AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coriander Benefits: ಕೊತ್ತಂಬರಿ ಸೊಪ್ಪಿನ ಆರೋಗ್ಯಕರ ಪ್ರಯೋಜನಗಳು

ಮಜ್ಜಿಗೆ ಅಥವಾ ಯಾವುದೇ ಪದಾರ್ಥ ಇರಲಿ, ಅದಕ್ಕೆ ಕೊತ್ತಂಬರಿ ಸೊಪ್ಪು ಹಾಕಿದರೆ ರುಚಿ ಇನ್ನಷ್ಟು ಹೆಚ್ಚಾಗುತ್ತದೆ. ಆದರೆ, ಈ ಸೊಪ್ಪನ್ನು ಸೇವಿಸಿದರೆ ಆರೋಗ್ಯಕರ ಪ್ರಯೋಜನಗಳೂ ಆಗಲಿವೆ. ಯಾವೆಲ್ಲ ಸಮಸ್ಯೆಗಳಿಗೆ ಕೊತ್ತಂಬರಿ ಸೊಪ್ಪು ಪರಿಣಾಮಕಾರಿಯಾಗಿದೆ ಎಂಬುದನ್ನು ತಿಳಿಯೋಣ.

Coriander Benefits: ಕೊತ್ತಂಬರಿ ಸೊಪ್ಪಿನ ಆರೋಗ್ಯಕರ ಪ್ರಯೋಜನಗಳು
ಕೊತ್ತಂಬರಿ ಸೊಪ್ಪಿನ ಆರೋಗ್ಯಕರ ಪ್ರಯೋಜನಗಳುImage Credit source: iStock Photo
Rakesh Nayak Manchi
Rakesh Nayak Manchi|

Updated on: Aug 09, 2023 | 6:02 AM

Share

ಪ್ರತಿಯೊಬ್ಬರ ಮನೆಯಲ್ಲಿ ಮಾಡುವ ಪದಾರ್ಥಗಳಿಗೆ ಕೊತ್ತಂಬರಿ ಸೊಪ್ಪು (Coriander Leaves) ಹಾಕದೆ ಪೂರ್ಣವಾಗುವುದಿಲ್ಲ. ಅಷ್ಟೇ ಅಲ್ಲದೆ, ಒಂದು ಮಜ್ಜಿಗೆ ನೀರು ಮಾಡುವಾಗಲೂ ಹಸಿರು ಮೆಣಸಿನ ಕಾಯಿ, ಶುಂಠಿಯೊಂದಿಗೆ ಕೊತ್ತಂಬರಿ ಸೊಪ್ಪನ್ನೂ ಹಾಕುತ್ತಾರೆ. ಈ ಸೊಪ್ಪನ್ನು ಬೆರೆಸುವುದರಿಂದ ರುಚಿ ಹೆಚ್ಚಾಗುತ್ತದೆ ಎಂಬುದು ಎಷ್ಟು ಸತ್ಯವೋ, ಅಂತಹ ಆಹಾರವನ್ನು ಸೇವಿಸಿದ ವ್ಯಕ್ತಿಯ ಆರೋಗ್ಯ (Health) ಸಮಸ್ಯೆಯೂ ನಿವಾರಣೆಯಾಗುತ್ತದೆ ಎಂಬುದೂ ಸತ್ಯ. ಹಾಗಿದ್ದರೆ ಕೊತ್ತಂಬರಿ ಸೊಪ್ಪು ಸೇವನೆಯಿಂದ ಆಗುವ ಪ್ರಯೋಜನಗಳೇನು? ಇಲ್ಲಿವೆ ನೋಡಿ.

ಕೊತ್ತಂಬರಿ ಸೊಪ್ಪನ್ನು ಎಲ್ಲಾ ಪದಾರ್ಥಗಳಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಕೊತ್ತಂಬರಿ ಸೊಪ್ಪಿನ ಚಟ್ನಿಯೂ ಮಾಡುವವರಿದ್ದಾರೆ. ಆದರೆ ಇದನ್ನು ಪದಾರ್ಥಗಳಲ್ಲಿ ಬಳಸುವುದರಿಂದ ಸೇವನೆ ಮಾಡಿದ ಆಹಾರವು ಬೇಗನೆ ಜೀರ್ಣವಾಗುತ್ತದೆ.

ಕೊತ್ತಂಬರಿ ಸೊಪ್ಪನ್ನೂ ಹೀಗೆ ತಿಂದರೆ ಆರೋಗ್ಯಕ್ಕೂ ಒಳ್ಳೆಯದು. ಇದು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಅದು ಜೀರ್ಣಾಂಗ ವ್ಯವಸ್ಥೆಯ ಕಾರ್ಯನಿರ್ವಹಣೆಯನ್ನು ಸುಧಾರಿಸುತ್ತದೆ ಮತ್ತು ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಅಳುವುದು ಒಳ್ಳೆಯದೇ? ಇದು ಮಾನಸಿಕ ಆರೋಗ್ಯವನ್ನು ಹೇಗೆ ಸುಧಾರಿಸುತ್ತದೆ? ಇಲ್ಲಿದೆ ಮಾಹಿತಿ

ಒಂದು ಲೋಟ ಮಜ್ಜಿಗೆಗೆ ಒಂದು ಚಮಚ ಕೊತ್ತಂಬರಿ ಸೊಪ್ಪನ್ನು ಬೆರೆಸಿ ಚಿಟಿಕೆ ಜೀರಿಗೆ ಸೇರಿಸಿ ರಾತ್ರಿ ಊಟದ ನಂತರ ಕುಡಿಯಬೇಕು. ಹೀಗೆ ಪ್ರತಿನಿತ್ಯ ಕುಡಿಯುವುದರಿಂದ ಹೊಟ್ಟೆ ಉರಿ, ಕರುಳು ಉರಿಯಂತಹ ಸಮಸ್ಯೆಗಳು ಕಡಿಮೆಯಾಗುತ್ತವೆ. ಇದು ಬಾಯಿಯ ದುರ್ವಾಸನೆಯನ್ನೂ ಕಡಿಮೆ ಮಾಡುತ್ತದೆ. ವಸಡಿನ ರಕ್ತಸ್ರಾವಕ್ಕೆ ಪರಿಹಾರವಾಗಿದೆ.

ಮೂತ್ರಪಿಂಡವನ್ನು ಸ್ವಚ್ಛಗೊಳಿಸಲು ಇದು ಪರಿಣಾಮಕಾರಿಯಾಗಿದೆ. ಕೊತ್ತಂಬರಿ ಸೊಪ್ಪನ್ನು ತುಂಡು ಮಾಡಿ ಒಂದು ಬೌಲ್ ನೀರಿನಲ್ಲಿ ಒಂದು ಗಂಟೆ ನೆನೆಸಿಡಿ. ನಂತರ ಅದನ್ನು ಒಲೆಯ ಮೇಲೆ ಇಟ್ಟು 10 ನಿಮಿಷ ಕುದಿಸಿ ತಣಿಯಲು ಬಿಡಿ. ನಂತರ ಕುಡಿಯಿರಿ. ವಾರಕ್ಕೊಮ್ಮೆ ಒಂದು ಲೋಟ ಕೊತ್ತಂಬರಿ ಸೊಪ್ಪಿನ ನೀರನ್ನು ಕುಡಿಯುವುದರಿಂದ ಕಿಡ್ನಿ ಸ್ವಚ್ಛವಾಗುತ್ತದೆ. ಫಿಲ್ಟರ್ ಮಾಡದೇ ಕುಡಿಯಬೇಕು.

ಮಹಿಳೆಯರು ಕೊತ್ತಂಬರಿ ಸೊಪ್ಪಿನ ನೀರನ್ನು ಕುಡಿಯುವುದರಿಂದ ಮುಟ್ಟಿನ ಸಮಸ್ಯೆ ದೂರವಾಗುತ್ತದೆ. ಹಾಗೆಯೇ ಗರ್ಭಿಣಿಯರು ಪ್ರತಿದಿನ 2 ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ನಿಂಬೆ ರಸದೊಂದಿಗೆ ಸೇವಿಸಿದರೆ ಹೊಟ್ಟೆನೋವು, ಮಲಬದ್ಧತೆಯಂತಹ ಸಮಸ್ಯೆಗಳು ಕಡಿಮೆಯಾಗುತ್ತವೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ