AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಲಯನ್ ಸಾಲ್ಟ್​ ಸ್ಟೋನ್ ಮಸಾಜ್​ನಿಂದ ಏನು ಪ್ರಯೋಜನ?

ಹಿಮಾಲಯನ್ ಉಪ್ಪು ಗುಲಾಬಿ ಬಣ್ಣವನ್ನು ಹೊಂದಿರುತ್ತದೆ. ನೈಸರ್ಗಿಕವಾಗಿ ಕಂಡುಬರುವ 84 ಖನಿಜಗಳು ಮತ್ತು ಅಂಶಗಳಿಂದ ಇದು ತುಂಬಿರುತ್ತದೆ. ಈ ಖನಿಜಗಳಲ್ಲಿ ಹೆಚ್ಚಿನವು ದೇಹಕ್ಕೆ ಆರೋಗ್ಯ ಒದಗಿಸುತ್ತವೆ. ಹಿಮಾಲಯ ಪರ್ವತಗಳ ತಪ್ಪಲಿನಿಂದ ಗಣಿಗಾರಿಕೆ ಮೂಲಕ ತೆಗೆಯಲಾದ ಈ ಶಕ್ತಿಶಾಲಿ ಉಪ್ಪನ್ನು ಭೂಮಿಯ ಮೇಲಿನ ಶುದ್ಧ ಉಪ್ಪು ಎಂದು ಹೇಳಲಾಗುತ್ತದೆ.

ಹಿಮಾಲಯನ್ ಸಾಲ್ಟ್​ ಸ್ಟೋನ್ ಮಸಾಜ್​ನಿಂದ ಏನು ಪ್ರಯೋಜನ?
ಹಿಮಾಲಯನ್ ಉಪ್ಪು ಕಲ್ಲಿನ ಮಸಾಜ್ Image Credit source: iStock
ಸುಷ್ಮಾ ಚಕ್ರೆ
|

Updated on: Nov 10, 2023 | 3:26 PM

Share

ಸ್ಪಾ, ಸಲೂನ್​ಗಳಲ್ಲಿ ಹಲವು ರೀತಿಯ ಮಸಾಜ್ ಥೆರಪಿಯಿದೆ. ಇದೀಗ ಹೆಚ್ಚು ಜನಪ್ರಿಯವಾಗುತ್ತಿರುವ ಮಸಾಜ್ ಸಾಲ್ಟ್​ ಸ್ಟೋನ್ ಮಸಾಜ್. ಒತ್ತಡವನ್ನು ನಿವಾರಿಸಲು ಈ ಹಿಮಾಲಯನ್ ಸ್ಟೋನ್ ಮಸಾಜ್ ಮಾಡಲಾಗುತ್ತದೆ. ಹಿಮಾಲಯನ್ ಉಪ್ಪಿನ ಕಲ್ಲುಗಳನ್ನು ಬಿಸಿ ಮಾಡಿ, ಅದರಿಂದ ದೇಹದ ಮೇಲೆ ಮಸಾಜ್ ಮಾಡಲಾಗುತ್ತದೆ. ಈ ಸಾಲ್ಟ್ ಸ್ಟೋನ್ಸ್ ಕಬ್ಬಿಣ, ಮೆಗ್ನೀಸಿಯಮ್, ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ನಂತಹ 84 ನೈಸರ್ಗಿಕ ಖನಿಜಗಳನ್ನು ಹೊಂದಿರುತ್ತದೆ. ಈ ಖನಿಜಗಳು ದೇಹದ ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಕಲ್ಲಿನಿಂದ ಉಷ್ಣತೆಯು ದೇಹದ ಪ್ಯಾರಾಸಿಂಪಥೆಟಿಕ್ ನರಮಂಡಲವನ್ನು ಸಕ್ರಿಯಗೊಳಿಸುತ್ತದೆ. ಇದರಿಂದ ದೇಹಕ್ಕೆ ವಿಶ್ರಾಂತಿ ಸಿಗುತ್ತದೆ. ಹಿಮಾಲಯನ್ ಉಪ್ಪನ್ನು ದೇಹದ ಆರೋಗ್ಯಕ್ಕೆ ದೀರ್ಘಕಾಲದಿಂದ ಬಳಸಲಾಗುತ್ತಿದೆ. ಪಾಕಿಸ್ತಾನದ ಹಿಮಾಲಯ ಪರ್ವತಗಳ ತಪ್ಪಲಿನಿಂದ ಗಣಿಗಾರಿಕೆ ಮೂಲಕ ತೆಗೆಯಲಾದ ಈ ಶಕ್ತಿಶಾಲಿ ಉಪ್ಪನ್ನು ಭೂಮಿಯ ಮೇಲಿನ ಶುದ್ಧ ಉಪ್ಪು ಎಂದು ಹೇಳಲಾಗುತ್ತದೆ.

ಹಿಮಾಲಯನ್ ಉಪ್ಪು ಗುಲಾಬಿ ಬಣ್ಣವನ್ನು ಹೊಂದಿರುತ್ತದೆ. ನೈಸರ್ಗಿಕವಾಗಿ ಕಂಡುಬರುವ 84 ಖನಿಜಗಳು ಮತ್ತು ಅಂಶಗಳಿಂದ ಇದು ತುಂಬಿರುತ್ತದೆ. ಈ ಖನಿಜಗಳಲ್ಲಿ ಹೆಚ್ಚಿನವು ದೇಹಕ್ಕೆ ಆರೋಗ್ಯ ಒದಗಿಸುತ್ತವೆ.

ಇದನ್ನೂ ಓದಿ: ಉಗುರುಗಳನ್ನು ಉಜ್ಜಿದರೆ ಕೂದಲು ಉದ್ದವಾಗುತ್ತಾ?

ಉಪ್ಪು ಕಲ್ಲಿನ ಮಸಾಜ್​ನಿಂದಾಗುವ ಉಪಯೋಗಗಳೇನು?:

ನಿದ್ರೆಗೆ ಸಹಕಾರಿ:

ಉಪ್ಪು ಮಸಾಜ್ ನಿದ್ರೆಯನ್ನು ಉತ್ತೇಜಿಸುತ್ತದೆ, ನಿದ್ರಾಹೀನತೆಯನ್ನು ಕಡಿಮೆ ಮಾಡುತ್ತದೆ. ಈ ವಿಶೇಷ ಮಸಾಜ್ ಕೇಂದ್ರ ನರಮಂಡಲವನ್ನು ಸಮತೋಲನಗೊಳಿಸುತ್ತದೆ.

ಚರ್ಮದ ಆರೋಗ್ಯವನ್ನು ಸುಧಾರಿಸುತ್ತದೆ:

ಹಿಮಾಲಯನ್ ಉಪ್ಪು ಉತ್ತಮವಾದ ಎಕ್ಸ್‌ಫೋಲಿಯೇಟರ್ ಮತ್ತು ಮಾಯಿಶ್ಚರೈಸರ್ ಆಗಿದ್ದು ಅದು ಚರ್ಮವನ್ನು ಕಾಂತಿಯುಕ್ತಗೊಳಿಸುತ್ತದೆ.

ಇದನ್ನೂ ಓದಿ: Skin Care Tips: ಸೆನ್ಸಿಟಿವ್ ಚರ್ಮವನ್ನು ಗುರುತಿಸುವುದು ಹೇಗೆ?

ಯೋಗಕ್ಷೇಮವನ್ನು ಹೆಚ್ಚಿಸುತ್ತದೆ:

ಹಿಮಾಲಯನ್ ಉಪ್ಪು ಕಲ್ಲಿನ ಮಸಾಜ್ ಆರೋಗ್ಯಕರ ಉಸಿರಾಟ ಮತ್ತು ಮೂಳೆಯ ವ್ಯವಸ್ಥೆಯನ್ನು ಉತ್ತೇಜಿಸುತ್ತದೆ. ಹಿಮಾಲಯನ್ ಉಪ್ಪು ಕಲ್ಲುಗಳು ರಕ್ತದೊತ್ತಡವನ್ನು ಸುಧಾರಿಸಲು, ಸರಿಯಾದ ಚಯಾಪಚಯ ಕ್ರಿಯೆಯನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.

ಚರ್ಮದ ಕಾಂತಿ ಹೆಚ್ಚಿಸುತ್ತದೆ:

ಹಿಮಾಲಯನ್ ಉಪ್ಪು ಚರ್ಮವನ್ನು ಮೃದುವಾಗಿಸುತ್ತದೆ. ದೇಹದ ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ಸ್ನಾಯು ದೌರ್ಬಲ್ಯ, ತಲೆನೋವು, ಕೀಲು ನೋವು, ಆಯಾಸದಂತಹ ನೋವನ್ನು ನಿವಾರಿಸುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ