AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಊಟದ ಬಳಿಕ ನಡೆಯುವುದು ದೇಹಕ್ಕೆ ಎಷ್ಟು ಮುಖ್ಯ ಗೊತ್ತಾ?

ಊಟವಾದ ಬಳಿಕ ಹತ್ತು ನಿಮಿಷವಾದರೂ ನಡೆಯಬೇಕು ಎನ್ನುವ ಮಾತನ್ನು ನೀವು ಕೇಳಿರಬಹುದು. ಇದು ನಿಜ, ಚಲನೆಗೆ ಅದರದ್ದೇ ಆದ ಮಹತ್ವವಿದೆ. ಸರಳ ನಡಿಗೆ, ಅಂದರೆ ದಿನಕ್ಕೆ 30 ನಿಮಿಷಗಳು ನಡೆಯುವುದರಿಂದ ಬೊಜ್ಜು, ಟೈಪ್ 2 ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಂತಹ ಹಲವಾರು ಕಾಯಿಲೆಗಳು ಬರುವುದನ್ನು ತಪ್ಪಿಸಬಹುದು ಎಂದು ಅಧ್ಯಯನಗಳಿಂದ ಸಾಬೀತಾಗಿದೆ.

Health Tips: ಊಟದ ಬಳಿಕ ನಡೆಯುವುದು ದೇಹಕ್ಕೆ ಎಷ್ಟು ಮುಖ್ಯ ಗೊತ್ತಾ?
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: May 29, 2024 | 5:10 PM

Share

ಊಟ ರುಚಿಯಾಗಿದ್ದರೆ ಹೊಟ್ಟೆಗೆ ತುತ್ತು ಹೋದದ್ದೇ ತಿಳಿಯುವುದಿಲ್ಲ. ಭೋಜನವಾದ ಮೇಲೆ ಕುಳಿತಲ್ಲಿಯೇ ನಿದ್ದೆ ಎಳೆಯಲು ಪ್ರಾರಂಭಿಸುತ್ತದೆ. ಆಗ ಒಂದು ಹತ್ತು ನಿಮಿಷ ನಿದ್ರೆ ಮಾಡೋಣ ಎನಿಸುತ್ತದೆ. ಆದರೆ, ಊಟವಾದ ಬಳಿಕ ಹತ್ತು ನಿಮಿಷವಾದರೂ ನಡೆಯಬೇಕು ಎನ್ನುವ ಮಾತನ್ನು ನೀವು ಕೇಳಿರಬಹುದು. ಇದು ನಿಜ, ಚಲನೆಗೆ ಅದರದ್ದೇ ಆದ ಮಹತ್ವವಿದೆ. ಸರಳ ನಡಿಗೆ, ಅಂದರೆ ದಿನಕ್ಕೆ 30 ನಿಮಿಷಗಳು ನಡೆಯುವುದರಿಂದ ಬೊಜ್ಜು, ಟೈಪ್ 2 ಮಧುಮೇಹ ಮತ್ತು ಅಧಿಕ ರಕ್ತದೊತ್ತಡದಂತಹ ಹಲವಾರು ಕಾಯಿಲೆಗಳು ಬರುವುದನ್ನು ತಪ್ಪಿಸಬಹುದು ಎಂದು ಅಧ್ಯಯನಗಳಿಂದ ಸಾಬೀತಾಗಿದೆ.

ಊಟವಾದ ಮೇಲೆ ಸಣ್ಣ ನಡಿಗೆ ಮಾಡುವುದರಿಂದ ಮಾಡಿದಂತಹ ಊಟ ಸರಿಯಾಗಿ ಜೀರ್ಣವಾಗುತ್ತದೆ. ಇದರ ಜೊತೆಗೆ ಈ ರೀತಿ ಮಾಡುವುದರಿಂದ ಅನೇಕ ತೊಂದರೆಗಳಿಂದ ತಪ್ಪಿಸಿಕೊಳ್ಳಬಹುದು. ಇಲ್ಲವಾದಲ್ಲಿ ಹೊಟ್ಟೆಯುರಿ, ಆಮ್ಲೀಯತೆ, ಆಲಸಿತನ, ಹುಳಿತೇಗು, ಎದೆಯುರಿ ಸುಸ್ತು ಮೊದಲಾದ ಸಮಸ್ಯೆಗಳು ನಿಮ್ಮನ್ನು ಕಾಡಬಹುದು. ಈ ತೊಂದರೆಗಳು ಕಾಣಿಸಿಕೊಳ್ಳದೇ ಇದ್ದರೂ ಕೂಡ ನಡೆಯುವುದರಿಂದ ಯಾವುದೇ ರೀತಿಯ ಅಪಾಯವಿಲ್ಲ. ಯುಎಸ್ ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್ನಲ್ಲಿ ಪ್ರಕಟವಾದ 2011 ರ ಅಧ್ಯಯನವು ಊಟದ ನಂತರ 15 ನಿಮಿಷಗಳ ನಡಿಗೆ ಮಾಡಬೇಕು ಇದನ್ನು ದಿನಕ್ಕೆ ಮೂರು ಬಾರಿ ಮಾಡಲೇಬೇಕು ಎಂದು ಹೇಳಿದೆ.

ಧಾವಂತದ ನಡಿಗೆ ಸಲ್ಲದು

ಊಟವಾದ ನಂತರ ನಡಿಗೆ ಮಾಡಬೇಕೆಂದು ಧಾವಂತದ ನಡಿಗೆ, ನಿಧಾನಗತಿಯ ಓಟ ಅಥವಾ ಜಾಗಿಂಗ್ ಮಾಡಬಾರದು. ವೇಗವೂ ಅಲ್ಲ, ನಿಧಾನವೂ ಅಲ್ಲದ ಮಧ್ಯಮ ಗತಿಯ ಸಾವಕಾಶ ನಡಿಗೆ ಬಲು ಉತ್ತಮವಾಗಿದೆ. ಹಾಗಾಗಿ ಪ್ರಾರಂಭದಲ್ಲಿ ಈ ನಡಿಗೆಯನ್ನು ಐದಾರು ನಿಮಿಷಗಳವರೆಗೆ ಸಾವಕಾಶವಾಗಿ ಮಾಡಿ. ಬಳಿಕ ಈ ವೇಗಕ್ಕೆ ದೇಹ ಹೊಂದಿಕೊಂಡಂತೆ ಕೊಂಚವೇ ಈ ಸಮಯವನ್ನು ಹೆಚ್ಚಿಸುತ್ತಾ ಹೋಗಿ ಆದರೆ ಈ ನಡಿಗೆ ನಿಮ್ಮ ಸ್ನಾಯುಗಳಲ್ಲಿ ನೋವನ್ನು ಉಂಟು ಮಾಡಬಾರದು ಎಂಬುದನ್ನು ಮರೆಯಬೇಡಿ.

ಇದನ್ನೂ ಓದಿ: ಎಕ್ಕದ ಗಿಡದ ಎಲೆಗಳನ್ನು ಈ ರೀತಿ ಬಳಸಿದರೆ ಮಂಡಿ ನೋವು ಮಾಯ

ಈ ರೀತಿ ಮಾಡುವುದರಿಂದ ದೇಹದಲ್ಲಿ ರಕ್ತಪರಿಚಲನೆ ಉತ್ತಮಗೊಳ್ಳುತ್ತದೆ. ಊಟದ ಬಳಿಕ ಮಾಡುವ ನಡಿಗೆಯಿಂದ ಸಿಹಿ ಆಹಾರಗಳನ್ನು ತಿನ್ನುವ ಅಥವಾ ಕುಡಿಯುವ ಬಯಕೆ ಇರುವುದಿಲ್ಲ. ಇದರಿಂದ ಧಿಡೀರನೇ ಸಕ್ಕರೆ ಮಟ್ಟ ಏರಿಕೆಯಾಗುವುದನ್ನು ತಪ್ಪಿಸಬಹುದು. ಮಧುಮೇಹಿಗಳಿಗೆ ಊಟದ ಬಳಿಕ ರಕ್ತದಲ್ಲಿ ಸಕ್ಕರೆಯ ಮಟ್ಟ ಶೀಘ್ರವಾಗಿ ಏರುತ್ತದೆ. ಹಾಗಾಗಿ ನಿಧಾನಗತಿಯಲ್ಲಿ ನಡೆದಾಡಿದರೆ ಸಕ್ಕರೆಯ ಮಟ್ಟ ಕಡಿಮೆಯಾಗಿ ಮಧುಮೇಹ ನಿಯಂತ್ರಣದಲ್ಲಿ ಇರುತ್ತದೆ. ಜೊತೆಗೆ ಹೃದಯದ ಆರೋಗ್ಯ ಮತ್ತು ಮಾನಸಿಕ ಯೋಗಕ್ಷೇಮವನ್ನು ಸುಧಾರಿಸುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ