AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಈ ಔಷಧಿಗಳನ್ನು ತೆಗೆದುಕೊಳ್ಳುವುದರಿಂದ ಹೃದ್ರೋಗದ ಅಪಾಯ ಹೆಚ್ಚಾಗಬಹುದು ಎಚ್ಚರ

ದೇಹಕ್ಕೆ ಅನೇಕ ರೀತಿಯ ಪೋಷಕಾಂಶಗಳ ಅಗತ್ಯವಿರುತ್ತದೆ. ಇದು ನಮ್ಮ ಆಹಾರದಲ್ಲಿ ಸಿಗದಿದ್ದಾಗ ಅವುಗಳನ್ನು ಪಡೆಯಲು ನಾವು ಪೂರಕ ಔಷಧಿಗಳನ್ನು ತೆಗೆದುಕೊಳ್ಳುತ್ತೇವೆ. ಕೆಲವರಿಗಂತೂ ಇದನ್ನು ಅಗತ್ಯವಾಗಿ ತೆಗೆದುಕೊಳ್ಳಬೇಕಾಗುತ್ತದೆ. ಆದರೆ ಇತ್ತೀಚಿಗಿನ ಸಂಶೋಧನೆಯೊಂದು ಈ ವಿಷಯದ ಬಗ್ಗೆ ಎಚ್ಚರಿಕೆಯ ಸಂದೇಶ ನೀಡಿದ್ದು, ಅದರ ಫಲಿತಾಂಶದ ಪ್ರಕಾರ, ಒಂದು ನಿರ್ದಿಷ್ಟ ಪೋಷಕಾಂಶವನ್ನು ಪಡೆಯಲು ಅದಕ್ಕೆ ಪೂರಕವಾದ ಮಾತ್ರೆಗಳನ್ನು ಅದರಲ್ಲಿಯೂ ನಿಯಾಸಿನ್ ಗಳನ್ನು ಹೆಚ್ಚು ಹೆಚ್ಚು ಸೇವಿಸುವುದರಿಂದ ಹೃದ್ರೋಗದ ಅಪಾಯವೂ ಹೆಚ್ಚಾಗುತ್ತದೆ ಎಂಬ ಕಳವಳಕಾರಿ ವಿಷಯವೊಂದನ್ನು ಹಂಚಿಕೊಂಡಿದೆ.

Health Tips: ಈ ಔಷಧಿಗಳನ್ನು ತೆಗೆದುಕೊಳ್ಳುವುದರಿಂದ ಹೃದ್ರೋಗದ ಅಪಾಯ ಹೆಚ್ಚಾಗಬಹುದು ಎಚ್ಚರ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Sep 09, 2024 | 3:21 PM

Share

ನಮ್ಮ ದೇಹವು ಸರಾಗವಾಗಿ ಕಾರ್ಯನಿರ್ವಹಿಸಲು ನಮಗೆ ಅನೇಕ ರೀತಿಯ ಪೋಷಕಾಂಶಗಳ ಅಗತ್ಯವಿರುತ್ತದೆ. ಇದು ನಮ್ಮ ಆಹಾರದಲ್ಲಿ ಸಿಗದಿದ್ದಾಗ ಅವುಗಳನ್ನು ಪಡೆಯಲು ನಾವು ಪೂರಕ ಔಷಧಿಗಳನ್ನು ತೆಗೆದುಕೊಳ್ಳುತ್ತೇವೆ. ಕೆಲವರಿಗಂತೂ ಇದನ್ನು ಅಗತ್ಯವಾಗಿ ತೆಗೆದುಕೊಳ್ಳಬೇಕಾಗುತ್ತದೆ. ಆದರೆ ಇತ್ತೀಚಿಗಿನ ಸಂಶೋಧನೆಯೊಂದು ಈ ವಿಷಯದ ಬಗ್ಗೆ ಎಚ್ಚರಿಕೆಯ ಸಂದೇಶ ನೀಡಿದ್ದು, ಅದರ ಫಲಿತಾಂಶದ ಪ್ರಕಾರ, ಒಂದು ನಿರ್ದಿಷ್ಟ ಪೋಷಕಾಂಶವನ್ನು ಪಡೆಯಲು ಅದಕ್ಕೆ ಪೂರಕವಾದ ಮಾತ್ರೆಗಳನ್ನು ಹೆಚ್ಚು ಹೆಚ್ಚು ಸೇವಿಸುವುದರಿಂದ ಹೃದ್ರೋಗದ ಅಪಾಯವೂ ಹೆಚ್ಚಾಗುತ್ತದೆ ಎಂಬ ಕಳವಳಕಾರಿ ವಿಷಯವೊಂದನ್ನು ಹಂಚಿಕೊಂಡಿದೆ.

ಅತಿಯಾಗಿ ನಿಯಾಸಿನ್ ಸೇವಿಸುವುದು ಕೂಡ ಅಪಾಯಕಾರಿ

ಇತ್ತೀಚಿನ ವರ್ಷಗಳಲ್ಲಿ ಅನೇಕ ಜನರು ವಿಟಮಿನ್ ಬಿ ಅಗತ್ಯವಾದ ಪೂರಕವನ್ನು ತೆಗೆದುಕೊಳ್ಳುತ್ತಿದ್ದಾರೆ. ವಿಟಮಿನ್ ಬಿ ನಮ್ಮ ದೇಹಕ್ಕೆ ಬಹಳ ಮುಖ್ಯವಾದ ಪೋಷಕಾಂಶವಾಗಿದೆ ಎನ್ನುವುದು ಸತ್ಯವಾದರೂ ಕೂಡ ಇದರ ಹೆಚ್ಚುವರಿ ಸೇವನೆಯು ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. “ನೇಚರ್ ಮೆಡಿಸಿನ್” ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ವಿಟಮಿನ್ ಬಿ ಗೆ ಪೂರಕವಾಗಿ ತೆಗೆದುಕೊಳ್ಳುವ ನಿಯಾಸಿನ್ ಎಂಬ ಔಷಧಿಯ ಹೆಚ್ಚಿನ ಸೇವನೆಯು ಉರಿಯೂತವನ್ನು ಪ್ರಚೋದಿಸುತ್ತದೆ ಮತ್ತು ರಕ್ತನಾಳಗಳನ್ನು ಹಾನಿಗೊಳಿಸುತ್ತದೆ, ಇದು ಹೃದ್ರೋಗಗಳ ಅಪಾಯವನ್ನು ಹೆಚ್ಚಿಸುತ್ತದೆ. ಸಾಮಾನ್ಯವಾಗಿ ವಿಟಮಿನ್ ಬಿ ಗೆ ಅಗತ್ಯವಿರುವ ಜೀವಸತ್ವಗಳನ್ನು ಮಾಂಸ, ಮೀನು, ಧಾನ್ಯಗಳ ಮೂಲಕ ಪಡೆಯಬಹುದಾಗಿದೆ.

ಇದನ್ನೂ ಓದಿ: ಚೀನಾದಲ್ಲಿ ಮೆದುಳಿನ ಮೇಲೆ ದಾಳಿ ಮಾಡುವ ಹೊಸ ವೈರಸ್ ಪತ್ತೆ

ದೈನಂದಿನ ಅಗತ್ಯವನ್ನು ಮೀರಬೇಡಿ

ನಿಯಾಸಿನ್ ಪುರುಷರಿಗಾದರೆ ದಿನಕ್ಕೆ 16 ಮಿಗ್ರಾಂ ಮತ್ತು ಮಹಿಳೆಯರಿಗಾದರೆ ದಿನಕ್ಕೆ 14 ಮಿಗ್ರಾಂ ಸಾಕಾಗುತ್ತದೆ. ಆದರೆ ಈ ಸಂಶೋಧನೆಯಲ್ಲಿ 4 ರಲ್ಲಿ ಒಬ್ಬರಿಗೆ ನಿಯಾಸಿನ್ ಮಟ್ಟವು ಅಗತ್ಯಕ್ಕಿಂತ ಹೆಚ್ಚಾಗಿದೆ ಎಂದು ಕಂಡು ಹಿಡಿದಿದ್ದು ಇದು ಹೃದ್ರೋಗಗಳನ್ನು ಪ್ರಚೋದಿಸುತ್ತದೆ. ಹಾಗಾಗಿ ವ್ಯಕ್ತಿಯು ನಿಯಾಸಿನ್ ನನ್ನು ಹೆಚ್ಚಿನ ಪ್ರಮಾಣದಲ್ಲಿ ತೆಗೆದುಕೊಳ್ಳುವುದನ್ನು ತಪ್ಪಿಸಬೇಕು ಎಂದು ಸಂಶೋಧಕರು ಹೇಳುತ್ತಾರೆ. ಹೆಚ್ಚಿನ ಜನರಿಗೆ ಇದು ಅವರ ಆಹಾರದಲ್ಲಿಯೇ ಸಿಗುತ್ತದೆ ಹಾಗಾಗಿ ಇದನ್ನು ಪ್ರತ್ಯೇಕವಾಗಿ ತೆಗೆದುಕೊಳ್ಳುವ ಅಗತ್ಯವಿಲ್ಲ. ಆದರೆ ಈ ಪೋಷಕಾಂಶದ ಕೊರತೆ ಆದರೆ ಪೆಲ್ಲಗ್ರಾ ಎಂಬ ಮಾರಣಾಂತಿಕ ಕಾಯಿಲೆ ಬರುವ ಅಪಾಯವಿದೆ. ಹಾಗಾಗಿ ಇದಕ್ಕೆ ಬೇಕಾಗಿರುವ ಔಷಧಿಗಳನ್ನು ಸೇವನೆ ಮಾಡುವ ಮೊದಲು ವೈದ್ಯರ ಸಂಪರ್ಕಿಸುವುದನ್ನು ಮರೆಯಬೇಡಿ. ಆದಷ್ಟು ಆಹಾರದಲ್ಲಿಯೇ ಸಿಗುವ ಪೋಷಕಾಂಶಗಳನ್ನು ತಿಂದು, ಆರೋಗ್ಯವಾಗಿರಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ