AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health News: ಕೋಪ ಹೃದಯ ಸಂಬಂಧಿ ಕಾಯಿಲೆಗಳನ್ನು ಹೆಚ್ಚಿಸಬಹುದು; ಸಂಶೋಧನೆ

ಹೆಚ್ಚು ಕೋಪವು ನಮ್ಮ ರಕ್ತನಾಳಗಳನ್ನು ಆರೋಗ್ಯಕರವಾಗಿಡುವ ಎಂಡೋಥೀಲಿಯಲ್ ಕೋಶಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ಹೃದಯದ ಆರೋಗ್ಯವನ್ನು ದುರ್ಬಲಗೊಳಿಸುತ್ತದೆ ಎಂದು ಸಂಶೋಧನೆ ಬಹಿರಂಗಪಡಿಸಿದೆ.

Health News: ಕೋಪ ಹೃದಯ ಸಂಬಂಧಿ ಕಾಯಿಲೆಗಳನ್ನು ಹೆಚ್ಚಿಸಬಹುದು; ಸಂಶೋಧನೆ
ಅಕ್ಷತಾ ವರ್ಕಾಡಿ
|

Updated on: May 03, 2024 | 6:08 PM

Share

ಕೊಲಂಬಿಯಾ ವಿಶ್ವವಿದ್ಯಾಲಯದ ವೈದ್ಯಕೀಯ ಕೇಂದ್ರದ ಸಂಶೋಧಕರು ನಡೆಸಿದ ಹೊಸ ಅಧ್ಯಯನದ ಪ್ರಕಾರ, ಕೆಲವು ನಿಮಿಷಗಳ ಕೋಪವು ನಿಮ್ಮ ಹೃದಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ ಎಂದು ತಿಳಿದುಬಂದಿದೆ. ಪುನರಾವರ್ತಿತ ಕೋಪವು ನಮ್ಮ ರಕ್ತನಾಳಗಳನ್ನು ಆರೋಗ್ಯಕರವಾಗಿಡುವ ಎಂಡೋಥೀಲಿಯಲ್ ಕೋಶಗಳ ಮೇಲೆ ಪರಿಣಾಮ ಬೀರುತ್ತದೆ ಮತ್ತು ಹೃದಯದ ಆರೋಗ್ಯವನ್ನು ದುರ್ಬಲಗೊಳಿಸುತ್ತದೆ ಎಂದು ಸಂಶೋಧನೆ ಬಹಿರಂಗಪಡಿಸಿದೆ.

ಜನರು ಪ್ರತಿದಿನವೂ ಕೋಪ, ಆತಂಕ ಮತ್ತು ಖಿನ್ನತೆಯಂತಹ ನಕಾರಾತ್ಮಕ ಭಾವನೆಗಳನ್ನು ಅನುಭವಿಸುವುದು ಸಹಜ ಎಂದು ಅಧ್ಯಯನದ ಲೇಖಕರು ಹೇಳಿದ್ದಾರೆ. ಈ ಭಾವನೆಗಳು ಹೃದಯ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸಬಹುದು ಎಂಬ ಅಂಶದ ಬಗ್ಗೆ ಕೆಲವು ಸಂಶೋಧನೆಗಳಿವೆ. ಕುತೂಹಲಕಾರಿಯಾಗಿ, ಈ ಭಾವನೆಗಳ ಬಗ್ಗೆ ಹೆಚ್ಚು ತಿಳಿದಿಲ್ಲ. ಕೆಲವು ಸಂದರ್ಭಗಳಲ್ಲಿ ಒಬ್ಬ ವ್ಯಕ್ತಿಯು ಕೋಪಗೊಂಡಾಗ, ಇದು ರಕ್ತನಾಳಗಳ ಮೇಲೆ ಪರಿಣಾಮ ಬೀರುತ್ತವೆ. ಆದ್ದರಿಂದ ಕೋಪವು ಹೃದಯದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆಯೇ ಎಂದು ನೋಡಲು ಅಧ್ಯಯನವನ್ನು ವಿನ್ಯಾಸಗೊಳಿಸಲಾಗಿದೆ ಎಂದು ಸಂಶೋಧಕರು ಹೇಳಿದ್ದಾರೆ.

ಇದನ್ನೂ ಓದಿ: ಕಿಡ್ನಿ ಸ್ಟೋನ್ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ಹಣ್ಣುಗಳನ್ನು ಸೇವಿಸಿ

“ಕೋಪ, ಆತಂಕ ಮತ್ತು ಖಿನ್ನತೆ ಸೇರಿದಂತೆ ನಕಾರಾತ್ಮಕ ಭಾವನೆಗಳನ್ನು ಅನುಭವಿಸುವುದು ಸಾಮಾನ್ಯವಾಗಿದೆ ಮತ್ತು ಹೃದಯರಕ್ತನಾಳದ ಕಾಯಿಲೆಯ ಘಟನೆಗಳ ಅಪಾಯದೊಂದಿಗೆ ಸಂಬಂಧಿಸಿದೆ” ಎಂದು ಅಧ್ಯಯನವು ಹೇಳುತ್ತದೆ.

ಅಧ್ಯಯನವು 280 ಆರೋಗ್ಯವಂತ ವಯಸ್ಕರನ್ನು ಒಳಗೊಂಡಿತ್ತು, ಅವರು ಕೋಪ-ಪ್ರಚೋದಕ ಘಟನೆ, ದುಃಖದ ಘಟನೆ ಅಥವಾ ಆತಂಕ-ಪ್ರಚೋದಿಸುವ ಘಟನೆಯನ್ನು ನೆನಪಿಸಿಕೊಳ್ಳಲು ಹೇಳಿ ಸುಮಾರು ಎಂಟು ನಿಮಿಷಗಳ ಕಾಲ ತಟಸ್ಥವಾಗಿರಲು ಹೇಳಲಾಯಿತು. ಈ ವೇಳೆ ಕೋಪ ಹೃದಯದ ಆರೋಗ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ ಎಂಬುದನ್ನು ಸಂಶೋಧಕರು ಕಂಡುಕೊಂಡಿದ್ದಾರೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?