AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಡಯಟ್​ನಲ್ಲಿ ಬಸಳೆ ಸೊಪ್ಪು ಬಳಸುವುದರಿಂದ ಏನೆಲ್ಲ ಉಪಯೋಗವಿದೆ ಗೊತ್ತಾ?

ಬಸಳೆ ಸೊಪ್ಪು ನಿಮ್ಮ ಹಲ್ಲುಗಳನ್ನು ಒಳಗೊಂಡಂತೆ ನಿಮ್ಮ ಮೂಳೆಗಳನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಬಸಳೆ ಸೊಪ್ಪಿನಿಂದ ಆರೋಗ್ಯಕ್ಕೆ ಉಂಟಾಗುವ ಪ್ರಯೋಜನಗಳು ಹೀಗಿವೆ...

Health Tips: ಡಯಟ್​ನಲ್ಲಿ ಬಸಳೆ ಸೊಪ್ಪು ಬಳಸುವುದರಿಂದ ಏನೆಲ್ಲ ಉಪಯೋಗವಿದೆ ಗೊತ್ತಾ?
ಬಸಳೆ ಸೊಪ್ಪು
TV9 Web
| Edited By: |

Updated on: Mar 26, 2022 | 3:43 PM

Share

ಹಳ್ಳಿಗಳಲ್ಲಿ ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಹಿತ್ತಲಲ್ಲಿ ಬಸಳೆ ಸೊಪ್ಪಿನ ಬಳ್ಳಿ ನೆಟ್ಟಿರುತ್ತಾರೆ. ಪೇಟೆಯಲ್ಲೂ ಸೊಪ್ಪಿನ ಅಂಗಡಿಗಳಲ್ಲಿ, ಮಾರ್ಕೆಟ್​ನಲ್ಲಿ ಬಸಳೆ ಸೊಪ್ಪು ಸಿಗುತ್ತದೆ. ಆದರೆ, ಈ ಸೊಪ್ಪಿನಲ್ಲಿ ನಿಮ್ಮ ಆರೋಗ್ಯಕ್ಕೆ ಉಪಯುಕ್ತವಾಗುವ ಎಷ್ಟೆಲ್ಲ ಅಂಶಗಳು ಅಡಗಿವೆ ಎಂಬುದು ನಿಮಗೆ ಗೊತ್ತಾ? ಬಸಳೆ ಸೊಪ್ಪು ಸಸ್ಯಾಹಾರಗಳ ಪೈಕಿ ಆರೋಗ್ಯಕರ ಆಹಾರಗಳಲ್ಲಿ ಒಂದಾಗಿದೆ. ಇದರಲ್ಲಿ ಹೆಚ್ಚಾಗಿರುವ ಕಬ್ಬಿಣದ ಅಂಶ, ಪ್ರೋಟೀನ್, ಕ್ಯಾಲ್ಸಿಯಂ, ಫೈಬರ್ ಮತ್ತು ವಿಟಮಿನ್ ಎ, ವಿಟಮಿನ್ ಸಿ ಮತ್ತು ವಿಟಮಿನ್ ಕೆಗಳ ಉತ್ತಮ ಮೂಲವಾಗಿದೆ. ಬಸಳೆ ಸೊಪ್ಪನ್ನು ಸೂಪರ್ ಫುಡ್ ಎಂದು ಪರಿಗಣಿಸಲಾಗುತ್ತದೆ. ಇದು ಹೊಂದಿರುವ ಪೋಷಕಾಂಶಗಳು ಮತ್ತು ಕಡಿಮೆ ಕ್ಯಾಲೋರಿಗಳೇ ಇದಕ್ಕೆ ಕಾರಣ. ಈ ಬಸಳೆ ಸೊಪ್ಪು ನಿಮ್ಮ ಚರ್ಮ, ಕೂದಲು ಮತ್ತು ಮೂಳೆಗಳಿಗೂ ಪ್ರಯೋಜನ ನೀಡುತ್ತದೆ.

ಬಸಳೆ ಸೊಪ್ಪು ನಿಮ್ಮ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಸ್ಥಿರಗೊಳಿಸಲು ಸಹಾಯ ಮಾಡುತ್ತದೆ. ಕ್ಯಾನ್ಸರ್ ಬರುವ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಕ್ಯಾನ್ಸರ್ ನಿಂದ ನಿಮ್ಮನ್ನು ತಡೆಯುತ್ತದೆ ಮತ್ತು ಮೂಳೆಯ ಆರೋಗ್ಯಕ್ಕೆ ಒಳ್ಳೆಯದಾಗಿದೆ. ಬಸಳೆ ಸೊಪ್ಪು ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಬಸಳೆ ಸೊಪ್ಪು ನಿಮ್ಮ ಹಲ್ಲುಗಳನ್ನು ಒಳಗೊಂಡಂತೆ ನಿಮ್ಮ ಮೂಳೆಗಳನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ. ಇದರಲ್ಲಿರುವ ಮೆಗ್ನೀಸಿಯಮ್ ಅಂಶ ನಿಮ್ಮ ಚಯಾಪಚಯವನ್ನು ಹೆಚ್ಚಿಸುತ್ತದೆ ಎಂದು ಹೇಳಲಾಗುತ್ತದೆ. ಬಸಳೆ ಸೊಪ್ಪಿನಿಂದ ಆರೋಗ್ಯಕ್ಕೆ ಉಂಟಾಗುವ ಪ್ರಯೋಜನಗಳು ಹೀಗಿವೆ…

1. ರಕ್ತದಲ್ಲಿರುವ ಸಕ್ಕರೆ ಅಂಶವನ್ನು ಕಡಿಮೆ ಮಾಡುತ್ತದೆ: ಬಸಳೆ ಸೊಪ್ಪಿನಲ್ಲಿ ಹೆಚ್ಚಿನ ಪೊಟ್ಯಾಸಿಯಮ್ ಅಂಶವಿದೆ ಎಂದು ಹೇಳಲಾಗುತ್ತದೆ. ಹೀಗಾಗಿ, ಇದನ್ನು ಸಾಮಾನ್ಯವಾಗಿ ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವ ಜನರಿಗೆ ಶಿಫಾರಸು ಮಾಡಲಾಗುತ್ತದೆ. ಪೊಟ್ಯಾಸಿಯಮ್ ದೇಹದಲ್ಲಿ ಸೋಡಿಯಂನ ಪರಿಣಾಮಗಳನ್ನು ಕಡಿಮೆ ಮಾಡುತ್ತದೆ.

2. ಉತ್ತಮ ಮೂಳೆ ಆರೋಗ್ಯದಲ್ಲಿ ಸಹಾಯ ಮಾಡುತ್ತದೆ: ಬಸಳೆ ಸೊಪ್ಪಿನಲ್ಲಿ ವಿಟಮಿನ್ ಕೆ ಇದ್ದು, ಇದು ಉತ್ತಮ ಮೂಳೆಯ ಆರೋಗ್ಯಕ್ಕೆ ಸಹಾಯ ಮಾಡುತ್ತದೆ. ವಿಟಮಿನ್‌ಗಳ ಹೆಚ್ಚು ಸೇವನೆಯು ನಿಮ್ಮ ಆರೋಗ್ಯಕ್ಕೆ ಒಳ್ಳೆಯದು. ಇದು ನಿಮ್ಮ ದೇಹದಿಂದ ಕ್ಯಾಲ್ಸಿಯಂ ಹೀರಿಕೊಳ್ಳುವಿಕೆಯನ್ನು ಸುಧಾರಿಸುತ್ತದೆ. ಬಸಳೆ ಸೊಪ್ಪು ಪ್ರತಿ ಕಪ್‌ಗೆ 250 ಮಿಲಿಗ್ರಾಂ ಕ್ಯಾಲ್ಸಿಯಂ ಅನ್ನು ಹೊಂದಿರುತ್ತದೆ ಮತ್ತು ಇದು ನಿಮ್ಮ ಮೂಳೆಗಳು ಮತ್ತು ಹಲ್ಲುಗಳಿಗೆ ಹೆಚ್ಚು ಅಗತ್ಯವಾಗಿರುತ್ತದೆ. ಕ್ಯಾಲ್ಸಿಯಂ ನಿಮ್ಮ ಮೂಳೆಗಳನ್ನು ಬಲಪಡಿಸುವ ಏಜೆಂಟ್ ಮತ್ತು ನಿಮ್ಮ ಮೂಳೆಗಳನ್ನು ಆರೋಗ್ಯಕರವಾಗಿರಿಸುತ್ತದೆ.

3. ತೂಕ ಇಳಿಸಿಕೊಳ್ಳಲು ಸಹಕಾರಿ: ನಿಮ್ಮ ತೂಕವನ್ನು ಕಡಿಮೆ ಮಾಡಲು ನೀವು ಯೋಚಿಸುತ್ತಿದ್ದರೆ, ಬಸಳೆ ಸೊಪ್ಪನ್ನು ಹೆಚ್ಚು ಸೇವಿಸಿ. ಇದು ಕಡಿಮೆ ಕ್ಯಾಲೋರಿಗಳನ್ನು ಹೊಂದಿರುತ್ತದೆ. ಇದರ ಹೆಚ್ಚಿನ ಪ್ರಮಾಣದ ಫೈಬರ್ ಅಂಶವು ಉತ್ತಮ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ, ಕಡಿಮೆ ರಕ್ತದ ಸಕ್ಕರೆಯನ್ನು ನಿಯಂತ್ರಿಸುತ್ತದೆ ಮತ್ತು ಮಲಬದ್ಧತೆಯನ್ನು ತಡೆಯುತ್ತದೆ.

4. ನಿಮ್ಮ ಕಣ್ಣುಗಳಿಗೆ ಒಳ್ಳೆಯದು: ಬಸಳೆ ಸೊಪ್ಪು ಕಣ್ಣಿನ ಪೊರೆ, ವಯಸ್ಸಿಗೆ ಸಂಬಂಧಿಸಿದ ಮ್ಯಾಕ್ಯುಲರ್ ಡಿಜೆನರೇಶನ್ ಮತ್ತು ಇತರ ಕಣ್ಣಿನ ಸಮಸ್ಯೆಗಳಿಂದ ನಿಮ್ಮನ್ನು ರಕ್ಷಿಸುತ್ತದೆ. ಇದರಲ್ಲಿರುವ ವಿಟಮಿನ್ ಎ ಸಾಮಾನ್ಯ ದೃಷ್ಟಿಗೆ ಅಗತ್ಯವಾದ ಲೋಳೆಯ ಪೊರೆಗಳನ್ನು ನಿರ್ವಹಿಸಲು ಸಹಾಯ ಮಾಡುತ್ತದೆ.

5. ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ: ಬಸಳೆ ಸೊಪ್ಪು ಸೇವಿಸುವುದರಿಂದ ನಿಮ್ಮನ್ನು ಆರೋಗ್ಯವಾಗಿರಿಸಿಕೊಳ್ಳಬಹುದು. ದಿನಕ್ಕೆ ಒಮ್ಮೆಯಾದರೂ ಈ ಸೊಪ್ಪನ್ನು ಸೇವಿಸುವುದರಿಂದ ಆತಂಕ ಮತ್ತು ಒತ್ತಡವನ್ನು ಕಡಿಮೆ ಮಾಡಬಹುದು ಮತ್ತು ಮನಸ್ಸನ್ನು ಶಾಂತವಾಗಿರಿಸಿಕೊಳ್ಳಬಹುದು. ಈ ಸೊಪ್ಪಿನಲ್ಲಿ ವಿಟಮಿನ್ ಸಿ ಇದ್ದು ಇದು ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

6. ನಿಮ್ಮ ದೇಹವನ್ನು ಆರಾಮವಾಗಿರಿಸುತ್ತದೆ: ಬಸಳೆ ಸೊಪ್ಪು ನಿಮ್ಮ ಮನಸ್ಸನ್ನು ಶಾಂತವಾಗಿರಿಸುತ್ತದೆ. ಇದರಿಂದ ನೀವು ಉದ್ವೇಗಕ್ಕೆ ಒಳಗಾಗುವುದಿಲ್ಲ. ಇದರ ಹೆಚ್ಚಿನ ಸತು ಮತ್ತು ಮೆಗ್ನೀಸಿಯಮ್ ನೀವು ರಾತ್ರಿಯಲ್ಲಿ ಉತ್ತಮ ನಿದ್ರೆಯನ್ನು ಪಡೆಯಲು ಸಹಾಯ ಮಾಡುತ್ತದೆ. ಉತ್ತಮ ನಿದ್ರೆಯು ನಿಮ್ಮ ಎಲ್ಲಾ ಮಾನಸಿಕ ಕಾಯಿಲೆಗಳಿಗೆ ಸಹಾಯ ಮಾಡುತ್ತದೆ. ಇದು ನಿಮ್ಮ ದೇಹವನ್ನು ವಿಶ್ರಾಂತಿ ಮಾಡಲು ಮತ್ತು ನಿಮ್ಮ ಕಣ್ಣುಗಳಿಗೆ ವಿಶ್ರಾಂತಿ ನೀಡಲು ಸಹಾಯ ಮಾಡುತ್ತದೆ. ಆದ್ದರಿಂದ ದಿನಕ್ಕೆ ಒಮ್ಮೆಯಾದರೂ ಬಸಳೆ ಸೊಪ್ಪನ್ನು ಸೇವಿಸುವುದರಿಂದ ಖಂಡಿತವಾಗಿಯೂ ನಿಮ್ಮ ಆರೋಗ್ಯಕ್ಕೆ ಒಳ್ಳೆಯದನ್ನು ಮಾಡಬಹುದು.

7. ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ಬಸಳೆ ಸೊಪ್ಪಿನಲ್ಲಿ ಕಂಡುಬರುವ ವಿಟಮಿನ್ ಎ ಅಂಶವು ಮಾನವ ದೇಹದಲ್ಲಿನ ಉಸಿರಾಟ, ಕರುಳುಗಳು ಮತ್ತು ಲೋಳೆಯ ಪೊರೆಗಳನ್ನು ಬಲಪಡಿಸುತ್ತದೆ ಎಂದು ಹೇಳಲಾಗುತ್ತದೆ. ಆದ್ದರಿಂದ ನೀವು ಪ್ರತಿದಿನ ಒಂದು ಕಪ್ ಬಸಳೆ ಸೊಪ್ಪನ್ನು ಸೇವಿಸುವುದರಿಂದ ಆರೋಗ್ಯವಾಗಿರಬಹುದು.

8. ರಕ್ತಹೀನತೆಯನ್ನು ತಡೆಯುತ್ತದೆ: ಬಸಳೆ ಸೊಪ್ಪಿನಲ್ಲಿ ಕಬ್ಬಿಣದ ಅಂಶದ ಹೆಚ್ಚಾಗಿದ್ದು, ಇದು ರಕ್ತಹೀನತೆಯ ಅಪಾಯದಿಂದ ನಿಮ್ಮನ್ನು ತಡೆಯುತ್ತದೆ. ಕಬ್ಬಿಣಾಂಶವು ಋತುಚಕ್ರದ ಮಹಿಳೆಯರು, ಮಕ್ಕಳು ಮತ್ತು ವಯಸ್ಕರಿಗೆ ಸಹ ಒಳ್ಳೆಯದು. ಕಬ್ಬಿಣಾಂಶವು ಮನುಷ್ಯರ ದೇಹದಲ್ಲಿ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ದೇಹದ ಎಲ್ಲಾ ಜೀವಕೋಶಗಳಿಗೆ ಆಮ್ಲಜನಕವನ್ನು ಸಾಗಿಸಲು ಸಹಾಯ ಮಾಡುತ್ತದೆ.

9. ಚರ್ಮದ ಕಾಂತಿಯನ್ನು ಹೆಚ್ಚಿಸುತ್ತದೆ: ನಿಮ್ಮ ಚರ್ಮವು ನಿಮ್ಮ ದೇಹದ ಅತಿ ದೊಡ್ಡ ಮತ್ತು ಅತ್ಯಂತ ಸೂಕ್ಷ್ಮ ಭಾಗವಾಗಿದೆ. ನೀವು ಹೊಳೆಯುವ ಚರ್ಮವನ್ನು ಹೊಂದಲು ಬಯಸಿದ್ದರೆ ನೀವು ಆಗಾಗ ಬಸಳೆ ಸೊಪ್ಪನ್ನು ಸೇವಿಸಬೇಕು. ನಿಮ್ಮ ಚರ್ಮವನ್ನು ಆರೋಗ್ಯಕರವಾಗಿಡಲು ಅಗತ್ಯವಾದ ಪೋಷಕಾಂಶಗಳು ಮತ್ತು ಖನಿಜಗಳ ಅಗತ್ಯವಿರುತ್ತದೆ. ಈ ಸೊಪ್ಪು ಒಳಗೊಂಡಿರುವ ಕೆಲವು ಪ್ರಮುಖ ಪೋಷಕಾಂಶಗಳೆಂದರೆ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಇ ಸೇರಿದಂತೆ ವಿಟಮಿನ್ ಕೆ ಆರೋಗ್ಯಕರ ಚರ್ಮದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

10. ಮೊಡವೆಯನ್ನು ತಡೆಯುತ್ತದೆ: ಮೊಡವೆಯಿಂದ ನಿಮ್ಮ ಆತ್ಮವಿಶ್ವಾಸ ಕುಗ್ಗಿಹೋಗಿದ್ದರೆ ಬಸಳೆ ಸೊಪ್ಪಿನ ನಿಯಮಿತ ಸೇವನೆಯಿಂದ ಮೊಡವೆಯನ್ನು ಕಡಿಮೆ ಮಾಡಬಹುದು. ಸ್ವಲ್ ಬಸಳೆ ಸೊಪ್ಪನ್ನು ಪೇಸ್ಟ್ ಮಾಡಿ ಅದಕ್ಕೆ ಸ್ವಲ್ಪ ನೀರು ಸೇರಿಸಿ ಮುಖಕ್ಕೆ ಮಾಸ್ಕ್ ರೀತಿ ಬಳಸಬಹುದು. 20 ನಿಮಿಷಗಳ ನಂತರ ಮುಖ ತೊಳೆದರೆ ಮುಖದ ಕಾಂತಿ ಹೆಚ್ಚುತ್ತದೆ. ಇದು ನಿಮ್ಮ ಚರ್ಮದಲ್ಲಿನ ಉರಿಯೂತವನ್ನು ಕಡಿಮೆ ಮಾಡುತ್ತದೆ ಮತ್ತು ಮೊಡವೆಗೆ ಕಾರಣವಾಗುವ ಕೊಳೆ ಮತ್ತು ಹೆಚ್ಚುವರಿ ಎಣ್ಣೆಯನ್ನು ತೆಗೆದುಹಾಕುತ್ತದೆ.

ಈಗಿನ ಜೀವನಶೈಲಿಯಿಂದ ಬಹುಬೇಗ ವಯಸ್ಸಾದಂತೆ ಭಾಸವಾಗುತ್ತದೆ. ಬಸಳೆ ಸೊಪ್ಪು ಅಕಾಲಿಕ ವಯಸ್ಸನ್ನು ಉಂಟುಮಾಡುವ ಸ್ವತಂತ್ರ ರಾಡಿಕಲ್​​ಗಳನ್ನು ನಾಶಪಡಿಸುವ ಮತ್ತು ತಡೆಯುವ ಪ್ರವೃತ್ತಿಯನ್ನು ಹೊಂದಿರುತ್ತದೆ. ಬಸಳೆ ಸೊಪ್ಪನ್ನು ನಿಯಮಿತವಾಗಿ ಸೇವಿಸುವುದರಿಂದ ನಿಮ್ಮ ತ್ವಚೆಗೆ ಅನುಕೂಲವಾಗುತ್ತದೆ ಮತ್ತು ಹೊಳಪನ್ನು ನೀಡುತ್ತದೆ.

ಇದನ್ನೂ ಓದಿ: Coconut Oil: ಚರ್ಮದ ಕಾಂತಿಗೆ ತೆಂಗಿನ ಎಣ್ಣೆ ಸಹಕಾರಿಯಾಗಿದೆಯೇ..! ಇಲ್ಲಿದೆ ಮಾಹಿತಿ

Viral Video: ಕರೆಂಟ್ ಇಲ್ಲದೆ ಚಲಿಸುವ ಈ ಮರದ ಟ್ರೆಡ್​ಮಿಲ್​ ವಿಡಿಯೋ ನೋಡಿ ಫಿಟ್​ನೆಸ್​ ಉತ್ಸಾಹಿಗಳು ಫಿದಾ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ