AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ನೀವು ಆರೋಗ್ಯವಂತರಾಗಿರಬೇಕೇ? ಈ ಟಿಪ್ಸ್ ಅಳವಡಿಸಿಕೊಳ್ಳಿ

ಇತ್ತೀಚೆಗಿನ ದಿನಗಳಲ್ಲಿ ಸಣ್ಣ ಮಕ್ಕಳಿಂದ ಹಿಡಿದು ವೃದ್ಧವರೆಗೂ ನಾನಾ ರೀತಿಯ ಆರೋಗ್ಯ ಸಮಸ್ಯೆಗಳು ಕಾಡುತ್ತಿರುತ್ತದೆ. ಒತ್ತಡದ ಜೀವನ ಹಾಗೂ ಆರೋಗ್ಯ ಶೈಲಿಗಳು ಕೂಡ ಆರೋಗ್ಯ ಸಮಸ್ಯೆಯೂ ಉಂಟಾಗಳು ಮುಖ್ಯ ಕಾರಣ. ಹೀಗಾಗಿ ಆರೋಗ್ಯದ ವೃದ್ಧಿಗಾಗಿ ನಮ್ಮ ಜೀವನ ಶೈಲಿಯನ್ನು ಕೆಲವು ಬದಲಾವಣೆಗಳನ್ನು ಮಾಡಿಕೊಂಡರೆ ಇರುವಷ್ಟು ದಿನ ಆರೋಗ್ಯವಂತರಾಗಿರಬಹುದು.

Health Tips: ನೀವು ಆರೋಗ್ಯವಂತರಾಗಿರಬೇಕೇ? ಈ  ಟಿಪ್ಸ್  ಅಳವಡಿಸಿಕೊಳ್ಳಿ
Health TipsImage Credit source: Pinterest
ಸಾಯಿನಂದಾ
| Updated By: ಅಕ್ಷತಾ ವರ್ಕಾಡಿ|

Updated on: Feb 02, 2024 | 8:10 PM

Share

ಇಂದಿನ ಒತ್ತಡ ತುಂಬಿದ ಧಾವಂತದ ಜೀವನ ಶೈಲಿಯಿಂದ ಯಾರಿಗೂ ಕೂಡ ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಸಮಯವಿಲ್ಲ. ಆಧುನಿಕ ಜೀವನ ಶೈಲಿ ಹಾಗೂ ಆಹಾರ ಪದ್ಧತಿಯಿಂದಾಗಿ ನಾನಾ ರೀತಿಯ ರೋಗಗಳನ್ನು ಆಹ್ವಾನಿಸುತ್ತಿದ್ದೇವೆ. ಆದರೆ ಆರೋಗ್ಯಕ್ಕಿಂತ ದೊಡ್ಡ ಸಂಪತ್ತು ಮತ್ತೊಂದಿಲ್ಲ. ಆರೋಗ್ಯ ಚೆನ್ನಾಗಿದ್ದು ಬಿಟ್ಟರೆ ಕೈ ತುಂಬಾ ದುಡಿಯಬಹುದು. ಹೀಗಾಗಿ ಆರೋಗ್ಯವನ್ನು ವೃದ್ಧಿಸಲು ಕೆಲವು ಸಣ್ಣ ಪುಟ್ಟ ಆಹಾರ ಕ್ರಮಗಳನ್ನು ರೂಢಿಸಿಕೊಳ್ಳುವುದು ಒಳ್ಳೆಯದು.

ಆರೋಗ್ಯ ವೃದ್ಧಿಸಲು ಈ ಆಹಾರಗಳತ್ತ ಗಮನ ಕೊಡಿ:

  • ಪ್ರತಿದಿನವೂ ಎದ್ದ ಕೂಡಲೇ ಒಂದು ಬಟ್ಟಲು ನೊರೆಹಾಲನ್ನು ದಿನವೂ ಸೇವಿಸುತ್ತಿದ್ದರೆ ಆರೋಗ್ಯ ವೃದ್ಧಿಸುವುದು.
  • ದಿನಾಲು ಸೇಬುಹಣ್ಣನ್ನು ಊಟ ಆದ ನಂತರ ಸೇವಿಸುವುದರಿಂದ ಆರೋಗ್ಯ ವೃದ್ಧಿಸುವುದರೊಂದಿಗೆ ಮುಖದಲ್ಲಿನ ಕಳೆ ಹೆಚ್ಚಾಗುತ್ತದೆ.
  • ಊಟವಾದ ಬಳಿಕ ನಿತ್ಯವು ಬಾಳೆಹಣ್ಣನ್ನು ತಿನ್ನುವುದರಿಂದ ದೇಹದಲ್ಲಿ ಶಕ್ತಿ ಹೆಚ್ಚುವುದರೊಂದಿಗೆ, ಆರೋಗ್ಯವುವು ಸುಧಾರಣೆಯಾಗುತ್ತದೆ.
  • ನುಗ್ಗೆಸೊಪ್ಪಿನ ರಸಕ್ಕೆ ಹಾಲು ಸಕ್ಕರೆ ಬೆರೆಸಿ, ಮಕ್ಕಳಿಗೆ ಕುಡಿಸುವುದರಿಂದ ರಕ್ತ ಶುದ್ಧಿಯಾಗಿ ಆರೋಗ್ಯವಂತರಾಗಿರಬಹುದು.
  • ಅಡುಗೆಯಲ್ಲಿ ಕುಂಬಳಕಾಯಿಯನ್ನು ವಿವಿಧ ರೀತಿಯಲ್ಲಿ ಬಳಸುವುದರಿಂದ ಆರೋಗ್ಯದಲ್ಲಿ ಬದಲಾವಣೆಯನ್ನು ಕಾಣಬಹುದು.
  • ಹಸಿ ಬಟಾಣಿಯನ್ನು ನೀರಿನಲ್ಲಿ ಬೇಯಿಸಿ, ಉಪ್ಪು,ಬೆರೆಸದೆ ತಿನ್ನುತ್ತಿದ್ದರೆ ಆರೋಗ್ಯವು ಸುಧಾರಣೆಯಾಗುತ್ತದೆ.
  • ಮುಸುಕಿನ ಜೋಳವನ್ನು ಖಾಲಿ ಹೊಟ್ಟೆಯಲ್ಲಿ ತಿನ್ನುವುದರಿಂದ ದೈಹಿಕ ಶಕ್ತಿ ಹೆಚ್ಚಾಗುತ್ತದೆ.
  • ನಿತ್ಯ ರಾಗಿ ಅಂಬುಲಿಯನ್ನು ಕುಡಿಯುವುದರಿಂದ ಆರೋಗ್ಯಕ್ಕೆ ಒಳ್ಳೆಯದು.
  • ನವಿಲುಕೋಸು ಹಸಿಯಾಗಿ ತುರಿದು, ಕೋಸುಂಬರಿ ಮಾಡಿ ತಿಂದರೆ ರಕ್ತ ಶುದ್ಧಿಯಾಗಿ ಆರೋಗ್ಯವು ಉತ್ತಮವಾಗಿರುತ್ತದೆ.
  • ಚಪ್ಪರದವರೆಕಾಯಿ ಪಲ್ಯ ಅಥವಾ ಸಾರು ಮಾಡಿಕೊಂಡು ಊಟ ಮಾಡುವುದರಿಂದಲೂ ಆರೋಗ್ಯ ಸುಧಾರಿಸುವುದು.
  • ಬಲಿತ ಚಕ್ರಮುನಿ ಸೊಪ್ಪನ್ನು ಚೆನ್ನಾಗಿ ಒಣಗಿಸಿ, ತುಪ್ಪದಲ್ಲಿ ಹುರಿದು, ಒಣಗಿದ ಮೆಣಸಿನಕಾಯಿ, ಉಪ್ಪು, ಹುಣಸೆ ಹಣ್ಣು ಬೆರೆಸಿ, ಕುಟ್ಟಿ ಪುಡಿ ಮಾಡಿದ ಚಟ್ಟಿಪುಡಿ ಸೇವಿಸಿದರೆ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.
  • ರಾತ್ರಿ ಮಲಗುವ ಎರಡು ಗಂಟೆಯ ಮೊದಲು ಒಂದು ಲೋಟ ಹಾಲು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು.
  • ಬೆಳಗ್ಗೆ ಎದ್ದ ಕೂಡಲೇ ರಾತ್ರಿ ನೆನೆಸಿಟ್ಟ ಒಣ ದ್ರಾಕ್ಷಿಯನ್ನು ನೀರು ಸಮೇತ ಸೇವಿಸುವುದು ಆರೋಗ್ಯಕ್ಕೆ ಪ್ರಯೋಜನಕಾರಿ.
  • ಸೀತಾಫಲದ ಹಣ್ಣುಗಳನ್ನು ಸೇವನೆ ಮಾಡುವುದರಿಂದ ಮಾಂಸ ಖಂಡಗಳ ಶಕ್ತಿಯೂ ಹೆಚ್ಚಾಗಿ ಆರೋಗ್ಯವು ಉತ್ತಮವಾಗುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ