ದೀರ್ಘಕಾಲದ ಗ್ಯಾಸ್ಟ್ರಿಕ್ ಸಮಸ್ಯೆ ಅನ್ನನಾಳವನ್ನು ಹಾನಿಗೊಳಿಸಬಹುದೇ? ತಜ್ಞರು ಹೇಳುವುದೇನು?

ದೀರ್ಘಕಾಲದ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದರೆ ಹೊಟ್ಟೆಯಿಂದ ಬಿಡುಗಡೆಯಾಗುವ ಆಮ್ಲವು ಅನ್ನನಾಳದ ಸವೆತ ಮತ್ತು ಉರಿಯೂತ ಕಾರಣವಾಗಬಹುದು ಎಂದು ಆರೋಗ್ಯ ತಜ್ಞರಾದ ಡಾ. ಅಮಿತ್ ಮೇಡಿಯೊ ಎಚ್ಚರಿಸುತ್ತಾರೆ.

ದೀರ್ಘಕಾಲದ ಗ್ಯಾಸ್ಟ್ರಿಕ್ ಸಮಸ್ಯೆ ಅನ್ನನಾಳವನ್ನು ಹಾನಿಗೊಳಿಸಬಹುದೇ? ತಜ್ಞರು ಹೇಳುವುದೇನು?
ಅನ್ನನಾಳದ ಸವೆತ ಮತ್ತು ಉರಿಯೂತ
Follow us
|

Updated on:Jul 22, 2023 | 6:03 PM

ಗ್ಯಾಸ್ಟ್ರೋಸೊಫೇಜಿಲ್ ರಿಫ್ಲಕ್ಸ್(Gastroesophageal Reflux) ಸಮಸ್ಯೆಯಿಂದಾಗಿ ಹೊಟ್ಟೆಯಿಂದ ಆಮ್ಲವು ಅನ್ನನಾಳವನ್ನು ಪ್ರವೇಶಿಸಬಹುದು. ಇದು ಅನ್ನನಾಳದ ಒಳಪದರಕ್ಕೆ ಹಾನಿಯನ್ನುಂಟು ಮಾಡಿ ಸುಡುವ ಸಂವೇದನೆ(Burning Sensation), ವಾಂತಿ ಮುಂತಾದ ಲಕ್ಷಣಗಳಿಗೆ ಕಾರಣವಾಗುತ್ತದೆ. ಅಹಿತಕರ ಲಕ್ಷಣಗಳು ಕೆಲವು ನಿಮಿಷಗಳಿಂದ ಹಲವಾರು ಗಂಟೆಗಳವರೆಗೆ ಇರುತ್ತದೆ. ಜೊತೆಗೆ ದೀರ್ಘಕಾಲದ ಕೆಮ್ಮನ್ನು ಒಳಗೊಂಡಿರಬಹುದು.

ಮುಂಬೈನ ಆರೋಗ್ಯ ತಜ್ಞರಾದ ಡಾ. ಅಮಿತ್ ಮೇಡಿಯೊ ಅವರ ಪ್ರಕಾರ ಅನ್ನನಾಳವು ಸೇವಿಸುವ ಆಹಾರವನ್ನು ಬಾಯಿಯಿಂದ ಹೊಟ್ಟೆಗೆ ತಲುಪಿಸುವ ಕಾರ್ಯವನ್ನು ನಿರ್ವಹಿಸುತ್ತದೆ. ಆದರೆ ದೀರ್ಘಕಾಲದ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುತ್ತಿದ್ದರೆ ಹೊಟ್ಟೆಯಿಂದ ಬಿಡುಗಡೆಯಿಂದ ಆಮ್ಲವು ಅನ್ನನಾಳದ ಸವೆತ ಮತ್ತು ಉರಿಯೂತ ಕಾರಣವಾಗಬಹುದು ಎಂದು ಎಚ್ಚರಿಸುತ್ತಾರೆ. ಗ್ಯಾಸ್ಟ್ರಿಕ್ ಸಮಸ್ಯೆಯು ಧೂಮಪಾನ, ಮದ್ಯಪಾನ, ಸ್ಥೂಲಕಾಯತೆ ಮತ್ತು ಆಹಾರದ ಅಂಶಗಳನ್ನು ಒಳಗೊಂಡಿದೆ.

ಇದನ್ನೂ ಓದಿ: ಬಡ ರೋಗಿಗಳಿಗೆ ಉಚಿತ ಊರುಗೋಲು: ಮೈಸೂರು ಕೆಆರ್ ಆಸ್ಪತ್ರೆ ನೆಫ್ರೋ ಯುರಾಲಜಿಗೆ ಹೊಸ ಲೇಸರ್ ಯಂತ್ರ, ಕಿಡ್ನಿ ಕಲ್ಲು ಪುಡಿ ಪುಡಿ ಮಾಡುತ್ತದೆ!

ಈ ಸಮಸ್ಯೆಗಳಿಗೆ ಪ್ರಾರಂಭದಲ್ಲಿ ಆರೋಗ್ಯ ತಜ್ಞರು ಜೀವನಶೈಲಿ ಮಾರ್ಪಾಡುಗಳನ್ನು ಶಿಫಾರಸು ಮಾಡುತ್ತಾರೆ. ನೀವು ಗ್ಯಾಸ್ಟ್ರಿಕ್ ಸಮಸ್ಯೆಯನ್ನು ಹೊಂದಿದ್ದರೆ ರಾತ್ರಿ ಮಲಗುವಾಗ ತಲೆದಿಂಬು 15-20 ಸೆಂ.ಮೀ ಎತ್ತರದಲ್ಲಿ ಮತ್ತು ಎಡಭಾಗಕ್ಕೆ ತಿರುಗಿ ಮಲಗಿ ಎಂದು ಸಲಹೆ ನೀಡಲಾಗುತ್ತದೆ. ಜೊತೆಗೆ ರೋಗಲಕ್ಷಣಗಳನ್ನು ಉಲ್ಬಣಗೊಳಿಸಬಹುದಾದ ಕಾರ್ಬೊನೇಟೆಡ್ ಪಾನೀಯಗಳು, ಸಂಸ್ಕರಿಸಿದ ಆಹಾರ, ಸಿಟ್ರಸ್ ಹಣ್ಣುಗಳು, ಕೊಬ್ಬಿನ ಮತ್ತು ಮಸಾಲೆಯುಕ್ತ ಊಟಗಳನ್ನು ತಪ್ಪಿಸುವುದು ಉತ್ತಮ. ರಾತ್ರಿ ಊಟದ ನಂತರ ಮಲಗುವ ಮುನ್ನ ಕನಿಷ್ಠ 2 ಗಂಟೆಗಳ ಕಾಲ ಕಾಯುವುದು ಒಳ್ಳೆಯದು ಎಂದು ತಜ್ಞರು ಸಲಹೆ ನೀಡುತ್ತಾರೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 6:03 pm, Sat, 22 July 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ