Health Tips: ಭಯ, ಚಿಂತೆ, ಒತ್ತಡಕ್ಕೆ ಇಲ್ಲಿದೆ ಮುಕ್ತಿ, ಡಾ. ನವೀನ್ ಸಲಹೆ ಏನು?

ಆತಂಕ, ಭಯ, ಚಿಂತೆ, ಒತ್ತಡ ಬರದಿರುವ ಮನುಷ್ಯನೇ ಇಲ್ಲ. ಒಂದಲ್ಲಾ ಒಂದು ಸಂದರ್ಭಗಳಲ್ಲಿ ನಮಗೆ ಇದರ ಅನುಭವ ಆಗಿರುತ್ತದೆ. ಮಕ್ಕಳಿಗೆ ಪರೀಕ್ಷೆ ಭಯ, ಉದ್ಯೋಗಸ್ಥರಿಗೆ ಕೆಲಸದ ಒತ್ತಡ, ಹೀಗೆ ನೂರಾರು ಕಾರಣಗಳಿಂದ ನಮ್ಮ ನೆಮ್ಮದಿ ದೂರವಾಗಿ ಚಿಂತೆ ಆರಂಭವಾಗುತ್ತದೆ. ಇದಕ್ಕೆ ಕೆಲವರು ವೈದ್ಯರ ಬಳಿ ಓಡುತ್ತಾರೆ. ಅನೇಕ ರೀತಿಯ ಔಷಧಿಗಳನ್ನು ಸೇವನೆ ಮಾಡುತ್ತಾರೆ. ಆದರೆ ಇವುಗಳನ್ನು ಕ್ಷಣಾರ್ಧದಲ್ಲಿ ಕಡಿಮೆ ಮಾಡಿಕೊಳ್ಳಬಹುದು. ನಿಮಗೆ ಈ ಮಾತು ಆಶ್ಚರ್ಯ ಹುಟ್ಟಿಸಬಹುದು ಆದರೆ ಇದು ನಿಜ. ಹಾಗಾದರೆ ಇವುಗಳನ್ನು ಕಡಿಮೆ ಮಾಡುವುದು ಹೇಗೆ? ತಜ್ಞರು ಹೇಳುವುದೇನು? ಇಲ್ಲಿದೆ ಮಾಹಿತಿ.

Health Tips: ಭಯ, ಚಿಂತೆ, ಒತ್ತಡಕ್ಕೆ ಇಲ್ಲಿದೆ ಮುಕ್ತಿ, ಡಾ. ನವೀನ್ ಸಲಹೆ ಏನು?
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Jul 10, 2024 | 11:31 AM

ಜೀವನದಲ್ಲಿ ಆತಂಕ, ಭಯ, ಚಿಂತೆ, ಒತ್ತಡ ಬರದಿರುವ ಮನುಷ್ಯನೇ ಇಲ್ಲ. ಒಂದಲ್ಲಾ ಒಂದು ಸಂದರ್ಭಗಳಲ್ಲಿ ನಮಗೆ ಇದರ ಅನುಭವ ಆಗಿರುತ್ತದೆ. ಮಕ್ಕಳಿಗೆ ಪರೀಕ್ಷೆ ಭಯ, ಉದ್ಯೋಗಸ್ಥರಿಗೆ ಕೆಲಸದ ಒತ್ತಡ, ಹೀಗೆ ನೂರಾರು ಕಾರಣಗಳಿಂದ ನಮ್ಮ ನೆಮ್ಮದಿ ದೂರವಾಗಿ ಚಿಂತೆ ಆರಂಭವಾಗುತ್ತದೆ. ಇದಕ್ಕೆ ಕೆಲವರು ವೈದ್ಯರ ಬಳಿ ಓಡುತ್ತಾರೆ. ಅನೇಕ ರೀತಿಯ ಔಷಧಿಗಳನ್ನು ಸೇವನೆ ಮಾಡುತ್ತಾರೆ. ಆದರೆ ಇವುಗಳನ್ನು ಕ್ಷಣಾರ್ಧದಲ್ಲಿ ಕಡಿಮೆ ಮಾಡಿಕೊಳ್ಳಬಹುದು. ನಿಮಗೆ ಈ ಮಾತು ಆಶ್ಚರ್ಯ ಹುಟ್ಟಿಸಬಹುದು ಆದರೆ ಇದು ನಿಜ. ಹಾಗಾದರೆ ಇವುಗಳನ್ನು ಕಡಿಮೆ ಮಾಡುವುದು ಹೇಗೆ? ತಜ್ಞರು ಹೇಳುವುದೇನು? ಇಲ್ಲಿದೆ ಮಾಹಿತಿ.

ಡಾ. ನವೀನ್ ಎಂಬವರು ಯಾವುದೇ ರೀತಿಯ ಔಷಧಿಗಳಿಲ್ಲದೆ ಈ ಭಯ, ಆತಂಕ, ಚಿಂತೆ, ಒತ್ತಡ ಇವುಗಳನ್ನು ಕಡಿಮೆ ಮಾಡುವ ಸರಳ ವಿಧಾನವನ್ನು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ನೀವು ಕೂಡ ಇದನ್ನು ಪ್ರಯತ್ನಿಸಬಹುದಾಗಿದೆ. ಇದನ್ನು ಮನೆಯಲ್ಲಿ ಪ್ರಯತ್ನಿಸಬಹುದಾಗಿದ್ದು ಯಾವುದೇ ರೀತಿಯ ಅಡ್ಡಪರಿಣಾಮ ಇರುವುದಿಲ್ಲ.

ಇದನ್ನೂ ಓದಿ: ಹೆಚ್ಚು ಕಾಫಿ ಕುಡಿಯುತ್ತೀರಾ? ಹಾಗಾದ್ರೆ ಈ ಸಮಸ್ಯೆಗಳ ಬಗ್ಗೆಯೂ ತಿಳಿದುಕೊಳ್ಳಿ

ವೈದ್ಯರ ವಿಡಿಯೋ ಇಲ್ಲಿದೆ:

ಹೇಗೆ ಮಾಡುವುದು?

ನಿಮ್ಮ ತೋರುಬೆರಳನ್ನು ಕಿವಿಯೊಳಕ್ಕೆ ಹಾಕಿ, ಅದನ್ನು ಒತ್ತಡದಿಂದ ಕೆಳಗೆ ಎಳೆಯಿರಿ. ಆ ಸಮಯದಲ್ಲಿ ಆಳವಾದ ಉಸಿರನ್ನು ತೆಗೆದುಕೊಳ್ಳಿ. ನೋವಾಗದಂತೆ ಆರಾಮವಾಗಿ 3 ರಿಂದ 4 ಸಲ ಇದೇ ರೀತಿ ಮಾಡಿ. ಯಾವುದೇ ಕಾರಣಕ್ಕೂ ಜಾಸ್ತಿ ಒತ್ತಡ ಹಾಕಿ ನೋವು ಮಾಡಿಕೊಳ್ಳಬೇಡಿ. ಈ ರೀತಿ ಮಾಡುವುದರಿಂದ ಆತಂಕ, ಭಯ, ಚಿಂತೆ, ಒತ್ತಡ ಎಲ್ಲವೂ ಕಡಿಮೆಯಾಗುತ್ತದೆ. ಅದೂ ಅಲ್ಲದೆ ನಿಮಗೆ ಯಾವುದೇ ರೀತಿಯ ಮಾತ್ರೆ, ಔಷಧಿಗಳನ್ನು ಬಳಸುವ ಅವಶ್ಯಕತೆ ಇರುವುದಿಲ್ಲ. ಹಾಗಾಗಿ ಇದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮಗಳು ಇರುವುದಿಲ್ಲ. ಜೊತೆಗೆ ಯಾರು ಬೇಕಾದರೂ ಇದನ್ನು ಮಾಡಬಹುದಾಗಿದೆ. ನೀವು ಕೂಡ ಪದೇ ಪದೇ ನಾನಾ ಕಾರಣಗಳಿಗೆ ಆತಂಕ, ಭಯ, ಒತ್ತಡ ಅನುಭವಿಸುತ್ತಿದ್ದರೆ ಇದನ್ನು ಪ್ರಯತ್ನಿಸಿ ನೋಡಿ. ಆರೋಗ್ಯವಾಗಿರಿ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:30 am, Wed, 10 July 24

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್