ಸಕ್ಕರೆ ತಿನ್ನದವರಿಗೂ ಮಧುಮೇಹ ಬರುತ್ತಾ? ಕುತೂಹಲಕಾರಿ ಮಾಹಿತಿ ಇಲ್ಲಿದೆ

ಮಧುಮೇಹಿಗಳು ಹೆಚ್ಚು ಸಿಹಿತಿಂಡಿಗಳು, ಸಕ್ಕರೆ ಅಂಶಗಳಿರುವ ಪದಾರ್ಥಗಳನ್ನು ತಿನ್ನಬಾರದೆಂದು ವೈದ್ಯರು ಹೇಳುತ್ತಾರೆ. ಆದರೆ, ಸಕ್ಕರೆಯನ್ನು ಸೇವಿಸದ ಜನರಿಗೆ ಕೂಡ ಮಧುಮೇಹದ ಅಪಾಯ ಇದೆಯೇ? ಎಂದು ತಿಳಿದುಕೊಳ್ಳಬೇಕಾದ ಅಗತ್ಯವಿದೆ.

ಸಕ್ಕರೆ ತಿನ್ನದವರಿಗೂ ಮಧುಮೇಹ ಬರುತ್ತಾ? ಕುತೂಹಲಕಾರಿ ಮಾಹಿತಿ ಇಲ್ಲಿದೆ
ಮಧುಮೇಹImage Credit source: iStock
Follow us
|

Updated on: Oct 28, 2023 | 12:05 PM

ಭಾರತದಲ್ಲಿ 70 ದಶಲಕ್ಷಕ್ಕೂ ಹೆಚ್ಚು ಜನರು ಮಧುಮೇಹದಿಂದ ಬಳಲುತ್ತಿದ್ದಾರೆ. ಭಾರತದಲ್ಲಿ ವಿಶ್ವದಲ್ಲೇ ಅತಿಹೆಚ್ಚು ಮಧುಮೇಹದ ಪ್ರಕರಣಗಳಿವೆ. ಹೆಚ್ಚು ಸಕ್ಕರೆ ತಿನ್ನುವುದು ಮಾತ್ರ ರಕ್ತದ ಅಧಿಕ ಸಕ್ಕರೆಯ ಅಂಶಕ್ಕೆ ಕಾರಣವಾಗಬಹುದು ಎಂಬುದು ಜನರ ನಂಬಿಕೆ. ಆದರೆ, ಇದು ನೂರಕ್ಕೆ ನೂರರಷ್ಟು ಸತ್ಯವಲ್ಲ. ಸಂಸ್ಕರಿಸಿದ ಆಹಾರಗಳು, ತಂಪು ಪಾನೀಯಗಳು ಮತ್ತು ಸಿಹಿತಿಂಡಿಗಳಲ್ಲಿನ ಹೆಚ್ಚುವರಿ ಸಕ್ಕರೆಯನ್ನು ನೇರವಾಗಿ ಸೇವಿಸುವುದರಿಂದ ಮಧುಮೇಹದ ಅಪಾಯ ಹೆಚ್ಚಾಗುತ್ತದೆ ಎಂಬುದು ಸತ್ಯ. ಇವೆಲ್ಲವೂ ನಿಮ್ಮ ಬೊಜ್ಜಿನ ಅಪಾಯವನ್ನು ಹೆಚ್ಚಿಸುತ್ತವೆ, ಇದು ಮಧುಮೇಹಕ್ಕೆ ಕಾರಣವಾಗಬಹುದು. ಆದರೆ, ಅತಿಯಾದ ಸಕ್ಕರೆ ಸೇವನೆಯಿಲ್ಲದೆ ಕೂಡ ಮಧುಮೇಹ ಬರುತ್ತದೆ ಎಂಬುದು ನಿಮಗೆ ಗೊತ್ತಾ? ಈ ಬಗ್ಗೆ ಮಾಹಿತಿ ಇಲ್ಲಿದೆ.

ಮಧುಮೇಹಿಗಳು ಹೆಚ್ಚು ಸಿಹಿತಿಂಡಿಗಳು, ಸಕ್ಕರೆ ಅಂಶಗಳಿರುವ ಪದಾರ್ಥಗಳನ್ನು ತಿನ್ನಬಾರದೆಂದು ವೈದ್ಯರು ಹೇಳುತ್ತಾರೆ. ಆದರೆ, ಸಕ್ಕರೆಯನ್ನು ಸೇವಿಸದ ಜನರಿಗೆ ಕೂಡ ಮಧುಮೇಹದ ಅಪಾಯ ಇದೆಯೇ? ಎಂದು ತಿಳಿದುಕೊಳ್ಳಬೇಕಾದ ಅಗತ್ಯವಿದೆ.

ಟೈಪ್ 1 ಮಧುಮೇಹವು ಸ್ವಯಂ ನಿರೋಧಕ ಸ್ಥಿತಿಯಾಗಿದ್ದು, ದೇಹದ ಪ್ರತಿರಕ್ಷಣಾ ವ್ಯವಸ್ಥೆಯು ಮೇದೋಜ್ಜೀರಕ ಗ್ರಂಥಿಯಲ್ಲಿ ಇನ್ಸುಲಿನ್ ಉತ್ಪಾದಿಸುವ ಕೋಶಗಳನ್ನು ನಾಶಪಡಿಸುತ್ತದೆ. ಈ ರೀತಿಯ ಮಧುಮೇಹವು ಸಕ್ಕರೆ ಸೇವನೆಗೆ ಸಂಬಂಧಿಸಿದ್ದಲ್ಲ. ಇದು ಸಾಮಾನ್ಯವಾಗಿ ಬಾಲ್ಯ ಅಥವಾ ಹದಿಹರೆಯದಲ್ಲಿ ಬೆಳವಣಿಗೆಯಾಗುತ್ತದೆ.

ಇದನ್ನೂ ಓದಿ: ಡಯಾಬಿಟಿಸ್, ಹೃದಯದ ಸಮಸ್ಯೆಯನ್ನು ನಿಮ್ಮ ಪಾದದಿಂದಲೇ ತಿಳಿಯಬಹುದು!

ನಿಮ್ಮ ಅನುವಂಶಿಕ ಪ್ರವೃತ್ತಿಯು ಮಧುಮೇಹದ ಬೆಳವಣಿಗೆಯಲ್ಲಿ ಮಹತ್ವದ ಪಾತ್ರವನ್ನು ವಹಿಸುತ್ತದೆ. ನಿಮ್ಮ ಫ್ಯಾಮಿಲಿಯಲ್ಲಿ ಯಾರಿಗಾದರೂ ಮಧುಮೇಹ ಇದ್ದರೆ ನೀವು ಸಕ್ಕರೆ ಸೇವಿಸದಿದ್ದರೂ ಮಧುಮೇಹ ಬರುವ ಸಾಧ್ಯತೆ ಹೆಚ್ಚಾಗಿರುತ್ತದೆ.

ಹೆಚ್ಚುವರಿ ಸಕ್ಕರೆ ಸೇವನೆಯಿಂದ ಟೈಪ್ 2 ಮಧುಮೇಹ ಹೆಚ್ಚಾಗಬಹುದು. ಆದರೆ ಅದಕ್ಕೆ ಇದೊಂದೇ ಕಾರಣವಲ್ಲ. ಜೀವನಶೈಲಿಯ ಅಂಶಗಳಾದ ಕಳಪೆ ಆಹಾರ, ದೈಹಿಕ ಚಟುವಟಿಕೆಯ ಕೊರತೆ ಮತ್ತು ಬೊಜ್ಜು ಕೂಡ ಇದರಲ್ಲಿ ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. ಜೆನೆಟಿಕ್ಸ್ ಟೈಪ್ 2 ಡಯಾಬಿಟಿಸ್‌ಗೆ ನಿಮ್ಮ ಒಳಗಾಗುವಿಕೆಯನ್ನು ಹೆಚ್ಚಿಸಬಹುದು.

ಇದನ್ನೂ ಓದಿ: ಮಧುಮೇಹಿಗಳಿಗೆ ಬೇಲದ ಹಣ್ಣಿನ ಶರಬತ್ ಕುಡಿಯುವುದರಿಂದ ಏನು ಉಪಯೋಗ?

ಸಕ್ಕರೆ ಸೇವನೆ ಮತ್ತು ಮಧುಮೇಹದ ನಡುವಿನ ಸಂಬಂಧವು ಸಂಕೀರ್ಣವಾಗಿದೆ. ಅಧಿಕ ಸಕ್ಕರೆಗಳನ್ನು ಹೊಂದಿರುವ ಆಹಾರಗಳು ಬೊಜ್ಜು ಮತ್ತು ಇನ್ಸುಲಿನ್ ಪ್ರತಿರೋಧಕ್ಕೆ ಕಾರಣವಾಗಬಹುದು. ಇದು ಟೈಪ್ 2 ಮಧುಮೇಹಕ್ಕೆ ಅಪಾಯಕಾರಿ ಅಂಶಗಳಾಗಿವೆ. ಆದರೆ, ಬಹಳಷ್ಟು ಸಕ್ಕರೆಯನ್ನು ಸೇವಿಸುವ ಪ್ರತಿಯೊಬ್ಬರಿಗೂ ಮಧುಮೇಹ ಉಂಟಾಗುವುದಿಲ್ಲ. ಮಧುಮೇಹ ರೋಗ ಹೊಂದಿರುವ ಕೆಲವರು ಅತಿಯಾದ ಸಕ್ಕರೆ ಸೇವನೆ ಮಾಡುವುದಿಲ್ಲ. ಆದರೂ ಅವರಿಗೆ ಆ ರೋಗ ಬಂದಿರುತ್ತದೆ.

ಮಧುಮೇಹದ ಅಪಾಯವನ್ನು ಕಡಿಮೆ ಮಾಡಲು ಸಮತೋಲಿತ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಕಾಪಾಡಿಕೊಳ್ಳುವುದು ಮುಖ್ಯವಾಗಿದೆ. ಇದು ಸಮತೋಲಿತ ಆಹಾರ, ನಿಯಮಿತ ವ್ಯಾಯಾಮ ಮತ್ತು ನಿಮ್ಮ ತೂಕವನ್ನು ನಿರ್ವಹಿಸುವುದನ್ನು ಒಳಗೊಂಡಿರುತ್ತದೆ. ಅತಿಯಾದ ಸಕ್ಕರೆ ಸೇವನೆಯು ಮಧುಮೇಹವನ್ನು ಹೆಚ್ಚಿಸುವ ಅಪಾಯಕ್ಕೆ ಕಾರಣವಾಗಬಹುದು. ಸಕ್ಕರೆಯ ಸೇವನೆಯನ್ನು ಲೆಕ್ಕಿಸದೆ ಮಧುಮೇಹದ ಅಪಾಯವನ್ನು ಕಡಿಮೆ ಮಾಡಲು ಸಮತೋಲಿತ ಮತ್ತು ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವುದು ಅತ್ಯಗತ್ಯ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ