Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಸಂಧಿವಾತದಿಂದ ಪಾರಾಗಲು ಈ 5 ಗಿಡಮೂಲಿಕೆಗಳನ್ನು ಬಳಸಿ

ಸಂಧಿವಾತವು ದೀರ್ಘಕಾಲದ ಕಾಯಿಲೆಯಾಗಿದ್ದು, ಇದು ಉರಿಯೂತ, ಕೀಲುಗಳಲ್ಲಿನ ಬಿಗಿತದಿಂದ ಉಂಟಾಗುತ್ತದೆ. ಸಂಧಿವಾತದ ನೋವನ್ನು ನಿವಾರಿಸಲು ಮತ್ತು ಈ ರೋಗವನ್ನು ನಿಯಂತ್ರಿಸಲು ಸಹಾಯ ಮಾಡುವ ಕೆಲವು ಗಿಡಮೂಲಿಕೆಗಳು ಇಲ್ಲಿವೆ.

Health Tips: ಸಂಧಿವಾತದಿಂದ ಪಾರಾಗಲು ಈ 5 ಗಿಡಮೂಲಿಕೆಗಳನ್ನು ಬಳಸಿ
ಶುಂಠಿImage Credit source: Getty Image
Follow us
ಸುಷ್ಮಾ ಚಕ್ರೆ
|

Updated on: Feb 07, 2023 | 12:02 PM

ಚಳಿಗಾಲದಲ್ಲಿ ಸಂಧಿವಾತದ (Arthritis Pain) ರೋಗಿಗಳಿಗೆ ಕೀಲುಗಳಲ್ಲಿ ಅಪಾರ ನೋವು ಉಂಟಾಗುತ್ತದೆ. ಭಾರತದಲ್ಲಿ ಲಕ್ಷಾಂತರ ಜನರನ್ನು ಬಾಧಿಸುವ ಸಂಧಿವಾತವು ದೀರ್ಘಕಾಲದ ಕಾಯಿಲೆಯಾಗಿದ್ದು, ಇದು ಉರಿಯೂತ, ಊತ ಅಥವಾ ಕೀಲುಗಳಲ್ಲಿನ ಬಿಗಿತದಿಂದ ಉಂಟಾಗುತ್ತದೆ. ಸಂಧಿವಾತದ ನೋವನ್ನು ನಿವಾರಿಸಲು ಮತ್ತು ಈ ರೋಗವನ್ನು ನಿಯಂತ್ರಿಸಲು ಸಹಾಯ ಮಾಡುವ ಕೆಲವು ಗಿಡಮೂಲಿಕೆಗಳು ಇಲ್ಲಿವೆ.

ಪೌಷ್ಟಿಕ ತಜ್ಞ ಲೊವ್ನೀತ್ ಬಾತ್ರಾ ಅವರು ಕೀಲು ನೋವನ್ನು ನಿವಾರಿಸುವ ಗಿಡಮೂಲಿಕೆಗಳ ಕುರಿತು ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. “ಸಂಧಿವಾತವು ಭಾರತದಲ್ಲಿ 180 ಮಿಲಿಯನ್‌ಗಿಂತಲೂ ಹೆಚ್ಚು ಜನರ ಮೇಲೆ ಪರಿಣಾಮ ಬೀರುವ ದೀರ್ಘಕಾಲದ ಸ್ಥಿತಿಯಾಗಿದೆ” ಎಂದು ಅವರು ಇನ್​ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Health Tips: ಚಳಿಗಾಲದಲ್ಲಿ ಕೀಲು ನೋವು ಕಾಡುತ್ತಿದೆಯೇ?; ಸಂಧಿವಾತವನ್ನು ನಿಯಂತ್ರಿಸಲು ನೈಸರ್ಗಿಕ ಪರಿಹಾರ ಇಲ್ಲಿದೆ

ಪೌಷ್ಟಿಕ ತಜ್ಞರ ಪ್ರಕಾರ, ಅಸ್ಥಿಸಂಧಿವಾತ (OA) ಮತ್ತು ರುಮಟಾಯ್ಡ್ ಸಂಧಿವಾತ (RA) ಸಂಧಿವಾತದ ಎರಡು ಪ್ರಮುಖ ರೂಪಗಳಾಗಿವೆ. ಇದು ತೀವ್ರವಾದ ಕೀಲು ನೋವನ್ನು ಉಂಟುಮಾಡುತ್ತದೆ. ಸಂಧಿವಾತವನ್ನು ಕಡಿಮೆ ಮಾಡುವ 5 ಗಿಡಮೂಲಿಕೆಗಳು ಇಲ್ಲಿವೆ.

View this post on Instagram

A post shared by Lovneet Batra (@lovneetb)

ಅಲೋವೆರಾ: ಅಲೋವೆರಾದಲ್ಲಿ ಸಂಧಿವಾತವನ್ನು ನಿವಾರಿಸಲು ಸಹಾಯ ಮಾಡುವ ಆಂಥ್ರಾಕ್ವಿನೋನ್‌ಗಳಿಂದ ಕೂಡಿರುವ ಜೆಲ್ ಇದೆ.

ಅರಿಶಿನ: ಇದರ ಮುಖ್ಯ ಘಟಕಾಂಶವಾದ ಕರ್ಕ್ಯುಮಿನ್, ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ.

ಥೈಮ್: ಇದು ಉರಿಯೂತದ ಮತ್ತು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳನ್ನು ಹೊಂದಿದೆ.

ಇದನ್ನೂ ಓದಿ: Aloe Vera Benefits: ಕೂದಲು ಹಾಗೂ ಚರ್ಮಕ್ಕೆ ಅಲೋವೆರಾದಿಂದಾಗುವ ಪ್ರಯೋಜನಗಳ ತಿಳಿಯಿರಿ

ಶುಂಠಿ: ಶುಂಠಿಯು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ಇದರಲ್ಲಿ ಲ್ಯುಕೋಟ್ರಿಯೀನ್‌ಗಳು ಎಂಬ ಉರಿಯೂತದ ಅಣುಗಳನ್ನು ನಿಗ್ರಹಿಸುವ ಸಾಮರ್ಥ್ಯ ಮತ್ತು ನೋವು ಮತ್ತು ಉರಿಯೂತವನ್ನು ಉಂಟುಮಾಡುವ ಪ್ರೊಸ್ಟಗ್ಲಾಂಡಿನ್‌ಗಳನ್ನು ಸಂಶ್ಲೇಷಿಸುವ ಸಾಮರ್ಥ್ಯವಿದೆ.

ಬೆಳ್ಳುಳ್ಳಿ: ಬೆಳ್ಳುಳ್ಳಿ ಡಯಾಲಿಲ್ ಡೈಸಲ್ಫೈಡ್ ಅನ್ನು ಹೊಂದಿರುತ್ತದೆ. ಇದು ಉರಿಯೂತದ ವಿರೋಧಿ ಸಂಯುಕ್ತವಾಗಿದ್ದು, ಉರಿಯೂತದ ಸೈಟೊಕಿನ್‌ಗಳ ಪರಿಣಾಮಗಳನ್ನು ಕಡಿಮೆ ಮಾಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಸುಲಭ ಕ್ಯಾಚ್ ಕೈಚೆಲ್ಲಿದರೂ ಔಟಾದ ಆರ್​ಸಿಬಿ ಬ್ಯಾಟರ್
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮತ್ತೆ ಮಾರ್ದನಿಸಿದ ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಮಹಾಕುಂಭಮೇಳ ಹೇಗೆ ಅಯೋಜಿಸಲಾಯಿತು ಅಂತ ವಿಚಾರಿಸಿದ್ದೀನಿ: ಶಿವಕುಮಾರ್
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಬಜೆಟ್‌ನಲ್ಲಿ ಮಾವು, ರೇಷ್ಮೆ ಬೆಳೆಗೆ ಆದ್ಯತೆ ನೀಡಿ; ಸಂಸದ ಮಂಜುನಾಥ್ ಸಲಹೆ
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಡಿಕೆ ಶಿವಕುಮಾರ್​ ಕೂಡ ಏಕನಾಥ ಶಿಂಧೆ ರೀತಿ ಆಗಬಹುದು: ಆರ್​ ಅಶೋಕ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಸದ್ಗುರು ವಾಸುದೇವ್ ಖುದ್ದಾಗಿ ಮನೆಗೆ ಬಂದು ಆಹ್ವಾನಿಸಿದ್ದರು: ಶಿವಕುಮಾರ್
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಮಹಿಳಾ ಪಿಡಿಒಗೆ ಚಪ್ಪಲಿಯಿಂದ ಹೊಡೆದ ಗ್ರಾಮ ಪಂಚಾಯಿತಿ ಸದಸ್ಯೆ
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ಲೇಡಿ ಕಾನ್​ಸ್ಟೇಬಲ್​ರನ್ನು ಸಾರ್ವಜನಿಕವಾಗಿ ನಿಂದಿಸಿದ ಹೆಡ್ ಕಾನ್​ಸ್ಟೇಬಲ್
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ವಿಧಾನಸೌಧ ಆವರಣದಲ್ಲಿ ಮೊದಲ ಬಾರಿಗೆ ಪುಸ್ತಕ ಮೇಳ ಆಯೋಜನೆ
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !
ಲಕ್ಷ್ಮಿ ಹೆಬ್ಬಾಳ್ಕರ್​ಗೆ ಭವತಿ ಭಿಕ್ಷಾಂ ದೇಹಿ ಎಂದ ವಿದ್ಯಾರ್ಥಿಗಳು !