AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cancer: ಕ್ಯಾನ್ಸರ್ ಅಪಾಯ ಕಡಿಮೆ ಮಾಡಲು ಪ್ರತಿನಿತ್ಯ ಬಾಳೆಹಣ್ಣು ತಿನ್ನಿ; ಹೊಸ ಸಂಶೋಧನೆಯಿಂದ ಮಾಹಿತಿ ಬಹಿರಂಗ

ಬಾಳೆಹಣ್ಣು ತಿನ್ನುವುದರಿಂದ ಕ್ಯಾನ್ಸರ್ ಕೂಡ ಬರದಂತೆ ತಡೆಯಬಹುದು ಎಂದು ಹೆಚ್ಚಿನವರಿಗೆ ತಿಳಿಯದ ಸಂಗತಿ. ಸಂಶೋಧನೆಯೊಂದರ ಪ್ರಕಾರ, ಬಾಳೆಹಣ್ಣು ತಿನ್ನುವುದರಿಂದ ಕ್ಯಾನ್ಸರ್ ಬರುವ ಅಪಾಯ ಕಡಿಮೆಯಾಗುತ್ತದೆ.

Cancer: ಕ್ಯಾನ್ಸರ್ ಅಪಾಯ ಕಡಿಮೆ ಮಾಡಲು ಪ್ರತಿನಿತ್ಯ ಬಾಳೆಹಣ್ಣು ತಿನ್ನಿ; ಹೊಸ ಸಂಶೋಧನೆಯಿಂದ ಮಾಹಿತಿ ಬಹಿರಂಗ
ಬಾಳೆಹಣ್ಣು
TV9 Web
| Updated By: Rakesh Nayak Manchi|

Updated on:Aug 08, 2022 | 6:01 PM

Share

ಆರೋಗ್ಯಕ್ಕೆ ತುಂಬಾ ಉಪಯುಕ್ತವಾದ ಬಾಳೆಹಣ್ಣು ವಿವಿಧ ಪೋಷಕಾಂಶಗಳಿಂದ ಕೂಡಿದೆ. ಅನೇಕ ಜನರು ತೂಕ ಹೆಚ್ಚಿಸಲು ಅಥವಾ ತಮ್ಮ ದೇಹವನ್ನು ಸದೃಢವಾಗಿಡಲು ಬಾಳೆಹಣ್ಣು ತಿನ್ನುತ್ತಾರೆ. ಆದರೆ ಬಾಳೆಹಣ್ಣು ತಿನ್ನುವುದರಿಂದ ಕ್ಯಾನ್ಸರ್ ಕೂಡ ಬರದಂತೆ ತಡೆಯಬಹುದು ಎಂದು ಹೆಚ್ಚಿನವರಿಗೆ ತಿಳಿಯದ ಸಂಗತಿ. ಸಂಶೋಧನೆಯೊಂದರ ಪ್ರಕಾರ, ಬಾಳೆಹಣ್ಣು ತಿನ್ನುವುದರಿಂದ ಕ್ಯಾನ್ಸರ್ ಬರುವ ಅಪಾಯ ಕಡಿಮೆಯಾಗುತ್ತದೆ. ಇದನ್ನು ಕೇಳಿ ನಿಮಗೂ ಆಶ್ಚರ್ಯವಾಗಬಹುದು. ಆದರೆ ಬಾಳೆಹಣ್ಣು ಮಾತ್ರವಲ್ಲದೆ, ನಿರೋಧಕ ಕಾರ್ಬೋಹೈಡ್ರೇಟ್‌ಗಳಿಂದ ಸಮೃದ್ಧವಾಗಿರುವ ಇತರ ಆಹಾರಗಳು ಕ್ಯಾನ್ಸರ್ ಅನ್ನು ತಡೆಯಲು ಸಹಾಯ ಮಾಡುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಬಾಳೆಹಣ್ಣು ಕ್ಯಾನ್ಸರ್ ಅನ್ನು ಹೇಗೆ ತಡೆಯುತ್ತದೆ? ಇಲ್ಲಿದೆ ಮಾಹಿತಿ

ಮೆಡಿಕಲ್ ನ್ಯೂಸ್ ಟುಡೇ ವರದಿಯ ಪ್ರಕಾರ, ನಿರೋಧಕ ಪಿಷ್ಟ ಕಾರ್ಬೋಹೈಡ್ರೇಟ್​ಗಳಲ್ಲಿ ಸಮೃದ್ಧವಾಗಿದೆ. ಈ ಪಿಷ್ಟಗಳು ಸಣ್ಣ ಕರುಳಿನಿಂದ ಜೀರ್ಣವಾಗದೆ ದೊಡ್ಡ ಕರುಳಿಗೆ ಹೋಗಿ ಜೀರ್ಣವಾಗುತ್ತದೆ. ನಿರೋಧಕ ಪಿಷ್ಟಗಳಲ್ಲಿ ಧಾನ್ಯಗಳು, ಬಾಳೆಹಣ್ಣುಗಳು, ಬೀನ್ಸ್, ಅಕ್ಕಿ, ಬೇಯಿಸಿದ ಮತ್ತು ಶೀತಲವಾಗಿರುವ ಪಾಸ್ಟಾ ಮುಂತಾದ ಸಸ್ಯ ಆಧಾರಿತ ಆಹಾರಗಳು ಸೇರಿವೆ.

ಇವುಗಳು ಪಿಷ್ಟದ ನಾರಿನ ಭಾಗವಾಗಿದ್ದು, ಕೊಲೊರೆಕ್ಟಲ್ ಕ್ಯಾನ್ಸರ್ ಮತ್ತು ಇತರ ಅನೇಕ ರೋಗಗಳ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಲಿಂಚ್ ಸಿಂಡ್ರೋಮ್ ಹೊಂದಿರುವ ಜನರಲ್ಲಿ ನಿರೋಧಕ ಪಿಷ್ಟದ ಪುಡಿಯು ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಇಂಗ್ಲೆಂಡ್​ನ ಲೀಡ್ಸ್ ವಿಶ್ವವಿದ್ಯಾನಿಲಯದ ಅಧ್ಯಯನಗಳು ಸೂಚಿಸುತ್ತದೆ.

ಪ್ರತಿದಿನ 30 ಗ್ರಾಂ ನಿರೋಧಕ ಪಿಷ್ಟವನ್ನು ಸೇವಿಸುವುದರಿಂದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡಬಹುದು ಎಂದು ಸಂಶೋಧನೆ ತೋರಿಸಿದೆ. 30 ಗ್ರಾಂ ನಿರೋಧಕ ಪಿಷ್ಟವು 1 ಬಾಳೆಹಣ್ಣಿಗೆ ಸಮನಾಗಿರುತ್ತದೆ. ಅಧ್ಯಯನದಲ್ಲಿ ಸುಮಾರು 10 ವರ್ಷಗಳ ಅನುಸರಣೆಯ ನಂತರ ಡೇಟಾವನ್ನು ಸಂಗ್ರಹಿಸಲಾಗಿದೆ ಎಂದು ಸಂಶೋಧಕರು ಬಹಿರಂಗಪಡಿಸಿದ್ದಾರೆ.

ಮತ್ತಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:00 pm, Mon, 8 August 22

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ