ವೈದ್ಯರ ಸಲಹೆಯಿಲ್ಲದೆ ಬಿಪಿ ಟ್ಯಾಬ್ಲೆಟ್ ಸೇವಿಸುವುದು ಚರ್ಮದ ಕ್ಯಾನ್ಸರ್​​ಗೆ ಕಾರಣವಾಗಬಹುದು: ಸಂಶೋಧನೆ

ರಕ್ತದೊತ್ತಡದ ಔಷಧಗಳನ್ನು ಸೇವಿಸುತ್ತಿದ್ದರೆ ವೈದ್ಯರ ಸಲಹೆ ಮೇರೆಗೆ ಔಷಧವನ್ನು ಯಾವಾಗ ಮತ್ತು ಹೇಗೆ ತೆಗೆದುಕೊಳ್ಳಬೇಕು ಎಂಬುದರ ಕುರಿತು ವೈದ್ಯರೊಂದಿಗೆ ಮಾತನಾಡಿದ ನಂತರವೇ ಸೇವಿಸಿ ಎನ್ನುತ್ತಾರೆ ಹಿರಿಯ ವೈದ್ಯ ಜುಗಲ್ ಕಿಶೋರ್ .

ವೈದ್ಯರ ಸಲಹೆಯಿಲ್ಲದೆ ಬಿಪಿ ಟ್ಯಾಬ್ಲೆಟ್  ಸೇವಿಸುವುದು ಚರ್ಮದ ಕ್ಯಾನ್ಸರ್​​ಗೆ ಕಾರಣವಾಗಬಹುದು: ಸಂಶೋಧನೆ
Blood pressure

Updated on: Mar 24, 2024 | 8:19 PM

ವಯಸ್ಸಾದಂತೆ ಮತ್ತು ಅನಾರೋಗ್ಯಕರ ಜೀವನಶೈಲಿಯಿಂದ ರಕ್ತದೊತ್ತಡದ ಸಮಸ್ಯೆ ಉಂಟಾಗುತ್ತದೆ. ಇದನ್ನು ನಿಯಂತ್ರಿಸಲು, ಕೆಲವು ಔಷಧಗಳನ್ನು ತೆಗೆದುಕೊಳ್ಳಲಾಗುತ್ತದೆ, ಆದರೆ ವೈದ್ಯರ ಸಲಹೆಯಿಲ್ಲದೆ ಬಿಪಿ ಔಷಧಿಗಳನ್ನು ತೆಗೆದುಕೊಳ್ಳುವುದು ಚರ್ಮದ ಕ್ಯಾನ್ಸರ್​​ಗೆ ಕಾರಣವಾಗಬಹುದು ಎಂದು ಸಂಶೋಧನೆಯೊಂದರಿಂದ ತಿಳಿದುಬಂದಿದೆ.

ಸಂಶೋಧನೆ ಏನು ಹೇಳುತ್ತದೆ?

ಇತ್ತೀಚಿನ ಸಂಶೋಧನೆಯು ನಿಮ್ಮ ರಕ್ತದೊತ್ತಡದ ಔಷಧಿಗಳು ಚರ್ಮದ ಕ್ಯಾನ್ಸರ್​ನೊಂದಿಗೆ ಸಂಬಂಧಿಸಿದೆ ಎಂದು ಸಂಶೋಧನೆ ಹೇಳುತ್ತದೆ. ಏಕೆಂದರೆ ಹೈಡ್ರೋಕ್ಲೋರೋಥಿಯಾಜೈಡ್ ಹೊಂದಿರುವ ರಕ್ತದೊತ್ತಡದ ಔಷಧಿಗಳನ್ನು ತೆಗೆದುಕೊಳ್ಳುವುದರಿಂದ ಚರ್ಮದ ಕ್ಯಾನ್ಸರ್ ಅಪಾಯ ಹೆಚ್ಚು. ಹೈಡ್ರೋಕ್ಲೋರೋಥಿಯಾಜೈಡ್ ಚರ್ಮವನ್ನು ಸೂರ್ಯನ ಕಿರಣಗಳಿಗೆ ಹೆಚ್ಚು ಸೂಕ್ಷ್ಮವಾಗಿಸುವುದರಿಂದ ಇದು ಸಂಭವಿಸುತ್ತದೆ ಎಂದು ಸಂಶೋಧಕರು ಹೇಳುತ್ತಾರೆ, ಇದು ಸಾಮಾನ್ಯ ವ್ಯಕ್ತಿಗೆ ಹೋಲಿಸಿದರೆ ಮಾತ್ರೆ ತೆಗೆದುಕೊಳ್ಳುವವರಿಗೆ ಅಪಾಯ ಹೆಚ್ಚು ಎಂದು ತಿಳಿದುಬಂದಿದೆ.

ಔಷಧಿಗಳನ್ನು ಯಾವಾಗ ಮತ್ತು ಹೇಗೆ ತೆಗೆದುಕೊಳ್ಳುವುದು?

ರಕ್ತದೊತ್ತಡದ ಔಷಧಗಳನ್ನು ಸೇವಿಸುತ್ತಿದ್ದರೆ ವೈದ್ಯರ ಸಲಹೆ ಮೇರೆಗೆ ಔಷಧವನ್ನು ಯಾವಾಗ ಮತ್ತು ಹೇಗೆ ತೆಗೆದುಕೊಳ್ಳಬೇಕು ಎಂಬುದರ ಕುರಿತು ವೈದ್ಯರೊಂದಿಗೆ ಮಾತನಾಡಿದ ನಂತರವೇ ಸೇವಿಸಿ ಎನ್ನುತ್ತಾರೆ ಹಿರಿಯ ವೈದ್ಯ ಜುಗಲ್ ಕಿಶೋರ್ . ಅಲ್ಲದೆ, ವೈದ್ಯರ ಸಲಹೆಯಿಲ್ಲದೆ ಸ್ವಂತವಾಗಿ ಯಾವುದೇ ಔಷಧಿಯನ್ನು ತೆಗೆದುಕೊಳ್ಳುವುದನ್ನು ಪ್ರಾರಂಭಿಸಬೇಡಿ ಮತ್ತು ತಕ್ಷಣವೇ ಯಾವುದೇ ಔಷಧಿಯನ್ನು ತೆಗೆದುಕೊಳ್ಳುವುದನ್ನು ನಿಲ್ಲಿಸಬೇಡಿ ಏಕೆಂದರೆ ಹಾಗೆ ಮಾಡುವುದರಿಂದ ನಿಮ್ಮ ರಕ್ತದೊತ್ತಡವನ್ನು ತ್ವರಿತವಾಗಿ ಹೆಚ್ಚಿಸಬಹುದು, ಇದು ಹೃದಯಾಘಾತ ಮತ್ತು ಮೆದುಳಿನ ಸ್ಟ್ರೋಕ್ ಅಪಾಯವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಉಸಿರಾಟದ ವ್ಯಾಯಾಮದಿಂದಾಗುವ ಆರೋಗ್ಯ ಪ್ರಯೋಜನಗಳಿವು

ಚರ್ಮದ ಕ್ಯಾನ್ಸರ್‌ನ ಅಪಾಯದ ಕುರಿತು ನಿಮ್ಮ ವೈದ್ಯರೊಂದಿಗೆ ನೀವು ಮಾತನಾಡಬಹುದು ಇದರಿಂದ ಅವರು ನಿಮ್ಮ ಅಪಾಯವನ್ನು ನಿರ್ಣಯಿಸಬಹುದು ಮತ್ತು ನಿಮಗೆ ಔಷಧಿಯನ್ನು ಶಿಫಾರಸು ಮಾಡಬಹುದು ಏಕೆಂದರೆ ಹೈಡ್ರೋಕ್ಲೋರೋಥಿಯಾಜೈಡ್ ಅನ್ನು ಹೊಂದಿರದ ಹಲವಾರು ರಕ್ತದೊತ್ತಡ ಔಷಧಿಗಳಿವೆ. ನೀವು ಆ ಔಷಧಿಯನ್ನು ತೆಗೆದುಕೊಳ್ಳಬಹುದು.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
Follow Us