AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಇಲ್ಲಿದೆ ಆಯುರ್ವೇದ ಸಲಹೆಗಳು

ಮಾನ್ಸೂನ್ ಸಮಯದಲ್ಲಿ ರೋಗಗಳು ಬರದಂತೆ ತಡೆಯಲು ನಮಗೆ ಹೆಚ್ಚಿನ ರೋಗನಿರೋಧಕ ಶಕ್ತಿಯ ಅಗತ್ಯವಿರುತ್ತದೆ ಹಾಗಾಗಿ ನಿಮ್ಮ ದೇಹವನ್ನು ಆರೋಗ್ಯಕರವಾಗಿಡಲು ಇಲ್ಲಿವೆ ಆಯುರ್ವೇದ ಸಲಹೆಗಳು.

Health Tips: ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಇಲ್ಲಿದೆ ಆಯುರ್ವೇದ ಸಲಹೆಗಳು
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷಯ್​ ಪಲ್ಲಮಜಲು​​|

Updated on: Jul 04, 2023 | 1:57 PM

Share

ಭಾರತದಲ್ಲಿ ಮಾನ್ಸೂನ್ ಪ್ರಾರಂಭವಾಗಿದೆ, ಈ ಋತುವಿನಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಮತ್ತು ದೇಹದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವುದು ಅವಶ್ಯಕ. ಮಾನ್ಸೂನ್ ಆಗಮನದಿಂದ ಖಂಡಿತವಾಗಿಯೂ ಶಾಖದಿಂದ ಪರಿಹಾರ ಸಿಕ್ಕಿರುವುದು ನಿಜವಾದರೂ ಈ ಋತುವಿನಲ್ಲಿ ಶೀತ, ಜ್ವರ ಮತ್ತು ಇತರ ಕಾಲೋಚಿತ ರೋಗಗಳು ಸೇರಿದಂತೆ ಅನೇಕ ರೋಗಗಳನ್ನು ಆಹ್ವಾನಿಸುತ್ತದೆ ಎಂಬುದನ್ನು ಮರೆಯ ಬಾರದು. ಹಾಗಾಗಿ ರೋಗಗಳು ಬರದಂತೆ ತಡೆಯಲು ನಮಗೆ ಹೆಚ್ಚಿನ ರೋಗನಿರೋಧಕ ಶಕ್ತಿಯ ಅಗತ್ಯವಿರುತ್ತದೆ ಹಾಗಾಗಿ ಮಾನ್ಸೂನ್ ಸಮಯದಲ್ಲಿ ನಿಮ್ಮ ದೇಹವನ್ನು ಆರೋಗ್ಯಕರವಾಗಿಡಲು ನೀವು ಈ ಆಯುರ್ವೇದ ಸಲಹೆಗಳನ್ನು ಬಳಸಬಹುದು.

ನಿಮ್ಮನ್ನು ಹೈಡ್ರೇಟ್ ಆಗಿರಿಸಿಕೊಳ್ಳಿ:

ಮಳೆಗಾಲದಲ್ಲಿ ನಿಮ್ಮ ದೇಹವನ್ನು ಯಾವಾಗಲೂ ಹೈಡ್ರೇಟ್ ಆಗಿಡುವುದು ಮೊದಲ ಮತ್ತು ಪ್ರಮುಖ ವಿಷಯವಾಗಿದೆ. ದೇಹದಿಂದ ವಿಷವನ್ನು ಹೊರಹಾಕಲು ಮತ್ತು ನಿರ್ಜಲೀಕರಣವನ್ನು ತಪ್ಪಿಸಲು ಸಾಧ್ಯವಾದಷ್ಟು ದ್ರವ ಪದಾರ್ಥ ಮತ್ತು ಜ್ಯೂಸ್ ಗಳನ್ನೂ ಕುಡಿಯಿರಿ. ಆದರೆ ನೆನಪಿಡಿ, ಆರೋಗ್ಯಕರ ಪಾನೀಯಗಳನ್ನು ಮಾತ್ರ ಸೇವಿಸಿ ಮತ್ತು ತಂಪು ಪಾನೀಯಗಳು ಅಥವಾ ಆಲ್ಕೋಹಾಲ್ ನಿಂದ ದೂರವಿರಿ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು, ಶುಂಠಿ ಚಹಾ ಅಥವಾ ತುಳಸಿ ಚಹಾವನ್ನು ತುಂಬಾ ಒಳ್ಳೆಯದು.

ತಾಜಾ ಹಣ್ಣು ಮತ್ತು ತರಕಾರಿಗಳನ್ನು ಸೇವಿಸಿ:

ನಿಮ್ಮ ಆಹಾರದಲ್ಲಿ ಹೆಚ್ಚು ತಾಜಾ ಹಣ್ಣುಗಳು ಮತ್ತು ತರಕಾರಿಗಳನ್ನು ಸೇರಿಸುವುದು ಬಹಳ ಮುಖ್ಯ. ಮಳೆಗಾಲದಲ್ಲಿ ಮಾವಿನಹಣ್ಣು, ಸೌತೆಕಾಯಿ, ಪಾಲಕ್ ನಂತಹ ಕಾಲೋಚಿತವಾಗಿ ಸಿಗುವ ಹಣ್ಣು ತರಕಾರಿಗಳನ್ನು ತಿನ್ನಬೇಕು. ಇದಲ್ಲದೆ, ವಿಟಮಿನ್ ಸಿ ಸಮೃದ್ಧ ಉತ್ಪನ್ನಗಳಾದ ನಿಂಬೆ, ಕಿತ್ತಳೆ ಮತ್ತು ಇತರ ಹಣ್ಣುಗಳನ್ನು ಸೇವಿಸಬೇಕು, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ನಿಮ್ಮ ಆಹಾರದಲ್ಲಿ ಮಸಾಲೆಗಳ ಅಂಶವಿರಲಿ:

ಪ್ರತಿ ದಿನ ಮನೆಯಲ್ಲಿ ಮಸಾಲೆಗಳಿಂದ ಸಮೃದ್ಧವಾಗಿರುವ ಆಹಾರ ತಯಾರಿಸಿ, ಬಿಸಿ ಇರುವಾಗಲೇ ತಿನ್ನಿರಿ. ಹೀಗೆ ಮಾಡುವುದರಿಂದ ಮಳೆಗಾಲದಲ್ಲಿ ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಸಹಾಯವಾಗಲಿದೆ. ಅರಿಶಿನ, ಜೀರಿಗೆ, ಕೊತ್ತಂಬರಿ, ಕರಿಮೆಣಸು, ದಾಲ್ಚಿನ್ನಿ ಇವೆಲ್ಲವೂ ಉರಿಯೂತ ನಿವಾರಕ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನು ಹೊಂದಿವೆ, ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಮತ್ತು ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆಯನ್ನು ಕಡಿಮೆ ಮಾಡುತ್ತದೆ.

ಇದನ್ನೂ  ಓದಿ: Health Tips for 2023: ನಿಮ್ಮನ್ನು ಆರೋಗ್ಯಕರವಾಗಿರಿಸಿಕೊಳ್ಳಲು ಈ ಸಿಂಪಲ್ ಟಿಪ್ಸ್ ಪಾಲಿಸಿ

ಜಂಕ್ ಫುಡ್ ನಿಂದ ದೂರವಿರಿ:

ಮಾನ್ಸೂನ್ ನಲ್ಲಿ ಫಾಸ್ಟ್ ಅಥವಾ ಜಂಕ್ ಫುಡ್ ತಿನ್ನಬೇಡಿ. ಇದಲ್ಲದೆ, ಹುರಿದ ಆಹಾರ ಮತ್ತು ಸಂಸ್ಕರಿಸಿದ ಆಹಾರಗಳನ್ನು ಸಹ ತಪ್ಪಿಸಬೇಕು ಏಕೆಂದರೆ ಅವು ನಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತವೆ, ಇವೆಲ್ಲವೂ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳನ್ನು ಆಹ್ವಾನಿಸುತ್ತದೆ. ತಕ್ಷಣ ಬೇಯಿಸಿದ ಪೌಷ್ಟಿಕ ಆಹಾರವನ್ನು ಯಾವಾಗಲೂ ಸೇವಿಸುವುದು ಒಳ್ಳೆಯದು.

ಆಯಿಲ್ ಮಸಾಜ್ ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ:

ಅಂತಿಮವಾಗಿ, ರಕ್ತ ಪರಿಚಲನೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮಳೆಗಾಲದಲ್ಲಿ ಆಯಿಲ್ ಮಸಾಜ್ ತುಂಬಾ ಪರಿಣಾಮಕಾರಿ ಎಂದು ಸಂಶೋಧನೆಗಳಿಂದ ತಿಳಿದು ಬಂದಿದೆ. ನಿಮ್ಮ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು, ನೀವು ಎಳ್ಳೆಣ್ಣೆ ಅಥವಾ ತೆಂಗಿನ ಎಣ್ಣೆಯನ್ನು ಬಳಸಬೇಕು. ಇವು ದೇಹಕ್ಕೆ ಮತ್ತು ಚರ್ಮಕ್ಕೆ, ಎರಡಕ್ಕೂ ಒಳ್ಳೆಯದಾಗಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?