AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಅತಿಯಾಗಿ ನೀರು ಕುಡಿಯೋದು ಡೇಂಜರ್​! ಜೀವಕ್ಕೆ ಅಪಾಯ ತರಬಹುದು ಎಚ್ಚರಿಕೆ ನೀಡಿದ ತಜ್ಞರು

ಪ್ರತಿನಿತ್ಯ ಗರಿಷ್ಠ 3 ಲೀಟರ್ ನೀರು ಕುಡಿಯಿರಿ. ಇದಕ್ಕಿಂತ ಹೆಚ್ಚು ಕುಡಿದರೆ ನೀರಿನ ಅಮಲು ಉಂಟಾಗಬಹುದು. ನೀರಿನ ಅಮಲು ಎಂದರೆ ಹೆಚ್ಚು ನೀರು ಕುಡಿಯುವುದರಿಂದ ಉಂಟಾಗುವ ಸ್ಥಿತಿಯಾಗಿದೆ. ಇದು ದೇಹದಲ್ಲಿನ ಎಲೆಕ್ಟ್ರೋಲೈಟ್ ಸಮತೋಲನವನ್ನು ಅಡ್ಡಿಪಡಿಸುತ್ತದೆ. ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ? ಇಲ್ಲಿದೆ ಮಾಹಿತಿ.

Health Tips: ಅತಿಯಾಗಿ ನೀರು ಕುಡಿಯೋದು ಡೇಂಜರ್​! ಜೀವಕ್ಕೆ ಅಪಾಯ ತರಬಹುದು ಎಚ್ಚರಿಕೆ ನೀಡಿದ ತಜ್ಞರು
ಪ್ರೀತಿ ಭಟ್​, ಗುಣವಂತೆ
| Edited By: |

Updated on: May 29, 2024 | 5:20 PM

Share

ದೇಹದಲ್ಲಿ ನೀರಿನಾಂಶ ಕಡಿಮೆಯಾದರೆ ಅದರಿಂದ ಹಲವು ರೀತಿಯ ಆರೋಗ್ಯ ಸಮಸ್ಯೆಗಳು (Health Problems) ಶುರುವಾಗುತ್ತವೆ. ಹೀಗಾಗಿ, ವೈದ್ಯರೂ ಕೂಡ ಸಾಕಷ್ಟು ಪ್ರಮಾಣದಲ್ಲಿ ನೀರನ್ನು ಕುಡಿಯಲು ಸಲಹೆ ನೀಡುತ್ತಾರೆ. ಚರ್ಮದ ಸಮಸ್ಯೆಗಳಾದ ಮೊಡವೆ, ಒಣ ಚರ್ಮ ಮತ್ತು ಮುಖದ ಮೇಲಿನ ಸುಕ್ಕುಗಳನ್ನು ಕಡಿಮೆ ಮಾಡಲು ಸಾಕಷ್ಟು ನೀರು ಕುಡಿಯಬೇಕು ಆದರೆ, ನಮ್ಮ ದೇಹಕ್ಕೆ ಅಗತ್ಯ ಇರುವುದಕ್ಕಿಂತ ಹೆಚ್ಚು ನೀರು ಕುಡಿದರೆ ಏನಾಗುತ್ತದೆ ಗೊತ್ತಾ?

ನೀವು ದಿನಕ್ಕೆ ಕನಿಷ್ಠ 2- 3 ಲೀಟರ್ ನೀರನ್ನು ಕುಡಿಯಬೇಕು ಎಂದು ತಜ್ಞರು ಹೇಳುತ್ತಾರೆ. ಆದರೆ, ಕೆಲವರು ದಿನಕ್ಕೆ 5-6 ಲೀಟರ್ ನೀರು ಕುಡಿಯುತ್ತಾರೆ. ಪ್ರತಿನಿತ್ಯ ಗರಿಷ್ಠ 3 ಲೀಟರ್ ನೀರು ಕುಡಿಯಿರಿ. ಇದಕ್ಕಿಂತ ಹೆಚ್ಚು ಕುಡಿದರೆ ನೀರಿನ ಅಮಲು ಉಂಟಾಗಬಹುದು. ನೀರಿನ ಅಮಲು ಎಂದರೆ ಹೆಚ್ಚು ನೀರು ಕುಡಿಯುವುದರಿಂದ ಉಂಟಾಗುವ ಸ್ಥಿತಿಯಾಗಿದೆ. ಇದು ದೇಹದಲ್ಲಿನ ಎಲೆಕ್ಟ್ರೋಲೈಟ್ ಸಮತೋಲನವನ್ನು ಅಡ್ಡಿಪಡಿಸುತ್ತದೆ.

ಇನ್ಸೈಡ್ ಎಡಿಷನ್ ಪ್ರಕಾರ, ಇತ್ತೀಚೆಗೆ ನಡೆದ ಘಟನೆಯಲ್ಲಿ, ಒಬ್ಬ ಮಹಿಳೆ ತುಂಬಾ ವೇಗವಾಗಿ ನೀರು ಕುಡಿದ ಬಳಿಕ ಸಾವನ್ನಪ್ಪಿದ್ದಾರೆ. ವರದಿಗಳು ಹೇಳುವ ಪ್ರಕಾರ, ಆ ಮಹಿಳೆಗೆ ನೀರಿನ ಅಮಲು ಉಂಟಾಗಿತ್ತು ಎನ್ನಲಾಗಿದೆ ಹಾಗಾದರೆ. ಸಾಯುವ ಸ್ಥಿತಿಗೆ ಬರುವಷ್ಟು ಇದು ಅಪಾಯಕಾರಿಯೇ? ನೀರಿನ ಅಮಲು ಎಂದರೇನು? ಸಂಪೂರ್ಣ ಮಾಹಿತಿ ಇಲ್ಲಿದೆ. ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೇ ಹೆಚ್ಚು ನೀರು ಕುಡಿಯುವುದು ಒಳ್ಳೆಯದಲ್ಲ. ಇದರಿಂದ ರಕ್ತದಲ್ಲಿನ ಸೋಡಿಯಂ ಅಪಾಯಕಾರಿ ಮಟ್ಟವನ್ನು ತಲುಪುತ್ತದೆ. ಇದು ಕೆಲವೊಮ್ಮೆ ಸೌಮ್ಯ ರೋಗಲಕ್ಷಣಗಳಿಗೆ ಕಾರಣವಾಗಬಹುದು ಮತ್ತು ತೀವ್ರತರವಾದ ಪ್ರಕರಣಗಳಲ್ಲಿ ಸಾವಿಗೂ ಕಾರಣವಾಗಬಹುದು.

ಲಕ್ಷಣಗಳೇನು?

*ತಲೆನೋವು

*ವಾಕರಿಕೆ ಅಥವಾ ವಾಂತಿ

*ಆಯಾಸ

*ಸ್ನಾಯು ಸೆಳೆತ

ಇದನ್ನೂ ಓದಿ: ಊಟದ ಬಳಿಕ ನಡೆಯುವುದು ದೇಹಕ್ಕೆ ಎಷ್ಟು ಮುಖ್ಯ ಗೊತ್ತಾ?

ತಡೆಗಟ್ಟುವುದು ಹೇಗೆ?

ದೇಹದ ಅವಶ್ಯಕತೆಗಳಿಗೆ ಅನುಗುಣವಾಗಿ ನೀರಿನ ಸೇವನೆ ಮಾಡಿ. ಒತ್ತಾಯಕ್ಕೆ ನೀರನ್ನು ಕುಡಿಯುವುದನ್ನು ತಪ್ಪಿಸಿ. ಬಾಯಾರಿಕೆ ಆದಾಗ ನೀರು ಕುಡಿಯುವುದು ನೈಸರ್ಗಿಕ ಸೂಚಕ. ಹಾಗಾಗಿ ನಿಮಗೆ ಸಾಕು ಎನ್ನುವವರೆಗೆ ನೀರನ್ನು ಕುಡಿಯಿರಿ.

ಮೂತ್ರದ ಬಣ್ಣವನ್ನು ಪರಿಶೀಲಿಸಿಕೊಳ್ಳಿ!

ಮೂತ್ರದ ಬಣ್ಣವು ನಿಮ್ಮ ದೇಹಕ್ಕೆ ನೀರಿನ ಅಗತ್ಯ ಇದೆಯೋ, ಇಲ್ಲವೋ ಎಂಬುದನ್ನು ಸೂಚಿಸುತ್ತದೆ. ಮೂತ್ರದ ಬಣ್ಣವು ತಿಳಿ ಹಳದಿ ಆಗಿದ್ದರೆ ನೀವು ಹೆಚ್ಚು ನೀರು ಕುಡಿಯಬೇಕು. ಮೂತ್ರದ ಬಣ್ಣವು ಗಾಢ ಹಳದಿಯಾಗಿದ್ದರೆ ಅದು ನಿಮ್ಮ ದೇಹವು ಅತಿಯಾಗಿ ಹೈಡ್ರೇಟ್ ಆಗಿದೆ ಎಂಬುದರ ಸಂಕೇತವಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!