AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jamun Seeds: ನೇರಳೆ ಬೀಜಗಳಲ್ಲಿರುವ ಅದ್ಭುತ ಔಷಧೀಯ ಗುಣಗಳ ಬಗ್ಗೆ ನಿಮಗೆಷ್ಟು ಗೊತ್ತು?

ನೇರಳೆ ಹಣ್ಣು ತಿನ್ನಲು ಎಷ್ಟು ರುಚಿಕರವಾಗಿರುತ್ತದೆಯೋ, ಅದು ಆರೋಗ್ಯಕ್ಕೆ ಅಷ್ಟೇ ಪ್ರಯೋಜನಕಾರಿಯಾಗಿದೆ. ಕಬ್ಬಿಣ ಮತ್ತು ರಂಜಕದಂತಹ ಅಂಶಗಳು ಇದರಲ್ಲಿ ಹೇರಳವಾಗಿ ಕಂಡುಬರುತ್ತವೆ.

Jamun Seeds: ನೇರಳೆ ಬೀಜಗಳಲ್ಲಿರುವ ಅದ್ಭುತ ಔಷಧೀಯ ಗುಣಗಳ ಬಗ್ಗೆ ನಿಮಗೆಷ್ಟು ಗೊತ್ತು?
Jamun Seeds
TV9 Web
| Edited By: |

Updated on:Oct 18, 2022 | 11:04 AM

Share

ನೇರಳೆ ಹಣ್ಣು ತಿನ್ನಲು ಎಷ್ಟು ರುಚಿಕರವಾಗಿರುತ್ತದೆಯೋ, ಅದು ಆರೋಗ್ಯಕ್ಕೆ ಅಷ್ಟೇ ಪ್ರಯೋಜನಕಾರಿಯಾಗಿದೆ. ಕಬ್ಬಿಣ ಮತ್ತು ರಂಜಕದಂತಹ ಅಂಶಗಳು ಇದರಲ್ಲಿ ಹೇರಳವಾಗಿ ಕಂಡುಬರುತ್ತವೆ. ಭಾರತದ ಅನೇಕ ಬುಡಕಟ್ಟು ಸಮಾಜಗಳು ನೇರಳೆಹಣ್ಣಿನ ಪ್ರತಿಯೊಂದು ಭಾಗವನ್ನು (ಬೀಜಗಳು, ಎಲೆಗಳು ಮತ್ತು ತೊಗಟೆ) ಔಷಧವಾಗಿ ಬಳಸುತ್ತೇವೆ.

ಇದರ ಬಳಕೆಯು ಅನೇಕ ಗಂಭೀರ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ನೇರಳೆಹಣ್ಣು ನಿಮಗೆ ಶೀತ-ಕೆಮ್ಮು, ಜ್ವರ, ಅತಿಸಾರ, ಅಲರ್ಜಿಗಳು, ಚರ್ಮ ರೋಗಗಳು ಮತ್ತು ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ನೀಡುವ ಋತುಮಾನದ ಹಣ್ಣು.

ಆರೋಗ್ಯ ತಜ್ಞರ ಪ್ರಕಾರ, ಬೆರ್ರಿ ಹಣ್ಣುಗಳನ್ನು ಋತುಮಾನಕ್ಕೆ ಅನುಗುಣವಾಗಿ ತಿನ್ನಬೇಕು, ಆದರೆ ನೇರಳೆ ಬೀಜಗಳನ್ನು ಎಸೆಯುವ ಬದಲು ಅದನ್ನು ಔಷಧಿಯಾಗಿ ಬಳಸಬೇಕು. ನೇರಳೆ ಹಣ್ಣುಗಳ ಜೊತೆಗೆ ಅದರ ಬೀಜಗಳು, ಎಲೆಗಳು ಮತ್ತು ತೊಗಟೆಯು ಅಗಾಧವಾದ ಔಷಧೀಯ ಗುಣಗಳನ್ನು ಹೊಂದಿದೆ.

ಮಧುಮೇಹದಲ್ಲಿ ಪ್ರಯೋಜನವನ್ನು ನೀಡುತ್ತದೆ ನೀವು ಅಥವಾ ಮನೆಯ ಯಾವುದೇ ಸದಸ್ಯರಿಗೆ ಮಧುಮೇಹ ಇದ್ದರೆ, ನೇರಳೆ ಬೀಜಗಳು ರಾಮಬಾಣವೆಂದು ಸಾಬೀತುಪಡಿಸಬಹುದು. ಇದನ್ನು ಮಾಡಲು, ನೀವು ನೇರಳೆ ಬೀಜಗಳನ್ನು ಒಣಗಿಸಿ ಪುಡಿಯನ್ನು ತಯಾರಿಸಬೇಕು ಮತ್ತು ಅದನ್ನು ಪ್ರತಿದಿನ ಬೆಳಿಗ್ಗೆ ಒಂದು ಚಮಚ ಉಗುರು ಬೆಚ್ಚಗಿನ ನೀರಿನಲ್ಲಿ ಸೇವಿಸಬೇಕು. ಹೀಗೆ ಮಾಡುವುದರಿಂದ ಮಧುಮೇಹದಿಂದ ಮುಕ್ತಿ ಸಿಗುತ್ತದೆ.

ಮೂತ್ರಪಿಂಡದ ಕಲ್ಲಿನ ಮೇಲೆ ಪರಿಣಾಮವನ್ನು ತೋರಿಸುತ್ತದೆ ಇತ್ತೀಚಿನ ದಿನಗಳಲ್ಲಿ ಕಿಡ್ನಿ ಸ್ಟೋನ್ ಸಮಸ್ಯೆ ಜನರಲ್ಲಿ ಹೆಚ್ಚಾಗಿ ಬರುತ್ತಿರುವುದು ಕಂಡು ಬರುತ್ತಿದೆ. ನಿಮಗೆ ಅಂತಹ ಸಮಸ್ಯೆಗಳಿದ್ದರೆ, ನೀವು ಪ್ರತಿದಿನ ನೇರಳೆ ಬೀಜದ ಪುಡಿಯನ್ನು ಸೇವಿಸಬೇಕು. ಹೀಗೆ ಮಾಡುವುದರಿಂದ ಪರಿಹಾರ ಸಿಗುತ್ತದೆ. ಈ ಸಮಯದಲ್ಲಿ ನೀವು ಹೆಚ್ಚು ಹೆಚ್ಚು ನೀರು ಕುಡಿಯಬೇಕು.

ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಕೆಟ್ಟ ಜೀವನಶೈಲಿಯಿಂದ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗುವುದು ಅನೇಕ ಜನರಲ್ಲಿ ಕಂಡುಬರುತ್ತದೆ. ನೇರಳೆ ಬೀಜಗಳಲ್ಲಿ ಉತ್ತಮ ಪ್ರಮಾಣದ ಫೈಬರ್ ಕಂಡುಬರುತ್ತದೆ, ಇದು ಮಲಬದ್ಧತೆ ಮತ್ತು ಇತರ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಗೆ ಪರಿಹಾರವನ್ನು ನೀಡುತ್ತದೆ .

ನೇರಳೆ ಬೀಜಗಳಲ್ಲಿ ಇರುವ ಫ್ಲೇವನಾಯ್ಡ್‌ಗಳು ಮತ್ತು ಆಂಟಿಆಕ್ಸಿಡೆಂಟ್‌ಗಳು ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತವೆ. ಇದರಲ್ಲಿ ಇರುವ ಆ್ಯಂಟಿಆಕ್ಸಿಡೆಂಟ್ ಗುಣಗಳು ಫ್ರೀ ರ್ಯಾಡಿಕಲ್ ಗಳನ್ನು ಹೋಗಲಾಡಿಸಿ ತ್ವಚೆಯನ್ನು ಸುಂದರವಾಗಿಸುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:03 am, Tue, 18 October 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು