AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಲಯನ್ ಸಾಲ್ಟ್​ ಸ್ಟೋನ್ ಮಸಾಜ್​ನಿಂದ ಏನು ಪ್ರಯೋಜನ?

ಹಿಮಾಲಯನ್ ಉಪ್ಪು ಗುಲಾಬಿ ಬಣ್ಣವನ್ನು ಹೊಂದಿರುತ್ತದೆ. ನೈಸರ್ಗಿಕವಾಗಿ ಕಂಡುಬರುವ 84 ಖನಿಜಗಳು ಮತ್ತು ಅಂಶಗಳಿಂದ ಇದು ತುಂಬಿರುತ್ತದೆ. ಈ ಖನಿಜಗಳಲ್ಲಿ ಹೆಚ್ಚಿನವು ದೇಹಕ್ಕೆ ಆರೋಗ್ಯ ಒದಗಿಸುತ್ತವೆ. ಹಿಮಾಲಯ ಪರ್ವತಗಳ ತಪ್ಪಲಿನಿಂದ ಗಣಿಗಾರಿಕೆ ಮೂಲಕ ತೆಗೆಯಲಾದ ಈ ಶಕ್ತಿಶಾಲಿ ಉಪ್ಪನ್ನು ಭೂಮಿಯ ಮೇಲಿನ ಶುದ್ಧ ಉಪ್ಪು ಎಂದು ಹೇಳಲಾಗುತ್ತದೆ.

ಹಿಮಾಲಯನ್ ಸಾಲ್ಟ್​ ಸ್ಟೋನ್ ಮಸಾಜ್​ನಿಂದ ಏನು ಪ್ರಯೋಜನ?
ಹಿಮಾಲಯನ್ ಉಪ್ಪು ಕಲ್ಲಿನ ಮಸಾಜ್ Image Credit source: iStock
ಸುಷ್ಮಾ ಚಕ್ರೆ
|

Updated on: Nov 10, 2023 | 3:26 PM

Share

ಸ್ಪಾ, ಸಲೂನ್​ಗಳಲ್ಲಿ ಹಲವು ರೀತಿಯ ಮಸಾಜ್ ಥೆರಪಿಯಿದೆ. ಇದೀಗ ಹೆಚ್ಚು ಜನಪ್ರಿಯವಾಗುತ್ತಿರುವ ಮಸಾಜ್ ಸಾಲ್ಟ್​ ಸ್ಟೋನ್ ಮಸಾಜ್. ಒತ್ತಡವನ್ನು ನಿವಾರಿಸಲು ಈ ಹಿಮಾಲಯನ್ ಸ್ಟೋನ್ ಮಸಾಜ್ ಮಾಡಲಾಗುತ್ತದೆ. ಹಿಮಾಲಯನ್ ಉಪ್ಪಿನ ಕಲ್ಲುಗಳನ್ನು ಬಿಸಿ ಮಾಡಿ, ಅದರಿಂದ ದೇಹದ ಮೇಲೆ ಮಸಾಜ್ ಮಾಡಲಾಗುತ್ತದೆ. ಈ ಸಾಲ್ಟ್ ಸ್ಟೋನ್ಸ್ ಕಬ್ಬಿಣ, ಮೆಗ್ನೀಸಿಯಮ್, ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ನಂತಹ 84 ನೈಸರ್ಗಿಕ ಖನಿಜಗಳನ್ನು ಹೊಂದಿರುತ್ತದೆ. ಈ ಖನಿಜಗಳು ದೇಹದ ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಕಲ್ಲಿನಿಂದ ಉಷ್ಣತೆಯು ದೇಹದ ಪ್ಯಾರಾಸಿಂಪಥೆಟಿಕ್ ನರಮಂಡಲವನ್ನು ಸಕ್ರಿಯಗೊಳಿಸುತ್ತದೆ. ಇದರಿಂದ ದೇಹಕ್ಕೆ ವಿಶ್ರಾಂತಿ ಸಿಗುತ್ತದೆ. ಹಿಮಾಲಯನ್ ಉಪ್ಪನ್ನು ದೇಹದ ಆರೋಗ್ಯಕ್ಕೆ ದೀರ್ಘಕಾಲದಿಂದ ಬಳಸಲಾಗುತ್ತಿದೆ. ಪಾಕಿಸ್ತಾನದ ಹಿಮಾಲಯ ಪರ್ವತಗಳ ತಪ್ಪಲಿನಿಂದ ಗಣಿಗಾರಿಕೆ ಮೂಲಕ ತೆಗೆಯಲಾದ ಈ ಶಕ್ತಿಶಾಲಿ ಉಪ್ಪನ್ನು ಭೂಮಿಯ ಮೇಲಿನ ಶುದ್ಧ ಉಪ್ಪು ಎಂದು ಹೇಳಲಾಗುತ್ತದೆ.

ಹಿಮಾಲಯನ್ ಉಪ್ಪು ಗುಲಾಬಿ ಬಣ್ಣವನ್ನು ಹೊಂದಿರುತ್ತದೆ. ನೈಸರ್ಗಿಕವಾಗಿ ಕಂಡುಬರುವ 84 ಖನಿಜಗಳು ಮತ್ತು ಅಂಶಗಳಿಂದ ಇದು ತುಂಬಿರುತ್ತದೆ. ಈ ಖನಿಜಗಳಲ್ಲಿ ಹೆಚ್ಚಿನವು ದೇಹಕ್ಕೆ ಆರೋಗ್ಯ ಒದಗಿಸುತ್ತವೆ.

ಇದನ್ನೂ ಓದಿ: ಉಗುರುಗಳನ್ನು ಉಜ್ಜಿದರೆ ಕೂದಲು ಉದ್ದವಾಗುತ್ತಾ?

ಉಪ್ಪು ಕಲ್ಲಿನ ಮಸಾಜ್​ನಿಂದಾಗುವ ಉಪಯೋಗಗಳೇನು?:

ನಿದ್ರೆಗೆ ಸಹಕಾರಿ:

ಉಪ್ಪು ಮಸಾಜ್ ನಿದ್ರೆಯನ್ನು ಉತ್ತೇಜಿಸುತ್ತದೆ, ನಿದ್ರಾಹೀನತೆಯನ್ನು ಕಡಿಮೆ ಮಾಡುತ್ತದೆ. ಈ ವಿಶೇಷ ಮಸಾಜ್ ಕೇಂದ್ರ ನರಮಂಡಲವನ್ನು ಸಮತೋಲನಗೊಳಿಸುತ್ತದೆ.

ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ:

ಹಿಮಾಲಯನ್ ಉಪ್ಪು ಉತ್ತಮವಾದ ಎಕ್ಸ್‌ಫೋಲಿಯೇಟರ್ ಮತ್ತು ಮಾಯಿಶ್ಚರೈಸರ್ ಆಗಿದ್ದು ಅದು ಚರ್ಮವನ್ನು ಕಾಂತಿಯುಕ್ತಗೊಳಿಸುತ್ತದೆ.

ಇದನ್ನೂ ಓದಿ: Skin Care Tips: ಸೆನ್ಸಿಟಿವ್ ಚರ್ಮವನ್ನು ಗುರುತಿಸುವುದು ಹೇಗೆ?

ಯೋಗಕ್ಷೇಮವನ್ನು ಹೆಚ್ಚಿಸುತ್ತದೆ:

ಹಿಮಾಲಯನ್ ಉಪ್ಪು ಕಲ್ಲಿನ ಮಸಾಜ್ ಆರೋಗ್ಯಕರ ಉಸಿರಾಟ ಮತ್ತು ಮೂಳೆಯ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ. ಹಿಮಾಲಯನ್ ಉಪ್ಪು ಕಲ್ಲುಗಳು ರಕ್ತದೊತ್ತಡವನ್ನು ಸುಧಾರಿಸಲು, ಸರಿಯಾದ ಚಯಾಪಚಯ ಕ್ರಿಯೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.

ಚರ್ಮದ ಕಾಂತಿ ಹೆಚ್ಚಿಸುತ್ತದೆ:

ಹಿಮಾಲಯನ್ ಉಪ್ಪು ಚರ್ಮವನ್ನು ಮೃದುವಾಗಿಸುತ್ತದೆ. ದೇಹದ ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ಸ್ನಾಯು ದೌರ್ಬಲ್ಯ, ತಲೆನೋವು, ಕೀಲು ನೋವು, ಆಯಾಸದಂತಹ ನೋವನ್ನು ನಿವಾರಿಸುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ