AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೀರ್ಣಶಕ್ತಿ ಹೆಚ್ಚಿಸುವ ಮಾವಿನಕಾಯಿಯ ಆರೋಗ್ಯ ಗುಣಗಳ ಬಗ್ಗೆ ತಿಳಿದುಕೊಳ್ಳಿ: ಇಲ್ಲಿದೆ ಮಾಹಿತಿ

ಮಾವಿನ ಕಾಯಿಯಲ್ಲಿ ದೇಹದ ಜೀರ್ಣಶಕ್ತಿಯನ್ನು ಹೆಚ್ಚು ಮಾಡುವಂತಹ ನಾರಿನ ಅಂಶಗಳು, ಪ್ರೋಟೀನ್ ಅಂಶ ಸಿಗುತ್ತದೆ. ಇದು ಜೀರ್ಣಶಕ್ತಿಯನ್ನು ಉತ್ತಮಗೊಳಿಸುತ್ತದೆ.

ಜೀರ್ಣಶಕ್ತಿ ಹೆಚ್ಚಿಸುವ ಮಾವಿನಕಾಯಿಯ ಆರೋಗ್ಯ ಗುಣಗಳ ಬಗ್ಗೆ ತಿಳಿದುಕೊಳ್ಳಿ: ಇಲ್ಲಿದೆ ಮಾಹಿತಿ
ಮಾವಿನ ಕಾಯಿ
TV9 Web
| Edited By: |

Updated on: Mar 20, 2022 | 8:16 AM

Share

ಬೇಸಿಗೆ ಆರಂಭವಾಗುತ್ತಿದ್ದಂತೆ ಸಾಮಾನ್ಯವಾಗಿ ನೆನಪಾಗುವುದು ಮಾವಿನಕಾಯಿ (Raw Mango). ಹೆಸರು ಕೇಳಿದರೇ ಸಾಕು ಬಾಯಲ್ಲಿ ನೀರೂರುತ್ತದೆ. ಹಣ್ಣುಗಳ ರಾಜ ಮಾವು ಕೇವಲ ಹಣ್ಣಾದ ಮೇಲೆ ಸೇವಿಸುವುದು ಮಾತ್ರವಲ್ಲ ಮಾವಿನ ಹಣ್ಣಿಗಿಂತ ದುಪ್ಪಟ್ಟು ಉಪಯೋಗ ಮಾವಿನ ಕಾಯಿಯದ್ದಿದೆ. ಮಾವಿನಕಾಯಿ ಉಪ್ಪಿನಕಾಯಿ, ಚಟ್ನಿ, ಗೊಜ್ಜು ಹೀಗೆ ಹತ್ತಾರು ಬಗೆಯ ಪದಾರ್ಥಗಳನ್ನು ಮಾಡಿ ಸವಿಯಬಹುದು. ಇನ್ನೇನು ಯುಗಾದಿ ಬಂತು. ಚೈತ್ರ ಮಾಸದ ಬಳಿಕ ಎಲ್ಲೆಲ್ಲೂ ಮಾವಿನ ಕಾಐಇ, ಹಣ್ಣುಗಳದ್ದೇ ಅಬ್ಬರವಾಗಿರುತ್ತದೆ.

ಮಾವಿನ ಕಾಯಿ ಸೇವಿಸುವುದರಿಂದ ಬೊಜ್ಜು, ಉರಿಯೂತ, ಕ್ಯಾನ್ಸರ್ ವಿರೋಧಿ ಗುಣ, ಹಾರ್ಮೋನ್ ವ್ಯವಸ್ಥೆ ಮತ್ತು ಕಾಮೋತ್ತೇಜಕ ಆರೋಗ್ಯ ಪ್ರಯೋಜನಗಳನ್ನು ಹೆಚ್ಚಿಸುತ್ತದೆ ಎನ್ನುತ್ತಾರೆ. ಅದರಲ್ಲಿಯೂ ಬೇಸಿಗೆಯಲ್ಲಿ ಮಾವಿಕಾಯಿ ಸೇವಿಸುವುದರಿಂದ ಹಲವು ಆರೋಗ್ಯ ಪ್ರಯೋಜನಗಳಿವೆ.  ಸರಿಯಾದ ಪ್ರಮಾಣದಲ್ಲಿ, ಸರಿಯಾದ ರೀತಿಯಲ್ಲಿ ಮಾವನ್ನು ಸೇವಿಸದರೆ ಆರೋಗ್ಯವು ಹೆಚ್ಚುತ್ತದೆ ಎನ್ನುತ್ತದೆ ಬಾರತೀಯ ಪುರಾತನ ಆರೋಗ್ಯ ಪದ್ಧತಿ ಆಯುರ್ವೇದ. ಹಾಗಾದರೆ ಮಾವಿನ ಕಾಯಿ ಸೇವನೆಯಿಂದ ದೇಹಕ್ಕೆ ಯಾವೆಲ್ಲಾ ಪ್ರಯೋಜನಗಳಿವೆ ಎನ್ನುವುದನ್ನು ನೀವು ತಿಳಿದುಕೊಳ್ಳಲೇಬೇಕು ಇಲ್ಲಿದೆ ನೋಡಿ ಮಾಹಿತಿ.

ದೇಹದ ನಿರ್ಜಲೀಕರಣವನ್ನು ತಡೆಯುತ್ತದೆ: ಬೇಸಿಗೆಯಲ್ಲಿ ಸೂರ್ಯನ ಬಿಸಿ ಶಾಖಕಕ್ಕೆ ದೇಹ ನಿರ್ಜಲೀಕರಣಗೊಳ್ಳುತ್ತದೆ. ಇದಕ್ಕಾಗಿ ಮಾವಿನ ಕಾಯಿಯನ್ನು ಸೇವಿಸಿ.  ಹಸಿ ಮಾವು ದೇಹದಿಂದ ಕಬ್ಬಿಣ ಮತ್ತು ಸೋಡಿಯಂ ಕ್ಲೋರೈಡ್‌ನ ಅತಿಯಾದ ನಷ್ಟವನ್ನು ತಡೆಯುವುದರಿಂದ ನಿರ್ಜಲೀಕರಣವನ್ನು ತಡೆಯುತ್ತದೆ.

ಜೀರ್ಣಶಕ್ತಿಯನ್ನು ಉತ್ತಮಗೊಳಿಸುತ್ತದೆ: ಜೀರ್ಣಶಕ್ತಿ ಉತ್ತಮವಾಗಿದ್ದರೆ ದೇಹವೂ ಆರೋಗ್ಯವಾಗಿರುತ್ತದೆ. ಬೇಸಿಗೆಯಲ್ಲಿ ಮದುವೆ, ಮುಂಜಿಯಂತಹ ಕಾರ್ಯಕ್ರಗಳು ಹೆಚ್ಚು. ಸಮಾರಂಭಗಳಲ್ಲಿ ಊಟ ಮಾಡಿದಾಗ ಕೆಲವೊಮ್ಮೆ ಜೀರ್ಣವಾಗುವುದಿಲ್ಲ. ಅಂತಹ ಸಂದರ್ಭಗಳ್ಲಿ ಮಾವಿನಕಾಯಿಯನ್ನು ತಿನ್ನಿರಿ. ಮಾವಿನ ಕಾಯಿಯಲ್ಲಿ ದೇಹದ ಜೀರ್ಣಶಕ್ತಿಯನ್ನು ಹೆಚ್ಚು ಮಾಡುವಂತಹ ನಾರಿನ ಅಂಶಗಳು, ಪ್ರೋಟೀನ್ ಅಂಶ ಸಿಗುತ್ತದೆ. ಇದರಿಂದ ನಮ್ಮ ಜೀರ್ಣಾಂಗ ವ್ಯವಸ್ಥೆ ಅತ್ಯುತ್ತಮವಾಗಿ  ಕೆಲಸ ಮಾಡುತ್ತದೆ.

ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ: ದೇಹದ ಸದೃಢವಾಗಿರಬೇಕು, ಆರೋಗ್ಯವಾಗಿರಬೇಕು ಎಂದರೆ ರೋಗ ನಿರೋಧಕ ಶಕ್ತಿ ಅಗತ್ಯವಾಘಿರುತ್ತದೆ. ಮಾವಿನ ಕಾಯಿ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಮಾವಿನ ಕಾಯಿಯಲ್ಲಿ ವಿಟಮಿನ್ ಸಿ ಹೆಚ್ಚಾಗಿದ್ದು, ಇದು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ವೃದ್ಧಿಸುತ್ತೆ. ವಿಟಮಿನ್ ಎ, ಕ್ಯಾಲ್ಸಿಯಂ ಹಾಗೂ ಮೆಗ್ನೇಷಿಯಂ ಕೂಡ ಅಧಿಕ ಪ್ರಮಾಣದಲ್ಲಿದೆ.

ದೇಹದ ತೂಕವನ್ನು ಕಡಿಮೆ ಮಾಡುತ್ತದೆ: ನಾರಿನ ಅಂಶ ಹೆಚ್ಚಾಗಿರುವ ಮಾವಿನಕಾಯಿ ಬಹಳಷ್ಟು ಸಮಯದವರೆಗೆ ನಮಗೆ ಹೊಟ್ಟೆ ಹಸಿವು ಆಗದಂತೆ ಕಾಪಾಡುತ್ತದೆ. , ಆಹಾರ ಸರಿಯಾಗಿ ಜೀರ್ಣ ಆಗುವಂತೆ ನೋಡಿಕೊಂಡು ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುತ್ತದೆ. ಅತಿಯಾಗಿ ತಿನ್ನುವ ಅಭ್ಯಾಸವನ್ನು ತಪ್ಪಿಸಿ ದೇಹದ ತೂಕವನ್ನು ಕಡಿಮೆ ಮಾಡುತ್ತದೆ.

ಇದನ್ನೂ ಓದಿ:

Summer Health Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಹರಸಾಹಸ ಬೇಡ: ಈ ಕ್ರಮಗಳನ್ನು ಪಾಲಿಸಿ

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ