AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಒಂದೇ ದಿನದಲ್ಲಿ ಬಾಯಿ ಹುಣ್ಣಿನಿಂದ ಮುಕ್ತಿ, ಈ ಮನೆಮದ್ದು ಟ್ರೈ ಮಾಡಿ

ಬಾಯಿಹುಣ್ಣು ವಿಪರೀತ ನೋವನ್ನು ಉಂಟು ಮಾಡುತ್ತದೆ. ಏನನ್ನು ತಿನ್ನಲೂ ಸಾಧ್ಯವಾಗದಷ್ಟು ಉರಿ ಕಾಣಿಸಿಕೊಳ್ಳುತ್ತದೆ. ಹಾಗಾಗಿ ಇದರಿಂದ ಒಮ್ಮೆ ಮುಕ್ತಿ ಸಿಕ್ಕರೆ ಸಾಕು ಎನಿಸುವುದು ಸುಳ್ಳಲ್ಲ. ಆದರೆ ಇದಕ್ಕೆ ಮಾತ್ರೆಗಳನ್ನು ತೆಗೆದುಕೊಳ್ಳುವ ಬದಲು ಮನೆಯಲ್ಲಿಯೇ ಇರುವ ಪದಾರ್ಥಗಳನ್ನು ಬಳಸಿಕೊಂಡು ಇದನ್ನು ಬೇಗ ಗುಣಪಡಿಸಿಕೊಳ್ಳಬಹುದಾಗಿದೆ. ಹಾಗಾದರೆ ಬಾಯಿಹುಣ್ಣು ಕಡಿಮೆ ಮಾಡುವ ಮನೆಮದ್ದುಗಳಾವವು? ಇಲ್ಲಿದೆ ಮಾಹಿತಿ.

Health Tips: ಒಂದೇ ದಿನದಲ್ಲಿ ಬಾಯಿ ಹುಣ್ಣಿನಿಂದ ಮುಕ್ತಿ, ಈ ಮನೆಮದ್ದು ಟ್ರೈ ಮಾಡಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jun 26, 2024 | 10:58 AM

Share

ಬಾಯಿಹುಣ್ಣು, ಸಾಮಾನ್ಯವಾಗಿ ಎಲ್ಲರನ್ನೂ ಕಾಡಿರುತ್ತದೆ. ಆಹಾರ ಸೇವನೆಯಲ್ಲಿ ಬದಲಾವಣೆ, ಜೀವನಶೈಲಿಯಲ್ಲಿ ವ್ಯತ್ಯಾಸ, ದೇಹದಲ್ಲಿ ಉಷ್ಣತೆಯಾದರೆ ಬಾಯಿ, ತುಟಿಯ ಒಳಗೆ ಗುಳ್ಳೆಗಳಾಗುತ್ತವೆ. ಇದು ವಿಪರೀತ ನೋವು ಮತ್ತು ಹಿಂಸೆ ಉಂಟು ಮಾಡುತ್ತದೆ. ಏನನ್ನು ತಿನ್ನಲೂ ಸಾಧ್ಯವಾಗದಷ್ಟು ಉರಿ ಕಾಣಿಸಿಕೊಳ್ಳುತ್ತದೆ. ಹಾಗಾಗಿ ಇದರಿಂದ ಒಮ್ಮೆ ಮುಕ್ತಿ ಸಿಕ್ಕರೆ ಸಾಕು ಎನಿಸುವುದು ಸುಳ್ಳಲ್ಲ. ಆದರೆ ಇದಕ್ಕೆ ಮಾತ್ರೆಗಳನ್ನು ತೆಗೆದುಕೊಳ್ಳುವ ಬದಲು ಮನೆಯಲ್ಲಿಯೇ ಇರುವ ಪದಾರ್ಥಗಳನ್ನು ಬಳಸಿಕೊಂಡು ಇದನ್ನು ಬೇಗ ಗುಣಪಡಿಸಿಕೊಳ್ಳಬಹುದಾಗಿದೆ. ಹಾಗಾದರೆ ಬಾಯಿಹುಣ್ಣು ಕಡಿಮೆ ಮಾಡುವ ಮನೆಮದ್ದುಗಳಾವವು? ಇಲ್ಲಿದೆ ಮಾಹಿತಿ.

*ಬಾಯಿಯ ಹುಣ್ಣಿಗೆ ಪೇರಳೆ ಎಲೆ ರಾಮಬಾಣವಾಗಿದೆ. ಈ ಎಲೆಯ ಚಿಗುರನ್ನು ನೀರಿನಲ್ಲಿ ಕುದಿಸಿ, ಕಷಾಯದ ರೀತಿಯಲ್ಲಿ ಸೇವನೆ ಮಾಡಬಹುದು ಅಥವಾ ಆ ಚಿಗುರನ್ನು ಅಗೆದು ತಿನ್ನುವುದರಿಂದಲೂ ಬಾಯಿಹುಣ್ಣಿನಿಂದ ಒಂದೇ ದಿನದಲ್ಲಿ ಮುಕ್ತಿ ಸಿಗುತ್ತದೆ.

*ಬಾಯಿ ಹುಣ್ಣನ್ನು ನಿವಾರಿಸಲು ತುಪ್ಪ ಮತ್ತು ಉಪ್ಪಿನ ಸೇವನೆ ಒಳ್ಳೆಯದು. ಆಹಾರದಲ್ಲಿ ತುಪ್ಪವನ್ನು ಸೇವನೆ ಮಾಡುವುದಿರಬಹುದು ಅಥವಾ ಆ ಹುಣ್ಣಿನ ಮೇಲೆ ತುಪ್ಪವನ್ನು ಹಚ್ಚುವುದರಿಂದಲೂ ಹುಣ್ಣು ಕಡಿಮೆಯಾಗುತ್ತದೆ. ಇನ್ನು ಉಪ್ಪು ಮತ್ತು ತುಪ್ಪವನ್ನು ಸೇರಿಸಿ ಹುಣ್ಣಿನ ಮೇಲೆ ಇಡುವುದರಿಂದ ಒಂದೇ ದಿನದಲ್ಲಿ ನೋವಿನ ಜೊತೆಗೆ ಬಾಯಿಯ ಹುಣ್ಣು ಕೂಡ ಮಾಯವಾಗುತ್ತದೆ.

*ಉಪ್ಪು ನೀರಿನಿಂದ ಚೆನ್ನಾಗಿ ಬಾಯಿ ಮುಕ್ಕಳಿಸುವುದರಿಂದಲೂ ಹುಣ್ಣು ಕಡಿಮೆಯಾಗುತ್ತದೆ. ಆದರೆ ಇದು ವಾಸಿಯಾಗಲು ಸಮಯ ತೆಗೆದುಕೊಳ್ಳಬಹುದು.

*ಬಾಯಿ ಹುಣ್ಣಿಗೆ ಇನ್ನೊಂದು ಪರಿಣಾಮಕಾರಿ ಮನೆಮದ್ದು ಎಂದರೆ ಅದು ಲವಂಗ. ಪ್ರತಿದಿನ ಒಂದೆರಡು ಲವಂಗವನ್ನು ಜಗಿದು, ಅದರ ರಸವನ್ನು ಹುಣ್ಣುಗಳಿಗೆ ತಾಗುವಂತೆ ಮಾಡಬೇಕು. ಈ ರೀತಿ ಮಾಡುವುದರಿಂದ ಬಹಳ ಬೇಗ ಬಾಯಿ ಹುಣ್ಣು ಕಡಿಮೆಯಾಗುತ್ತದೆ.

ಇದನ್ನೂ ಓದಿ: ಕುಳಿತಿರುವುದಕ್ಕಿಂತ ಕೆಟ್ಟ ಅಭ್ಯಾಸ ಮತ್ತೊಂದಿಲ್ಲ; ಡಾ. ದೇವಿ ಪ್ರಸಾದ್ ಶೆಟ್ಟಿ

*ಬಾಯಿಹುಣ್ಣು ಅಥವಾ ಅಲ್ಸರ್‌‌ನಂತಹ ಸಮಸ್ಯೆ ಇರುವವರು ಪ್ರತಿದಿನ ಎಳನೀರು ಕುಡಿಯುವ ಅಭ್ಯಾಸ ಮಾಡಿಕೊಂಡರೆ, ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದಾಗಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ