AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ದಾಳಿಂಬೆ ಸೇವನೆ ಆರೋಗ್ಯಕ್ಕೆ ಪ್ರಯೋಜನಕಾರಿ ಮಾತ್ರವಲ್ಲ, ಹಾನಿ ಕೂಡ ಇದೆ, ಏನದು ಗೊತ್ತಾ?

ತುಂಬಾ ಪೌಷ್ಟಿಕವಾಗಿರುವ ಹಾಗೂ ರುಚಿಯಾಗಿರುವ ದಾಳಿಂಬೆ ಹಣ್ಣು ಸೇವನೆಯು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದ್ದರೂ ಕೆಲವೊಮ್ಮೆ ಅಡ್ಡಪರಿಣಾಮ ಬೀರುತ್ತದೆ.

Health Tips: ದಾಳಿಂಬೆ ಸೇವನೆ ಆರೋಗ್ಯಕ್ಕೆ ಪ್ರಯೋಜನಕಾರಿ ಮಾತ್ರವಲ್ಲ, ಹಾನಿ ಕೂಡ ಇದೆ, ಏನದು ಗೊತ್ತಾ?
ದಾಳಿಂಬೆಯ ಅಡ್ಡಪರಿಣಾಮಗಳು
TV9 Web
| Edited By: |

Updated on: Sep 18, 2022 | 6:14 PM

Share

ದಾಳಿಂಬೆ ಹಣ್ಣು ಬಾಯಿಗೆ ತುಂಬಾ ರುಚಿ ನೀಡುತ್ತದೆ. ಇದು ಪೌಷ್ಟಿಕ ಹಣ್ಣುಗಳಲ್ಲಿ ಒಂದಾಗಿದ್ದು, ವಿಟಮಿನ್ ಸಿ ಮತ್ತು ವಿಟಮಿನ್ ಬಿ ಹೇರಳವಾಗಿ ಕಂಡುಬರುತ್ತದೆ. ಮಾತ್ರವಲ್ಲದೆ ಮೆಗ್ನೀಸಿಯಮ್, ಪೊಟ್ಯಾಸಿಯಮ್, ರಂಜಕ, ಸೆಲೆನಿಯಮ್ ಮತ್ತು ಸತುವುಗಳಲ್ಲಿಯೂ ಸಮೃದ್ಧವಾಗಿದೆ. ಹೀಗಾಗಿ ಇದು ಆರೋಗ್ಯವಾಗಿ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಅನೇಕ ರೋಗಳಿಗೆ ವೈದ್ಯರು ದಾಳಿಂಬೆ ತಿನ್ನಲು ಶಿಫಾರಸು ಮಾಡುತ್ತಾರೆ. ಅದಾಗ್ಯೂ ದಾಳಿಂಬೆ ಕೆಲವೊಮ್ಮೆ ಆರೋಗ್ಯಕ್ಕೆ ಅಡ್ಡಪರಿಣಾಮವನ್ನು ಕೂಡ ಉಂಟುಮಾಡಬಹುದು. ಹಾಗಿದ್ದರೆ ದಾಳಿಂಬೆ ದೇಹಕ್ಕೆ ಯಾವ ರೀತಿ ಅಡ್ಡಪರಿಣಾಮ ಬೀರುತ್ತದೆ ಎಂಬುದನ್ನು ತಿಳಿದುಕೊಳ್ಳುವ ಮೊದಲು ಅದರ ಪ್ರಯೋಜನಗಳನ್ನು ತಿಳಿದುಕೊಳ್ಳೋಣ.

ದಾಳಿಂಬೆಯ ಆರೋಗ್ಯಕರ ಪ್ರಯೋಜನಕಾರಿಗಳು

  1. ದಾಳಿಂಬೆ ರಸವು ರಕ್ತದೊತ್ತಡ ರೋಗಿಗಳಿಗೆ ಅಮೃತವಾಗಿ ಕೆಲಸ ಮಾಡುತ್ತದೆ.
  2. ಮಧುಮೇಹದ ಚಿಕಿತ್ಸೆಯಲ್ಲಿ ದಾಳಿಂಬೆ ರಸವನ್ನು ಇನ್ಸುಲಿನ್ ಮಟ್ಟವನ್ನು ಕಡಿಮೆ ಮಾಡಲು ಬಳಕೆ ಮಾಡಲಾಗುತ್ತದೆ. ಇದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನೂ ಕಡಿಮೆ ಮಾಡುತ್ತದೆ.
  3. ದಾಳಿಂಬೆಯಲ್ಲಿ ಕಂಡುಬರುವ ಶಕ್ತಿಯುತವಾದ ಉತ್ಕರ್ಷಣ ನಿರೋಧಕವು ಇತರ ಹಣ್ಣಿನ ರಸಗಳಿಗಿಂತ ಹೆಚ್ಚಿರುತ್ತದೆ. ಇದರ ಸೇವನೆಯಿಂದ ಜೀವಕೋಶಗಳು ಬಲಗೊಳ್ಳುತ್ತವೆ.
  4. ದಾಳಿಂಬೆ ರಸವು ಕ್ಯಾನ್ಸರ್ ರೋಗಿಗಳಿಗೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ದಾಳಿಂಬೆ ರಸವು ಪ್ರಾಸ್ಟೇಟ್ ಕ್ಯಾನ್ಸರ್ ಕೋಶಗಳನ್ನು ತಡೆಯಲು ತುಂಬಾ ಸಹಾಯಕವಾಗಿದೆ.
  5. ದಾಳಿಂಬೆ ರಸವು ಕರುಳಿನ ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ.
  6. ಕೀಲು ನೋವು ಅಥವಾ ಯಾವುದೇ ರೀತಿಯ ಸಂಧಿವಾತ ಶಮನಕ್ಕೆ ದಾಳಿಂಬೆ ರಸವು ಪ್ರಯೋಜನಕಾರಿಯಾಗಿದೆ.
  7. ಹೃದ್ರೋಗ ಸಮಸ್ಯೆ ಇದ್ದವರಿಗೆ ದಾಳಿಂಬೆ ರಸ ಪ್ರಯೋಜನಕಾರಿಯಾಗಿದೆ.

    ದಾಳಿಂಬೆ ಸೇವನೆಯಿಂದ ಉಂಟಾಗಬಹುದಾದ ಅಡ್ಡಪರಿಣಾಮಗಳು

  • ಯಾರಾದರೂ ಅತಿಸಾರದ ಸಮಸ್ಯೆ ಹೊಂದಿದ್ದರೆ ದಾಳಿಂಬೆ ಮತ್ತು ದಾಳಿಂಬೆ ರಸವನ್ನು ಸೇವಿಸಬಾರದು.
  • ದಾಳಿಂಬೆ ರಸವನ್ನು ತ್ವಚೆಯ ಮೇಲೆ ಹಚ್ಚುವುದರಿಂದ ಅನೇಕರಿಗೆ ತುರಿಕೆ ಉಂಟಾಗಬಹುದು. ಅಲ್ಲದೆ ಊತ ಅಥವಾ ಉಸಿರಾಟದ ತೊಂದರೆ ಉಂಟಾಗಬಹುದು.
  • ಕಡಿಮೆ ರಕ್ತದೊತ್ತಡದ ಸಂದರ್ಭದಲ್ಲಿ ದಾಳಿಂಬೆ ರಸವನ್ನು ಮಿತವಾಗಿ ಸೇವಿಸಬೇಕು.
  • ದಾಳಿಂಬೆ ಸಿಪ್ಪೆ, ಬೇರು ಅಥವಾ ಕಾಂಡದ ಅತಿಯಾದ ಬಳಕೆ ಅತ್ಯಂತ ಅಪಾಯಕಾರಿ.

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು