Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಪ್ರತಿನಿತ್ಯ ವಾಯುವಿಹಾರ ಅಭ್ಯಾಸ ರೂಢಿಯಲ್ಲಿರಲಿ; ನೆಮ್ಮದಿ ಹಾಳು ಮಾಡುವ ಕಾಯಿಲೆಗಳಿಂದ ದೂರವಿರಿ

Benefits of Daily Walking: ಪ್ರತಿನಿತ್ಯ ಅರ್ಧಗಂಟೆ ವಾಯುವಿಹಾರ ಮಾಡುವುದನ್ನು ರೂಢಿಯಲ್ಲಿಟ್ಟುಕೊಂಡರೆ ಹೃದಯ ಸಂಬಂಧಿತ ಸಮಸ್ಯೆಗಳಿಂದ ದೂರವಿರಬಹುದಾಗಿದೆ. ಹಾಗೂ ದೇಹದ ಫಿಟ್​ನೆಟ್​ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ.

Health Tips: ಪ್ರತಿನಿತ್ಯ ವಾಯುವಿಹಾರ ಅಭ್ಯಾಸ ರೂಢಿಯಲ್ಲಿರಲಿ; ನೆಮ್ಮದಿ ಹಾಳು ಮಾಡುವ ಕಾಯಿಲೆಗಳಿಂದ ದೂರವಿರಿ
ವಾಯುವಿಹಾರ
Follow us
shruti hegde
|

Updated on:May 23, 2021 | 3:20 PM

ಹವಾಮಾನ ಏರುಪೇರಿನಿಂದಾಗಿ ಅಥವಾ ಸಾಂಕ್ರಾಮಿಕ ರೋಗಗಳಿಂದಾಗಿ ಆರೋಗ್ಯ ಹದಗೆಟ್ಟಿರುತ್ತದೆ. ಮಾನಸಿಕ ಒತ್ತಡ, ರಕ್ತದೊತ್ತಡದಂತಹ ಸಮಸ್ಯೆಗಳು ಕಾಡತೊಡಗುತ್ತಿರುತ್ತದೆ. ಮನಸ್ಸಿಗೆ ನೆಮ್ಮದಿ ಇಲ್ಲ. ಯಾವಾಗಲೂ ಅನಗತ್ಯ ಚಿಂತೆ. ಹೀಗಿರುವಾಗ ದೇಹಕ್ಕೆ ವಿರಾಮ ಬೇಕು. ನಿಮಗಾಗಿಯೇ ಒಂದಿಷ್ಟು ಸಮಯಬೇಕು. ಹಾಗಾಗಿ ದಿನನಿತ್ಯ ವಾಯುವಿಹಾರ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ರೋಗದಿಂದಲೂ ದೂರವಿರಬಹುದು. ಜತೆಗೆ ಬೇಡದ ಚಿಂತೆಗಳನ್ನು ಹೊಡೆದೋಡಿಸಬಹುದು. 

ಪ್ರತಿನಿತ್ಯ ಅರ್ಧಗಂಟೆ ವಾಯುವಿಹಾರ ಮಾಡುವುದನ್ನು ರೂಢಿಯಲ್ಲಿಟ್ಟುಕೊಂಡರೆ ಹೃದಯ ಸಂಬಂಧಿತ ಸಮಸ್ಯೆಗಳಿಂದ ದೂರವಿರಬಹುದು. ಹಾಗೂ ದೇಹದ ಫಿಟ್​ನೆಸ್​​ ಕಾಪಾಡಿಕೊಳ್ಳಲು ಸಹಾಯಕವಾಗುತ್ತದೆ. ಕೊರೊನಾ ಸಾಂಕ್ರಾಮಿಕ ಕಾಯಿಲೆಯಿಂದಾಗಿ ಜೀವನ ಶೈಲಿ ಬಹಳಷ್ಟು ಬದಲಾಗಿದೆ. ಲಾಕ್​ಡೌನ್​ ಜಾರಿಯಲ್ಲಿದೆ ಹೀಗಿರುವಾಗ ಅನಗತ್ಯವಾಗಿ ಹೊರಗಡೆ ಹೋಗುವಂತಿಲ್ಲ ಎಂದಾದರೆ ನೀವು ನಿಮ್ಮ ಮನೆಯಲ್ಲಿಯೇ ವಾಯುವಿಹಾರ ಮಾಡಬಹುದು. ಮನೆಯ ಅಂಗಳದಲ್ಲಿ ಸುಮಾರು 20ರಿಂದ ಅರ್ಧಗಂಟೆವರೆಗೆ ನಡೆಯುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ. ಆರೋಗ್ಯವನ್ನು ಸದೃಢವಾಗಿಟ್ಟುಕೊಳ್ಳಲು ಇದಕ್ಕಿಂತಲೂ ಸುಭದ ದಾರಿ ಇಲ್ಲ.

ನೀವು ಪ್ರತಿನಿತ್ಯ ನಡೆಯುವ ಅಭ್ಯಾಸವನ್ನು ಹೊಂದಿದ್ದರೆ ಅದು ಪರಿಧಮನಿಯ ಹೃದಯ ಕಾಯಿಲೆಗೆ ಸಂಬಂಧಿಸಿದಂತೆ ಶೇ.19ರಷ್ಟು ಅಪಾಯವನ್ನು ಕಡಿಮೆ ಮಾಡುತ್ತದೆ. ನೀವು ಹೆಚ್ಚಿನ ವೇಗದಲ್ಲಿ ನಡೆಯುವ ಅಭ್ಯಾಸ ಹೊಂದಿರುವುದರಿಂದ ಅಪಾಯದ ಅವಕಾಶವನ್ನು ಇನ್ನೂ ಕಡಿಮೆ ಮಾಡಿಕೊಳ್ಳಬಹುದು. ದಿನನಿತ್ಯ ನಡೆಯುವ ಅಭ್ಯಾಸ ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನು ನಿಯಂತ್ರಿಸುತ್ತದೆ. ಸಂಶೋಧನೆಯ ಪ್ರಕಾರ, 15 ನಿಮಿಷಗಳ ನಡಿಗೆಯು ನಿಮ್ಮ ರಕ್ತದಲ್ಲಿನ ಸಕ್ಕರೆ ಅಂಶವನ್ನು ಕಡಿಮೆ ಮಾಡುತ್ತದೆ.

ಪ್ರತಿನಿತ್ಯ ನಡೆಯುವುದರಿಂದ ಸೊಂಟ, ಮೊಣಕಾಲು ನೋವು, ಕೀಲು ನೋವುಗಳಂತಹ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುಬಹುದು. ಸ್ನಾಯುಗಳನ್ನು ಹೆಚ್ಚು ಬಲಪಡಿಸುತ್ತದೆ. ಮಾನಸಿಕ ನೆಮ್ಮದಿ ಮತ್ತು ಬೇಡದ ಚಿಂತೆಗಳಿಂದ ದೂರವಿರಬಹುದು.

ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಲು ದಿನವೂ ನಡೆಯುವುದನ್ನು ಅಭ್ಯಾಯಾಸದಲ್ಲಿಟ್ಟುಕೊಳ್ಳಬೇಕು. ಒಳ್ಳೆಯ ಗಾಳಿಯ ಸೇವನೆಯಿಂದ ಕೆಮ್ಮು, ಶೀತದಂತಹ ಕಾಯಿಲೆಗಳು ಬಹುಬೇಗ ವಾಸಿಯಾಗುತ್ತದೆ. ಹಾಗೂ ಪ್ರತಿನಿತ್ಯ 30ರಿಂದ 45 ನಿಮಿಷಗಳ ಕಾಲ ನಡೆಯುವ ರೂಢಿಯಲ್ಲಿರುವವರಿಗೆ ಅನಾರೋಗ್ಯದ ಸಮಸ್ಯೆ ಕಾಡುವುದು ಕಡಿಮೆ ಎಂಬುದು ಸಂಶೋಧನೆಯಿಂದ ತಿಳಿದು ಬಂದಿದೆ.

ತೂಕ ನಿಯಂತ್ರಣ ಮಾಡಿಕೊಳ್ಳಲು ವಾಯುವಿಹಾರ ಅತ್ಯಂತ ಉತ್ತಮ ಮಾರ್ಗವಾಗಿದೆ. ಪ್ರತಿನಿತ್ಯ 30 ರಿಂದ 50 ನಿಮಿಷಗಳ ಕಾಲ ನಡೆಯುವುದರಿಂದ ದೇಹದಲ್ಲಿನ ಬೊಜ್ಜಿನ ಅಂಶ ಕರಗುತ್ತದೆ. ಮತ್ತು ಸೋಮಾರಿತನ ನಿಮ್ಮಿಂದ ದೂರವಾಗುತ್ತದೆ. ನಿಮ್ಮ ಮನಸ್ಥಿತಿಯನ್ನು ಸುಧಾರಿಸಿಕೊಳ್ಳಲು ಜತೆಗೆ ದೇಹದ ಸುಸ್ತು, ಮಾನಸಿಕ ಚಿಂತೆಯಿಂದ ದೂರವಾಗಲು ಪ್ರತಿನಿತ್ಯ ನಡೆಯುವ ಅಭ್ಯಾಸವನ್ನು ರೂಢಿಯಲ್ಲಿಟ್ಟುಕೊಳ್ಳಿ.

ಇದನ್ನೂ ಓದಿ:

Health Tips: ಹೊಟ್ಟೆ ಉಬ್ಬರದಿಂದ ಬಳಲುತ್ತಿದ್ದೀರಾ? ಇಲ್ಲಿವೆ ನೋಡಿ ಒಂದಷ್ಟು ಮನೆ ಮದ್ದುಗಳು

Health Tips: ಕೊರೊನಾ ಸೋಂಕಿನಿಂದ ಹೊರಬಂದರೂ ಆಯಾಸವಿದೆಯೇ? ನಿಮ್ಮ ಆಹಾರ ಕ್ರಮ ಹೀಗಿರಲಿ

Published On - 3:15 pm, Sun, 23 May 21

ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ
ಕೆಸರಿನಲ್ಲಿ ಹೂತ ಕಾರು, ಟಿಟಿ: ಜಮ್ಮು ಕಾಶ್ಮೀರ ಮೇಘಸ್ಫೋಟದ ಪರಿಣಾಮ ನೋಡಿ