AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ದಾಳಿಂಬೆ ಸೇವನೆ ಆರೋಗ್ಯಕ್ಕೆ ಪ್ರಯೋಜನಕಾರಿ ಮಾತ್ರವಲ್ಲ, ಹಾನಿ ಕೂಡ ಇದೆ, ಏನದು ಗೊತ್ತಾ?

ತುಂಬಾ ಪೌಷ್ಟಿಕವಾಗಿರುವ ಹಾಗೂ ರುಚಿಯಾಗಿರುವ ದಾಳಿಂಬೆ ಹಣ್ಣು ಸೇವನೆಯು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದ್ದರೂ ಕೆಲವೊಮ್ಮೆ ಅಡ್ಡಪರಿಣಾಮ ಬೀರುತ್ತದೆ.

Health Tips: ದಾಳಿಂಬೆ ಸೇವನೆ ಆರೋಗ್ಯಕ್ಕೆ ಪ್ರಯೋಜನಕಾರಿ ಮಾತ್ರವಲ್ಲ, ಹಾನಿ ಕೂಡ ಇದೆ, ಏನದು ಗೊತ್ತಾ?
ದಾಳಿಂಬೆಯ ಅಡ್ಡಪರಿಣಾಮಗಳು
TV9 Web
| Edited By: |

Updated on: Sep 18, 2022 | 6:14 PM

Share

ದಾಳಿಂಬೆ ಹಣ್ಣು ಬಾಯಿಗೆ ತುಂಬಾ ರುಚಿ ನೀಡುತ್ತದೆ. ಇದು ಪೌಷ್ಟಿಕ ಹಣ್ಣುಗಳಲ್ಲಿ ಒಂದಾಗಿದ್ದು, ವಿಟಮಿನ್ ಸಿ ಮತ್ತು ವಿಟಮಿನ್ ಬಿ ಹೇರಳವಾಗಿ ಕಂಡುಬರುತ್ತದೆ. ಮಾತ್ರವಲ್ಲದೆ ಮೆಗ್ನೀಸಿಯಮ್, ಪೊಟ್ಯಾಸಿಯಮ್, ರಂಜಕ, ಸೆಲೆನಿಯಮ್ ಮತ್ತು ಸತುವುಗಳಲ್ಲಿಯೂ ಸಮೃದ್ಧವಾಗಿದೆ. ಹೀಗಾಗಿ ಇದು ಆರೋಗ್ಯವಾಗಿ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಅನೇಕ ರೋಗಳಿಗೆ ವೈದ್ಯರು ದಾಳಿಂಬೆ ತಿನ್ನಲು ಶಿಫಾರಸು ಮಾಡುತ್ತಾರೆ. ಅದಾಗ್ಯೂ ದಾಳಿಂಬೆ ಕೆಲವೊಮ್ಮೆ ಆರೋಗ್ಯಕ್ಕೆ ಅಡ್ಡಪರಿಣಾಮವನ್ನು ಕೂಡ ಉಂಟುಮಾಡಬಹುದು. ಹಾಗಿದ್ದರೆ ದಾಳಿಂಬೆ ದೇಹಕ್ಕೆ ಯಾವ ರೀತಿ ಅಡ್ಡಪರಿಣಾಮ ಬೀರುತ್ತದೆ ಎಂಬುದನ್ನು ತಿಳಿದುಕೊಳ್ಳುವ ಮೊದಲು ಅದರ ಪ್ರಯೋಜನಗಳನ್ನು ತಿಳಿದುಕೊಳ್ಳೋಣ.

ದಾಳಿಂಬೆಯ ಆರೋಗ್ಯಕರ ಪ್ರಯೋಜನಕಾರಿಗಳು

  1. ದಾಳಿಂಬೆ ರಸವು ರಕ್ತದೊತ್ತಡ ರೋಗಿಗಳಿಗೆ ಅಮೃತವಾಗಿ ಕೆಲಸ ಮಾಡುತ್ತದೆ.
  2. ಮಧುಮೇಹದ ಚಿಕಿತ್ಸೆಯಲ್ಲಿ ದಾಳಿಂಬೆ ರಸವನ್ನು ಇನ್ಸುಲಿನ್ ಮಟ್ಟವನ್ನು ಕಡಿಮೆ ಮಾಡಲು ಬಳಕೆ ಮಾಡಲಾಗುತ್ತದೆ. ಇದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನೂ ಕಡಿಮೆ ಮಾಡುತ್ತದೆ.
  3. ದಾಳಿಂಬೆಯಲ್ಲಿ ಕಂಡುಬರುವ ಶಕ್ತಿಯುತವಾದ ಉತ್ಕರ್ಷಣ ನಿರೋಧಕವು ಇತರ ಹಣ್ಣಿನ ರಸಗಳಿಗಿಂತ ಹೆಚ್ಚಿರುತ್ತದೆ. ಇದರ ಸೇವನೆಯಿಂದ ಜೀವಕೋಶಗಳು ಬಲಗೊಳ್ಳುತ್ತವೆ.
  4. ದಾಳಿಂಬೆ ರಸವು ಕ್ಯಾನ್ಸರ್ ರೋಗಿಗಳಿಗೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ದಾಳಿಂಬೆ ರಸವು ಪ್ರಾಸ್ಟೇಟ್ ಕ್ಯಾನ್ಸರ್ ಕೋಶಗಳನ್ನು ತಡೆಯಲು ತುಂಬಾ ಸಹಾಯಕವಾಗಿದೆ.
  5. ದಾಳಿಂಬೆ ರಸವು ಕರುಳಿನ ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ.
  6. ಕೀಲು ನೋವು ಅಥವಾ ಯಾವುದೇ ರೀತಿಯ ಸಂಧಿವಾತ ಶಮನಕ್ಕೆ ದಾಳಿಂಬೆ ರಸವು ಪ್ರಯೋಜನಕಾರಿಯಾಗಿದೆ.
  7. ಹೃದ್ರೋಗ ಸಮಸ್ಯೆ ಇದ್ದವರಿಗೆ ದಾಳಿಂಬೆ ರಸ ಪ್ರಯೋಜನಕಾರಿಯಾಗಿದೆ.

    ದಾಳಿಂಬೆ ಸೇವನೆಯಿಂದ ಉಂಟಾಗಬಹುದಾದ ಅಡ್ಡಪರಿಣಾಮಗಳು

  • ಯಾರಾದರೂ ಅತಿಸಾರದ ಸಮಸ್ಯೆ ಹೊಂದಿದ್ದರೆ ದಾಳಿಂಬೆ ಮತ್ತು ದಾಳಿಂಬೆ ರಸವನ್ನು ಸೇವಿಸಬಾರದು.
  • ದಾಳಿಂಬೆ ರಸವನ್ನು ತ್ವಚೆಯ ಮೇಲೆ ಹಚ್ಚುವುದರಿಂದ ಅನೇಕರಿಗೆ ತುರಿಕೆ ಉಂಟಾಗಬಹುದು. ಅಲ್ಲದೆ ಊತ ಅಥವಾ ಉಸಿರಾಟದ ತೊಂದರೆ ಉಂಟಾಗಬಹುದು.
  • ಕಡಿಮೆ ರಕ್ತದೊತ್ತಡದ ಸಂದರ್ಭದಲ್ಲಿ ದಾಳಿಂಬೆ ರಸವನ್ನು ಮಿತವಾಗಿ ಸೇವಿಸಬೇಕು.
  • ದಾಳಿಂಬೆ ಸಿಪ್ಪೆ, ಬೇರು ಅಥವಾ ಕಾಂಡದ ಅತಿಯಾದ ಬಳಕೆ ಅತ್ಯಂತ ಅಪಾಯಕಾರಿ.

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ