Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರ್ಕೌಟ್ ಮಾಡಲು ಸಮಯ ಸಿಗುತ್ತಿಲ್ಲವೇ? ಚಿಂತೆ ಬಿಡಿ ಆರೋಗ್ಯವಾಗಿರಲು ಈ ವಿಧಾನ ಅನುಸರಿಸಿ

ಬಿಡುವಿಲ್ಲದ ಕೆಲಸದಿಂದಾಗಿ ಅನೇಕರಿಗೆ ವರ್ಕೌಟ್‌ ಮಾಡಲು ಸಮಯ ಸಿಗುತ್ತಿಲ್ಲ. ಹೀಗಾಗಿ ಇರುವ ಸಮಯದಲ್ಲೇ ಹೇಗೆ ನಮ್ಮ ದೇಹವನ್ನು ಸದೃಢವಾಗಿಸಿಟ್ಟುಕೊಳ್ಳುವುದು ಎಂಬುವುದಕ್ಕೆ ಉತ್ತರ ಇಲ್ಲಿದೆ ನೋಡಿ.

ವರ್ಕೌಟ್ ಮಾಡಲು ಸಮಯ ಸಿಗುತ್ತಿಲ್ಲವೇ? ಚಿಂತೆ ಬಿಡಿ ಆರೋಗ್ಯವಾಗಿರಲು ಈ ವಿಧಾನ ಅನುಸರಿಸಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: preethi shettigar

Updated on: Jan 10, 2022 | 7:10 AM

ಸಂತೋಷದ ಮತ್ತು ಸ್ಥಿರವಾದ ಜೀವನಕ್ಕಾಗಿ ನಾವು ಒಂದಿಲ್ಲ ಒಂದು ರೀತಿಯಲ್ಲಿ ಪ್ರಯತ್ನಿಸಬೇಕು. ಆದರೆ ಇತ್ತೀಚೆಗೆ ಹೆಚ್ಚು ಸಮಯ ಕೆಲಸದಲ್ಲಿ ನಿರತರಾಗಿರುವುದರಿಂದ ಕೆಟ್ಟ ಜೀವನಶೈಲಿಯನ್ನು ನಾವು ಅನುಸರಿಸುತ್ತೇವೆ. ಇದರಿಂದ ಜನರು ಅನೇಕ ಆರೋಗ್ಯ ಸಂಬಂಧಿತ ಕಾಯಿಲೆಗಳನ್ನು ಅನುಭವಿಸಬೇಕಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಮಧುಮೇಹ, ಥೈರಾಯ್ಡ್, ಬಿಪಿ, ಕೊಲೆಸ್ಟ್ರಾಲ್, ಹೃದಯ ಸಮಸ್ಯೆ, ಮೊಣಕಾಲು ನೋವು ಹೀಗೆ ಎಲ್ಲಾ ಸಮಸ್ಯೆಗಳು ಚಿಕ್ಕ ವಯಸ್ಸಿನಲ್ಲೇ ಬರಲಾರಂಭಿಸಿವೆ. ಇದರ ಹೊರತಾಗಿ, ನಮ್ಮ ಒಟ್ಟಾರೆ ಆರೋಗ್ಯವು (Health) ತಪ್ಪು ಆಹಾರ ಪದ್ಧತಿಗಳಿಂದ ಪ್ರಭಾವಿತವಾಗಿರುತ್ತದೆ. ಆದಾಗ್ಯೂ, ಆರೋಗ್ಯಕರವಾಗಿರಲು ದೇಹವನ್ನು ಸಕ್ರಿಯವಾಗಿರಿಸಿಕೊಳ್ಳುವುದು ಬಹಳ ಮುಖ್ಯ.

ಸಕ್ರಿಯವಾಗಿರಲು ವರ್ಕೌಟ್‌ಗಳನ್ನು ಮಾಡುವುದು ಉತ್ತಮ ಎಂದು ಪರಿಗಣಿಸಲಾಗುತ್ತದೆ. ಇದಕ್ಕಾಗಿ ಜಿಮ್‌ನಲ್ಲಿ ವ್ಯಾಯಾಮ ಮಾಡಲು ಅನೇಕರು ಮುಂದಾಗುತ್ತಾರೆ. ಆದರೆ ಕೆಲವೊಮ್ಮೆ ಸರಿಯಾದ ದಿನಚರಿಯನ್ನು ಅನುಸರಿಸುವುದು ಅವಶ್ಯಕ. ಆದರೆ ಬಿಡುವಿಲ್ಲದ ಕೆಲಸದಿಂದಾಗಿ ಅನೇಕರಿಗೆ ವರ್ಕೌಟ್‌ ಮಾಡಲು ಸಮಯ ಸಿಗುತ್ತಿಲ್ಲ. ಹೀಗಾಗಿ ಇರುವ ಸಮಯದಲ್ಲೇ ಹೇಗೆ ನಮ್ಮ ದೇಹವನ್ನು ಸದೃಢವಾಗಿಸಿಟ್ಟುಕೊಳ್ಳುವುದು ಎಂಬುವುದಕ್ಕೆ ಉತ್ತರ ಇಲ್ಲಿದೆ ನೋಡಿ.

ಒಂದೇ ಸ್ಥಳದಲ್ಲಿ ಕುಳಿತುಕೊಳ್ಳಬೇಡಿ ನೀವು ಮನೆಯಲ್ಲಿ ಆಫೀಸ್ ಕೆಲಸ ಮಾಡುತ್ತಿರುವುದಾದರೆ ಅಥವಾ ಬೇರೆ ಯಾವುದಾದರೂ ಕೆಲಸದಲ್ಲಿ ನಿರತರಾಗಿದ್ದರೆ ಮಧ್ಯೆ ಮಧ್ಯೆ ಎದ್ದು ಬಿಡುವು ಮಾಡಿಕೊಳ್ಳಿ. ನಡುವೆ ಒಂದು ನಾಲ್ಕು ಹೆಜ್ಜೆ ವಾಕ್​ ಮಾಡಿ. ಇದರಿಂದ ದೇಹವು ಸಕ್ರಿಯವಾಗಿರುತ್ತದೆ. ಕೆಲಸದ ಸಮಯದಲ್ಲಿ ನಡುವೆ ಸಣ್ಣ ಪುಟ್ಟ ಕೆಲಸಗಳನ್ನು ಮಾಡುತ್ತಾ ಇರಿ. ಇದು ನಿಮ್ಮ ದೇಹವನ್ನು ಸಕ್ರಿಯವಾಗಿರಿಸುತ್ತದೆ ಮತ್ತು ನೀವು ಸದಾ ಆರೋಗ್ಯವಾಗಿರುತ್ತೀರಿ. ಈ ಹಂತವು ನಮ್ಮ ದೇಹದಲ್ಲಿ ಉತ್ಪತ್ತಿಯಾಗುವ ಹೆಚ್ಚುವರಿ ಕ್ಯಾಲೊರಿಗಳನ್ನು ಸುಡುತ್ತದೆ ಮತ್ತು ಫಿಟ್ ಆಗಿರುವಂತೆ ಮಾಡುತ್ತದೆ.

ವಾಕ್​ ಮಾಡಿ ಜಿಮ್‌ಗೆ ಹೋಗಿ ವ್ಯಾಯಾಮ ಮಾಡಲು ಸಾಧ್ಯವಾಗದಿದ್ದರೆ ಇಂದಿನಿಂದಲೇ ನಡೆಯುವುದನ್ನು ರೂಢಿಸಿಕೊಳ್ಳಿ. ತಜ್ಞರ ಪ್ರಕಾರ, ಇದನ್ನು ಮಾಡುವುದರಿಂದ ಸುಮಾರು ಅರ್ಧ ಗಂಟೆಯಲ್ಲಿ 200 ಕ್ಯಾಲೊರಿಗಳನ್ನು ಬರ್ನ್ ಮಾಡಬಹುದು. ನಿಮಗೆ ಪ್ರತಿದಿನ ಜಾಗಿಂಗ್ ಅಥವಾ ಜಿಮ್‌ಗೆ ಸಮಯ ಸಿಗದಿದ್ದರೆ, ಖಂಡಿತವಾಗಿಯೂ 5000 ರಿಂದ 10000 ಹೆಜ್ಜೆಗಳಷ್ಟು ನಡೆಯಿರಿ. ಹೀಗೆ ಮಾಡುವುದರಿಂದ ನಿಮ್ಮ ದೇಹವೂ ಆರೋಗ್ಯಕರವಾಗಿರುತ್ತದೆ ಮತ್ತು ರೋಗನಿರೋಧಕ ಶಕ್ತಿಯೂ ಹೆಚ್ಚಾಗುತ್ತದೆ.

ಸ್ವಚ್ಛಗೊಳಿಸುವ ಕಾರ್ಯ ಆರಂಭಿಸಿ ಬಿಡುವಿಲ್ಲದ ಕೆಲದಿಂದ ಸಮಯ ತೆಗೆದುಕೊಳ್ಳಿ ಮತ್ತು ನಿಮ್ಮ ಮನೆಯನ್ನು ಸ್ವಚ್ಛಗೊಳಿಸಲು ಪ್ರಾರಂಭಿಸಿ. ಶುಚಿಗೊಳಿಸುವುದರಿಂದ ವ್ಯಾಯಾಮವೂ ಆಗುತ್ತದೆ. ಪೊರಕೆ ಮತ್ತು ಮಾಪ್ ಅನ್ನು ಅನ್ವಯಿಸುವುದರಿಂದ ಹೊಟ್ಟೆಗೆ ವ್ಯಾಯಾಮವಾಗುತ್ತದೆ ಮತ್ತು ಇದು ಕಡಿಮೆ ಸಮಯದಲ್ಲಿ ಹೊಟ್ಟೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇಂದಿನಿಂದ ನೀವೇ ಮನೆಯನ್ನು ಸ್ವಚ್ಛಗೊಳಿಸಲು ಪ್ರಾರಂಭಿಸಿ.

ಮಕ್ಕಳೊಂದಿಗೆ ಆಟವಾಡಿ ನಿಮ್ಮ ಮನೆಯಲ್ಲಿ ಚಿಕ್ಕ ಮಕ್ಕಳಿದ್ದರೆ, ಖಂಡಿತವಾಗಿಯೂ ಅವರೊಂದಿಗೆ ಆಟವಾಡಿ. ಈ ದೈಹಿಕ ಚಟುವಟಿಕೆಯಿಂದ ನೀವು ಸಕ್ರಿಯವಾಗಿರಲು ಸಾಧ್ಯವಾಗುತ್ತದೆ ಮತ್ತು ಮಕ್ಕಳು ಸಹ ಸಂತೋಷವಾಗಿರುತ್ತಾರೆ. ಮನೆಯಲ್ಲಿ ಮಕ್ಕಳಿಲ್ಲದಿದ್ದರೆ ಹೊರಗಡೆ ಸುತ್ತಾಡಲು ಹೋಗಿ. ಅಷ್ಟೇ ಅಲ್ಲ ಸಾಕು ಪ್ರಾಣಿಗಳಿದ್ದರೆ ಅವುಗಳ ಜೊತೆ ಆಟವಾಡಿ. ಇದರಿಂದ ಸಾಕಷ್ಟು ವ್ಯಾಯಾಮವಾಗುತ್ತದೆ.

ಇದನ್ನೂ ಓದಿ:

ಹಾಲಿನ ಜತೆ ಬೇರೆ ಪದಾರ್ಥ ಬೆರೆಸಿ ಕುಡಿಯುತ್ತೀರಾ? ಆರೋಗ್ಯದ ಬಗ್ಗೆ ಇರಲಿ ಹೆಚ್ಚಿನ ಕಾಳಜಿ

Skin Care Tips: ಮುಖದ ಕಾಂತಿ ಹೆಚ್ಚಿಸಲು ಕಾಫಿ ಪುಡಿ ಜತೆಗೆ ಈ ಐದು ಪದಾರ್ಥಗಳನ್ನು ಸೇರಿಸಿ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್