AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಹಣ್ಣನ್ನು ಸೇವನೆ ಮಾಡಿದ್ರೆ ನಿಮ್ಮ ಚರ್ಮದ ಕಾಂತಿ ಎಂದಿಗೂ ಕಡಿಮೆಯಾಗುವುದಿಲ್ಲ

ಕರಬೂಜ ಹಣ್ಣು ಆರೋಗ್ಯಕ್ಕೆ ಒಳ್ಳೆಯದು. ಅಲ್ಲದೆ ಇದು ಅನೇಕ ರೀತಿಯ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರಲ್ಲಿ ನೀರಿನ ಪ್ರಮಾಣ ಹೇರಳವಾಗಿದ್ದು ದೇಹಕ್ಕೆ ತಂಪನ್ನು ನೀಡುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಈ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಅಷ್ಟೇ ಅಲ್ಲ ಕರಬೂಜ ಹಣ್ಣಿನಲ್ಲಿ ಪ್ರೋಟೀನ್, ಫೈಬರ್, ಸೋಡಿಯಂ, ವಿಟಮಿನ್ ಎ, ಫೋಲಿಕ್ ಆಮ್ಲ, ವಿಟಮಿನ್ ಬಿ 6, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ಇತರ ಕೆಲವು ಪೋಷಕಾಂಶಗಳು ಸಮೃದ್ಧವಾಗಿವೆ.

ಈ ಹಣ್ಣನ್ನು ಸೇವನೆ ಮಾಡಿದ್ರೆ ನಿಮ್ಮ ಚರ್ಮದ ಕಾಂತಿ ಎಂದಿಗೂ ಕಡಿಮೆಯಾಗುವುದಿಲ್ಲ
ಕರಬೂಜ ಹಣ್ಣು
ಪ್ರೀತಿ ಭಟ್​, ಗುಣವಂತೆ
| Edited By: |

Updated on: Oct 04, 2024 | 10:12 AM

Share

ಕರಬೂಜ ಹಣ್ಣಿನ ಬಗ್ಗೆ ನೀವು ಕೇಳಿರಬಹುದು. ಇದು ಆರೋಗ್ಯಕ್ಕೆ ಒಳ್ಳೆಯದು. ಅಲ್ಲದೆ ಇದು ಅನೇಕ ರೀತಿಯ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದರಲ್ಲಿ ನೀರಿನ ಪ್ರಮಾಣ ಹೇರಳವಾಗಿದ್ದು ದೇಹಕ್ಕೆ ತಂಪನ್ನು ನೀಡುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಈ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಅಷ್ಟೇ ಅಲ್ಲ ಕರಬೂಜ ಹಣ್ಣಿನಲ್ಲಿ ಪ್ರೋಟೀನ್, ಫೈಬರ್, ಸೋಡಿಯಂ, ವಿಟಮಿನ್ ಎ, ಫೋಲಿಕ್ ಆಮ್ಲ, ವಿಟಮಿನ್ ಬಿ 6, ಕ್ಯಾಲ್ಸಿಯಂ, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ಇತರ ಕೆಲವು ಪೋಷಕಾಂಶಗಳು ಸಮೃದ್ಧವಾಗಿವೆ.

  • ಜ್ವರದಿಂದ ಬಳಲುತ್ತಿರುವವರು ಕರಬೂಜ ಹಣ್ಣಿನ ರಸಕ್ಕೆ ಜೇನುತುಪ್ಪವನ್ನು ಬೆರೆಸಿ ಸೇವಿಸುವುದರಿಂದ ದೈಹಿಕ ಆಯಾಸ ಕಡಿಮೆಯಾಗುತ್ತದೆ ಜೊತೆಗೆ ಈ ಆಹಾರ ನಿಮಗೆ ಶಕ್ತಿಯನ್ನು ನೀಡುತ್ತದೆ.
  • ಮಲಬದ್ಧತೆಯ ಸಮಸ್ಯೆ ಇರುವವರು ಪ್ರತಿದಿನ ಕರಬೂಜ ಹಣ್ಣನ್ನು ಸೇವನೆ ಮಾಡಿದರೆ ಈ ಸಮಸ್ಯೆ ನಿವಾರಣೆಯಾಗುತ್ತದೆ. ಇದರಲ್ಲಿರುವ ಫೈಬರ್ ಅಂಶವು ಮಲಬದ್ಧತೆಯನ್ನು ತಡೆಯುತ್ತದೆ. ಅಲ್ಲದೆ ದೇಹದಿಂದ ತ್ಯಾಜ್ಯವನ್ನು ಸುಲಭವಾಗಿ ಹೊರಹಾಕಲು ಸಹಾಯ ಮಾಡುತ್ತದೆ.
  • ಮೂತ್ರವಿಸರ್ಜನೆ ಮಾಡುವಾಗ ಉರಿ, ತುರಿಕೆ ಕಂಡು ಬರುತ್ತಿರುವವರಿಗೆ ಈ ಹಣ್ಣು ಔಷಧಿಯಾಗಿ ಕಾರ್ಯನಿರ್ವಹಿಸುತ್ತದೆ.
  • ಕರಬೂಜ ಹಣ್ಣನ್ನು ಸೇವನೆ ಮಾಡುವುದರಿಂದ ಚರ್ಮದ ಕಾಂತಿ ಹೆಚ್ಚುತ್ತದೆ. ಇದು ಚರ್ಮದ ಆರೋಗ್ಯಕ್ಕೆ ತುಂಬಾ ಉಪಯುಕ್ತವಾಗಿದೆ.
  • ಈ ಹಣ್ಣಿನಲ್ಲಿ ಬೀಟಾ ಕ್ಯಾರೋಟಿನ್, ಫೋಲಿಕ್ ಆಮ್ಲ, ಪೊಟ್ಯಾಸಿಯಮ್ ಮತ್ತು ಎ ಮತ್ತು ಸಿ ಜೀವಸತ್ವಗಳು ಉತ್ಕರ್ಷಣ ನಿರೋಧಕಗಳಿವೆ.
  • ಕರಬೂಜವು ಕಣ್ಣಿನ ದೃಷ್ಟಿಯನ್ನು ಹೆಚ್ಚಿಸುತ್ತದೆ. ಜೊತೆಗೆ ಹಣ್ಣಿನ ರಸವನ್ನು ಕುಡಿಯುವುದರಿಂದ ಮೆದುಳಿಗೆ ಉತ್ತಮ ಆಮ್ಲಜನಕದ ಪೂರೈಕೆಗೆ ಸಹಾಯ ಮಾಡುತ್ತದೆ, ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಉತ್ತಮ ನಿದ್ರೆಗೆ ಸಹಾಯ ಮಾಡುತ್ತದೆ.
  • ಕರಬೂಜ ಹಣ್ಣಿನ ರಸವನ್ನು ನಿಯಮಿತವಾಗಿ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದು ಮೂತ್ರಪಿಂಡಗಳಲ್ಲಿನ ಕಲ್ಲುಗಳನ್ನು ಕರಗಿಸುತ್ತದೆ. ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
  • ಈ ಹಣ್ಣಿನಲ್ಲಿ ಫೋಲಿಕ್ ಆಮ್ಲವು ಸಮೃದ್ಧವಾಗಿದೆ, ಇದು ಗರ್ಭಿಣಿಯರಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ಮಗುವಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ.
  • ಕರಬೂಜದಲ್ಲಿ ಪೊಟ್ಯಾಸಿಯಮ್ ಅಧಿಕವಾಗಿದ್ದು, ಇದು ಹೃದಯಕ್ಕೆ ಉತ್ತಮ ಪೋಷಕಾಂಶಗಳನ್ನು ಒದಗಿಸುತ್ತದೆ. ಇದರಲ್ಲಿರುವ ಫೋಲೇಟ್ ಹೃದಯದ ಕಾಯಿಲೆಗಳಿಂದ ರಕ್ಷಿಸುತ್ತದೆ.
  • ಈ ಹಣ್ಣು ಕಡಿಮೆ ಕ್ಯಾಲೊರಿಗಳನ್ನು ಹೊಂದಿದ್ದು ಹೆಚ್ಚಿನ ಫೈಬರ್ ಅಂಶವಿರುವುದರಿಂದ ಹೆಚ್ಚುವರಿ ತೂಕವನ್ನು ಕಡಿಮೆ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​