AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಒಂದೇ ದಿನದಲ್ಲಿ ಬಾಯಿ ಹುಣ್ಣಿನಿಂದ ಮುಕ್ತಿ, ಈ ಮನೆಮದ್ದು ಟ್ರೈ ಮಾಡಿ

ಬಾಯಿಹುಣ್ಣು ವಿಪರೀತ ನೋವನ್ನು ಉಂಟು ಮಾಡುತ್ತದೆ. ಏನನ್ನು ತಿನ್ನಲೂ ಸಾಧ್ಯವಾಗದಷ್ಟು ಉರಿ ಕಾಣಿಸಿಕೊಳ್ಳುತ್ತದೆ. ಹಾಗಾಗಿ ಇದರಿಂದ ಒಮ್ಮೆ ಮುಕ್ತಿ ಸಿಕ್ಕರೆ ಸಾಕು ಎನಿಸುವುದು ಸುಳ್ಳಲ್ಲ. ಆದರೆ ಇದಕ್ಕೆ ಮಾತ್ರೆಗಳನ್ನು ತೆಗೆದುಕೊಳ್ಳುವ ಬದಲು ಮನೆಯಲ್ಲಿಯೇ ಇರುವ ಪದಾರ್ಥಗಳನ್ನು ಬಳಸಿಕೊಂಡು ಇದನ್ನು ಬೇಗ ಗುಣಪಡಿಸಿಕೊಳ್ಳಬಹುದಾಗಿದೆ. ಹಾಗಾದರೆ ಬಾಯಿಹುಣ್ಣು ಕಡಿಮೆ ಮಾಡುವ ಮನೆಮದ್ದುಗಳಾವವು? ಇಲ್ಲಿದೆ ಮಾಹಿತಿ.

Health Tips: ಒಂದೇ ದಿನದಲ್ಲಿ ಬಾಯಿ ಹುಣ್ಣಿನಿಂದ ಮುಕ್ತಿ, ಈ ಮನೆಮದ್ದು ಟ್ರೈ ಮಾಡಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jun 26, 2024 | 10:58 AM

Share

ಬಾಯಿಹುಣ್ಣು, ಸಾಮಾನ್ಯವಾಗಿ ಎಲ್ಲರನ್ನೂ ಕಾಡಿರುತ್ತದೆ. ಆಹಾರ ಸೇವನೆಯಲ್ಲಿ ಬದಲಾವಣೆ, ಜೀವನಶೈಲಿಯಲ್ಲಿ ವ್ಯತ್ಯಾಸ, ದೇಹದಲ್ಲಿ ಉಷ್ಣತೆಯಾದರೆ ಬಾಯಿ, ತುಟಿಯ ಒಳಗೆ ಗುಳ್ಳೆಗಳಾಗುತ್ತವೆ. ಇದು ವಿಪರೀತ ನೋವು ಮತ್ತು ಹಿಂಸೆ ಉಂಟು ಮಾಡುತ್ತದೆ. ಏನನ್ನು ತಿನ್ನಲೂ ಸಾಧ್ಯವಾಗದಷ್ಟು ಉರಿ ಕಾಣಿಸಿಕೊಳ್ಳುತ್ತದೆ. ಹಾಗಾಗಿ ಇದರಿಂದ ಒಮ್ಮೆ ಮುಕ್ತಿ ಸಿಕ್ಕರೆ ಸಾಕು ಎನಿಸುವುದು ಸುಳ್ಳಲ್ಲ. ಆದರೆ ಇದಕ್ಕೆ ಮಾತ್ರೆಗಳನ್ನು ತೆಗೆದುಕೊಳ್ಳುವ ಬದಲು ಮನೆಯಲ್ಲಿಯೇ ಇರುವ ಪದಾರ್ಥಗಳನ್ನು ಬಳಸಿಕೊಂಡು ಇದನ್ನು ಬೇಗ ಗುಣಪಡಿಸಿಕೊಳ್ಳಬಹುದಾಗಿದೆ. ಹಾಗಾದರೆ ಬಾಯಿಹುಣ್ಣು ಕಡಿಮೆ ಮಾಡುವ ಮನೆಮದ್ದುಗಳಾವವು? ಇಲ್ಲಿದೆ ಮಾಹಿತಿ.

*ಬಾಯಿಯ ಹುಣ್ಣಿಗೆ ಪೇರಳೆ ಎಲೆ ರಾಮಬಾಣವಾಗಿದೆ. ಈ ಎಲೆಯ ಚಿಗುರನ್ನು ನೀರಿನಲ್ಲಿ ಕುದಿಸಿ, ಕಷಾಯದ ರೀತಿಯಲ್ಲಿ ಸೇವನೆ ಮಾಡಬಹುದು ಅಥವಾ ಆ ಚಿಗುರನ್ನು ಅಗೆದು ತಿನ್ನುವುದರಿಂದಲೂ ಬಾಯಿಹುಣ್ಣಿನಿಂದ ಒಂದೇ ದಿನದಲ್ಲಿ ಮುಕ್ತಿ ಸಿಗುತ್ತದೆ.

*ಬಾಯಿ ಹುಣ್ಣನ್ನು ನಿವಾರಿಸಲು ತುಪ್ಪ ಮತ್ತು ಉಪ್ಪಿನ ಸೇವನೆ ಒಳ್ಳೆಯದು. ಆಹಾರದಲ್ಲಿ ತುಪ್ಪವನ್ನು ಸೇವನೆ ಮಾಡುವುದಿರಬಹುದು ಅಥವಾ ಆ ಹುಣ್ಣಿನ ಮೇಲೆ ತುಪ್ಪವನ್ನು ಹಚ್ಚುವುದರಿಂದಲೂ ಹುಣ್ಣು ಕಡಿಮೆಯಾಗುತ್ತದೆ. ಇನ್ನು ಉಪ್ಪು ಮತ್ತು ತುಪ್ಪವನ್ನು ಸೇರಿಸಿ ಹುಣ್ಣಿನ ಮೇಲೆ ಇಡುವುದರಿಂದ ಒಂದೇ ದಿನದಲ್ಲಿ ನೋವಿನ ಜೊತೆಗೆ ಬಾಯಿಯ ಹುಣ್ಣು ಕೂಡ ಮಾಯವಾಗುತ್ತದೆ.

*ಉಪ್ಪು ನೀರಿನಿಂದ ಚೆನ್ನಾಗಿ ಬಾಯಿ ಮುಕ್ಕಳಿಸುವುದರಿಂದಲೂ ಹುಣ್ಣು ಕಡಿಮೆಯಾಗುತ್ತದೆ. ಆದರೆ ಇದು ವಾಸಿಯಾಗಲು ಸಮಯ ತೆಗೆದುಕೊಳ್ಳಬಹುದು.

*ಬಾಯಿ ಹುಣ್ಣಿಗೆ ಇನ್ನೊಂದು ಪರಿಣಾಮಕಾರಿ ಮನೆಮದ್ದು ಎಂದರೆ ಅದು ಲವಂಗ. ಪ್ರತಿದಿನ ಒಂದೆರಡು ಲವಂಗವನ್ನು ಜಗಿದು, ಅದರ ರಸವನ್ನು ಹುಣ್ಣುಗಳಿಗೆ ತಾಗುವಂತೆ ಮಾಡಬೇಕು. ಈ ರೀತಿ ಮಾಡುವುದರಿಂದ ಬಹಳ ಬೇಗ ಬಾಯಿ ಹುಣ್ಣು ಕಡಿಮೆಯಾಗುತ್ತದೆ.

ಇದನ್ನೂ ಓದಿ: ಕುಳಿತಿರುವುದಕ್ಕಿಂತ ಕೆಟ್ಟ ಅಭ್ಯಾಸ ಮತ್ತೊಂದಿಲ್ಲ; ಡಾ. ದೇವಿ ಪ್ರಸಾದ್ ಶೆಟ್ಟಿ

*ಬಾಯಿಹುಣ್ಣು ಅಥವಾ ಅಲ್ಸರ್‌‌ನಂತಹ ಸಮಸ್ಯೆ ಇರುವವರು ಪ್ರತಿದಿನ ಎಳನೀರು ಕುಡಿಯುವ ಅಭ್ಯಾಸ ಮಾಡಿಕೊಂಡರೆ, ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ