AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mango Seed: ಮಾವಿನ ಗೊರಟೆ ಅಥವಾ ಮಾವಿನ ಬೀಜದ ಮಹಿಮೆ ತಿಳಿದುಕೊಳ್ಳಿ

Health benefits of Mango Seed: ಈ ಬೀಜಗಳನ್ನು ಚಿಕ್ಕ ಚಿಕ್ಕ ಚೂರುಗಳಾಗಿ ಕತ್ತರಿಸಿ, ಕತ್ತರಿಸಿದ ಚೂರುಗಳನ್ನು ಸ್ವಲ್ಪ ತುಪ್ಪ ಹಾಕಿ ಹೊಂಬಣ್ಣ ಬರುವವರೆಗೆ ಹುರಿಯಿರಿ. ಹುರಿದ ಈ ಚೂರುಗಳಿಗೆ ಕರಿ ಉಪ್ಪು ಸೇರಿಸಿ. ಊಟದ ನಂತರ ಒಂದಿಷ್ಟು ಚೂರುಗಳನ್ನು ತಿಂದರೆ ಜೀರ್ಣಕ್ರಿಯೆ ಸರಿಯಾಗಿ ಆಗುತ್ತದೆ.

Mango Seed: ಮಾವಿನ ಗೊರಟೆ ಅಥವಾ ಮಾವಿನ ಬೀಜದ ಮಹಿಮೆ ತಿಳಿದುಕೊಳ್ಳಿ
ಮಾವಿನ ಗೊರಟೆ ಅಥವಾ ಮಾವಿನ ಬೀಜದ ಮಹಿಮೆ ತಿಳಿದುಕೊಳ್ಳಿ
TV9 Web
| Edited By: ಸಾಧು ಶ್ರೀನಾಥ್​|

Updated on: May 18, 2022 | 6:06 AM

Share

ಹಣ್ಣುಗಳ ರಾಜ ಮಾವು ಈಗ ಮಾರುಕಟ್ಟೆಯಲ್ಲಿ ನಳನಳಿಸುತ್ತಿದೆ. ಮಾವಿನ ಹಣ್ಣು ತಿಂದ ನಂತರ ಗೊರಟೆಗಳನ್ನು (Mango Seed) ಕಸವೆಂದು ಬಿಸಾಡದೆ ಈ ರೀತಿ ಉಪಯೋಗಿಸಿ (Health benefits of Mango Seed).

* ಮಾವಿನ ಗೊರಟೆಗಳನ್ನು ( ಗುಟ್ಟಲಿ) ಬಿಸಿಲಿನಲ್ಲಿ ಚೆನ್ನಾಗಿ ಒಣಗಿಸಬೇಕು. * ಗೊರಟೆಯಯೊಳಗಿನ ಬೀಜಗಳನ್ನು ಬೇರ್ಪಡಿಸಿಕೊಂಡು, ಕುದಿಯುವ ನೀರಿಗೆ ಸ್ವಲ್ಪ ಉಪ್ಪು ಹಾಕಿ ಬೇಯಿಸಿ, ನಂತರ ಮೇಲಿನ ಕಪ್ಪು ಸಿಪ್ಪೆಯನ್ನು ತೆಗೆದು ನೆರಳಲ್ಲಿ ಒಣಗಿಸಿ. * ಈ ಬೀಜಗಳನ್ನು ಚಿಕ್ಕ ಚಿಕ್ಕ ಚೂರುಗಳಾಗಿ ಕತ್ತರಿಸಿ, ಕತ್ತರಿಸಿದ ಚೂರುಗಳನ್ನು ಸ್ವಲ್ಪ ತುಪ್ಪ ಹಾಕಿ ಹೊಂಬಣ್ಣ ಬರುವವರೆಗೆ ಹುರಿಯಿರಿ. * ಹುರಿದ ಈ ಚೂರುಗಳಿಗೆ ಕರಿ ಉಪ್ಪು ಸೇರಿಸಿ. * ಊಟದ ನಂತರ ಒಂದಿಷ್ಟು ಚೂರುಗಳನ್ನು ತಿಂದರೆ ಜೀರ್ಣಕ್ರಿಯೆ ಸರಿಯಾಗಿ ಆಗುತ್ತದೆ. * ಈ ಬೀಜಗಳನ್ನು ಕೊಬ್ಬರಿ ಎಣ್ಣೆ ಅಥವಾ ಸಾಸಿವೆ ಎಣ್ಣೆಯಲ್ಲಿ ಕುದಿಸಿ ಶೋಧಿಸಿ ಇಟ್ಟುಕೊಳ್ಳಿ. ಈ ಎಣ್ಣೆಯನ್ನು ಉಪಯೋಗಿಸಿದರೆ ಕೂದಲು ಸೊಂಪಾಗಿ ಬೆಳೆಯುತ್ತದೆ. ಕೂದಲಿಗೆ ಹೊಳಪು ಬರುತ್ತದೆ. * ಬೀಜಗಳ ಪೌಡರ್ 10 ಗ್ರಾಂ ನಷ್ಟು ಬೆಳಿಗ್ಗೆ ಮೊಸರಿನಲ್ಲಿ ತೆಗೆದುಕೊಂಡರೆ ಅತಿಸಾರ ಭೇದಿ ಕಡಿಮೆಯಾಗುತ್ತದೆ. * ಚಿಕ್ಕ ಮಕ್ಕಳ ಭೇದಿ ತಡೆಗಟ್ಟಲು ಹುರಿದ ಪೌಡರ್ 05 ಗ್ರಾಂ ನಷ್ಟು ಜೇನುತುಪ್ಪ ಸೇರಿಸಿ ಕೊಡಬಹುದು. * ಹೊಟ್ಟೆ ನೋವಿಗೆ ಮಜ್ಜಿಗೆಯಲ್ಲಿ ಬೆರೆಸಿ ಕುಡಿಯಬೇಕು. * ಹುರಿದ ಬೀಜಗಳ ಚೂರುಗಳ ಸೇವನೆ ಮಧುಮೇಹಿಗಳಿಗೆ ಕೂಡ ಉತ್ತಮ. * ಒಂದು ಬಾರಿಗೆ 5 ಗ್ರಾಂ ನಷ್ಟು ಉಪಯೋಗಿಸಬಹುದು. * ತುಪ್ಪದಲ್ಲಿ ಹುರಿದ ಚೂರುಗಳಿಗೆ ಸಿಹಿ ಬೇಕಾದರೆ ಜೇಷ್ಠ ಮಧು ಪೌಡರ್ ಉಪಯೋಗಿಸಬಹುದು. * ಒಣಗಿದ ಮಾವಿನ ಎಲೆಗಳು ಮತ್ತು ಈ ಬೀಜಗಳನ್ನು ಸೇರಿಸಿ ನಯವಾದ ಪುಡಿ ಮಾಡಿ ಸೋಸಿಕೊಳ್ಳಿ. ಈ ಪುಡಿಯಿಂದ ಹಲ್ಲು ಉಜ್ಜಿದರೆ ವಸಡುಗಳು ಗಟ್ಟಿಯಾಗಿ ಹಲ್ಲುಗಳು ಕೂಡ ಸ್ವಚ್ಛವಾಗಿ, ಬಾಯಿಯ ದುರ್ಗಂಧ ಕೂಡ ದೂರವಾಗುತ್ತದೆ. * ಸಂಗ್ರಹಿಸಿದ ವಿವಿಧ ಜಾತಿಯ ಮಾವಿನ ಗೊರಟೆಗಳಿಂದ ಮಾವಿನ ಸಸಿಗಳನ್ನು ಕೂಡ ತಯಾರಿಸಬಹುದು. (ಮಾಹಿತಿ ಲೇಖನ -ಎಸ್​ ಹೆಚ್​ ನದಾಫ್)

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು