Coriander Benefits: ಕೊತ್ತಂಬರಿ ಸೊಪ್ಪಿನ ಆರೋಗ್ಯಕರ ಪ್ರಯೋಜನಗಳು

ಮಜ್ಜಿಗೆ ಅಥವಾ ಯಾವುದೇ ಪದಾರ್ಥ ಇರಲಿ, ಅದಕ್ಕೆ ಕೊತ್ತಂಬರಿ ಸೊಪ್ಪು ಹಾಕಿದರೆ ರುಚಿ ಇನ್ನಷ್ಟು ಹೆಚ್ಚಾಗುತ್ತದೆ. ಆದರೆ, ಈ ಸೊಪ್ಪನ್ನು ಸೇವಿಸಿದರೆ ಆರೋಗ್ಯಕರ ಪ್ರಯೋಜನಗಳೂ ಆಗಲಿವೆ. ಯಾವೆಲ್ಲ ಸಮಸ್ಯೆಗಳಿಗೆ ಕೊತ್ತಂಬರಿ ಸೊಪ್ಪು ಪರಿಣಾಮಕಾರಿಯಾಗಿದೆ ಎಂಬುದನ್ನು ತಿಳಿಯೋಣ.

Coriander Benefits: ಕೊತ್ತಂಬರಿ ಸೊಪ್ಪಿನ ಆರೋಗ್ಯಕರ ಪ್ರಯೋಜನಗಳು
ಕೊತ್ತಂಬರಿ ಸೊಪ್ಪಿನ ಆರೋಗ್ಯಕರ ಪ್ರಯೋಜನಗಳು
Image Credit source: iStock Photo
Rakesh Nayak Manchi

Updated on: Aug 09, 2023 | 6:02 AM

ಪ್ರತಿಯೊಬ್ಬರ ಮನೆಯಲ್ಲಿ ಮಾಡುವ ಪದಾರ್ಥಗಳಿಗೆ ಕೊತ್ತಂಬರಿ ಸೊಪ್ಪು (Coriander Leaves) ಹಾಕದೆ ಪೂರ್ಣವಾಗುವುದಿಲ್ಲ. ಅಷ್ಟೇ ಅಲ್ಲದೆ, ಒಂದು ಮಜ್ಜಿಗೆ ನೀರು ಮಾಡುವಾಗಲೂ ಹಸಿರು ಮೆಣಸಿನ ಕಾಯಿ, ಶುಂಠಿಯೊಂದಿಗೆ ಕೊತ್ತಂಬರಿ ಸೊಪ್ಪನ್ನೂ ಹಾಕುತ್ತಾರೆ. ಈ ಸೊಪ್ಪನ್ನು ಬೆರೆಸುವುದರಿಂದ ರುಚಿ ಹೆಚ್ಚಾಗುತ್ತದೆ ಎಂಬುದು ಎಷ್ಟು ಸತ್ಯವೋ, ಅಂತಹ ಆಹಾರವನ್ನು ಸೇವಿಸಿದ ವ್ಯಕ್ತಿಯ ಆರೋಗ್ಯ (Health) ಸಮಸ್ಯೆಯೂ ನಿವಾರಣೆಯಾಗುತ್ತದೆ ಎಂಬುದೂ ಸತ್ಯ. ಹಾಗಿದ್ದರೆ ಕೊತ್ತಂಬರಿ ಸೊಪ್ಪು ಸೇವನೆಯಿಂದ ಆಗುವ ಪ್ರಯೋಜನಗಳೇನು? ಇಲ್ಲಿವೆ ನೋಡಿ.

ಕೊತ್ತಂಬರಿ ಸೊಪ್ಪನ್ನು ಎಲ್ಲಾ ಪದಾರ್ಥಗಳಲ್ಲಿ ಹೆಚ್ಚಾಗಿ ಬಳಸಲಾಗುತ್ತದೆ. ಕೊತ್ತಂಬರಿ ಸೊಪ್ಪಿನ ಚಟ್ನಿಯೂ ಮಾಡುವವರಿದ್ದಾರೆ. ಆದರೆ ಇದನ್ನು ಪದಾರ್ಥಗಳಲ್ಲಿ ಬಳಸುವುದರಿಂದ ಸೇವನೆ ಮಾಡಿದ ಆಹಾರವು ಬೇಗನೆ ಜೀರ್ಣವಾಗುತ್ತದೆ.

ಕೊತ್ತಂಬರಿ ಸೊಪ್ಪನ್ನೂ ಹೀಗೆ ತಿಂದರೆ ಆರೋಗ್ಯಕ್ಕೂ ಒಳ್ಳೆಯದು. ಇದು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ. ಅದು ಜೀರ್ಣಾಂಗ ವ್ಯವಸ್ಥೆಯ ಕಾರ್ಯನಿರ್ವಹಣೆಯನ್ನು ಸುಧಾರಿಸುತ್ತದೆ ಮತ್ತು ಪ್ರತಿರಕ್ಷಣಾ ವ್ಯವಸ್ಥೆಯನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಅಳುವುದು ಒಳ್ಳೆಯದೇ? ಇದು ಮಾನಸಿಕ ಆರೋಗ್ಯವನ್ನು ಹೇಗೆ ಸುಧಾರಿಸುತ್ತದೆ? ಇಲ್ಲಿದೆ ಮಾಹಿತಿ

ಒಂದು ಲೋಟ ಮಜ್ಜಿಗೆಗೆ ಒಂದು ಚಮಚ ಕೊತ್ತಂಬರಿ ಸೊಪ್ಪನ್ನು ಬೆರೆಸಿ ಚಿಟಿಕೆ ಜೀರಿಗೆ ಸೇರಿಸಿ ರಾತ್ರಿ ಊಟದ ನಂತರ ಕುಡಿಯಬೇಕು. ಹೀಗೆ ಪ್ರತಿನಿತ್ಯ ಕುಡಿಯುವುದರಿಂದ ಹೊಟ್ಟೆ ಉರಿ, ಕರುಳು ಉರಿಯಂತಹ ಸಮಸ್ಯೆಗಳು ಕಡಿಮೆಯಾಗುತ್ತವೆ. ಇದು ಬಾಯಿಯ ದುರ್ವಾಸನೆಯನ್ನೂ ಕಡಿಮೆ ಮಾಡುತ್ತದೆ. ವಸಡಿನ ರಕ್ತಸ್ರಾವಕ್ಕೆ ಪರಿಹಾರವಾಗಿದೆ.

ಮೂತ್ರಪಿಂಡವನ್ನು ಸ್ವಚ್ಛಗೊಳಿಸಲು ಇದು ಪರಿಣಾಮಕಾರಿಯಾಗಿದೆ. ಕೊತ್ತಂಬರಿ ಸೊಪ್ಪನ್ನು ತುಂಡು ಮಾಡಿ ಒಂದು ಬೌಲ್ ನೀರಿನಲ್ಲಿ ಒಂದು ಗಂಟೆ ನೆನೆಸಿಡಿ. ನಂತರ ಅದನ್ನು ಒಲೆಯ ಮೇಲೆ ಇಟ್ಟು 10 ನಿಮಿಷ ಕುದಿಸಿ ತಣಿಯಲು ಬಿಡಿ. ನಂತರ ಕುಡಿಯಿರಿ. ವಾರಕ್ಕೊಮ್ಮೆ ಒಂದು ಲೋಟ ಕೊತ್ತಂಬರಿ ಸೊಪ್ಪಿನ ನೀರನ್ನು ಕುಡಿಯುವುದರಿಂದ ಕಿಡ್ನಿ ಸ್ವಚ್ಛವಾಗುತ್ತದೆ. ಫಿಲ್ಟರ್ ಮಾಡದೇ ಕುಡಿಯಬೇಕು.

ಮಹಿಳೆಯರು ಕೊತ್ತಂಬರಿ ಸೊಪ್ಪಿನ ನೀರನ್ನು ಕುಡಿಯುವುದರಿಂದ ಮುಟ್ಟಿನ ಸಮಸ್ಯೆ ದೂರವಾಗುತ್ತದೆ. ಹಾಗೆಯೇ ಗರ್ಭಿಣಿಯರು ಪ್ರತಿದಿನ 2 ಚಮಚ ಕೊತ್ತಂಬರಿ ಸೊಪ್ಪಿನ ರಸವನ್ನು ನಿಂಬೆ ರಸದೊಂದಿಗೆ ಸೇವಿಸಿದರೆ ಹೊಟ್ಟೆನೋವು, ಮಲಬದ್ಧತೆಯಂತಹ ಸಮಸ್ಯೆಗಳು ಕಡಿಮೆಯಾಗುತ್ತವೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us