AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pomegranate Leaves: ದಾಳಿಂಬೆ ಎಲೆಗಳು ಆರೋಗ್ಯಕ್ಕೆ ಎಷ್ಟು ಉಪಕಾರಿ ಗೊತ್ತಾ?

ದಾಳಿಂಬೆ ಹಣ್ಣು ಮಾತ್ರವಲ್ಲ ಇದರ ಎಲೆಗಳು ಸಹ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಇದು ನಿಮಗೆ ಆಶ್ಚರ್ಯ ಎನಿಸಬಹುದು ಆದರೆ ಇದು ಸತ್ಯ. ಆಯುರ್ವೇದದಲ್ಲಿಯೂ ದಾಳಿಂಬೆ ಎಲೆಗಳನ್ನು ಹಲವಾರು ರೀತಿಯ ರೋಗಗಳನ್ನು ಗುಣಪಡಿಸಲು ಬಳಸಲಾಗುತ್ತದೆ. ಈ ಹಣ್ಣಿನ ಎಲೆಗಳ ಕಷಾಯವನ್ನು ತಯಾರಿಸಿ ದಿನಕ್ಕೆ ಎರಡು ಬಾರಿ ಕುಡಿದರೆ, ಋತುಮಾನದಲ್ಲಿ ಪದೇ ಪದೇ ಬರುವ ಕೆಮ್ಮು ಶೀತದಿಂದ ಮುಕ್ತಿ ನೀಡುತ್ತದೆ. ಇದಲ್ಲದೆ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳು ಇದರಲ್ಲಿ ಇದ್ದು ಮನೆಯಲ್ಲಿಯೇ ಬೆಳೆಸಿಕೊಂಡು ಸಣ್ಣ ಪುಟ್ಟ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು.

Pomegranate Leaves: ದಾಳಿಂಬೆ ಎಲೆಗಳು ಆರೋಗ್ಯಕ್ಕೆ ಎಷ್ಟು ಉಪಕಾರಿ ಗೊತ್ತಾ?
ದಾಳಿಂಬೆ ಎಲೆ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Sep 07, 2024 | 5:03 PM

Share

ದಾಳಿಂಬೆ ಹಣ್ಣಿನ ಸೇವನೆ ಆರೋಗ್ಯಕ್ಕೆ ಒಳ್ಳೆಯದು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಕೇವಲ ಹಣ್ಣು ಮಾತ್ರವಲ್ಲ ಇದರ ಎಲೆಗಳು ಸಹ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಇದು ನಿಮಗೆ ಆಶ್ಚರ್ಯ ಎನಿಸಬಹುದು ಆದರೆ ಇದು ಸತ್ಯ. ಆಯುರ್ವೇದದಲ್ಲಿಯೂ ಈ ದಾಳಿಂಬೆ ಎಲೆಗಳನ್ನು ಹಲವಾರು ರೀತಿಯ ರೋಗಗಳನ್ನು ಗುಣಪಡಿಸಲು ಬಳಸಲಾಗುತ್ತದೆ. ಈ ಹಣ್ಣಿನ ಎಲೆಗಳ ಕಷಾಯವನ್ನು ತಯಾರಿಸಿ ದಿನಕ್ಕೆ ಎರಡು ಬಾರಿ ಕುಡಿದರೆ, ಋತುಮಾನದಲ್ಲಿ ಪದೇ ಪದೇ ಬರುವ ಕೆಮ್ಮು ಶೀತದಿಂದ ಮುಕ್ತಿ ನೀಡುತ್ತದೆ. ಇದಲ್ಲದೆ ಹಲವಾರು ರೀತಿಯ ಆರೋಗ್ಯ ಪ್ರಯೋಜನಗಳು ಇದರಲ್ಲಿ ಇದ್ದು ಮನೆಯಲ್ಲಿಯೇ ಬೆಳೆಸಿಕೊಂಡು ಸಣ್ಣ ಪುಟ್ಟ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು.

  • ಆಯುರ್ವೇದದಲ್ಲಿ ದಾಳಿಂಬೆ ಹಣ್ಣಿನ ಎಲೆಗಳನ್ನು ಕುಷ್ಠರೋಗ ಮತ್ತು ಚರ್ಮದ ಕಾಯಿಲೆಗಳನ್ನು ಗುಣಪಡಿಸಲು ಬಳಸಲಾಗುತ್ತದೆ.
  • ನಿದ್ರಾಹೀನತೆ ಸಮಸ್ಯೆಗೆ ಈ ಎಲೆಗಳು ಒಂದು ರೀತಿಯಲ್ಲಿ ಉತ್ತಮ ಪರಿಹಾರ ನೀಡುತ್ತವೆ. ಒಂದು ಪಾತ್ರೆಯಲ್ಲಿ ಮುಕ್ಕಾಲು ಭಾಗ ನೀರನ್ನು ತೆಗೆದುಕೊಳ್ಳಿ. ಈ ಎಲೆಗಳ ಪೇಸ್ಟ್ ತಯಾರಿಸಿ ಆ ನೀರಿಗೆ ಹಾಕಿ ಆ ನೀರು ಅರ್ಧದಷ್ಟು ಕಡಿಮೆಯಾಗುವ ವರೆಗೆ ನೀರನ್ನು ಚೆನ್ನಾಗಿ ಕುದಿಸಿ. ಬಳಿಕ ಇದನ್ನು ಸೋಸಿಕೊಂಡು ಪ್ರತಿದಿನ ರಾತ್ರಿ ಮಲಗುವ ಮೊದಲು ಈ ನೀರನ್ನು ಕುಡಿಯಿರಿ. ಇದು ನಿಮಗೆ ನಿದ್ರಾಹೀನತೆಯಿಂದ ಮುಕ್ತಿ ನೀಡುತ್ತದೆ. ರಾತ್ರಿ ಒಳ್ಳೆಯ ನಿದ್ರೆ ಮಾಡಲು ಸಹಾಯ ಮಾಡುತ್ತದೆ.
  • ನೀವು ಕಜ್ಜಿ ಮತ್ತು ಎಸ್ಜಿಮಾದಂತಹ ಚರ್ಮ ಸಂಬಂಧಿತ ಕಾಯಿಲೆಗಳಿಂದ ಬಳಲುತ್ತಿದ್ದರೆ, ದಾಳಿಂಬೆ ಎಲೆಗಳ ಪೇಸ್ಟ್ ಅನ್ನು ಹಚ್ಚುವುದರಿಂದ ಅದು ಗುಣವಾಗುತ್ತದೆ. ಇದಲ್ಲದೆ, ದೇಹದ ಮೇಲಿನ ಹುಣ್ಣುಗಳು ಮತ್ತು ಗಾಯಗಳಿಗೆ ಇದನ್ನು ಲೇಪಿಸುವುದರಿಂದ ಬೇಗನೆ ಕಡಿಮೆಯಾಗುತ್ತವೆ.
  • ಕಿವಿ ಮತ್ತು ನೋವಿನ ಸೋಂಕಿನಿಂದ ಬಳಲುತ್ತಿರುವವರು ದಾಳಿಂಬೆ ಎಲೆಗಳನ್ನು ಜಜ್ಜಿ ಅದರ ರಸ ತೆಗೆದು, ಅದಕ್ಕೆ ಎಳ್ಳೆಣ್ಣೆ ಅಥವಾ ಸಾಸಿವೆ ಎಣ್ಣೆಯನ್ನು ಬೆರೆಸಿ, ಈ ಮಿಶ್ರಣದ ಎರಡು ಹನಿಗಳನ್ನು ಎರಡೂ ಕಿವಿಗಳಲ್ಲಿ ಹಾಕಿ. ಈ ರೀತಿ ಮಾಡುವುದರಿಂದ ಕಿವಿ ನೋವು ಮತ್ತು ಸೋಂಕುಗಳು ಇದ್ದಲ್ಲಿ ಕಡಿಮೆಯಾಗುತ್ತವೆ.
  • ಯಾರಿಗಾದರೂ ಬಾಯಿಯ ದುರ್ವಾಸನೆ, ಒಸಡು ಸಮಸ್ಯೆ, ಬಾಯಿಯಲ್ಲಿ ಹುಣ್ಣುಗಳಿದ್ದರೆ, ದಾಳಿಂಬೆ ಎಲೆಗಳ ರಸವನ್ನು ನೀರಿನೊಂದಿಗೆ ಬೆರೆಸಿ ಆ ನೀರಿನಿಂದ ಬಾಯಿ ಮುಕ್ಕಳಿಸಿ. ಈ ರೀತಿ ಮಾಡುವುದರಿಂದ ಬಾಯಿಗೆ ಸಂಬಂಧ ಪಟ್ಟ ಸಮಸ್ಯೆಗಳಿಂದ ಮುಕ್ತಿ ಸಿಗುತ್ತದೆ.
  • ಅಲ್ಲದೆ ನಿಮ್ಮ ಮುಖದ ಮೇಲಿನ ಮೊಡವೆಗಳನ್ನು ಕಡಿಮೆ ಮಾಡಲು ದಾಳಿಂಬೆ ಎಲೆಗಳಿಂದ ಪೇಸ್ಟ್ ತಯಾರಿಸಿ ಅದನ್ನು ಮೊಡವೆಗಳ ಮೇಲೆ ಹಚ್ಚುವುದರಿಂದ ಮುಖ ಕಲೆ ರಹಿತವಾಗುತ್ತದೆ.
  • ಆಗಾಗ ಅಜೀರ್ಣ, ಮಲಬದ್ಧತೆ, ಗ್ಯಾಸ್, ಅತಿಸಾರದಂತಹ ಸಮಸ್ಯೆಗಳಿಂದ ಬಳಲುತ್ತಿದ್ದರೆ, ದಾಳಿಂಬೆ ಎಲೆಗಳ ರಸವನ್ನು ದಿನಕ್ಕೆ ಎರಡು ಟೀ ಸ್ಪೂನ್ ತೆಗೆದುಕೊಳ್ಳಬಹುದು ಅಥವಾ ಈ ಎಲೆಗಳನ್ನು ಜೀರಿಗೆ ಮತ್ತು ಮೆಣಸಿನ ಕಾಳಿನಲ್ಲಿ ಜಜ್ಜಿ ಅದನ್ನು ಮೊಸರಿನೊಂದಿಗೆ ಸೇರಿಸಿ ಕುಡಿಯಿರಿ.

ಸೂಚನೆ: ಈ ಎಲೆಗಳನ್ನು ಸೇವನೆ ಮಾಡುವ ಮೊದಲು ವೈದ್ಯರ ಸಲಹೆಯನ್ನು ಪಡೆದುಕೊಳ್ಳಿ.

ಆರೋಗ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ