AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಸಂಧಿವಾತದಿಂದ ಪಾರಾಗಲು ಈ 5 ಗಿಡಮೂಲಿಕೆಗಳನ್ನು ಬಳಸಿ

ಸಂಧಿವಾತವು ದೀರ್ಘಕಾಲದ ಕಾಯಿಲೆಯಾಗಿದ್ದು, ಇದು ಉರಿಯೂತ, ಕೀಲುಗಳಲ್ಲಿನ ಬಿಗಿತದಿಂದ ಉಂಟಾಗುತ್ತದೆ. ಸಂಧಿವಾತದ ನೋವನ್ನು ನಿವಾರಿಸಲು ಮತ್ತು ಈ ರೋಗವನ್ನು ನಿಯಂತ್ರಿಸಲು ಸಹಾಯ ಮಾಡುವ ಕೆಲವು ಗಿಡಮೂಲಿಕೆಗಳು ಇಲ್ಲಿವೆ.

Health Tips: ಸಂಧಿವಾತದಿಂದ ಪಾರಾಗಲು ಈ 5 ಗಿಡಮೂಲಿಕೆಗಳನ್ನು ಬಳಸಿ
ಶುಂಠಿImage Credit source: Getty Image
Follow us
ಸುಷ್ಮಾ ಚಕ್ರೆ
|

Updated on: Feb 07, 2023 | 12:02 PM

ಚಳಿಗಾಲದಲ್ಲಿ ಸಂಧಿವಾತದ (Arthritis Pain) ರೋಗಿಗಳಿಗೆ ಕೀಲುಗಳಲ್ಲಿ ಅಪಾರ ನೋವು ಉಂಟಾಗುತ್ತದೆ. ಭಾರತದಲ್ಲಿ ಲಕ್ಷಾಂತರ ಜನರನ್ನು ಬಾಧಿಸುವ ಸಂಧಿವಾತವು ದೀರ್ಘಕಾಲದ ಕಾಯಿಲೆಯಾಗಿದ್ದು, ಇದು ಉರಿಯೂತ, ಊತ ಅಥವಾ ಕೀಲುಗಳಲ್ಲಿನ ಬಿಗಿತದಿಂದ ಉಂಟಾಗುತ್ತದೆ. ಸಂಧಿವಾತದ ನೋವನ್ನು ನಿವಾರಿಸಲು ಮತ್ತು ಈ ರೋಗವನ್ನು ನಿಯಂತ್ರಿಸಲು ಸಹಾಯ ಮಾಡುವ ಕೆಲವು ಗಿಡಮೂಲಿಕೆಗಳು ಇಲ್ಲಿವೆ.

ಪೌಷ್ಟಿಕ ತಜ್ಞ ಲೊವ್ನೀತ್ ಬಾತ್ರಾ ಅವರು ಕೀಲು ನೋವನ್ನು ನಿವಾರಿಸುವ ಗಿಡಮೂಲಿಕೆಗಳ ಕುರಿತು ಇನ್​ಸ್ಟಾಗ್ರಾಂನಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. “ಸಂಧಿವಾತವು ಭಾರತದಲ್ಲಿ 180 ಮಿಲಿಯನ್‌ಗಿಂತಲೂ ಹೆಚ್ಚು ಜನರ ಮೇಲೆ ಪರಿಣಾಮ ಬೀರುವ ದೀರ್ಘಕಾಲದ ಸ್ಥಿತಿಯಾಗಿದೆ” ಎಂದು ಅವರು ಇನ್​ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: Health Tips: ಚಳಿಗಾಲದಲ್ಲಿ ಕೀಲು ನೋವು ಕಾಡುತ್ತಿದೆಯೇ?; ಸಂಧಿವಾತವನ್ನು ನಿಯಂತ್ರಿಸಲು ನೈಸರ್ಗಿಕ ಪರಿಹಾರ ಇಲ್ಲಿದೆ

ಪೌಷ್ಟಿಕ ತಜ್ಞರ ಪ್ರಕಾರ, ಅಸ್ಥಿಸಂಧಿವಾತ (OA) ಮತ್ತು ರುಮಟಾಯ್ಡ್ ಸಂಧಿವಾತ (RA) ಸಂಧಿವಾತದ ಎರಡು ಪ್ರಮುಖ ರೂಪಗಳಾಗಿವೆ. ಇದು ತೀವ್ರವಾದ ಕೀಲು ನೋವನ್ನು ಉಂಟುಮಾಡುತ್ತದೆ. ಸಂಧಿವಾತವನ್ನು ಕಡಿಮೆ ಮಾಡುವ 5 ಗಿಡಮೂಲಿಕೆಗಳು ಇಲ್ಲಿವೆ.

View this post on Instagram

A post shared by Lovneet Batra (@lovneetb)

ಅಲೋವೆರಾ: ಅಲೋವೆರಾದಲ್ಲಿ ಸಂಧಿವಾತವನ್ನು ನಿವಾರಿಸಲು ಸಹಾಯ ಮಾಡುವ ಆಂಥ್ರಾಕ್ವಿನೋನ್‌ಗಳಿಂದ ಕೂಡಿರುವ ಜೆಲ್ ಇದೆ.

ಅರಿಶಿನ: ಇದರ ಮುಖ್ಯ ಘಟಕಾಂಶವಾದ ಕರ್ಕ್ಯುಮಿನ್, ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ.

ಥೈಮ್: ಇದು ಉರಿಯೂತದ ಮತ್ತು ಆಂಟಿಮೈಕ್ರೊಬಿಯಲ್ ಗುಣಲಕ್ಷಣಗಳನ್ನು ಹೊಂದಿದೆ.

ಇದನ್ನೂ ಓದಿ: Aloe Vera Benefits: ಕೂದಲು ಹಾಗೂ ಚರ್ಮಕ್ಕೆ ಅಲೋವೆರಾದಿಂದಾಗುವ ಪ್ರಯೋಜನಗಳ ತಿಳಿಯಿರಿ

ಶುಂಠಿ: ಶುಂಠಿಯು ಉರಿಯೂತದ ಗುಣಲಕ್ಷಣಗಳನ್ನು ಹೊಂದಿದೆ. ಇದರಲ್ಲಿ ಲ್ಯುಕೋಟ್ರಿಯೀನ್‌ಗಳು ಎಂಬ ಉರಿಯೂತದ ಅಣುಗಳನ್ನು ನಿಗ್ರಹಿಸುವ ಸಾಮರ್ಥ್ಯ ಮತ್ತು ನೋವು ಮತ್ತು ಉರಿಯೂತವನ್ನು ಉಂಟುಮಾಡುವ ಪ್ರೊಸ್ಟಗ್ಲಾಂಡಿನ್‌ಗಳನ್ನು ಸಂಶ್ಲೇಷಿಸುವ ಸಾಮರ್ಥ್ಯವಿದೆ.

ಬೆಳ್ಳುಳ್ಳಿ: ಬೆಳ್ಳುಳ್ಳಿ ಡಯಾಲಿಲ್ ಡೈಸಲ್ಫೈಡ್ ಅನ್ನು ಹೊಂದಿರುತ್ತದೆ. ಇದು ಉರಿಯೂತದ ವಿರೋಧಿ ಸಂಯುಕ್ತವಾಗಿದ್ದು, ಉರಿಯೂತದ ಸೈಟೊಕಿನ್‌ಗಳ ಪರಿಣಾಮಗಳನ್ನು ಕಡಿಮೆ ಮಾಡುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ