AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಪ್ರತಿನಿತ್ಯ ವಾಯುವಿಹಾರ ಅಭ್ಯಾಸ ರೂಢಿಯಲ್ಲಿರಲಿ; ನೆಮ್ಮದಿ ಹಾಳು ಮಾಡುವ ಕಾಯಿಲೆಗಳಿಂದ ದೂರವಿರಿ

Benefits of Daily Walking: ಪ್ರತಿನಿತ್ಯ ಅರ್ಧಗಂಟೆ ವಾಯುವಿಹಾರ ಮಾಡುವುದನ್ನು ರೂಢಿಯಲ್ಲಿಟ್ಟುಕೊಂಡರೆ ಹೃದಯ ಸಂಬಂಧಿತ ಸಮಸ್ಯೆಗಳಿಂದ ದೂರವಿರಬಹುದಾಗಿದೆ. ಹಾಗೂ ದೇಹದ ಫಿಟ್​ನೆಟ್​ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.

Health Tips: ಪ್ರತಿನಿತ್ಯ ವಾಯುವಿಹಾರ ಅಭ್ಯಾಸ ರೂಢಿಯಲ್ಲಿರಲಿ; ನೆಮ್ಮದಿ ಹಾಳು ಮಾಡುವ ಕಾಯಿಲೆಗಳಿಂದ ದೂರವಿರಿ
ವಾಯುವಿಹಾರ
shruti hegde
|

Updated on:May 23, 2021 | 3:20 PM

Share

ಹವಾಮಾನ ಏರುಪೇರಿನಿಂದಾಗಿ ಅಥವಾ ಸಾಂಕ್ರಾಮಿಕ ರೋಗಗಳಿಂದಾಗಿ ಆರೋಗ್ಯ ಹದಗೆಟ್ಟಿರುತ್ತದೆ. ಮಾನಸಿಕ ಒತ್ತಡ, ರಕ್ತದೊತ್ತಡದಂತಹ ಸಮಸ್ಯೆಗಳು ಕಾಡತೊಡಗುತ್ತಿರುತ್ತದೆ. ಮನಸ್ಸಿಗೆ ನೆಮ್ಮದಿ ಇಲ್ಲ. ಯಾವಾಗಲೂ ಅನಗತ್ಯ ಚಿಂತೆ. ಹೀಗಿರುವಾಗ ದೇಹಕ್ಕೆ ವಿರಾಮ ಬೇಕು. ನಿಮಗಾಗಿಯೇ ಒಂದಿಷ್ಟು ಸಮಯಬೇಕು. ಹಾಗಾಗಿ ದಿನನಿತ್ಯ ವಾಯುವಿಹಾರ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ರೋಗದಿಂದಲೂ ದೂರವಿರಬಹುದು. ಜತೆಗೆ ಬೇಡದ ಚಿಂತೆಗಳನ್ನು ಹೊಡೆದೋಡಿಸಬಹುದು. 

ಪ್ರತಿನಿತ್ಯ ಅರ್ಧಗಂಟೆ ವಾಯುವಿಹಾರ ಮಾಡುವುದನ್ನು ರೂಢಿಯಲ್ಲಿಟ್ಟುಕೊಂಡರೆ ಹೃದಯ ಸಂಬಂಧಿತ ಸಮಸ್ಯೆಗಳಿಂದ ದೂರವಿರಬಹುದು. ಹಾಗೂ ದೇಹದ ಫಿಟ್​ನೆಸ್​​ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ. ಕೊರೊನಾ ಸಾಂಕ್ರಾಮಿಕ ಕಾಯಿಲೆಯಿಂದಾಗಿ ಜೀವನ ಶೈಲಿ ಬಹಳಷ್ಟು ಬದಲಾಗಿದೆ. ಲಾಕ್​ಡೌನ್​ ಜಾರಿಯಲ್ಲಿದೆ ಹೀಗಿರುವಾಗ ಅನಗತ್ಯವಾಗಿ ಹೊರಗಡೆ ಹೋಗುವಂತಿಲ್ಲ ಎಂದಾದರೆ ನೀವು ನಿಮ್ಮ ಮನೆಯಲ್ಲಿಯೇ ವಾಯುವಿಹಾರ ಮಾಡಬಹುದು. ಮನೆಯ ಅಂಗಳದಲ್ಲಿ ಸುಮಾರು 20ರಿಂದ ಅರ್ಧಗಂಟೆವರೆಗೆ ನಡೆಯುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಆರೋಗ್ಯವನ್ನು ಸದೃಢವಾಗಿಟ್ಟುಕೊಳ್ಳಲು ಇದಕ್ಕಿಂತಲೂ ಸುಭದ ದಾರಿ ಇಲ್ಲ.

ನೀವು ಪ್ರತಿನಿತ್ಯ ನಡೆಯುವ ಅಭ್ಯಾಸವನ್ನು ಹೊಂದಿದ್ದರೆ ಅದು ಪರಿಧಮನಿಯ ಹೃದಯ ಕಾಯಿಲೆಗೆ ಸಂಬಂಧಿಸಿದಂತೆ ಶೇ.19ರಷ್ಟು ಅಪಾಯವನ್ನು ಕಡಿಮೆ ಮಾಡುತ್ತದೆ. ನೀವು ಹೆಚ್ಚಿನ ವೇಗದಲ್ಲಿ ನಡೆಯುವ ಅಭ್ಯಾಸ ಹೊಂದಿರುವುದರಿಂದ ಅಪಾಯದ ಅವಕಾಶವನ್ನು ಇನ್ನೂ ಕಡಿಮೆ ಮಾಡಿಕೊಳ್ಳಬಹುದು. ದಿನನಿತ್ಯ ನಡೆಯುವ ಅಭ್ಯಾಸ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುತ್ತದೆ. ಸಂಶೋಧನೆಯ ಪ್ರಕಾರ, 15 ನಿಮಿಷಗಳ ನಡಿಗೆಯು ನಿಮ್ಮ ರಕ್ತದಲ್ಲಿನ ಸಕ್ಕರೆ ಅಂಶವನ್ನು ಕಡಿಮೆ ಮಾಡುತ್ತದೆ.

ಪ್ರತಿನಿತ್ಯ ನಡೆಯುವುದರಿಂದ ಸೊಂಟ, ಮೊಣಕಾಲು ನೋವು, ಕೀಲು ನೋವುಗಳಂತಹ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುಬಹುದು. ಸ್ನಾಯುಗಳನ್ನು ಹೆಚ್ಚು ಬಲಪಡಿಸುತ್ತದೆ. ಮಾನಸಿಕ ನೆಮ್ಮದಿ ಮತ್ತು ಬೇಡದ ಚಿಂತೆಗಳಿಂದ ದೂರವಿರಬಹುದು.

ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ದಿನವೂ ನಡೆಯುವುದನ್ನು ಅಭ್ಯಾಯಾಸದಲ್ಲಿಟ್ಟುಕೊಳ್ಳಬೇಕು. ಒಳ್ಳೆಯ ಗಾಳಿಯ ಸೇವನೆಯಿಂದ ಕೆಮ್ಮು, ಶೀತದಂತಹ ಕಾಯಿಲೆಗಳು ಬಹುಬೇಗ ವಾಸಿಯಾಗುತ್ತದೆ. ಹಾಗೂ ಪ್ರತಿನಿತ್ಯ 30ರಿಂದ 45 ನಿಮಿಷಗಳ ಕಾಲ ನಡೆಯುವ ರೂಢಿಯಲ್ಲಿರುವವರಿಗೆ ಅನಾರೋಗ್ಯದ ಸಮಸ್ಯೆ ಕಾಡುವುದು ಕಡಿಮೆ ಎಂಬುದು ಸಂಶೋಧನೆಯಿಂದ ತಿಳಿದು ಬಂದಿದೆ.

ತೂಕ ನಿಯಂತ್ರಣ ಮಾಡಿಕೊಳ್ಳಲು ವಾಯುವಿಹಾರ ಅತ್ಯಂತ ಉತ್ತಮ ಮಾರ್ಗವಾಗಿದೆ. ಪ್ರತಿನಿತ್ಯ 30 ರಿಂದ 50 ನಿಮಿಷಗಳ ಕಾಲ ನಡೆಯುವುದರಿಂದ ದೇಹದಲ್ಲಿನ ಬೊಜ್ಜಿನ ಅಂಶ ಕರಗುತ್ತದೆ. ಮತ್ತು ಸೋಮಾರಿತನ ನಿಮ್ಮಿಂದ ದೂರವಾಗುತ್ತದೆ. ನಿಮ್ಮ ಮನಸ್ಥಿತಿಯನ್ನು ಸುಧಾರಿಸಿಕೊಳ್ಳಲು ಜತೆಗೆ ದೇಹದ ಸುಸ್ತು, ಮಾನಸಿಕ ಚಿಂತೆಯಿಂದ ದೂರವಾಗಲು ಪ್ರತಿನಿತ್ಯ ನಡೆಯುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ.

ಇದನ್ನೂ ಓದಿ:

Health Tips: ಹೊಟ್ಟೆ ಉಬ್ಬರದಿಂದ ಬಳಲುತ್ತಿದ್ದೀರಾ? ಇಲ್ಲಿವೆ ನೋಡಿ ಒಂದಷ್ಟು ಮನೆ ಮದ್ದುಗಳು

Health Tips: ಕೊರೊನಾ ಸೋಂಕಿನಿಂದ ಹೊರಬಂದರೂ ಆಯಾಸವಿದೆಯೇ? ನಿಮ್ಮ ಆಹಾರ ಕ್ರಮ ಹೀಗಿರಲಿ

Published On - 3:15 pm, Sun, 23 May 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ