AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Onion Health Benefits: ಬೇಸಿಗೆಯಲ್ಲಿ ಹಸಿ ಈರುಳ್ಳಿ ಸೇವಿಸಿದರೆ ಆರೋಗ್ಯಕ್ಕೆ ಏನೆಲ್ಲ ಉಪಯೋಗವಿದೆ ಗೊತ್ತಾ?

Summer Health Benefits: ಬೇಸಿಗೆಯಲ್ಲಿ ರೋಗಗಳು, ವಿಶೇಷವಾಗಿ ಕೀಟಗಳಿಂದ ಹರಡುವ ರೋಗಗಳು ಹೆಚ್ಚಾಗಿರುತ್ತವೆ. ಹೀಗಾಗಿ, ಬೇಸಿಗೆಯಲ್ಲಿ ಹಸಿ ಈರುಳ್ಳಿ ತಿನ್ನುವುದರಿಂದ ಹಲವು ಉಪಯೋಗಗಳಿವೆ.

Onion Health Benefits: ಬೇಸಿಗೆಯಲ್ಲಿ ಹಸಿ ಈರುಳ್ಳಿ ಸೇವಿಸಿದರೆ ಆರೋಗ್ಯಕ್ಕೆ ಏನೆಲ್ಲ ಉಪಯೋಗವಿದೆ ಗೊತ್ತಾ?
ಈರುಳ್ಳಿ
TV9 Web
| Edited By: |

Updated on: Apr 21, 2022 | 4:47 PM

Share

ಅಡುಗೆಯಲ್ಲಿ ಈರುಳ್ಳಿ (Onion) ಬಹಳ ಮುಖ್ಯವಾದ ಪದಾರ್ಥ. ಆದರೆ, ಈ ಈರುಳ್ಳಿ ಕೇವಲ ನಿಮ್ಮ ಅಡುಗೆಗೆ ವಿಶಿಷ್ಟವಾದ ರುಚಿ ನೀಡುವುದು ಮಾತ್ರವಲ್ಲದೆ ಆರೋಗ್ಯಕ್ಕೂ ಬಹಳ ಉಪಯುಕ್ತವಾಗಿದೆ. ಹಲವರು ಹಸಿ ಈರುಳ್ಳಿಯನ್ನು ತಿನ್ನಲು ಇಷ್ಟಪಡುವುದಿಲ್ಲ. ಹಸಿ ಈರುಳ್ಳಿ ತಿಂದರೆ ಬಾಯೆಲ್ಲಾ ವಾಸನೆ ಬರುತ್ತದೆ ಎಂಬುದು ಇದಕ್ಕೆ ಮುಖ್ಯ ಕಾರಣ. ಆದರೆ, ಹಸಿ ಈರುಳ್ಳಿಯನ್ನು ಸೇವಿಸುವುದರಿಂದ ನಿಮ್ಮ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ಈ ಈರುಳ್ಳಿ ಮೂಳೆಗಳ ಆರೋಗ್ಯ, ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ ಮತ್ತು ಕೆಲವು ಕ್ಯಾನ್ಸರ್ ಮತ್ತು ಮಧುಮೇಹದಿಂದ ರಕ್ಷಿಸುತ್ತದೆ. ಕೆಮ್ಮು, ನೆಗಡಿ ಮತ್ತು ಕಣ್ಣಿನ ಪೊರೆಗೆ ಕೂಡ ಈರುಳ್ಳಿ ರಾಮಬಾಣವಾಗಿದೆ.

ಬೇಸಿಗೆಯ ಋತುವಿನಲ್ಲಿ, ನಿಮ್ಮ ಆಹಾರದಲ್ಲಿ ಹಸಿ ಈರುಳ್ಳಿಯನ್ನು ಸೇರಿಸುವುದು ಸೋಂಕುಗಳನ್ನು ತಡೆಗಟ್ಟಲು ಮತ್ತು ನಿಮ್ಮ ರೋಗನಿರೋಧಕ ಶಕ್ತಿಯನ್ನು ಅಗತ್ಯವಾಗಿ ಹೆಚ್ಚಿಸಲು ಸಹಾಯ ಮಾಡುತ್ತದೆ. ಹಸಿ ಈರುಳ್ಳಿಯನ್ನು ತಿನ್ನುವುದು ಅನಾರೋಗ್ಯದ ಹರಡುವಿಕೆಯನ್ನು ತಡೆಯುವ ನಿಮ್ಮ ರೋಗನಿರೋಧಕ ವ್ಯವಸ್ಥೆಯ ಸಾಮರ್ಥ್ಯವನ್ನು ಸುಧಾರಿಸುತ್ತದೆ. ಬೇಸಿಗೆಯಲ್ಲಿ ರೋಗಗಳು, ವಿಶೇಷವಾಗಿ ಕೀಟಗಳಿಂದ ಹರಡುವ ರೋಗಗಳು ಹೆಚ್ಚಾಗಿರುತ್ತವೆ. ಹೀಗಾಗಿ, ಬೇಸಿಗೆಯಲ್ಲಿ ಹಸಿ ಈರುಳ್ಳಿ ತಿನ್ನುವುದರಿಂದ ಹಲವು ಉಪಯೋಗಗಳಿವೆ.

ಈರುಳ್ಳಿಯು ವಿಟಮಿನ್‌ಗಳು, ಖನಿಜಗಳಿಂದ ತುಂಬಿದ್ದು, ಇವು ಆರೋಗ್ಯಕ್ಕೆ ವಿವಿಧ ರೀತಿಯಲ್ಲಿ ಪ್ರಯೋಜನವನ್ನು ನೀಡುತ್ತವೆ. ಈರುಳ್ಳಿಯು ಪ್ರಾಚೀನ ಕಾಲದಿಂದಲೂ ತಲೆನೋವು, ಹೃದಯ ಕಾಯಿಲೆಗಳು ಮತ್ತು ಬಾಯಿ ಹುಣ್ಣುಗಳಿಗೆ ಚಿಕಿತ್ಸೆ ನೀಡಲು ಬಳಸುವ ಔಷಧೀಯ ಪರಿಣಾಮಗಳನ್ನು ಹೊಂದಿದೆ ಎಂದು ತಿಳಿದುಬಂದಿದೆ. ಈರುಳ್ಳಿ ಕೇವಲ 44 ಕ್ಯಾಲೊರಿಗಳನ್ನು ಹೊಂದಿರುತ್ತದೆ ಮತ್ತು ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಎಂಬ ವಸ್ತುವಿದ್ದು ಅದು ನೈಸರ್ಗಿಕ ಆಂಟಿಹಿಸ್ಟಮೈನ್ ಆಗಿ ಕಾರ್ಯನಿರ್ವಹಿಸುತ್ತದೆ.

ಈರುಳ್ಳಿ ಮನುಷ್ಯನ ಜೀರ್ಣಾಂಗದ ಆರೋಗ್ಯವನ್ನು ಕಾಪಾಡುವುದರ ಜೊತೆಗೆ ಹೃದಯದ ಆರೋಗ್ಯವನ್ನು ಹೆಚ್ಚಿಸುತ್ತದೆ. ಏಕೆಂದರೆ ಪ್ರತಿ ದಿನ ನಾವು ಸೇವಿಸುವ ಆಹಾರದಲ್ಲಿ ತುಂಬಿರುವ ಕೆಟ್ಟ ಕೊಲೆಸ್ಟ್ರಾಲ್ ಅಂಶ ನಮ್ಮ ಹೃದಯದ ಕಾರ್ಯವನ್ನು ಹಠಾತ್ತನೆ ಯಾವಾಗ ಸ್ಥಗಿತಗೊಳಿಸುತ್ತದೆ ಎಂಬುದನ್ನು ಹೇಳಲಿಕ್ಕಾಗುವುದಿಲ್ಲ! ಆದ್ದರಿಂದ, ಈರುಳ್ಳಿಯ ಸೇವನೆಯಿಂದ ಈ ಸಮಸ್ಯೆಯಿಂದ ಪಾರಾಗಬಹುದು. ಇದು ಕೇವಲ ಒಂದು ಉದಾಹರಣೆ ಅಷ್ಟೇ. ಇಂತಹ ಹತ್ತು ಹಲವಾರು ಪ್ರಯೋಜನಗಳು ಹಸಿ ಈರುಳ್ಳಿ ತಿನ್ನುವುದರಿಂದ ನಮಗೆ ಸಿಗುತ್ತವೆ. ದೇಹದ ಅಲರ್ಜಿ ಸಮಸ್ಯೆಗಳು ಎಂದರೆ ಕಣ್ಣಿನ ಕೆರೆತ, ಗಂಟಲು ಕೆರೆತ, ನೆಗಡಿಗೆ ಕಾರಣವೆಂದರೆ ‘ಹಿಸ್ಟಮಿನ್’ ಎಂಬ ಹಾರ್ಮೋನ್ ನಮ್ಮ ದೇಹದಲ್ಲಿ ಬಿಡುಗಡೆಯಾಗುವುದು. ಇಂತಹ ಅಲರ್ಜಿ ಸಮಸ್ಯೆಗಳಿಂದ ಪಾರಾಗಲು ಈ ಹಿಸ್ಟಮಿನ್ ಹಾರ್ಮೋನಿನ ಬಿಡುಗಡೆಯನ್ನು ನಿಲ್ಲಿಸಬೇಕು. ಇದಕ್ಕೆ ದಿನವೂ 1 ಹಸಿ ಈರುಳ್ಳಿ ತಿನ್ನುವ ಅಭ್ಯಾಸ ಮಾಡಿಕೊಳ್ಳಿ.

ಈರುಳ್ಳಿ ಸೇವನೆಯು ಗ್ಯಾಸ್ ಸಮಸ್ಯೆಯಲ್ಲಿ ಸಾಕಷ್ಟು ಪರಿಹಾರವನ್ನು ನೀಡುತ್ತದೆ. ಇದಕ್ಕಾಗಿ ಒಂದು ಟೀಸ್ಪೂನ್ ಈರುಳ್ಳಿ ರಸ, 1 ಬೆಳ್ಳುಳ್ಳಿ, ಸ್ವಲ್ಪ ಶುಂಠಿ, 1 ಟೀಸ್ಪೂನ್ ಜೇನುತುಪ್ಪ ಮತ್ತು 2 ಟೀಸ್ಪೂನ್ ನೀರು ಮಿಶ್ರಣ ಮಾಡಿ. ಅದರ ಮಿಶ್ರಣವನ್ನು ತಯಾರಿಸಿ, ದಿನಕ್ಕೆ ಒಮ್ಮೆ ಸೇವಿಸಿ. ಈರುಳ್ಳಿ ಸೇವಿಸುವುದರಿಂದ ಶೀತ, ಕೆಮ್ಮು, ಕಿವಿ, ಜ್ವರ ಮತ್ತು ಚರ್ಮದ ಸಮಸ್ಯೆಗಳಲ್ಲೂ ಪರಿಹಾರ ಸಿಗುತ್ತದೆ.

ಹಸಿ ಈರುಳ್ಳಿಯನ್ನು ತಿನ್ನುವುದರಿಂದ ಒಸಡಿನ ಸೋಂಕು ಮತ್ತು ಬಾಯಿ ರೋಗಗಳ ಅಪಾಯವನ್ನು ಕಡಿಮೆ ಮಾಡಬಹುದು. ಆಂಟಿಬ್ಯಾಕ್ಟೀರಿಯಲ್ ಗುಣಗಳಿಂದ ಕೂಡಿದ ಈರುಳ್ಳಿಯನ್ನು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ, ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಜೀರ್ಣಕ್ರಿಯೆಯೂ ಚೆನ್ನಾಗಿ ಆಗುತ್ತದೆ.

ಇದನ್ನೂ ಓದಿ: Women Health: ಮಹಿಳೆಯರಲ್ಲಿನ ಈ ನಾಲ್ಕು ಆರೋಗ್ಯ ಸಮಸ್ಯೆಗಳಿಗೆ ಹಸಿ ಈರುಳ್ಳಿ ಸೇವನೆಯಿಂದ ಸಿಗಲಿದೆ ಪರಿಹಾರ!

ಹಸಿ ಈರುಳ್ಳಿ ತಿನ್ನುವ ಅಭ್ಯಾಸ ಇದೆಯೇ? ಗಂಭೀರ ಕಾಯಿಲೆಗೆ ಕಾರಣವಾಗಬಹುದು ಎಚ್ಚರ ವಹಿಸಿ

ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು