನಗಳವರೆಗೆ ಹಾಗೆಯೇ ಇಡಿ

4 ದಿನಗಳವರೆಗೆ ಬಿಸಿಲಿನಲ್ಲಿ ಒಣಗಿಸಿ

ಶುಂಠಿ ಚೆನ್ನಾಗಿ ಒಣಗಿದ ಬಳಿಕ ಮಿಕ್ಸಿಯಲ್ಲಿ ಗ್ರೈಂಡರ್ ಮಾಡಿ

ಬೆಚ್ಚಗಿನ ಕರಡಿಗೆಯಲ್ಲಿ ಶೇಖರಿಸಿ ಇಟ್ಟುಕೊಂಡು ಯಾವಾಗ ಬೇಕೋ ಆವಾಗ ಉಪಯೋಗಿಸಿಕೊಳ್ಳಬಹುದು

ಯಾವಾಗಲೂ ಮುಖ್ಯವಾಗಿ ನೆನಪಿಡುವ ವಿಷಯವೆಂದರೆ, ಅತಿಯಾಗಿ ಸೇವಿಸಿದರೆ ಅಮೃತವೂ ವಿಷ ಎಂಬಂತೆ ಯಾವುದೇ ಆಹಾರ ಪದಾರ್ಥಗಳು ಆರೋಗ್ಯಕ್ಕೆ ಒಳ್ಳೆಯದು ಎಂದು ಅತಿಯಾಗಿ ಸೇವಿಸಿದರೆ ಅನಾರೋಗ್ಯವನ್ನು ಉಂಟು ಮಾಡುತ್ತದೆ. ಹಾಗಾಗಿ ಹಿತ ಮಿತವಾಗಿ ಸೇವಿಸಿ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಿ.

ಇದನ್ನೂ ಓದಿ:

Health Benefits: ರೋಗ ನಿರೋಧಕ ಶಕ್ತಿ ಹೆಚ್ಚಿಸಲು ನೆಲ್ಲಿಕಾಯಿ, ಶುಂಠಿ ಜ್ಯೂಸ್ ಕುಡಿಯಿರಿ

Health Benefits: ಶುಂಠಿಯಲ್ಲಿನ ಆರೋಗ್ಯಕರ ಗುಣಗಳ ಬಗ್ಗೆ ನೀವು ತಿಳಿದರೆ, ಪ್ರತಿದಿನ ಸೇವಿಸುವ ಅಭ್ಯಾಸ ಮಾಡಿಕೊಳ್ಳುತ್ತೀರಿ

(Health Benefits of ginger powder check in kannada)

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು