AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಅತಿಯಾಗಿ ನೀರು ಕುಡಿಯೋದು ಡೇಂಜರ್​! ಜೀವಕ್ಕೆ ಅಪಾಯ ತರಬಹುದು ಎಚ್ಚರಿಕೆ ನೀಡಿದ ತಜ್ಞರು

ಪ್ರತಿನಿತ್ಯ ಗರಿಷ್ಠ 3 ಲೀಟರ್ ನೀರು ಕುಡಿಯಿರಿ. ಇದಕ್ಕಿಂತ ಹೆಚ್ಚು ಕುಡಿದರೆ ನೀರಿನ ಅಮಲು ಉಂಟಾಗಬಹುದು. ನೀರಿನ ಅಮಲು ಎಂದರೆ ಹೆಚ್ಚು ನೀರು ಕುಡಿಯುವುದರಿಂದ ಉಂಟಾಗುವ ಸ್ಥಿತಿಯಾಗಿದೆ. ಇದು ದೇಹದಲ್ಲಿನ ಎಲೆಕ್ಟ್ರೋಲೈಟ್ ಸಮತೋಲನವನ್ನು ಅಡ್ಡಿಪಡಿಸುತ್ತದೆ. ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ? ಇಲ್ಲಿದೆ ಮಾಹಿತಿ.

Health Tips: ಅತಿಯಾಗಿ ನೀರು ಕುಡಿಯೋದು ಡೇಂಜರ್​! ಜೀವಕ್ಕೆ ಅಪಾಯ ತರಬಹುದು ಎಚ್ಚರಿಕೆ ನೀಡಿದ ತಜ್ಞರು
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: May 29, 2024 | 5:20 PM

Share

ದೇಹದಲ್ಲಿ ನೀರಿನಾಂಶ ಕಡಿಮೆಯಾದರೆ ಅದರಿಂದ ಹಲವು ರೀತಿಯ ಆರೋಗ್ಯ ಸಮಸ್ಯೆಗಳು (Health Problems) ಶುರುವಾಗುತ್ತವೆ. ಹೀಗಾಗಿ, ವೈದ್ಯರೂ ಕೂಡ ಸಾಕಷ್ಟು ಪ್ರಮಾಣದಲ್ಲಿ ನೀರನ್ನು ಕುಡಿಯಲು ಸಲಹೆ ನೀಡುತ್ತಾರೆ. ಚರ್ಮದ ಸಮಸ್ಯೆಗಳಾದ ಮೊಡವೆ, ಒಣ ಚರ್ಮ ಮತ್ತು ಮುಖದ ಮೇಲಿನ ಸುಕ್ಕುಗಳನ್ನು ಕಡಿಮೆ ಮಾಡಲು ಸಾಕಷ್ಟು ನೀರು ಕುಡಿಯಬೇಕು ಆದರೆ, ನಮ್ಮ ದೇಹಕ್ಕೆ ಅಗತ್ಯ ಇರುವುದಕ್ಕಿಂತ ಹೆಚ್ಚು ನೀರು ಕುಡಿದರೆ ಏನಾಗುತ್ತದೆ ಗೊತ್ತಾ?

ನೀವು ದಿನಕ್ಕೆ ಕನಿಷ್ಠ 2- 3 ಲೀಟರ್ ನೀರನ್ನು ಕುಡಿಯಬೇಕು ಎಂದು ತಜ್ಞರು ಹೇಳುತ್ತಾರೆ. ಆದರೆ, ಕೆಲವರು ದಿನಕ್ಕೆ 5-6 ಲೀಟರ್ ನೀರು ಕುಡಿಯುತ್ತಾರೆ. ಪ್ರತಿನಿತ್ಯ ಗರಿಷ್ಠ 3 ಲೀಟರ್ ನೀರು ಕುಡಿಯಿರಿ. ಇದಕ್ಕಿಂತ ಹೆಚ್ಚು ಕುಡಿದರೆ ನೀರಿನ ಅಮಲು ಉಂಟಾಗಬಹುದು. ನೀರಿನ ಅಮಲು ಎಂದರೆ ಹೆಚ್ಚು ನೀರು ಕುಡಿಯುವುದರಿಂದ ಉಂಟಾಗುವ ಸ್ಥಿತಿಯಾಗಿದೆ. ಇದು ದೇಹದಲ್ಲಿನ ಎಲೆಕ್ಟ್ರೋಲೈಟ್ ಸಮತೋಲನವನ್ನು ಅಡ್ಡಿಪಡಿಸುತ್ತದೆ.

ಇನ್ಸೈಡ್ ಎಡಿಷನ್ ಪ್ರಕಾರ, ಇತ್ತೀಚೆಗೆ ನಡೆದ ಘಟನೆಯಲ್ಲಿ, ಒಬ್ಬ ಮಹಿಳೆ ತುಂಬಾ ವೇಗವಾಗಿ ನೀರು ಕುಡಿದ ಬಳಿಕ ಸಾವನ್ನಪ್ಪಿದ್ದಾರೆ. ವರದಿಗಳು ಹೇಳುವ ಪ್ರಕಾರ, ಆ ಮಹಿಳೆಗೆ ನೀರಿನ ಅಮಲು ಉಂಟಾಗಿತ್ತು ಎನ್ನಲಾಗಿದೆ ಹಾಗಾದರೆ. ಸಾಯುವ ಸ್ಥಿತಿಗೆ ಬರುವಷ್ಟು ಇದು ಅಪಾಯಕಾರಿಯೇ? ನೀರಿನ ಅಮಲು ಎಂದರೇನು? ಸಂಪೂರ್ಣ ಮಾಹಿತಿ ಇಲ್ಲಿದೆ. ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೇ ಹೆಚ್ಚು ನೀರು ಕುಡಿಯುವುದು ಒಳ್ಳೆಯದಲ್ಲ. ಇದರಿಂದ ರಕ್ತದಲ್ಲಿನ ಸೋಡಿಯಂ ಅಪಾಯಕಾರಿ ಮಟ್ಟವನ್ನು ತಲುಪುತ್ತದೆ. ಇದು ಕೆಲವೊಮ್ಮೆ ಸೌಮ್ಯ ರೋಗಲಕ್ಷಣಗಳಿಗೆ ಕಾರಣವಾಗಬಹುದು ಮತ್ತು ತೀವ್ರತರವಾದ ಪ್ರಕರಣಗಳಲ್ಲಿ ಸಾವಿಗೂ ಕಾರಣವಾಗಬಹುದು.

ಲಕ್ಷಣಗಳೇನು?

*ತಲೆನೋವು

*ವಾಕರಿಕೆ ಅಥವಾ ವಾಂತಿ

*ಆಯಾಸ

*ಸ್ನಾಯು ಸೆಳೆತ

ಇದನ್ನೂ ಓದಿ: ಊಟದ ಬಳಿಕ ನಡೆಯುವುದು ದೇಹಕ್ಕೆ ಎಷ್ಟು ಮುಖ್ಯ ಗೊತ್ತಾ?

ತಡೆಗಟ್ಟುವುದು ಹೇಗೆ?

ದೇಹದ ಅವಶ್ಯಕತೆಗಳಿಗೆ ಅನುಗುಣವಾಗಿ ನೀರಿನ ಸೇವನೆ ಮಾಡಿ. ಒತ್ತಾಯಕ್ಕೆ ನೀರನ್ನು ಕುಡಿಯುವುದನ್ನು ತಪ್ಪಿಸಿ. ಬಾಯಾರಿಕೆ ಆದಾಗ ನೀರು ಕುಡಿಯುವುದು ನೈಸರ್ಗಿಕ ಸೂಚಕ. ಹಾಗಾಗಿ ನಿಮಗೆ ಸಾಕು ಎನ್ನುವವರೆಗೆ ನೀರನ್ನು ಕುಡಿಯಿರಿ.

ಮೂತ್ರದ ಬಣ್ಣವನ್ನು ಪರಿಶೀಲಿಸಿಕೊಳ್ಳಿ!

ಮೂತ್ರದ ಬಣ್ಣವು ನಿಮ್ಮ ದೇಹಕ್ಕೆ ನೀರಿನ ಅಗತ್ಯ ಇದೆಯೋ, ಇಲ್ಲವೋ ಎಂಬುದನ್ನು ಸೂಚಿಸುತ್ತದೆ. ಮೂತ್ರದ ಬಣ್ಣವು ತಿಳಿ ಹಳದಿ ಆಗಿದ್ದರೆ ನೀವು ಹೆಚ್ಚು ನೀರು ಕುಡಿಯಬೇಕು. ಮೂತ್ರದ ಬಣ್ಣವು ಗಾಢ ಹಳದಿಯಾಗಿದ್ದರೆ ಅದು ನಿಮ್ಮ ದೇಹವು ಅತಿಯಾಗಿ ಹೈಡ್ರೇಟ್ ಆಗಿದೆ ಎಂಬುದರ ಸಂಕೇತವಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ