AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health News: ಕಡಿಮೆ ನಿದ್ದೆ ಮಾಡುವವರಿಗೆ ಮಧುಮೇಹ ಬರುವ ಅಪಾಯ ಹೆಚ್ಚು: ಅಧ್ಯಯನ

ಇತ್ತೀಚಿನ ಅಧ್ಯಯನಗಳ ಪ್ರಕಾರ, ಸರಿಯಾಗಿ ನಿದ್ರೆ ಮಾಡದವರು ಮಧುಮೇಹದ ಅಪಾಯವನ್ನು ಹೊಂದಿರುತ್ತಾರೆ ಎಂದು ತಿಳಿದುಬಂದಿದೆ. ಕೆಲಸ ಮತ್ತು ವೃತ್ತಿಗೆ ನೀಡುವಷ್ಟೇ ಪ್ರಾಮುಖ್ಯತೆ ನಿದ್ದೆಗೂ ನೀಡಬೇಕು. ಅನೇಕರು ಮಾಡುವ ತಪ್ಪೆಂದರೆ ನಿದ್ದೆ ಮಾಡುವುದನ್ನು ಬಿಟ್ಟು ಹೆಚ್ಚು ಫೋನ್ ಮತ್ತು ಟಿವಿ ನೋಡುತ್ತಾರೆ. ಹೀಗೆ ಮಾಡುವುದರಿಂದ ಮಧುಮೇಹ ಬರುವ ಅಪಾಯ ಬಹಳ ಹೆಚ್ಚು.

Health News: ಕಡಿಮೆ ನಿದ್ದೆ ಮಾಡುವವರಿಗೆ ಮಧುಮೇಹ ಬರುವ ಅಪಾಯ ಹೆಚ್ಚು: ಅಧ್ಯಯನ
ಅಕ್ಷತಾ ವರ್ಕಾಡಿ
|

Updated on: Jul 21, 2024 | 3:58 PM

Share

ಒಂದು ದಿನ ಸರಿಯಾಗಿ ಊಟ ಮಾಡದಿದ್ದರೂ ಪರವಾಗಿಲ್ಲ ರಾತ್ರಿ ಸರಿಯಾಗಿ ನಿದ್ದೆ ಮಾಡದಿದ್ದರೆ ನಿಮ್ಮ ದೇಹದಲ್ಲಿ ಆಗುವ ಬದಲಾವಣೆಗಳು ತಕ್ಷಣ ಗೊತ್ತಾಗುತ್ತದೆ. ಆಲಸ್ಯ, ಆಯಾಸ, ತಲೆನೋವು, ವಾಕರಿಕೆ, ತಲೆಸುತ್ತು, ಕಾಲು ಮತ್ತು ತೋಳು ಸೆಳೆತದಂತಹ ಲಕ್ಷಣಗಳು ಕಂಡುಬರುತ್ತವೆ. ಆದ್ದರಿಂದ ನಿದ್ರೆ ಬಹಳ ಮುಖ್ಯ. ಸರಿಯಾಗಿ ನಿದ್ದೆ ಮಾಡದಿದ್ದರೆ ದೀರ್ಘಕಾಲದ ಕಾಯಿಲೆಗಳು ಬರುವ ಅಪಾಯವಿದೆ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ.

ಇತ್ತೀಚಿನ ಅಧ್ಯಯನಗಳ ಪ್ರಕಾರ, ಸರಿಯಾಗಿ ನಿದ್ರೆ ಮಾಡದವರು ಮಧುಮೇಹದ ಅಪಾಯವನ್ನು ಹೊಂದಿರುತ್ತಾರೆ. ನಿದ್ರೆಯ ಸಮಯ ಕಡಿಮೆಯಾದರೂ ಮಧುಮೇಹ ಬರುವ ಅಪಾಯವಿದೆ ಎಂದು ಹೇಳಲಾಗುತ್ತದೆ. ಕೆಲಸ ಮತ್ತು ವೃತ್ತಿಗೆ ನೀಡುವಷ್ಟೇ ಪ್ರಾಮುಖ್ಯತೆ ನಿದ್ದೆಗೂ ನೀಡಬೇಕು ಎನ್ನುತ್ತಾರೆ. ಅನೇಕರು ಮಾಡುವ ತಪ್ಪೆಂದರೆ ಅವರು ನಿದ್ದೆ ಮಾಡುವುದನ್ನು ಬಿಟ್ಟು ಹೆಚ್ಚು ಫೋನ್ ಮತ್ತು ಟಿವಿ ನೋಡುತ್ತಾರೆ. ಹೀಗೆ ಮಾಡುವುದರಿಂದ ಮಧುಮೇಹ ಬರುವ ಅಪಾಯ ಬಹಳ ಹೆಚ್ಚು.

ಎಷ್ಟು ಗಂಟೆ ಮಲಗಬೇಕು?

ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, ಪ್ರತಿಯೊಬ್ಬರಿಗೂ 8 ರಿಂದ 9 ಗಂಟೆಗಳ ನಿದ್ದೆ ಬೇಕು. ಕನಿಷ್ಠ 7 ಗಂಟೆಗಳ ಕಾಲ ಶಾಂತಿಯುತವಾಗಿ ಮಲಗಬೇಕು. ಚಿಕ್ಕ ಮಕ್ಕಳು ಮತ್ತು ವೃದ್ಧರಿಗೆ ಹೆಚ್ಚು ನಿದ್ರೆ ಬೇಕು. ಬೆಳಗ್ಗೆ ಬೇಗ ಏಳುವುದು ಎಂದರೆ ರಾತ್ರಿ ಬೇಗ ಮಲಗುವುದು. ಸಂಜೆ 7 ಗಂಟೆಗೆ ಮೊದಲು ನಿಮ್ಮ ಊಟವನ್ನು ಮುಗಿಸಿ. ಆದ್ದರಿಂದ ನೀವು ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು.

ಇದನ್ನೂ ಓದಿ: ಮಕ್ಕಳು ಅಪರಾಧ ಜಗತ್ತಿನಲ್ಲಿ ಗುರುತಿಸಿಕೊಳ್ಳಲು ಈ ವಿಚಾರ ಕಾರಣ? ನಿಯಂತ್ರಣ ಹೇಗೆ? ಡಾ. ನಿವೇದಿತಾ ಹೇಳೋದೇನು?

ನಿದ್ದೆ ಕೊರತೆ ಮತ್ತು ಮಧುಮೇಹಕ್ಕಿರುವ ಸಂಬಂಧವೇನು?

ಇತ್ತೀಚಿನ ದಿನಗಳಲ್ಲಿ ಸ್ಕ್ರೀನಿಂಗ್ ಸಮಯ ತುಂಬಾ ಉದ್ದವಾಗಿದೆ. ಅದರಲ್ಲೂ ಯುವಕರು ಸೆಲ್‌ಫೋನ್‌ಗೆ ದಾಸರಾಗುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳ ವೀಡಿಯೋ, ವೆಬ್ ಸೀರಿಸ್ ನೋಡಿ ನಿದ್ದೆ ಕೆಡಿಸಿಕೊಳ್ಳುತ್ತಿದ್ದಾರೆ. ಸರಿಯಾದ ನಿದ್ರೆಯ ಕೊರತೆಯು ದೇಹದ ಮೇಲೆ ಹೆಚ್ಚಿನ ಒತ್ತಡವನ್ನು ಉಂಟುಮಾಡುತ್ತದೆ. ತಿಂದ ಆಹಾರ ಸರಿಯಾಗಿ ಜೀರ್ಣವಾಗುವುದಿಲ್ಲ. ಆಹಾರ ಜೀರ್ಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಇದು ರಕ್ತ ಪರಿಚಲನೆಯ ಮೇಲೆ ಒತ್ತಡವನ್ನು ಉಂಟುಮಾಡುತ್ತದೆ ಮತ್ತು ರಕ್ತದಲ್ಲಿನ ಸಕ್ಕರೆ ಪ್ರಮಾಣವು ಗಮನಾರ್ಹವಾಗಿ ಹೆಚ್ಚಾಗುತ್ತದೆ. ಇದು ಮಧುಮೇಹದ ಅಪಾಯವನ್ನು ಹೆಚ್ಚಿಸುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ